AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರೈಂ: ನೈಟಿ ಹಾಕಿಕೊಂಡ ಬಂದು ಮಣಪ್ಪುರಂ ಫೈನಾನ್ಸ್​ ಕಂಪನಿ ಅಂಗಡಿ ದೋಚಲು ಯತ್ನಿಸಿದ್ದವರ ಸೆರೆ, ಬೈಕ್​ಗಳ ಡಿಕ್ಕಿ-ದಂಪತಿ ಸೇರಿ ಮೂವರ ಸಾವು

ಈ ಮೂವರೂ ಪಾತಕಿಗಳು ಮೇ 26ರಂದು ಮಣಪ್ಪುರಂ ಫೈನಾನ್ಸ್​ನಲ್ಲಿ ದೋಚಲು ಯತ್ನಿಸಿದ್ದರು. ಗ್ಯಾಸ್​ ಕಟರ್​ನಿಂದ ರೋಲಿಂಗ್ ಶೆಟರ್​​ ಕತ್ತರಿಸಿ ಒಳಗೆ ನುಗ್ಗಿದ್ದರು. ಸೈರನ್​ ಮೊಳಗಿದ ಹಿನ್ನೆಲೆಯಲ್ಲಿ ಭೀತಿಗೊಂಡು ದುಷ್ಕರ್ಮಿಗಳು ಪರಾರಿಯಾಗಿದ್ದರು. ಗಮನಾರ್ಹವೆಂದರೆ ಗುರುತು ಸಿಗಬಾರದೆಂದು ನೈಟಿ ಹಾಕಿಕೊಂಡು ಬಂದಿದ್ದರು.

ಕ್ರೈಂ: ನೈಟಿ ಹಾಕಿಕೊಂಡ ಬಂದು ಮಣಪ್ಪುರಂ ಫೈನಾನ್ಸ್​ ಕಂಪನಿ ಅಂಗಡಿ ದೋಚಲು ಯತ್ನಿಸಿದ್ದವರ ಸೆರೆ, ಬೈಕ್​ಗಳ ಡಿಕ್ಕಿ-ದಂಪತಿ ಸೇರಿ ಮೂವರ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: ಸಾಧು ಶ್ರೀನಾಥ್​|

Updated on:Jun 02, 2022 | 3:35 PM

Share

ಬೆಂಗಳೂರು: ಬೆಂಗಳೂರಿನ ರಾಜಗೋಪಾಲನಗರದಲ್ಲಿ ಗುರುತುಸಿಗಬಾರದೆಂದು ನೈಟಿ ಹಾಕಿಕೊಂಡ ಬಂದು ಮಣಪ್ಪುರಂ ಫೈನಾನ್ಸ್​ ಕಂಪನಿಯ ಅಂಗಡಿ ದೋಚಲು ಯತ್ನಿಸಿದ್ದವರು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ರಾಜಗೋಪಾಲನಗರ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ನಾಗರಾಜ್, ಕುಮಾರ್ ಮತ್ತು ಬಹದ್ದೂರ್ ಸಿಂಗ್ ಬಂಧಿತರು.

ಈ ಮೂವರೂ ಪಾತಕಿಗಳು ಮೇ 26ರಂದು ಮಣಪ್ಪುರಂ ಫೈನಾನ್ಸ್​ನಲ್ಲಿ ದೋಚಲು ಯತ್ನಿಸಿದ್ದರು. ಗ್ಯಾಸ್​ ಕಟರ್​ನಿಂದ ರೋಲಿಂಗ್ ಶೆಟರ್​​ ಕತ್ತರಿಸಿ ಒಳಗೆ ನುಗ್ಗಿದ್ದರು. ಸೈರನ್​ ಮೊಳಗಿದ ಹಿನ್ನೆಲೆಯಲ್ಲಿ ಭೀತಿಗೊಂಡು ದುಷ್ಕರ್ಮಿಗಳು ಪರಾರಿಯಾಗಿದ್ದರು. ಗಮನಾರ್ಹವೆಂದರೆ ಗುರುತು ಸಿಗಬಾರದೆಂದು ನೈಟಿ ಹಾಕಿಕೊಂಡು ಬಂದಿದ್ದ ಈ ಗ್ಯಾಂಗ್, ಈ ಹಿಂದೆ ಎಟಿಎಂ ಯಂತ್ರ ಕಳ್ಳತನಕ್ಕೆ ಯತ್ನಿಸಿತ್ತು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

2 ಬೈಕ್​ಗಳ ನಡುವೆ ಡಿಕ್ಕಿ: ದಂಪತಿ ಮತ್ತು ಹಟ್ಟಿ ಚಿನ್ನದ ಗಣಿ ಕಾರ್ಮಿಕ ಸಾವು

ರಾಯಚೂರು: 2 ಬೈಕ್​ಗಳ ನಡುವೆ ಡಿಕ್ಕಿಯಾಗಿ, ದಂಪತಿ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ ಜಕ್ಕಳದಿನ್ನಿ ಬಳಿ ಈ ದುರಂತ ನಡೆದಿದೆ. ವಿರೂಪಾಕ್ಷಪ್ಪಗೌಡ(45), ಪತ್ನಿ ಮಲ್ಲಮ್ಮ(38) ಮತ್ತು ಹಟ್ಟಿ ಚಿನ್ನದ ಗಣಿ ಕಾರ್ಮಿಕ ಮೃತಪಟ್ಟವರು. ಮೃತ ದಂಪತಿ ಮಾನ್ವಿ ತಾಲೂಕಿನ ಮಲದಗುಡ್ಡದ ನಿವಾಸಿಗಳು. ಮತ್ತೊಂದು ಬೈಕ್​ನಲ್ಲಿದ್ದ ಹಟ್ಟಿ ಚಿನ್ನದ ಗಣಿ ಕಾರ್ಮಿಕ ಓವರ್​ಟೇಕ್ ಮಾಡಲು ಹೋಗಿ 2 ಬೈಕ್​ಗಳ ನಡುವೆ ಡಿಕ್ಕಿ ಸಂಭವಿಸಿದೆ. ಮತ್ತೊಬ್ಬನ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಿರವಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:30 pm, Thu, 2 June 22

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ