AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ ಸಂಪನ್ನ: ಕಸಾಪ ತೆಗೆದುಕೊಂಡ 6 ನಿರ್ಣಾಯಗಳು ಹೀಗಿವೆ

ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಕನ್ನಡ ಭಾಷಾ ಅಭಿವೃದ್ಧಿ ಅಧಿನಿಯಮದ ಸಮಗ್ರ ಜಾರಿ, ರಾಷ್ಟ್ರಕವಿ ಪ್ರಶಸ್ತಿ ಘೋಷಣೆ, ಸರ್ಕಾರಿ ಕನ್ನಡ ಶಾಲೆಗಳ ಸುಧಾರಣೆ ಮುಂತಾದ ಆರು ಪ್ರಮುಖ ನಿರ್ಣಯಗಳನ್ನು ಕನ್ನಡ ಸಾಹಿತ್ಯ ಪರಿಷತ್ತು ನಿರ್ಣಯಗಳನ್ನು ಕೈಗೊಂಡಿದ್ದು, ಅನುಷ್ಠಾನಕ್ಕೆ ಸಿಎಂ ಸಿದ್ದರಾಮಯ್ಯರನ್ನು ಕಸಾಪ ಮನವಿ ಮಾಡಿದೆ.

ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ ಸಂಪನ್ನ: ಕಸಾಪ ತೆಗೆದುಕೊಂಡ 6 ನಿರ್ಣಾಯಗಳು ಹೀಗಿವೆ
ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ ಸಂಪನ್ನ: ಕಸಾಪ ತೆಗೆದುಕೊಂಡ 6 ನಿರ್ಣಾಯಗಳು ಹೀಗಿವೆ
Follow us
ಪ್ರಶಾಂತ್​ ಬಿ.
| Updated By: ಗಂಗಾಧರ​ ಬ. ಸಾಬೋಜಿ

Updated on:Dec 22, 2024 | 6:18 PM

ಮಂಡ್ಯ, ಡಿಸೆಂಬರ್​ 22: ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ (Kannada Sahitya Sammelana) ಇಂದು ಸಂಪನ್ನಗೊಂಡಿದೆ. ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಮತ್ತು ಪದಾಧಿಕಾರಿಗಳ ಸಮ್ಮುಖದಲ್ಲಿ ನಡೆದ ಬಹಿರಂಗ ಅಧಿವೇಶನದಲ್ಲಿ ಕನ್ನಡ ಭಾಷಾ ಅಭಿವೃದ್ದಿ ಅಧಿನಿಯಮ, ರಾಷ್ಟ್ರಕವಿ ಪ್ರಶಸ್ತಿ ಘೋಷಣೆ ಸೇರಿದಂತೆ ಆರು ಪ್ರಮುಖ ನಿರ್ಣಯಗಳನ್ನು ಜಾರಿ ಮಾಡಲು ಸರ್ಕಾರಕ್ಕೆ ಒತ್ತಾಯಿಸಲಾಗಿದೆ.

ಬಹಿರಂಗ ಅಧಿವೇಶದಲ್ಲಿ ಸಾಹಿತ್ಯ ಸಮ್ಮೇಳನದಲ್ಲಿ ಕಸಾಪ ತೆಗೆದುಕೊಂಡ ನಿರ್ಣಾಯಗಳು ಹೀಗಿವೆ.

  •  ಕನ್ನಡ ಭಾಷಾ ಅಭಿವೃದ್ದಿ ಅಧಿನಿಯಮ- 2022 ಸಮಗ್ರ ಜಾರಿಗೆಗೆ ಒತ್ತಾಯ
  • ಸರ್ಕಾರಿ ಕನ್ನಡ ಶಾಲೆಗೆ ಕಟ್ಟಡ, ವಾಚನಾಲಯ ಸೇರಿ ಮೂಲ ಸೌಕರ್ಯ ಕಲ್ಪಿಸಬೇಕು‌. ಖಾಲಿ ಇರುವ ಶಿಕ್ಚಕರ ಹುದ್ದೆ ಭರ್ತಿ ಮಾಡುವುದು.
  •  ಸರೋಜಿನಿ ಮಹಿಷಿ ವರದಿ ಶಾಸನಬದ್ಧಗೊಳಿಸಿ ಅನುಷ್ಠಾನಗೊಳಿಸಬೇಕು. ಜೊತೆಗೆ ಕನ್ನಡಿಗರ ಉದ್ಯೋಗಕ್ಕೆ ತಡೆಯಾಗಿ ನ್ಯಾಯಾಲಯದಲ್ಲಿ ಬಾಕಿಯಿರುವ ಕೇಸ್​ಗಳನ್ನು ಸರ್ಕಾರ ಎದುರಿಸಬೇಕು.
  • ಧಾರವಾಡದಲ್ಲಿ ನಡೆಯಬೇಕಿದ್ದ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಅತಿ ಶೀಘ್ರದಲ್ಲಿ ನಡೆಸಬೇಕು.
  • ರಾಷ್ಟ್ರಕವಿ ಪ್ರಶಸ್ತಿಯನ್ನ ಘೋಷಿಸಿಬೇಕು.
  • 87ನೇ ಸಾಹಿತ್ಯ ಸಮ್ಮೇಳನ ಯಶಸ್ವಿಗೆ ಕಾರಣವಾದ ಸಚಿವ ಚಲುವರಾಯಸ್ವಾಮಿಗೆ ಸೇರಿ ಎಲ್ಲರಿಗೂ, ಗಣ್ಯರಿಗೆ ಅಭಿನಂದನೆಗೆ ಮಂಡನೆ.

ಇದನ್ನೂ ಓದಿ: ಮುಂದಿನ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಬಳ್ಳಾರಿಯಲ್ಲಿ

ಈ ಎಲ್ಲಾ ವಿಷಯಗಳನ್ನು ಅನುಮೋದನೆ ಮಾಡುವಂತೆ ಕನ್ನಡ ಸಾಹಿತ್ಯ ಪರಿಷತ್ತು ಸದಸ್ಯರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಇನ್ನೊಂದು ವಾರದಲ್ಲಿ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿ ನಿರ್ಣಯಗಳನ್ನು ಅಂಗೀಕರಿಸುವಂತೆ ಕಸಾಪ ತಂಡ ಮನವಿ ಮಾಡಲಿದೆ.

ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನಾಡು, ನುಡಿಯ ಡಿಂಡಿಮ ಮೊಳಗಿದೆ. ಮೊದಲ ದಿನ ಬರೋಬ್ಬರಿ 2 ಲಕ್ಷ ಜನ ಸೇರಿ ದಾಖಲೆ ಬರೆದಿದ್ದರೆ, ಎರಡು ಮತ್ತು ಮೂರನೇ ದಿನ ಕೂಡ ಸಾಹಿತ್ಯಾಸಕ್ತರು, ಕನ್ನಡಾಭಿಮಾನಿಗಳು ಸಾಗರೋಪಾದಿಯಲ್ಲಿ ಆಗಮಿಸಿದ್ದರು.

ಇದನ್ನೂ ಓದಿ: ಬಾಡೇ ನಮ್ಮ ಮನೆ ಗಾಡು: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾನುವಾರದ ಬಾಡೂಟ ಜೋರು

ನಿನ್ನೆ 5 ವಿಷಯಗಳ ಕುರಿತು ಪ್ರಧಾನ ವೇದಿಕೆಯಲ್ಲಿ ಕವಿಗೋಷ್ಠಿ ನಡೆಸಲಾಯಿತು. ಸಂಜೆ ಸಮ್ಮೇಳಾನಾಧ್ಯಕ್ಷ ಗೊ.ರು.ಚೆ ಜತೆ ಸಂವಾದ ನಡೆಯಿತು. ಇನ್ನು ರಾತ್ರಿ ಸಂಗೀತ ನಿರ್ದೇಶಕ ಅರ್ಜುನ್ ಜನ್ಯರಿಂದ ಸಂಗೀತ ಕಾರ್ಯಕ್ರಮದಲ್ಲಿ, ಎಲ್ಲರೂ ಕುಣಿದು ಕುಪ್ಪಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:16 pm, Sun, 22 December 24

ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಬಸ್​ನಲ್ಲಿ ಕಂಡಕ್ಟರ್ ಮೊಬೈಲ್​​ನ್ನೇ ಕದ್ದ ಚಾಲಾಕಿ ಕಳ್ಳ
ಬಸ್​ನಲ್ಲಿ ಕಂಡಕ್ಟರ್ ಮೊಬೈಲ್​​ನ್ನೇ ಕದ್ದ ಚಾಲಾಕಿ ಕಳ್ಳ