ಹನಕೆರೆ‌ ಬಳಿ ಅಂಡರ್‌ಪಾಸ್ ನಿರ್ಮಾಣ: ಧರಣಿ ಕುಳಿತ್ತಿದ್ದ ರವಿ ಗಣಿಗಗೆ ಅನುಮೋದನೆ ಪತ್ರ ರವಾನಿಸಿದ NHAI

ಮಂಡ್ಯ ತಾಲೂಕಿನ ಹನಕೆರೆ‌ ಬಳಿ ಅಂಡರ್‌ಪಾಸ್ ನಿರ್ಮಾಣ ವಿಚಾರವಾಗಿ ರಾಮನಗರದ ಬಸವನಪುರ ಬಳಿಯಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕಚೇರಿ ಎದುರು ಶಾಸಕ ರವಿ ಗಣಿಗ ಪ್ರತಿಭಟನೆ ನಡೆಸಿದ್ದರು. ಈ ವಿಚಾರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳ ಗಮನಕ್ಕೆ ಬಂದ ಕೂಡಲೇ ಅಂಡರ್‌ಪಾಸ್ ನಿರ್ಮಾಣಕ್ಕೆ ಸಿಕ್ಕಿರುವ ಅನುಮತಿಯ ದಾಖಲಾತಿ ಪತ್ರಗಳನ್ನು ಶಾಸಕ ರವಿ ಗಣಿಗಗೆ ಪತ್ರ ಕಳುಹಿಸಿದ್ದಾರೆ.

ಹನಕೆರೆ‌ ಬಳಿ ಅಂಡರ್‌ಪಾಸ್ ನಿರ್ಮಾಣ: ಧರಣಿ ಕುಳಿತ್ತಿದ್ದ ರವಿ ಗಣಿಗಗೆ ಅನುಮೋದನೆ ಪತ್ರ ರವಾನಿಸಿದ NHAI
ಶಾಸಕ ರವಿ ಗಣಿಗ, NHAI ಪತ್ರ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Mar 07, 2024 | 4:41 PM

ಮಂಡ್ಯ, ಮಾರ್ಚ್​​​ 7: ತಾಲೂಕಿನ ಹನಕೆರೆ‌ ಬಳಿ ಅಂಡರ್‌ಪಾಸ್ ನಿರ್ಮಾಣಕ್ಕೆ ಆಗ್ರಹಿಸಿ ಶಾಸಕ ರವಿ ಗಣಿಗ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ಮಾಡುತ್ತಿರುವುದು ಗಮನಕ್ಕೆ ಬಂದ ಕೂಡಲೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಅಧಿಕಾರಿಗಳು ಈಗಾಗಲೇ ಅಂಡರ್‌ಪಾಸ್ ನಿರ್ಮಾಣಕ್ಕೆ ಸಿಕ್ಕಿರುವ ಅನುಮತಿಯ ದಾಖಲಾತಿ ಪತ್ರಗಳನ್ನು ಶಾಸಕ ರವಿ ಗಣಿಗಗೆ ಪತ್ರ ಕಳುಹಿಸಿದ್ದಾರೆ. ಜೊತೆಗೆ ಅಂಡರ್‌ಪಾಸ್ ನಿರ್ಮಾಣದ ಕಾರ್ಯ ಟೆಂಡರ್​ ಹಂತದಲ್ಲಿದೆ ಎಂದು ಸ್ಪಷ್ಟನೆ ನೀಡಿದೆ. 7.34 ಕೋಟಿ ವೆಚ್ಚದಲ್ಲಿ ಹನಕೆರೆ ಬಳಿ ಅಂಡರ್‌ಪಾಸ್‌ ನಿರ್ಮಾಣಕ್ಕೆ ಫೆ.24ರಂದು ಅನುಮೋದನೆ ದೊರೆತಿದೆ. ಈ ಕಾಮಗಾರಿ ಟೆಂಡರ್ ಹಂತದಲ್ಲಿ ಇದೆ ಎಂದು ಪತ್ರದಲ್ಲಿ NHAI ಉಲ್ಲೇಖಿಸಿದೆ.

ಶಾಸಕ ರವಿ ಗಣಿಗ ವಿರುದ್ಧ ಸಂಸದೆ ಸುಮಲತಾ ವಾಗ್ದಾಳಿ

ಅಂಡರ್​ಪಾಸ್ ವಿಚಾರವಾಗಿ ಶಾಸಕ ರವಿ ಗಣಿಗ ಪ್ರತಿಭಟನೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಂಸದೆ ಸುಮಲತಾ ನಾನು ಏನು ಮಾಡಿದ್ದೇನೆಂದು ದಾಖಲೆ ಸಮೇತ ಉತ್ತರ ನೀಡುವೆ. ಹನಕೆರೆ ಬಳಿ ಅಂಡರ್​ಪಾಸ್ ನಿರ್ಮಾಣಕ್ಕೆ ಹೆಚ್ಚುವರಿ ಹಣ ಬಿಡುಗಡೆ ಮಾಡಲಾಗಿದೆ. ಸಾಕಷ್ಟು ಬಾರಿ ಕೇಂದ್ರ ಹೆದ್ದಾರಿ ಸಚಿವ ಗಡ್ಕರಿ ಭೇಟಿಯಾಗಿ ಬೇಡಿಕೆ ಇಟ್ಟಿದ್ದೆ. ಅದರ ಫಲವಾಗಿ ಅಂಡರ್​ಪಾಸ್ ನಿರ್ಮಾಣಕ್ಕೆ ಅನುಮತಿ ಸಿಕ್ಕಿದೆ. ಕೇಂದ್ರ ಸರ್ಕಾರದಲ್ಲಿ ಪ್ರೋಸೆಸ್ ಆಗಿದೆ, ಸಚಿವರ ಸಹಿ ಬಾಕಿಯಿದೆ. ಇಂತಹ ಸಂದರ್ಭದಲ್ಲಿ ಶಾಸಕರು ಪ್ರತಿಭಟಿಸುವುದು ಎಷ್ಟು ಸರಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕುತೂಹಲ ಮೂಡಿಸಿದ ಮಂಡ್ಯ ಸಂಸದೆ ಸುಮಲತಾ ನಡೆ; ಟಿಕೆಟ್ ಮಿಸ್ ಆದರೆ ಪಕ್ಷೇತರವಾಗಿ ಕಣಕ್ಕೆ?

ಶಾಸಕರು ಸುಳ್ಳು ಹೇಳಿ ಜನರ ದಿಕ್ಕು ತಪ್ಪಿಸುವ ಕೆಲಸ ಸರಿಯಲ್ಲ. ನನ್ನ ಹೋರಾಟದಿಂದ ಆಗಿದೆ ಎಂದು ಬಿಂಬಿಸಿಕೊಳ್ಳುವ ಪ್ರಯತ್ನ ಇರಬಹುದು. ಅರ್ಧಂಬರ್ಧ ತಿಳಿದುಕೊಂಡು ಹೀಗೆ ಮಾತನಾಡುವುದು ಸರಿಯಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.

ಉಪವಾಸ ಸತ್ಯಾಗ್ರಹ ಕೈಬಿಡುವಂತೆ ಚಲುವರಾಯಸ್ವಾಮಿ ಮನವಿ

ರಾಮನಗರದ ಬಸವನಪುರ ಬಳಿಯಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕಚೇರಿ ಎದುರು ಶಾಸಕ ರವಿ ಗಣಿಗ ನಡೆಸುತ್ತಿರುವ ಸ್ಥಳಕ್ಕೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ N.ಚಲುವರಾಯಸ್ವಾಮಿ ಭೇಟಿ ನೀಡಿದ್ದಾರೆ. ಅಂಡರ್‌ಪಾಸ್ ನಿರ್ಮಾಣ ಮಾಡಿಸುವುದು ನನ್ನ ಜವಾಬ್ದಾರಿ.

ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ ಟಿಕೆಟ್‌ಗಾಗಿ ದುಡ್ಡು ಪಡೆಯುವ ಸಂಸ್ಕೃತಿ‌‌ ಇದೆ, ದುಡ್ಡಿನಿಂದ ಮಂಡ್ಯ ಜನರನ್ನ ಕೊಳ್ಳಲು ಆಗಲ್ಲ: ಸಂಸದೆ ಸುಮಲತಾ

ರಾಜ್ಯ ಸರ್ಕಾರದಿಂದ ಒತ್ತಡ ಹಾಕಿಸಿ ಕಾಮಗಾರಿ‌ ಮಾಡಿಸೋಣ. ಉಪವಾಸ ಸತ್ಯಾಗ್ರಹ ಕೈಬಿಡುವಂತೆ ಚಲುವರಾಯಸ್ವಾಮಿ ಮನವಿ ಮಾಡಿದ್ದಾರೆ. ಬಳಿಕ ಎಳನೀರು ಕುಡಿಯುವ ಮೂಲಕ ರವಿ ಗಣಿಗ ಸತ್ಯಾಗ್ರಹ ಕೈಬಿಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ತಾಜಾ ಸುದ್ದಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ