AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹನಕೆರೆ‌ ಬಳಿ ಅಂಡರ್‌ಪಾಸ್ ನಿರ್ಮಾಣ: ಧರಣಿ ಕುಳಿತ್ತಿದ್ದ ರವಿ ಗಣಿಗಗೆ ಅನುಮೋದನೆ ಪತ್ರ ರವಾನಿಸಿದ NHAI

ಮಂಡ್ಯ ತಾಲೂಕಿನ ಹನಕೆರೆ‌ ಬಳಿ ಅಂಡರ್‌ಪಾಸ್ ನಿರ್ಮಾಣ ವಿಚಾರವಾಗಿ ರಾಮನಗರದ ಬಸವನಪುರ ಬಳಿಯಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕಚೇರಿ ಎದುರು ಶಾಸಕ ರವಿ ಗಣಿಗ ಪ್ರತಿಭಟನೆ ನಡೆಸಿದ್ದರು. ಈ ವಿಚಾರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳ ಗಮನಕ್ಕೆ ಬಂದ ಕೂಡಲೇ ಅಂಡರ್‌ಪಾಸ್ ನಿರ್ಮಾಣಕ್ಕೆ ಸಿಕ್ಕಿರುವ ಅನುಮತಿಯ ದಾಖಲಾತಿ ಪತ್ರಗಳನ್ನು ಶಾಸಕ ರವಿ ಗಣಿಗಗೆ ಪತ್ರ ಕಳುಹಿಸಿದ್ದಾರೆ.

ಹನಕೆರೆ‌ ಬಳಿ ಅಂಡರ್‌ಪಾಸ್ ನಿರ್ಮಾಣ: ಧರಣಿ ಕುಳಿತ್ತಿದ್ದ ರವಿ ಗಣಿಗಗೆ ಅನುಮೋದನೆ ಪತ್ರ ರವಾನಿಸಿದ NHAI
ಶಾಸಕ ರವಿ ಗಣಿಗ, NHAI ಪತ್ರ
ಪ್ರಶಾಂತ್​ ಬಿ.
| Edited By: |

Updated on: Mar 07, 2024 | 4:41 PM

Share

ಮಂಡ್ಯ, ಮಾರ್ಚ್​​​ 7: ತಾಲೂಕಿನ ಹನಕೆರೆ‌ ಬಳಿ ಅಂಡರ್‌ಪಾಸ್ ನಿರ್ಮಾಣಕ್ಕೆ ಆಗ್ರಹಿಸಿ ಶಾಸಕ ರವಿ ಗಣಿಗ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ಮಾಡುತ್ತಿರುವುದು ಗಮನಕ್ಕೆ ಬಂದ ಕೂಡಲೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಅಧಿಕಾರಿಗಳು ಈಗಾಗಲೇ ಅಂಡರ್‌ಪಾಸ್ ನಿರ್ಮಾಣಕ್ಕೆ ಸಿಕ್ಕಿರುವ ಅನುಮತಿಯ ದಾಖಲಾತಿ ಪತ್ರಗಳನ್ನು ಶಾಸಕ ರವಿ ಗಣಿಗಗೆ ಪತ್ರ ಕಳುಹಿಸಿದ್ದಾರೆ. ಜೊತೆಗೆ ಅಂಡರ್‌ಪಾಸ್ ನಿರ್ಮಾಣದ ಕಾರ್ಯ ಟೆಂಡರ್​ ಹಂತದಲ್ಲಿದೆ ಎಂದು ಸ್ಪಷ್ಟನೆ ನೀಡಿದೆ. 7.34 ಕೋಟಿ ವೆಚ್ಚದಲ್ಲಿ ಹನಕೆರೆ ಬಳಿ ಅಂಡರ್‌ಪಾಸ್‌ ನಿರ್ಮಾಣಕ್ಕೆ ಫೆ.24ರಂದು ಅನುಮೋದನೆ ದೊರೆತಿದೆ. ಈ ಕಾಮಗಾರಿ ಟೆಂಡರ್ ಹಂತದಲ್ಲಿ ಇದೆ ಎಂದು ಪತ್ರದಲ್ಲಿ NHAI ಉಲ್ಲೇಖಿಸಿದೆ.

ಶಾಸಕ ರವಿ ಗಣಿಗ ವಿರುದ್ಧ ಸಂಸದೆ ಸುಮಲತಾ ವಾಗ್ದಾಳಿ

ಅಂಡರ್​ಪಾಸ್ ವಿಚಾರವಾಗಿ ಶಾಸಕ ರವಿ ಗಣಿಗ ಪ್ರತಿಭಟನೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಂಸದೆ ಸುಮಲತಾ ನಾನು ಏನು ಮಾಡಿದ್ದೇನೆಂದು ದಾಖಲೆ ಸಮೇತ ಉತ್ತರ ನೀಡುವೆ. ಹನಕೆರೆ ಬಳಿ ಅಂಡರ್​ಪಾಸ್ ನಿರ್ಮಾಣಕ್ಕೆ ಹೆಚ್ಚುವರಿ ಹಣ ಬಿಡುಗಡೆ ಮಾಡಲಾಗಿದೆ. ಸಾಕಷ್ಟು ಬಾರಿ ಕೇಂದ್ರ ಹೆದ್ದಾರಿ ಸಚಿವ ಗಡ್ಕರಿ ಭೇಟಿಯಾಗಿ ಬೇಡಿಕೆ ಇಟ್ಟಿದ್ದೆ. ಅದರ ಫಲವಾಗಿ ಅಂಡರ್​ಪಾಸ್ ನಿರ್ಮಾಣಕ್ಕೆ ಅನುಮತಿ ಸಿಕ್ಕಿದೆ. ಕೇಂದ್ರ ಸರ್ಕಾರದಲ್ಲಿ ಪ್ರೋಸೆಸ್ ಆಗಿದೆ, ಸಚಿವರ ಸಹಿ ಬಾಕಿಯಿದೆ. ಇಂತಹ ಸಂದರ್ಭದಲ್ಲಿ ಶಾಸಕರು ಪ್ರತಿಭಟಿಸುವುದು ಎಷ್ಟು ಸರಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕುತೂಹಲ ಮೂಡಿಸಿದ ಮಂಡ್ಯ ಸಂಸದೆ ಸುಮಲತಾ ನಡೆ; ಟಿಕೆಟ್ ಮಿಸ್ ಆದರೆ ಪಕ್ಷೇತರವಾಗಿ ಕಣಕ್ಕೆ?

ಶಾಸಕರು ಸುಳ್ಳು ಹೇಳಿ ಜನರ ದಿಕ್ಕು ತಪ್ಪಿಸುವ ಕೆಲಸ ಸರಿಯಲ್ಲ. ನನ್ನ ಹೋರಾಟದಿಂದ ಆಗಿದೆ ಎಂದು ಬಿಂಬಿಸಿಕೊಳ್ಳುವ ಪ್ರಯತ್ನ ಇರಬಹುದು. ಅರ್ಧಂಬರ್ಧ ತಿಳಿದುಕೊಂಡು ಹೀಗೆ ಮಾತನಾಡುವುದು ಸರಿಯಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.

ಉಪವಾಸ ಸತ್ಯಾಗ್ರಹ ಕೈಬಿಡುವಂತೆ ಚಲುವರಾಯಸ್ವಾಮಿ ಮನವಿ

ರಾಮನಗರದ ಬಸವನಪುರ ಬಳಿಯಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕಚೇರಿ ಎದುರು ಶಾಸಕ ರವಿ ಗಣಿಗ ನಡೆಸುತ್ತಿರುವ ಸ್ಥಳಕ್ಕೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ N.ಚಲುವರಾಯಸ್ವಾಮಿ ಭೇಟಿ ನೀಡಿದ್ದಾರೆ. ಅಂಡರ್‌ಪಾಸ್ ನಿರ್ಮಾಣ ಮಾಡಿಸುವುದು ನನ್ನ ಜವಾಬ್ದಾರಿ.

ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ ಟಿಕೆಟ್‌ಗಾಗಿ ದುಡ್ಡು ಪಡೆಯುವ ಸಂಸ್ಕೃತಿ‌‌ ಇದೆ, ದುಡ್ಡಿನಿಂದ ಮಂಡ್ಯ ಜನರನ್ನ ಕೊಳ್ಳಲು ಆಗಲ್ಲ: ಸಂಸದೆ ಸುಮಲತಾ

ರಾಜ್ಯ ಸರ್ಕಾರದಿಂದ ಒತ್ತಡ ಹಾಕಿಸಿ ಕಾಮಗಾರಿ‌ ಮಾಡಿಸೋಣ. ಉಪವಾಸ ಸತ್ಯಾಗ್ರಹ ಕೈಬಿಡುವಂತೆ ಚಲುವರಾಯಸ್ವಾಮಿ ಮನವಿ ಮಾಡಿದ್ದಾರೆ. ಬಳಿಕ ಎಳನೀರು ಕುಡಿಯುವ ಮೂಲಕ ರವಿ ಗಣಿಗ ಸತ್ಯಾಗ್ರಹ ಕೈಬಿಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ