AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ: ನೆತ್ತರ ನಿಗೂಢತೆಗೆ ನಡುಗಿದ ದಂಪತಿ, ಮನೆಯಲ್ಲಿ ಎಲ್ಲಿ ನೋಡಿದರೂ ರಕ್ತದ ಕಲೆ!

ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಹೊಂಬಾಳೆಗೌಡನ ದೊಡ್ಡಿ ಗ್ರಾಮದಲ್ಲಿ ಸತೀಶ್ ದಂಪತಿಯ ಮನೆಯಲ್ಲಿ ನಿಗೂಢ ರಕ್ತದ ಕಲೆಗಳು ಕಾಣಿಸಿಕೊಂಡಿರುವುದು ಗ್ರಾಮದೆಲ್ಲೆಡೆ ಆತಂಕ ಮೂಡಿಸಿದೆ. ಹಾಲ್, ಬಾತ್‌ರೂಂ, ಟಿವಿ, ಫ್ಯಾನ್ ಎಲ್ಲೆಡೆ ರಕ್ತದ ಕಲೆಗಳು ಕಂಡುಬಂದಿದ್ದು, ಪೊಲೀಸರು ಮತ್ತು ಎಫ್‌ಎಸ್‌ಎಲ್ ಶ್ವಾನದಳ ಸ್ಥಳ ಪರಿಶೀಲನೆ ನಡೆಸಿದೆ. ರಕ್ತದ ಮಾದರಿ ಲ್ಯಾಬ್‌ಗೆ ಕಳುಹಿಸಲಾಗಿದ್ದು, ತನಿಖೆ ಮುಂದುವರಿದಿದೆ.

ಮಂಡ್ಯ: ನೆತ್ತರ ನಿಗೂಢತೆಗೆ ನಡುಗಿದ ದಂಪತಿ, ಮನೆಯಲ್ಲಿ ಎಲ್ಲಿ ನೋಡಿದರೂ ರಕ್ತದ ಕಲೆ!
ನೆತ್ತರ ನಿಗೂಢತೆಗೆ ನಡುಗಿದ ದಂಪತಿ, ಮನೆಯಲ್ಲಿ ಎಲ್ಲಿ ನೋಡಿದರೂ ರಕ್ತದ ಕಲೆ!
ದಿಲೀಪ್​, ಚೌಡಹಳ್ಳಿ
| Edited By: |

Updated on:Oct 28, 2025 | 10:57 AM

Share

ಮಂಡ್ಯ, ಅಕ್ಟೋಬರ್ 28: ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಹೊಂಬಾಳೆಗೌಡನ ದೊಡ್ಡಿ ಗ್ರಾಮದಲ್ಲಿ ನಡೆದ ವಿಚಿತ್ರ ಘಟನೆ ಸ್ಥಳೀಯರನ್ನು ಬೆಚ್ಚಿಬೀಳುವಂತೆ ಮಾಡಿದೆ. ಸತೀಶ್ ಎಂಬುವರ ಮನೆಯೊಳಗೆ ಆಕಸ್ಮಿಕವಾಗಿ ರಕ್ತದ ಕಲೆಗಳು (Blood Stains) ಕಾಣಿಸಿಕೊಂಡಿದ್ದು, ಈ ನಿಗೂಢ ಘಟನೆಗೆ ಕಾರಣ ತಿಳಿಯದೆ ದಂಪತಿ ಭಯಭೀತರಾಗಿದ್ದಾರೆ.

ಹಾಲ್, ಬಾತ್‌ರೂಂ, ಟಿವಿ ಹಾಗೂ ಫ್ಯಾನ್‌ಗಳ ಮೇಲೆ ರಕ್ತದ ಕಲೆ!

ಸತೀಶ್ ದಂಪತಿ ತಮ್ಮ ಇಬ್ಬರು ಮಕ್ಕಳನ್ನು ಬೆಂಗಳೂರಿನಲ್ಲಿ ವಿದ್ಯಾಭ್ಯಾಸಕ್ಕೆ ಸೇರಿಸಿ ಮನೆಯಲ್ಲಿ ಇಬ್ಬರೇ ವಾಸವಾಗಿದ್ದರು. ಸೋಮವಾರ ಬೆಳಿಗ್ಗೆ ಸತೀಶ್ ಅವರ ಪತ್ನಿ ಮನೆ ಸ್ವಚ್ಛಗೊಳಿಸಿ, ಉಪಹಾರ ತಯಾರಿಸಲು ಅಡುಗೆಮನೆಗೆ ತೆರಳಿದ್ದರು. ಕೆಲವೇ ಕ್ಷಣಗಳಲ್ಲಿ ಮನೆ ಹಾಲ್, ಬಾತ್‌ರೂಂ, ಟಿವಿ ಹಾಗೂ ಫ್ಯಾನ್‌ಗಳ ಮೇಲೆ ರಕ್ತದ ಕಲೆಗಳು ಕಾಣಿಸಿಕೊಂಡವು. ಬೆಚ್ಚಿಬಿದ್ದ ದಂಪತಿಗಳು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದರು.

ರಕ್ತಸಿಕ್ತವಾದ ಮನೆಯ ವೀಡಿಯೋ ಇಲ್ಲಿದೆ

ಮಂಡ್ಯದ ಮನೆಯಲ್ಲಿ ಸಿಕ್ಕ ರಕ್ತದ ಸ್ಯಾಂಪಲ್​ ಲ್ಯಾಬ್​ಗೆ

ಘಟನೆಯ ಮಾಹಿತಿ ಆಧರಿಸಿ ಬೆಸಗರಹಳ್ಳಿ ಠಾಣಾ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಬಳಿಕ ಎಫ್‌ಎಸ್‌ಎಲ್ ಹಾಗೂ ಶ್ವಾನದಳದ ಸಿಬ್ಬಂದಿಯು ಸ್ಥಳಕ್ಕೆ ಆಗಮಿಸಿ ಮನೆಯಲ್ಲಿ ಕಂಡುಬಂದ ರಕ್ತದ ಮಾದರಿಗಳನ್ನು ಸಂಗ್ರಹಿಸಿದ್ದಾರೆ. ಅದು ನಿಜವಾಗಿಯೂ ಮಾನವ ರಕ್ತವೋ ಅಲ್ಲವೋ ಎಂಬುದನ್ನು ದೃಢಪಡಿಸಲು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಈ ಘಟನೆ ತಿಳಿದ ಸ್ಥಳೀಯರು ದಂಪತಿ ಮನೆಯ ಮುಂದೆ ಜಮಾಯಿಸಿದ್ದು, ಗ್ರಾಮದೆಲ್ಲೆಡೆ ಆತಂಕ ಮನೆಮಾಡಿತ್ತು.

ಸ್ಥಳೀಯರಲ್ಲಿ ಈ ಘಟನೆ ಆತಂಕ ಮತ್ತು ಕುತೂಹಲ ಮೂಡಿಸಿದ್ದು, ದಂಪತಿ ಆಸ್ತಿ ವಿವಾದದ ಹಿನ್ನೆಲೆ ಸಂಬಂಧಿಕರಿಂದ ವಾಮಾಚಾರದ ಶಂಕೆ ವ್ಯಕ್ತಪಡಿಸಿದ್ದಾರೆ. ಪೊಲೀಸರು ಎಲ್ಲಾ ಕೋಣೆಗಳಲ್ಲಿ ತನಿಖೆ ನಡೆಸಿದ್ದು, ಪ್ರಯೋಗಾಲಯದಿಂದ ಬರಬೇಕಾದ ರಿಪೋರ್ಟನ್ನು ಕಾದು ನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:58 am, Tue, 28 October 25

ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?