AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mandya Flag Controversy: ಮಂಡ್ಯ ಕೆರಗೋಡಿನಲ್ಲಿ ನಿಷೇಧಾಜ್ಞೆ ಮುಂದುವರಿಕೆ, ರಾಜ್ಯದ ಹಲವೆಡೆ ವ್ಯಾಪಿಸಿದ ಧ್ವಜ ವಿವಾದ

ಮಂಡ್ಯದಲ್ಲಿ ಆರಂಭವಾದ ಧ್ವಜ ವಿವಾದ ಈಗ ರಾಜ್ಯದ ಇತರ ಕಡೆಗಳಿಗೂ ವ್ಯಾಪಿಸಲು ಆರಂಭವಾಗಿದೆ. ಚಿಕ್ಕಬಳ್ಳಾಪುರ, ಕೋಲಾರ, ಮೈಸೂರಿನಲ್ಲಿಯೂ ಧ್ವಜ ವಿವಾದದ ಕಿಡಿ ಹೊತ್ತಿಕೊಂಡಿದೆ. ಈ ಮಧ್ಯೆ, ಕೆರೆಗೋಡಿನಲ್ಲಿ ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದೆ. ಕೆರೆಗೋಡಿನ ಎಲ್ಲ ಮನೆಗಳ ಮೇಲೆ ಹನುಮ ಧ್ವಜ ಹಾರಿಸಲು ಬಿಜೆಪಿ ಮುಂದಾಗಿದ್ದು, ಪೊಲೀಸ್ ಸರ್ಪಗಾವಲು ಮುಂದುವರಿದಿದೆ.

Mandya Flag Controversy: ಮಂಡ್ಯ ಕೆರಗೋಡಿನಲ್ಲಿ ನಿಷೇಧಾಜ್ಞೆ ಮುಂದುವರಿಕೆ, ರಾಜ್ಯದ ಹಲವೆಡೆ ವ್ಯಾಪಿಸಿದ ಧ್ವಜ ವಿವಾದ
ಸಾಂದರ್ಭಿಕ ಚಿತ್ರ
ಪ್ರಶಾಂತ್​ ಬಿ.
| Edited By: |

Updated on: Feb 01, 2024 | 6:55 AM

Share

ಮಂಡ್ಯ, ಫೆಬ್ರವರಿ 1: ಸಕ್ಕರೆ ನಾಡು ಮಂಡ್ಯದಲ್ಲಿ (Mandya) ಆರಂಭವಾದ ಧ್ವಜ ವಿವಾದದ (Flag Controversy) ಕಿಚ್ಚು ಇನ್ನೂ ತಣ್ಣಗಾಗಿಲ್ಲ. ಆದರೆ, ಈಗ ಆ ವಿವಾದ ಜಿಲ್ಲೆಯಿಂದ ಜಿಲ್ಲೆಗೆ ವ್ಯಾಪಿಸುತ್ತಿದೆ. ಹಸಿರು ಬಾವುಟ ಇರುವ ಫೋಟೋಗಳನ್ನು ಪೋಸ್ಟ್​ ಮಾಡಿ ಜನ ಹಾಗೂ ಬಿಜೆಪಿ ನಾಯಕರು ಇದನ್ನು ಯಾಕೆ ಬಿಟ್ಟಿದ್ದೀರಿ ಎಂದು ಸರ್ಕಾರಕ್ಕೆ ಪ್ರಶ್ನಿಸುತ್ತಿದ್ದಾರೆ. ಕೆರಗೋಡು (Keregodu) ಗ್ರಾಮದಲ್ಲಿ ಸದ್ಯ 200ಕ್ಕೂ ಹೆಚ್ಚು ಪೊಲೀಸರು ಮೊಕ್ಕಾಂ ಹೂಡಿದ್ದು, ನಿಷೇಧಾಜ್ಞೆ ಮುಂದುವರೆದಿದೆ. ಅತ್ತ ಪೊಲೀಸರ ಲಾಠಿ ಚಾರ್ಜ್‌‌ನಲ್ಲಿ ಗಾಯಗೊಂಡವರ ಮನೆಗೆ ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್ ಬುಧವಾರ ಭೇಟಿ ನೀಡಿ, ಧೈರ್ಯ ಹೇಳಿದ್ದಾರೆ.

ಪ್ರತಿಭಟನೆ ವೇಳೆ ಪೊಲೀಸರು ಕರೆದೊಯ್ದಿದ್ದ 9ನೇ ತರಗತಿ ಬಾಲಕನ ಮನೆಗೂ ಅವರು ತೆರಳಿದ್ದಾರೆ. ಈ ವೇಳೆ, ಅವರನ್ನ ತಡೆದ ಪೋಷಕರು ಯಾರೂ ಬರೋದು ಬೇಡ. ಯಾವ ಧ್ವಜವಾದ್ರೂ ಹಾರಾಡ್ಲಿ ನಮಗೇನು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಫೆಬ್ರವರಿ 9 ರಂದು ನಡೆದ ಘಟನೆ ಖಂಡಿಸಿ ಬಜರಂಗದಳ ಮಂಡ್ಯ ನಗರ ಬಂದ್​​​​ಗೆ ಕರೆ ಕೊಟ್ಟಿದೆ. ನಾಳೆಯಿಂದ ಮನೆ ಮನೆ ಮೇಲೆ ಹನುಮ ಹಾಗೂ ಕೇಸರಿ ಧ್ವಜ ಹಾರಾಟ ಅಭಿಯಾನಕ್ಕೂ ತೀರ್ಮಾನಿಸಿದೆ. ಮತ್ತೊಂದೆಡೆ, ಈ ಘಟನೆ ಖಂಡಿಸಿ ಫೆಬ್ರವರಿ 7 ರಂದು ಸಮಾನ ಮನಸ್ಕ ವೇದಿಕೆ ಮಂಡ್ಯ ನಗರ ಬಂದ್​ಗೆ ಕರೆಕೊಟ್ಟಿದೆ.

ಚಿಕ್ಕಬಳ್ಳಾಪುರ ಜಿಲ್ಲೆಗೂ ಕಾಲಿಟ್ಟಿತೇ ಧ್ವಜ ವಿವಾದ?

ಮಂಡ್ಯದಲ್ಲಿ ಕಿಚ್ಚು ಹಚ್ಚಿದ್ದ ಧ್ವಜ ದಂಗಲ್ ಚಿಕ್ಕಬಳ್ಳಾಪುರ ಜಿಲ್ಲೆಗೂ ಕಾಲಿಟ್ಟಿತೇ ಎಂಬ ಅನುಮಾನ ಮೂಡಿದೆ. ಏಕೆಂದರೆ, ಚಿಕ್ಕಬಳ್ಳಾಪುರ ನಗರದ ದೊಡ್ಡಭಜನೆಯಲ್ಲಿ ಮನೆ ಕಾಂಪೌಂಡ್‌ಗೆ ಧ್ವಜಸ್ತಂಭ ನಿರ್ಮಿಸಿ ಹಸಿರು ಬಾವುಟ ಹಾರಿಸಲಾಗಿದೆ. ಇದನ್ನ ಗಮನಿಸಿದ ಸ್ಥಳೀಯರು ಕೂಡಲೇ ಹಸಿರು ಬಾವುಟ ತೆರವುಗೊಳಿಸಬೇಕು ಎಂದು ಆಗ್ರಹಿಸಿ ದೂರು ನೀಡಿದ್ದಾರೆ.

ಇದನ್ನೂ ಓದಿ: ಕೆರಗೋಡುವಿನ ಎಲ್ಲ ಮನೆಗಳ ಮೇಲೆ ಹನುಮ ಧ್ವಜ ಹಾರುತ್ತೆ, ಸರ್ಕಾರಕ್ಕೆ ತಾಕತ್ತಿದ್ದರೆ ತಡೆಯಲಿ: ಮಂಡ್ಯ ಬಿಜೆಪಿ ಘಟಕ ಅಧ್ಯಕ್ಷ

ಸ್ಥಳೀಯರ ದೂರಿನ ಮೇರೆಗೆ ಸ್ಥಳಕ್ಕೆ ಪೊಲೀಸರು, ನಗರಸಭೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಈ ವೇಳೆ ಹಸಿರು ಬಾವುಟ ತೆರವುಗೊಳಿಸುವಂತೆ ಮನೆ ಮಾಲೀಕರಿಗೆ ಅಧಿಕಾರಿಗಳು ಸೂಚಿಸಿದ್ದಾರೆ.

ಕ್ಲಾಕ್ ಟವರ್ ಮೇಲಿನ ಅರ್ಧ ಚಂದ್ರ ಚಿಹ್ನೆ ತೆರವಿಗೆ ಆಗ್ರಹ!

ಕೆರಗೋಡಿನ ಧ್ವಜ ವಿವಾದದ ಬೆನ್ನಲ್ಲೇ ಕೋಲಾರದಲ್ಲೂ ವಿವಾದದ ಕಿಡಿ ಹೊತ್ತಿದೆ. ಕೋಲಾರದ ಕ್ಲಾಕ್ ಟವರ್​ ಮೇಲೆ ಹಾಕಲಾಗಿರುವ ಅರ್ಧ ಚಂದ್ರಾಕೃತಿ ಹಾಗೂ ನಕ್ಷತ್ರ ಆಕೃತಿ ಚಿಹ್ನೆ ತೆರವಿಗೆ ಬಿಜೆಪಿ ಮುಖಂಡರು ಆಗ್ರಹಿಸಿದ್ದಾರೆ.

ಮೈಸೂರಿನಲ್ಲಿಯೂ ಧ್ವಜ ವಿವಾದ ಸದ್ದು ಮಾಡುತ್ತಿದೆ. ಹಸಿರು ಬಾವುಟ ಇರುವ ಫೋಟೋ ಟ್ವೀಟ್ ಮಾಡಿದ ಸಂಸದ ಪ್ರತಾಪ್ ಸಿಂಹ, ಒಂದು ಬಾವುಟ ತೆಗೆದು ಇನ್ನೊಂದನ್ನೇಕೆ ಬಿಟ್ಟಿದ್ದೀರಿ ಎಂದು ಪ್ರಶ್ನಿಸಿದ್ದಾರೆ. ಮೈಸೂರಿನ ಕೈಲಾಸಪುರಂನ ಅಂಬೇಡ್ಕರ್ ಪಾರ್ಕ್ ಬಳಿ ಧ್ವಜ ಇರೋದು ಕಾಣುತ್ತಿಲ್ಲವೇ ಎಂದು ಟ್ವೀಟ್ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ