AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯದ ಸರ್ಕಾರಿ ಕಾಲೇಜನ್ನು ಕಾರಾಗೃಹವಾಗಿ ಪರಿವರ್ತಿಸಿ ಸಿನಿಮಾ ಶೂಟಿಂಗ್: ಚಿತ್ರತಂಡದ ವಿರುದ್ಧ ಸ್ಥಳೀಯರು ಆಕ್ರೋಶ

ಮಂಡ್ಯದ ಪ್ರತಿಷ್ಠಿತ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜನ್ನು "ಜೆಸಿ" ಚಿತ್ರತಂಡ ಕಾರಾಗೃಹ ಸೆಟ್ ಆಗಿ ಪರಿವರ್ತಿಸಿ ಚಿತ್ರೀಕರಣ ಮಾಡಿದೆ. ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕಾಲೇಜಿನ ಸ್ವರೂಪ ಬದಲಿಸಿ ಅನುಮತಿ ನೀಡಿದ ಶಿಕ್ಷಣ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗುತ್ತಿದೆ.

ಮಂಡ್ಯದ ಸರ್ಕಾರಿ ಕಾಲೇಜನ್ನು ಕಾರಾಗೃಹವಾಗಿ ಪರಿವರ್ತಿಸಿ ಸಿನಿಮಾ ಶೂಟಿಂಗ್: ಚಿತ್ರತಂಡದ ವಿರುದ್ಧ ಸ್ಥಳೀಯರು ಆಕ್ರೋಶ
ಮಂಡ್ಯದ ಸರ್ಕಾರಿ ಕಾಲೇಜನ್ನು ಕಾರಾಗೃಹವಾಗಿ ಪರಿವರ್ತಿಸಿ ಸಿನಿಮಾ ಶೂಟಿಂಗ್: ಚಿತ್ರತಂಡದ ವಿರುದ್ಧ ಸ್ಥಳೀಯರು ಆಕ್ರೋಶ
ಪ್ರಶಾಂತ್​ ಬಿ.
| Edited By: |

Updated on: Nov 03, 2024 | 7:22 PM

Share

ಮಂಡ್ಯ, ನವೆಂಬರ್​ 03: ಅದು ಸಕ್ಕರೆನಾಡಿನ ಪ್ರತಿಷ್ಠಿತ ಸರ್ಕಾರಿ ಕಾಲೇಜು (College). ಗ್ರಾಮೀಣ ಹೆಣ್ಣು ಮಕ್ಕಳ ಪಾಲಿನ ವಿದ್ಯಾ ದೇಗುಲ. ವಿದ್ಯಾರ್ಥಿಗಳ ಕಲರವದಿಂದ ಕೂಡಿರಬೇಕಿದ್ದ ಆ ಕಾಲೇಜು ಜೈಲಾಗಿ ಪರಿವರ್ತನೆಯಾಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕಾಲೇಜಿನ ಸ್ವರೂಪ ಬದಲಾಯಿಸಿ ಚಿತ್ರೀಕರಣಕ್ಕೆ ಅನುಮತಿ ಕೊಟ್ಟ ಶಿಕ್ಷಣ ಇಲಾಖೆ ಅಧಿಕಾರಿಗಳ ವಿರುದ್ದ ಕ್ರಮಕ್ಕೆ ಒತ್ತಾಯಿಸಲಾಗಿದೆ.

ಸರ್ಕಾರಿ ಕಾಲೇಜನ್ನೇ ಜೈಲಾಗಿ ಪರಿವರ್ತಿಸಿ ಶೂಟಿಂಗ್

ಕಲ್ಲುಕಟ್ಟಡ ಎಂದೇ ಫೇಮಸ್ ಆಗಿರುವ ಬಾಲಕಿಯರ ಕಾಲೇಜಿಗೆ ನಿತ್ಯವೂ ಸಾವಿರಾರು ಹೆಣ್ಣು ಮಕ್ಕಳು  ಬರುತ್ತಾರೆ. ಖಾಸಗಿ ಶಿಕ್ಷಣ ಸಂಸ್ಥೆಗಳ ಆರ್ಭಟದ ನಡುವೆಯೂ ಗ್ರಾಮೀಣ ಭಾಗದ ಹೆಣ್ಣು ಮಕ್ಕಳ ಪಾಲಿಗೆ ವಿದ್ಯಾ ದೇಗಲವಾಗಿದೆ. ಇಂತಹ ಕಾಲೇಜಿನಲ್ಲಿ ಜೈಲ್ ಸೆಟ್ ಹಾಕಿ ಚಿತ್ರೀಕರಣ ಮಾಡುವುದು ಎಷ್ಟು ಸರಿ ಎಂದು ಸಾರ್ವಜನಿಕರು ಪ್ರಶ್ನೆ ಮಾಡುತ್ತಿದ್ದಾರೆ.

ಇದನ್ನೂ ಓದಿ: ವಕ್ಫ್ ವಿವಾದ: ಸರ್ಕಾರಿ ಶಾಲೆಯ ಭೂಮಿಯ ಪಹಣಿಯಲ್ಲಿ ವಕ್ಫ್​ ಹೆಸರು

ಹೌದು. ‘ಜೆಸಿ’ ಚಿತ್ರತಂಡ ಭರದಿಂದ ಶೂಟಿಂಗ್​ನಲ್ಲಿ ತೊಡಗಿದ್ದು, ಕಾರಾಗೃಹ ಸನ್ನಿವೇಶಗಳನ್ನ ಮಂಡ್ಯದಲ್ಲಿ ಚಿತ್ರೀಕರಣ ಮಾಡುತ್ತಿದೆ. ಶೂಟಿಂಗ್​ಗಾಗಿ ಕೆಲವು ಮಾರ್ಪಾಡು ಮಾಡಲಾಗಿದ್ದು, ಸರ್ಕಾರಿ ಕಾಲೇಜಿಗೆ ಬೆಂಗಳೂರು ಕೇಂದ್ರ ಕಾರಾಗೃಹ ಎಂದು ಫಲಕ ಹಾಕಿದ್ದಾರೆ. ಕಾಲೇಜಿನ ಮುಂದೆ ಇದ್ದ ಧ್ವಜಕಂಬ ಕಟ್ ಮಾಡಿ, ಕಟ್ಟಡದ ಕಿಟಕಿ ಬಾಗಿಲು ಬದಲಾವಣೆ ಮಾಡಲಾಗಿದೆ. ಇದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಇನ್ನು ‘ಜೆಸಿ’ ಎಂಬ ಚಿತ್ರವನ್ನು ಡಾಲಿ ಪಿಕ್ಚರ್ಸ್ ಮೂಲಕ ನಟ ಡಾಲಿ ಧನಂಜಯ್ ಅವರು ನಿರ್ಮಾಣ ಮಾಡುತ್ತಿದ್ದಾರೆ. ಸದ್ಯ ಡಾಲಿ ಧನಂಜಯ್ ಸ್ಯಾಂಡಲ್ ವುಡ್​ನಲ್ಲಿ ‌ಉತ್ತುಂಗದಲ್ಲಿರುವ ನಟರ ಪೈಕಿ ಒಬ್ಬರು. ನಟನೆಗೆ ಸಮೀತವಾಗದೆ ನಿರ್ಮಾಣ ಸಂಸ್ಥೆಯನ್ನು‌ ಹುಟ್ಟು ಹಾಕಿ ಯುವ ಪ್ರತಿಭೆಗಳಿಗೆ ಅವಕಾಶ ನೀಡುತ್ತಿದ್ದಾರೆ.

ಇದನ್ನೂ ಓದಿ: ಕೆಆರ್​ಎಸ್​ ಹಳೇ ಗೇಟ್​ಗಳು​ ಕೇವಲ ಕೆಜಿ 6 ರೂ.ಗೆ ಮಾರಾಟ?, ರೈತ ಸಂಘ ಆಕ್ರೋಶ

ಆದರೆ ‘ಜೆ.ಸಿ‌’ ಚಿತ್ರತಂಡ ಮಂಡ್ಯದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜ್​ನ್ನು ಕಾರಾಗೃಹ ಪರಿವರ್ತಿಸಿ ಶೂಟಿಂಗ್ ಮಾಡಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕಾಲೇಜಿನಲ್ಲಿ ಶೂಟಿಂಗ್ ಕೊಟ್ಟ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ ಕೇಳಿಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಪ್ರಶಾಂತ್​ ಬಿ.
ಪ್ರಶಾಂತ್​ ಬಿ.

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
ಮಧ್ಯಪ್ರದೇಶದಿಂದ ಬೆಂಗಳೂರಿಗೆ ಬರಬೇಕಿದ್ದ 'ಕೈ' ಶಾಸಕರ ಪ್ರವಾಸ ರದ್ದು
ಮಧ್ಯಪ್ರದೇಶದಿಂದ ಬೆಂಗಳೂರಿಗೆ ಬರಬೇಕಿದ್ದ 'ಕೈ' ಶಾಸಕರ ಪ್ರವಾಸ ರದ್ದು
ಹೆಜ್ಜೇನು ದಾಳಿಗೆ ಶಾಲೆಯ 21ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ
ಹೆಜ್ಜೇನು ದಾಳಿಗೆ ಶಾಲೆಯ 21ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ
ಮೊದಲ ಬಾರಿ ಜಡ್ಜ್ ಪಾತ್ರದಲ್ಲಿ ನಟಿ ತಾರಾ, ಪಾತ್ರದ ಬಗ್ಗ ನಟಿ ಮಾತು
ಮೊದಲ ಬಾರಿ ಜಡ್ಜ್ ಪಾತ್ರದಲ್ಲಿ ನಟಿ ತಾರಾ, ಪಾತ್ರದ ಬಗ್ಗ ನಟಿ ಮಾತು
ಸಚಿವ ಸ್ಥಾನಕ್ಕಾಗಿ ಶಾಸಕರ ಲಾಬಿ: ಸಂಚಲನ ಮೂಡಿಸಿದ ಕೃಷ್ಣಭೈರೇಗೌಡ ನಡೆ
ಸಚಿವ ಸ್ಥಾನಕ್ಕಾಗಿ ಶಾಸಕರ ಲಾಬಿ: ಸಂಚಲನ ಮೂಡಿಸಿದ ಕೃಷ್ಣಭೈರೇಗೌಡ ನಡೆ
ಮಾಲೂರಿನಲ್ಲಿ 80 ಕೋಟಿ ರೂ. ಸರ್ಕಾರಿ ಭೂ ಹಗರಣ
ಮಾಲೂರಿನಲ್ಲಿ 80 ಕೋಟಿ ರೂ. ಸರ್ಕಾರಿ ಭೂ ಹಗರಣ
ಬೆಂಗಳೂರಿನಲ್ಲಿ ಮತ್ತೊಂದು ಅವೈಜ್ಞಾನಿಕ ಕಾಮಗಾರಿ
ಬೆಂಗಳೂರಿನಲ್ಲಿ ಮತ್ತೊಂದು ಅವೈಜ್ಞಾನಿಕ ಕಾಮಗಾರಿ
ನಲಪಾಡ್​ಗೆ ಮತ್ತೆ ಶಾಕ್: SIT ಚಾರ್ಜ್​ಶೀಟ್ ಬೆನ್ನಲ್ಲೇ ಇಡಿ 3ನೇ ಸಮನ್ಸ್
ನಲಪಾಡ್​ಗೆ ಮತ್ತೆ ಶಾಕ್: SIT ಚಾರ್ಜ್​ಶೀಟ್ ಬೆನ್ನಲ್ಲೇ ಇಡಿ 3ನೇ ಸಮನ್ಸ್
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ