AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಜಾಗ ಈಗ ಮುಸ್ಲಿಂ ಮಕಾನ್, ಹಿಂದೂಗಳ ಅಂತ್ಯ ಸಂಸ್ಕಾರಕ್ಕಿಲ್ಲ ಜಾಗ

ಮಂಡ್ಯ ಜಿಲ್ಲೆ ಹೊಸಬೂದನೂರು ಗ್ರಾಮದಲ್ಲಿ 60 ವರ್ಷದಿಂದ ಇದ್ದ ಸರ್ಕಾರಿ ಸ್ಮಶಾನವಾಗಿದ್ದ ಜಾಗವನ್ನು ಮುಸ್ಲಿಮರಿಗೆ ಬಿಟ್ಟುಕೊಡಲಾಗಿತ್ತು. 2017 ರಲ್ಲಿ ಈ ಹಿಂದೂ ಜಾಗವನ್ನು ಏಕಾಏಕಿ ಮುಸ್ಲಿಂ ಮಕಾನ್ ಆಗಿ ಪರಿವರ್ತನೆ ಮಾಡಿದ್ದರು. ಮುಸ್ಲಿಮರೇ ಇಲ್ಲದ ಊರಿನಲ್ಲಿ ಅವರಿಗಾಗಿ ಜಾಗ ಬಿಟ್ಟುಕೊಟ್ಟಿದ್ದು ಇದೀಗ ಸಾಕಷ್ಟು ವಿರೋಧಕ್ಕೆ ಕಾರಣವಾಗಿದೆ.

ಸರ್ಕಾರಿ ಜಾಗ ಈಗ ಮುಸ್ಲಿಂ ಮಕಾನ್, ಹಿಂದೂಗಳ ಅಂತ್ಯ ಸಂಸ್ಕಾರಕ್ಕಿಲ್ಲ ಜಾಗ
ಹಿಂದೂಗಳ ಸ್ಮಶಾನವನ್ನು ಮುಸ್ಲಿಮರಿಗೆ ಕೊಟ್ಟಿದ್ದನ್ನು ವಿರೋಧಿಸಿ ಮಂಡ್ಯ ಜನರು ಪ್ರತಿಭಟನೆ ಮಾಡಿದರು.
ದಿಲೀಪ್​, ಚೌಡಹಳ್ಳಿ
| Edited By: |

Updated on: Oct 15, 2025 | 1:15 PM

Share

ಮಂಡ್ಯ, ಅಕ್ಟೋಬರ್ 15: ಮಂಡ್ಯ ಜಿಲ್ಲೆ ಹೊಸಬೂದನೂರು ಗ್ರಾಮದಲ್ಲಿ 60 ವರ್ಷದಿಂದ ಇದ್ದ ಸರ್ಕಾರಿ ಸ್ಮಶಾನವಾಗಿದ್ದ (Graveyard) ಜಾಗ 2017 ರಲ್ಲಿ ಮುಸ್ಲಿಮರಿಗೆ ಬಿಟ್ಟುಕೊಡಲಾಗಿದೆ. ಮುಸ್ಲಿಮರೇ ಇಲ್ಲದ ಊರಿನಲ್ಲಿ ಅವರಿಗಾಗಿ ಜಾಗ ಬಿಟ್ಟುಕೊಟ್ಟ ಬಗ್ಗೆ ಈಗ ಸಾಕಷ್ಟು ವಿರೋಧಕ್ಕೆ ಕಾರಣವಾಗಿದೆ. ಜಿಲ್ಲಾಡಳಿತದ ಈ ನಿರ್ಧಾವನ್ನು ವಿರೋಧಿಸಿ ಮಂಡ್ಯದ ಜನರು ಪ್ರತಿಭಟನೆಗಿಳಿದಿದ್ದಾರೆ.

ಹಿಂದೂ ಜಾಗವನ್ನು ಏಕಾಏಕಿ ಮುಸ್ಲಿಂ ಮಕಾನ್ ಆಗಿ ಪರಿವರ್ತನೆ ಮಾಡಿದ್ದ ವಕ್ಫ್ ಬೋರ್ಡ್

ಮಂಡ್ಯ ಜಿಲ್ಲೆಯ ತಾಲೂಕಿನ ಹೊಸಬೂದನೂರು ಗ್ರಾಮದಲ್ಲಿ ನೂರಾರು ಹಿಂದೂ ಧರ್ಮದ ಕುಟುಂಬಗಳಿವೆ. ಇಲ್ಲಿನ ಗ್ರಾಮಸ್ಥರು ಕಳೆದ 60 ವರ್ಷಗಳಿಂದ ಈ ಗ್ರಾಮದಲ್ಲಿನ ಒಂದು ಭೂಪ್ರದೇಶವನ್ನು ಸ್ಮಶಾನವಾಗಿ ಬಳಸುತ್ತಿದ್ದರು. ಇದೀಗ ಹಿಂದೂ ಧರ್ಮದಲ್ಲಿ ಒಂದು ಸಾವಾದರೂ ನೆಮ್ಮದಿಯಿಂದ ಅಂತ್ಯಸಂಸ್ಕಾರ ಮಾಡುವ ಅವಕಾಶವನ್ನೂ ಕಸಿದುಕೊಳ್ಳಲಾಗಿದೆ.

1963 ರಿಂದ 2017 ರವರೆಗೂ ಗ್ರಾಮದ ಸರ್ವೆ ನಂ. 313 ರ 1 ಎಕರೆ 13 ಗುಂಟೆ ಜಾಗ ಸರ್ಕಾರಿ ಸ್ಮಶಾನವಾಗಿತ್ತು. ಹಿಂದಿನಿಂದಲೂ ಇಲ್ಲಿನ ಹಿಂದೂಗಳು ಸಾವನಪ್ಪಿದಾಗ ಇದೇ ಸ್ಮಶಾನದಲ್ಲಿ ಅಂತ್ಯ ಸಂಸ್ಕಾರ ಮಾಡುತ್ತಿದ್ದರು. ಆದರೆ ವಕ್ಫ್ ಬೋರ್ಡ್​ 2017 ರಲ್ಲಿ ಈ ಹಿಂದೂ ಜಾಗವನ್ನು ಏಕಾಏಕಿ ಮುಸ್ಲಿಂ ಮಕಾನ್ ಆಗಿ ಪರಿವರ್ತನೆ ಮಾಡಿದ್ದರು. ಮುಸ್ಲಿಂ ಜನರೇ ಇಲ್ಲದ ಊರಲ್ಲಿ ಹಿಂದೂ ಸ್ಮಶಾನವನ್ನು ಮುಸ್ಲಿಂ ಮಕಾನ್ ಮಾಡಿದ್ದಕ್ಕೆ ಗ್ರಾಮಸ್ಥರು ಅಸಮಾಧಾನ ಹೊರ ಹಾಕಿದ್ದಾರೆ.

ಸ್ಮಶಾನ ಅಭಿವೃದ್ದಿಗೆ ಒತ್ತಾಯಿಸಿ ಗ್ರಾಮಸ್ಥರ ಪ್ರತಿಭಟನೆ

2021 ರಲ್ಲಿ ಅಂತ್ಯ ಸಂಸ್ಕಾರ ನಡೆಸದಂತೆ ವಕ್ಫ್ ಮಂಡಳಿ ಕ್ಯಾತೆ ತೆಗೆದಿತ್ತು. ಬಳಿಕ ಗ್ರಾಮಸ್ಥರ ಹೋರಾಟಕ್ಕೆ ಮಣಿದ ಜಿಲ್ಲಾಡಳಿತ ಸ್ಮಶಾನ ಜಾಗವನ್ನು ಗ್ರಾಮಸ್ಥರಿಗೆ ನೀಡಿತ್ತು. ಕೇವಲ 24 ಗುಂಟೆ ಜಾಗದಲ್ಲಿ ಅಂತ್ಯಕ್ರಿಯೆಗೆ ಅವಕಾಶ ನೀಡಿತ್ತು. ಆ ಸ್ಥಳದಲ್ಲಿ ಇದೀಗ ಅಂತ್ಯ ಸಂಸ್ಕಾರಕ್ಕೂ ತಡೆಯೊಡ್ಡಲಾಗಿದೆ. ಗ್ರಾಮ ಪಂಚಾಯತಿಯಿಂದ ಸ್ಮಶಾನ ಅಭಿವೃದ್ದಿ ಆಗಬೇಕಿದ್ದಾಗಲೂ ತಹಶೀಲ್ದಾರರು ಕೆಲಸ ತಡೆಹಿಡಿದಿದ್ದರು. ಇದರಿಂದ ಜಿಲ್ಲಾಡಳಿತ ವಿರುದ್ದ ಸಿಡಿದೆದ್ದ ಗ್ರಾಮಸ್ಥರು, ಮುಸ್ಲಿಂ ಮಕಾನನ್ನು ವಾಪಸ್ಸು ಹಿಂದೂ ಸ್ಮಶಾನವಾಗಿ ಮಾಡುವಂತೆ ಆಗ್ರಹಿಸಿದ್ದಾರೆ. ಸ್ಮಶಾನ ಅಭಿವೃದ್ದಿಗೆ ಒತ್ತಾಯಿಸಿ ಗ್ರಾಮಸ್ಥರು ಪ್ರತಿಭಟನೆಗೆ ಸಹ ಇಳಿದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Dileep CP
Dileep CP

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!