AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನ ಬುದ್ಧಿ ಕಲಿಸಿದರೆ ನಾನು ಕಲಿಯುತ್ತೇನೆ: ಸಂಸದೆ ಸುಮಲತಾ ಅಂಬರೀಶ್

ನಾನು ಸಿನಿಮಾದವಳೇ, ಅಲ್ಲಿ ಭ್ರಷ್ಟಾಚಾರ ಇರೋದಿಲ್ಲ. ನಾನು ಏನೇ ಮಾತಾಡಿದ್ರು ರಾಜಕೀಯ ಅರ್ಥ ಕೊಡ್ತಾರೆ. ಜನರು ಬುದ್ಧಿ ಕಲಿಸುತ್ತಾರೆ ಅನ್ನುತ್ತಾರಲ್ಲ. ಜನರು ಬುದ್ಧಿ ಕಲಿಸಿದರೆ ನಾನು ಕಲಿಯುತ್ತೇನೆ ಎಂದು ಸಹ ಮಂಡ್ಯದಲ್ಲಿ ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.

ಜನ ಬುದ್ಧಿ ಕಲಿಸಿದರೆ ನಾನು ಕಲಿಯುತ್ತೇನೆ: ಸಂಸದೆ ಸುಮಲತಾ ಅಂಬರೀಶ್
ಸುಮಲತಾ ಅಂಬರೀಷ್
TV9 Web
| Edited By: |

Updated on: Jul 13, 2021 | 3:21 PM

Share

ಮಂಡ್ಯ: ನನ್ನ ಬಗ್ಗೆ ಅಸಂಬದ್ಧ ಪದ ಬಳಕೆ ಮಾಡಿ ಮನ್‌ಮುಲ್ ಹಗರಣದ ವಿಚಾರದ ಕುರಿತು ಜನರ ಗಮನವನ್ನು ಕಡಿಮೆಗೊಳಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಸಂಸದೆ ಸುಮಲತಾ ಅಂಬರೀಶ್ ಆರೋಪಿಸಿದ್ದಾರೆ. ನಾನು ಧ್ವನಿ ಎತ್ತಿದರೆ ರಾಜಕೀಯವಾಗಿ ಬಳಸಿಕೊಳ್ತಾರೆ ಅಂತಾರೆ. ನಾನು ರಾಜಕೀಯವಾಗಿ ಮಾತನಾಡಲ್ಲ. ಅಂಬರೀಶ್ ಪಾರ್ಥಿವ ಶರೀರ ಮಂಡ್ಯಕ್ಕೆ ತಂದೆ ಅಂತಾರೆ. ಇದರಿಂದ ರೈತರಿಗೆ ಏನು ಉಪಯೋಗ ಎಂದು ಅವರು ಪ್ರಶ್ನಿಸಿದ್ದಾರೆ. ನನಗೆ ರಾಜಕೀಯವೂ ಹೊಸದು, ಭ್ರಷ್ಟಾಚಾರವೂ ಹೊಸದು. ನಾನು ಸಿನಿಮಾದವಳೇ, ಅಲ್ಲಿ ಭ್ರಷ್ಟಾಚಾರ ಇರೋದಿಲ್ಲ. ನಾನು ಏನೇ ಮಾತಾಡಿದ್ರು ರಾಜಕೀಯ ಅರ್ಥ ಕೊಡ್ತಾರೆ. ಜನರು ಬುದ್ಧಿ ಕಲಿಸುತ್ತಾರೆ ಅನ್ನುತ್ತಾರಲ್ಲ. ಜನರು ಬುದ್ಧಿ ಕಲಿಸಿದರೆ ನಾನು ಕಲಿಯುತ್ತೇನೆ ಎಂದು ಸಹ ಮಂಡ್ಯದಲ್ಲಿ ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.

ಸುಮಲತಾ ಪರ ಬೆನ್ನಿಗೆ ನಿಂತಿದ್ದ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಮನೆ ಮೇಲೆ ಕೆಲ ಕಿಡಿಗೇಡಿಗಳು ಮದ್ಯದ ಬಾಟಲಿ ಎಸೆದು ದಾಳಿ ಮಾಡಿದ್ದರು. ಈ ಘಟನೆ ಬಗ್ಗೆ ಮಾತನಾಡಿದ ಸಂಸದೆ ಸುಮಲತಾ ಅಂಬರೀಶ್, ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಇಂಥಾ ಕೃತ್ಯ ನಡೆದಿತ್ತು ಎಂದರು.

ಮಂಡ್ಯ ಕ್ಷೇತ್ರದ ಸಂಸದೆ ಸುಮಲತಾ ಅಂಬರೀಶ್, ಇದು ಈ ಹಿಂದೆಯೂ ನಡೆದಿತ್ತು. ನಟ ದರ್ಶನ್ ಮನೆ ಮೇಲೂ ಹೀಗೆ ದಾಳಿ ಮಾಡಲಾಗಿತ್ತು. ಅವರ ಮಾತಿಗೆ ಹೆದರಿಲ್ಲ ಅಂದ್ರೆ ಇಂತಹ ವರ್ತನೆ ಇರುತ್ತೆ. ಈ ರೀತಿ ಮಾಡುವುದರಿಂದ ನನಗೆ ಮತ್ತಷ್ಟು ಶಕ್ತಿ ಬರುತ್ತದೆ. ಯಾವುದಕ್ಕೂ ಹೆದರುವ ಪ್ರಶ್ನೆಯೇ ಇಲ್ಲವೆಂದರು.

ನಾಳೆ ಬೇಬಿಬೆಟ್ಟ, ಕೆಆರ್ಎಸ್ ಜಲಾಶಯಕ್ಕೆ ಭೇಟಿ ನೀಡುವೆ. ಕೆಆರ್ಎಸ್ನಲ್ಲಿ ಹಿರಿಯ ಅಧಿಕಾರಿಗಳ ಜತೆ ಚರ್ಚೆ ನಡೆಸುವೆ. ಗಣಿ & ಭೂವಿಜ್ಞಾನ ಇಲಾಖೆ ಸಚಿವರ ಜತೆ ಮಾತಾಡಿದ್ದೇನೆ. ಈ ವಾರದಲ್ಲಿ ಮಂಡ್ಯ ಜಿಲ್ಲೆಗೆ ಭೇಟಿ ನೀಡುವುದಾಗಿ ಭರವಸೆ ನೀಡಿದ್ದಾರೆ. ಅಕ್ರಮ ಕಲ್ಲು ಗಣಿಗಾರಿಕೆ ಬಗ್ಗೆ ಪರಿಶೀಲಿಸಿ ಕ್ರಮ ತೆಗೆದುಕೊಳ್ಳುವುದಾಗಿ ಗಣಿ ಮತ್ತು ಭೂವಿಜ್ಞಾನ ಸಚಿವ ನಿರಾಣಿ ಭರವಸೆ ನೀಡಿದ್ದಾರೆ ಎಂದರು.

ಇದನ್ನೂ ಓದಿ: 

ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಜೊತೆಗಿನ ಫೋಟೋ ವೈರಲ್ ಬಗ್ಗೆ ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದೇನು?

ಸುಮಲತಾ ಹೆಚ್​ಡಿಕೆ ಪುತ್ರನನ್ನ ಸೋಲಿಸಿದ್ದಕ್ಕೆ ಕುಮಾರಸ್ವಾಮಿ ರಾಜಕೀಯ ಮಾಡುತ್ತಿದ್ದಾರೆ: ಹುಬ್ಬಳ್ಳಿಯಲ್ಲಿ ಸಿದ್ದರಾಮಯ್ಯ ಹೇಳಿಕೆ

(Mandya MP Sumalatha Ambareesh says if people teach i will learn )

Follow Us
Web contact
Web contact

TV9 Kannada

Read More
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ