AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನ ಬುದ್ಧಿ ಕಲಿಸಿದರೆ ನಾನು ಕಲಿಯುತ್ತೇನೆ: ಸಂಸದೆ ಸುಮಲತಾ ಅಂಬರೀಶ್

ನಾನು ಸಿನಿಮಾದವಳೇ, ಅಲ್ಲಿ ಭ್ರಷ್ಟಾಚಾರ ಇರೋದಿಲ್ಲ. ನಾನು ಏನೇ ಮಾತಾಡಿದ್ರು ರಾಜಕೀಯ ಅರ್ಥ ಕೊಡ್ತಾರೆ. ಜನರು ಬುದ್ಧಿ ಕಲಿಸುತ್ತಾರೆ ಅನ್ನುತ್ತಾರಲ್ಲ. ಜನರು ಬುದ್ಧಿ ಕಲಿಸಿದರೆ ನಾನು ಕಲಿಯುತ್ತೇನೆ ಎಂದು ಸಹ ಮಂಡ್ಯದಲ್ಲಿ ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.

ಜನ ಬುದ್ಧಿ ಕಲಿಸಿದರೆ ನಾನು ಕಲಿಯುತ್ತೇನೆ: ಸಂಸದೆ ಸುಮಲತಾ ಅಂಬರೀಶ್
ಸುಮಲತಾ ಅಂಬರೀಷ್
TV9 Web
| Edited By: |

Updated on: Jul 13, 2021 | 3:21 PM

Share

ಮಂಡ್ಯ: ನನ್ನ ಬಗ್ಗೆ ಅಸಂಬದ್ಧ ಪದ ಬಳಕೆ ಮಾಡಿ ಮನ್‌ಮುಲ್ ಹಗರಣದ ವಿಚಾರದ ಕುರಿತು ಜನರ ಗಮನವನ್ನು ಕಡಿಮೆಗೊಳಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಸಂಸದೆ ಸುಮಲತಾ ಅಂಬರೀಶ್ ಆರೋಪಿಸಿದ್ದಾರೆ. ನಾನು ಧ್ವನಿ ಎತ್ತಿದರೆ ರಾಜಕೀಯವಾಗಿ ಬಳಸಿಕೊಳ್ತಾರೆ ಅಂತಾರೆ. ನಾನು ರಾಜಕೀಯವಾಗಿ ಮಾತನಾಡಲ್ಲ. ಅಂಬರೀಶ್ ಪಾರ್ಥಿವ ಶರೀರ ಮಂಡ್ಯಕ್ಕೆ ತಂದೆ ಅಂತಾರೆ. ಇದರಿಂದ ರೈತರಿಗೆ ಏನು ಉಪಯೋಗ ಎಂದು ಅವರು ಪ್ರಶ್ನಿಸಿದ್ದಾರೆ. ನನಗೆ ರಾಜಕೀಯವೂ ಹೊಸದು, ಭ್ರಷ್ಟಾಚಾರವೂ ಹೊಸದು. ನಾನು ಸಿನಿಮಾದವಳೇ, ಅಲ್ಲಿ ಭ್ರಷ್ಟಾಚಾರ ಇರೋದಿಲ್ಲ. ನಾನು ಏನೇ ಮಾತಾಡಿದ್ರು ರಾಜಕೀಯ ಅರ್ಥ ಕೊಡ್ತಾರೆ. ಜನರು ಬುದ್ಧಿ ಕಲಿಸುತ್ತಾರೆ ಅನ್ನುತ್ತಾರಲ್ಲ. ಜನರು ಬುದ್ಧಿ ಕಲಿಸಿದರೆ ನಾನು ಕಲಿಯುತ್ತೇನೆ ಎಂದು ಸಹ ಮಂಡ್ಯದಲ್ಲಿ ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.

ಸುಮಲತಾ ಪರ ಬೆನ್ನಿಗೆ ನಿಂತಿದ್ದ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಮನೆ ಮೇಲೆ ಕೆಲ ಕಿಡಿಗೇಡಿಗಳು ಮದ್ಯದ ಬಾಟಲಿ ಎಸೆದು ದಾಳಿ ಮಾಡಿದ್ದರು. ಈ ಘಟನೆ ಬಗ್ಗೆ ಮಾತನಾಡಿದ ಸಂಸದೆ ಸುಮಲತಾ ಅಂಬರೀಶ್, ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಇಂಥಾ ಕೃತ್ಯ ನಡೆದಿತ್ತು ಎಂದರು.

ಮಂಡ್ಯ ಕ್ಷೇತ್ರದ ಸಂಸದೆ ಸುಮಲತಾ ಅಂಬರೀಶ್, ಇದು ಈ ಹಿಂದೆಯೂ ನಡೆದಿತ್ತು. ನಟ ದರ್ಶನ್ ಮನೆ ಮೇಲೂ ಹೀಗೆ ದಾಳಿ ಮಾಡಲಾಗಿತ್ತು. ಅವರ ಮಾತಿಗೆ ಹೆದರಿಲ್ಲ ಅಂದ್ರೆ ಇಂತಹ ವರ್ತನೆ ಇರುತ್ತೆ. ಈ ರೀತಿ ಮಾಡುವುದರಿಂದ ನನಗೆ ಮತ್ತಷ್ಟು ಶಕ್ತಿ ಬರುತ್ತದೆ. ಯಾವುದಕ್ಕೂ ಹೆದರುವ ಪ್ರಶ್ನೆಯೇ ಇಲ್ಲವೆಂದರು.

ನಾಳೆ ಬೇಬಿಬೆಟ್ಟ, ಕೆಆರ್ಎಸ್ ಜಲಾಶಯಕ್ಕೆ ಭೇಟಿ ನೀಡುವೆ. ಕೆಆರ್ಎಸ್ನಲ್ಲಿ ಹಿರಿಯ ಅಧಿಕಾರಿಗಳ ಜತೆ ಚರ್ಚೆ ನಡೆಸುವೆ. ಗಣಿ & ಭೂವಿಜ್ಞಾನ ಇಲಾಖೆ ಸಚಿವರ ಜತೆ ಮಾತಾಡಿದ್ದೇನೆ. ಈ ವಾರದಲ್ಲಿ ಮಂಡ್ಯ ಜಿಲ್ಲೆಗೆ ಭೇಟಿ ನೀಡುವುದಾಗಿ ಭರವಸೆ ನೀಡಿದ್ದಾರೆ. ಅಕ್ರಮ ಕಲ್ಲು ಗಣಿಗಾರಿಕೆ ಬಗ್ಗೆ ಪರಿಶೀಲಿಸಿ ಕ್ರಮ ತೆಗೆದುಕೊಳ್ಳುವುದಾಗಿ ಗಣಿ ಮತ್ತು ಭೂವಿಜ್ಞಾನ ಸಚಿವ ನಿರಾಣಿ ಭರವಸೆ ನೀಡಿದ್ದಾರೆ ಎಂದರು.

ಇದನ್ನೂ ಓದಿ: 

ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಜೊತೆಗಿನ ಫೋಟೋ ವೈರಲ್ ಬಗ್ಗೆ ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದೇನು?

ಸುಮಲತಾ ಹೆಚ್​ಡಿಕೆ ಪುತ್ರನನ್ನ ಸೋಲಿಸಿದ್ದಕ್ಕೆ ಕುಮಾರಸ್ವಾಮಿ ರಾಜಕೀಯ ಮಾಡುತ್ತಿದ್ದಾರೆ: ಹುಬ್ಬಳ್ಳಿಯಲ್ಲಿ ಸಿದ್ದರಾಮಯ್ಯ ಹೇಳಿಕೆ

(Mandya MP Sumalatha Ambareesh says if people teach i will learn )

Follow Us
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಗ್ರಹಣ ಕಾಲದ ಬಗ್ಗೆ ಅರ್ಚಕ ಸೋಮಸುಂದರ್ ದೀಕ್ಷಿತ್ ಹೇಳಿದ್ದೇನು?
ಗ್ರಹಣ ಕಾಲದ ಬಗ್ಗೆ ಅರ್ಚಕ ಸೋಮಸುಂದರ್ ದೀಕ್ಷಿತ್ ಹೇಳಿದ್ದೇನು?