AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ ಬೆಲ್ಲ ಸಂಸ್ಕರಣಾ ಘಟಕಗಳ ಪರವಾಗಿ ಲೋಕಸಭೆಯಲ್ಲಿ ಧ್ವನಿ ಎತ್ತಿದ ಸುಮಲತಾ ಅಂಬರೀಶ್

ಲೋಕಸಭಾ ಕಲಾಪದ ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಅವರು, ತಮ್ಮ ಕ್ಷೇತ್ರದ ಬೆಲ್ಲ ತಯಾರಿಕೆ ಘಟಕಗಳ ಪರವಾಗಿ ಅಹವಾಲು ಸಲ್ಲಿಸಿದರು. ನಿಜವಾದ ಬೆಲ್ಲ ಹಾಗೂ ಬ್ಲೀಚಿಂಗ್ ಅಥವಾ ರಾಸಾಯನಿಕಗಳನ್ನು ಹಾಕಿ ಮಾಡಿರುವ ಬೆಲ್ಲದ ವ್ಯತ್ಯಾಸಗಳನ್ನು ಕೂಡ ಜನರಿಗೆ ಮನವರಿಕೆ ಮಾಡಬೇಕು ಎಂದು ಕೇಳಿಕೊಂಡರು.

ಮಂಡ್ಯ ಬೆಲ್ಲ ಸಂಸ್ಕರಣಾ ಘಟಕಗಳ ಪರವಾಗಿ ಲೋಕಸಭೆಯಲ್ಲಿ ಧ್ವನಿ ಎತ್ತಿದ ಸುಮಲತಾ ಅಂಬರೀಶ್
ಸುಮಲತಾ ಅಂಬರೀಶ್ (ಸಂಗ್ರಹ ಚಿತ್ರ)
TV9 Web
| Updated By: ganapathi bhat

Updated on:Apr 06, 2022 | 6:57 PM

Share

ದೆಹಲಿ: ಮೊದಲು 6,000ದಷ್ಟು ಇದ್ದ ಬೆಲ್ಲ ಸಂಸ್ಕರಣಾ ಘಟಕಗಳು ಈಗ 600ಕ್ಕೆ ಇಳಿಕೆಯಾಗಿದೆ. ಆರ್ಥಿಕ ನಷ್ಟದಿಂದಾಗಿ ಸಾವಯುವ ಬೆಲ್ಲ ಸಂಸ್ಕರಣೆ ಕಡಿಮೆ ಆಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಬೆಲ್ಲ ಸಂಸ್ಕರಣೆ ಮಾಡುವವರಿಗೆ ಪ್ರೋತ್ಸಾಹ ನೀಡಬೇಕು. ಉತ್ತಮ ಗುಣಮಟ್ಟದ ನೈಜ ಬೆಲ್ಲ ತಯಾರಿಕೆಗೆ ಸರ್ಕಾರ ಸಹಾಯ ಮಾಡಬೇಕು ಎಂದು ಮಂಡ್ಯ ಲೋಕಸಭಾ ಸದಸ್ಯೆ ಸುಮಲತಾ ಅಂಬರೀಶ್ ಸರ್ಕಾರಕ್ಕೆ ಮನವಿ ಮಾಡಿದರು. 

ಲೋಕಸಭಾ ಕಲಾಪದ ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಅವರು, ತಮ್ಮ ಕ್ಷೇತ್ರದ ಬೆಲ್ಲ ತಯಾರಿಕೆ ಘಟಕಗಳ ಪರವಾಗಿ ಅಹವಾಲು ಸಲ್ಲಿಸಿದರು. ನಿಜವಾದ ಬೆಲ್ಲ ಹಾಗೂ ಬ್ಲೀಚಿಂಗ್ ಅಥವಾ ರಾಸಾಯನಿಕಗಳನ್ನು ಹಾಕಿ ಮಾಡಿರುವ ಬೆಲ್ಲದ ವ್ಯತ್ಯಾಸಗಳನ್ನು ಕೂಡ ಜನರಿಗೆ ಮನವರಿಕೆ ಮಾಡಬೇಕು ಎಂದು ಕೇಳಿಕೊಂಡರು.

ಕೊರೊನಾ ಕಾಲದಲ್ಲಿ ನಾವೆಲ್ಲರೂ ಕಠಿಣ ಪರಿಸ್ಥಿತಿಯನ್ನು ಎದುರಿಸಿದ್ದೆವು. ಆದರೆ, ಆ ಬಳಿಕ ಎಲ್ಲರಿಗೂ ಭರವಸೆ ತುಂಬಿದ್ದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಆತ್ಮನಿರ್ಭರ ಭಾರತ ಪರಿಕಲ್ಪನೆ. ಅದು ಜನರ ಬದುಕಲ್ಲಿ ವಿಶ್ವಾಸ ನೀಡಿತ್ತು. ಆ ಯೋಜನೆಯ ಅಡಿಯಲ್ಲಿ, ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯನ್ನೂ ಜಾರಿಗೆ ತರಲಾಯಿತು. ಅದರಂತೆ ಮಂಡ್ಯ ಕಬ್ಬು ಆ ಮೂಲಕ ಬೆಲ್ಲಕ್ಕೆ ಪ್ರಾಶಸ್ತ್ಯ ನೀಡಲಾಗಿತ್ತು ಎಂದು ಸುಮಲತಾ ತಿಳಿಸಿದರು.

ದೇಶ ವಿದೇಶದಲ್ಲಿ ಮಂಡ್ಯ ಜಿಲ್ಲೆ ಶುದ್ಧ ಹಾಗೂ ಸಾವಯುವ ಬೆಲ್ಲಕ್ಕೆ ಹೆಸರಾಗಿದೆ. ಆದರೆ, ಈಗಿನ ಪರಿಸ್ಥಿತಿ ಹೇಗಿದೆ ಎಂದರೆ, ಮೊದಲು 6,000ದಷ್ಟಿದ್ದ ಬೆಲ್ಲ ಸಂಸ್ಕರಣಾ ಘಟಕಗಳು ಈಗ 600ರಷ್ಟಾಗಿದೆ. ಆರ್ಥಿಕ ಕಷ್ಟದಿಂದ ಈ ಪರಿಸ್ಥಿತಿ ಎದುರಾಗಿದೆ. ಆತ್ಮನಿರ್ಭರ ಭಾರತದ ಅಡಿಯಲ್ಲಿ ತಾಂತ್ರಿಕ, ಆರ್ಥಿಕ ಸಹಾಯ ನೀಡುವುದಾಗಿ ಸರ್ಕಾರದ ಭರವಸೆ ಇದೆ ಎಂದು ಹೇಳಿದರು.

ಅನಾರೋಗ್ಯಕರ, ಕಲಬೆರಕೆ ಮಾಡಿದ ಬೆಲ್ಲವನ್ನು ಜನರು ಬಳಕೆ ಮಾಡುತ್ತಿದ್ದಾರೆ. ಸಾವಯುವ ಬೆಲ್ಲ ಸಾಮಾನ್ಯ ಕಡು ಕಂದು ಬಣ್ಣದಲ್ಲಿರುತ್ತದೆ. ಆದರೆ, ಜನರು ರಾಸಾಯನಿಕಗಳನ್ನು ಬಳಸಿದ ಬಿಳಿ ಬೆಲ್ಲವನ್ನು ಕೊಳ್ಳುವ ಮನಮಾಡುತ್ತಿದ್ದಾರೆ. ಇದರ ವಿರುದ್ಧ ಜನಜಾಗೃತಿ ಉಂಟಾಗಬೇಕು. ಜನರು ಸಾವಯುವ ಬೆಲ್ಲ ಬಳಸುವಂತಾಗಲು ಸರ್ಕಾರವೂ ಸಹಕಾರ ನೀಡಬೇಕು ಎಂದು ಸುಮಲತಾ ಕೇಳಿಕೊಂಡರು.

ಇದನ್ನೂ ಓದಿ: ಮಂಡ್ಯ ಬೆಲ್ಲಕ್ಕೆ ಕೆಮಿಕಲ್ಸ್​ ಮಿಕ್ಸ್​?

ಬೆಲ್ಲ ಬೆಲ್ಲ ಮಂಡ್ಯದ ಬೆಲ್ಲ ಅಂದ್ರೆ ಸಾಕು ಗೃಹಿಣಿಯರು ದೂರ ಓಡಿಹೋಗ್ತಿದ್ದಾರೆ! ಯಾಕೆ ಗೊತ್ತಾ?

Published On - 9:31 pm, Fri, 19 March 21

2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ