AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳೆ ಇಲ್ಲದಿದ್ರೂ ಉತ್ತಮ ಬೆಲೆ: ಮಂಡ್ಯದಲ್ಲಿ ಎಳನೀರಿಗೆ ಫುಲ್ ಡಿಮ್ಯಾಂಡ್

ಮಂಡ್ಯ ಜಿಲ್ಲೆಯಾದ್ಯಂತ ಭೀಕರ ಬರ ಆವರಿಸಿದ್ದು, ಕೆರೆಕಟ್ಟೆಗಳು ಬರಿದಾಗಿವೆ. ನಾಲೆಗಳಲ್ಲಿ ಕಾವೇರಿ ನೀರು ಹರಿಯುತ್ತಿಲ್ಲ. ಬೋರ್ ವೆಲ್​​ಗಳು ಬತ್ತಿವೆ. ಹೀಗಾಗಿ ಈ ಬಾರಿ ಅಷ್ಟಾಗಿ ತೆಂಗು ಫಸಲು ಇಲ್ಲ. ಕಡಿಮೆ ಫಸಲು ಇರುವುದರಿಂದ ಸಹಜವಾಗಿಯೇ ಈ ಬಾರಿ ಎಳನೀರಿಗೆ ಬೇಡಿಕೆ ಹೆಚ್ಚಾಗಿದೆ. ಸರಾಸರಿ 35 ರೂ ರಿಂದ 50 ರೂ. ಸಮೀಪಕ್ಕೆ ಬಂದು ನಿಂತಿದೆ.

ಬೆಳೆ ಇಲ್ಲದಿದ್ರೂ ಉತ್ತಮ ಬೆಲೆ: ಮಂಡ್ಯದಲ್ಲಿ ಎಳನೀರಿಗೆ ಫುಲ್ ಡಿಮ್ಯಾಂಡ್
ಬೆಳೆ ಇಲ್ಲದಿದ್ರೂ ಉತ್ತಮ ಬೆಲೆ: ಮಂಡ್ಯದಲ್ಲಿ ಎಳನೀರಿಗೆ ಫುಲ್ ಡಿಮ್ಯಾಂಡ್
ಪ್ರಶಾಂತ್​ ಬಿ.
| Edited By: |

Updated on: May 20, 2024 | 9:03 PM

Share

ಮಂಡ್ಯ, ಮೇ 20: ಸಕ್ಕರಿನಗರಿ ಮಂಡ್ಯದಲ್ಲಿ ಭೀಕರ ಬರಗಾಲ (drought) ಎದುರಾಗಿತ್ತು. ಅದರಲ್ಲೂ ಬೇಸಿಗೆಯಲ್ಲಿ ನಾಲೆಗಳಿಗೆ ನೀರು ಹರಿಸದ ಹಿನ್ನೆಲೆ, ಬೆಳೆಗಳು ಒಣಗಲು ಆರಂಭಿಸಿವೆ. ಅದರಲ್ಲೂ ವಾಣಿಜ್ಯ ಬೆಳೆ ತೆಂಗಿಗೆ ಬಾರಿ ಪೆಟ್ಟು ಬಿದ್ದಿದೆ. ಹೀಗಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ ನೆಮ್ಮದಿ ವಿಚಾರ ಎಂದರೇ ಈ ಬಾರಿ ಬೆಳೆ ಇಲ್ಲದೆ ಇದ್ದರು, ಇರುವ ಬೆಳೆಗೆ ಉತ್ತಮ ಬೆಳೆ ಸಿಗುತ್ತಿದೆ. ಬರಗಾಲದ ಪರಿಣಾಮ ಫಸಲು ಕೊರತೆಯಿಂದ ಮಂಡ್ಯ ಜಿಲ್ಲೆಯಲ್ಲಿ ಎಳನೀರಿಗೆ (tender coconut) ಅಭಾವ ಸೃಷ್ಠಿಯಾಗಿದೆ. ಇದರಿಂದ ನಿತ್ಯ ಎಳನೀರಿನ ಬೆಲೆ 50 ರೂ ಸಮೀಪಕ್ಕೆ ಬಂದು ನಿಂತಿದೆ. ಕಳೆದ ಬಾರಿ ಒಂದು ಎಳನೀರಿನ ಬೆಲೆ 40 ರೂ ದಾಟಿರಲಿಲ್ಲ. ಈ ಬಾರಿ 10 ರೂ. ದರ ಏರಿಕೆ ಸಹಾ ಆಗಿದೆ. ಇದು ಗ್ರಾಹಕರ ಕೈ ಸುಡುತ್ತಿದ್ದರೇ, ರೈತರ ಉತ್ತಮ ಬೆಲೆ ಸಿಗುತ್ತಿದೆ.

ಅಂದಹಾಗೆ ಈ ಬಾರಿ ಮಂಡ್ಯ ಜಿಲ್ಲೆಯಾದ್ಯಂತ ಭೀಕರ ಬರ. ಕೆರೆಕಟ್ಟೆಗಳು ಬರಿದಾಗಿವೆ. ನಾಲೆಗಳಲ್ಲಿ ಕಾವೇರಿ ನೀರು ಹರಿಯುತ್ತಿಲ್ಲ. ಬೋರ್ ವೆಲ್​​ಗಳು ಬತ್ತಿವೆ. ಹೀಗಾಗಿ ಈ ಬಾರಿ ತೆಂಗು ಫಸಲು ಅಷ್ಟಾಗಿ ಇಲ್ಲ. ಕಡಿಮೆ ಫಸಲು ಇರುವುದರಿಂದ ಸಹಜವಾಗಿಯೇ ಈ ಬಾರಿ ಎಳನೀರಿಗೆ ಬೇಡಿಕೆ ಹೆಚ್ಚಾಗಿದೆ. ಸರಾಸರಿ 35 ರೂ ರಿಂದ 48 ರೂ. ವರೆಗೂ ಬೆಲೆ ಇದೆ.

ಇದನ್ನೂ ಓದಿ: ಮಂಗಳೂರು, ಉಡುಪಿಯಲ್ಲಿ 60 ರೂ. ತಲುಪಿದ ಎಳನೀರು ದರ: ಪೂರೈಕೆ ಕೊರತೆಯಿಂದ ವ್ಯಾಪಾರಿಗಳು ಕಂಗಾಲು

ಅಂದಹಾಗೆ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿರೋ ಎಳನೀರು ಮಂಡಿ, ದೇಶದಲ್ಲಿಯೇ ಅತಿ ಹೆಚ್ಚು ಎಳನೀರು ಮಾರಾಟವಾಗುವ ಮಂಡಿಯಾಗಿದೆ. ಇಲ್ಲಿ ಪ್ರತಿನಿತ್ಯ ಕೋಟ್ಯಾಂತರ ರೂ. ಮೌಲ್ಯದ 35 ರಿಂದ 40 ಲೋಡ್ ಎಳನೀರು ಹೊರ ರಾಜ್ಯಗಳಿಗೆ ಹೋಗುತ್ತದೆ. ಜಿಲ್ಲೆಯ ರೈತರು ತಮ್ಮ ಜಮೀನಲ್ಲಿ ಬೆಳೆದ ಎಳನೀರನ್ನ ಇಲ್ಲಿಗೆ ತಂದು ಮಾರಾಟ ಮಾಡುತ್ತಾರೆ.

ಇದನ್ನೂ ಓದಿ: ಮಂಗಳೂರಲ್ಲಿ ಹಲಸಿನ ಹಬ್ಬ: ತರಹೇವಾರಿ ಭಕ್ಷ್ಯ ಸವಿದು ಫುಲ್​ ಖುಷ್ ಆದ ಜನರು

ಮಧ್ಯವರ್ತಿಗಳು ಇಲ್ಲಿ ಖರೀದಿಸಿ ಹೊರ ರಾಜ್ಯಗಳಿಗೆ ಮಾರಾಟ ಮಾಡುತ್ತಾರೆ. ಈ ಬಾರಿ ಫಸಲು ಕಡಿಮೆ ಇರುವುದರಿಂದ ಅಷ್ಟಾಗಿ ಎಳನೀರು ಮಾರುಕಟ್ಟೆಗೆ ಬರುತ್ತಿಲ್ಲ. ಕಳೆದ ಬಾರಿ ರೈತರಿಗೆ ಕಡಿಮೆ ದರ ಸಿಗುತ್ತಿತ್ತು. ಆದರೆ ಈ ಬಾರಿ ಬೆಳೆ ಇಲ್ಲದೆ ಇರುವುದರಿಂದ ಉತ್ತಮ ಬೆಲೆ ಸಿಗುತ್ತಿದೆ. ಭೀಕರ ಬರಗಾಲದಿಂದ ತೆಂಗು ಬೆಳೆಗಾರರು ಬೆಳೆಯಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ರು, ಇರುವ ಬೆಳೆಗೆ ಉತ್ತಮ ಬೆಲೆ ಸಿಗುತ್ತಿರುವುದು ನೆಮ್ಮದಿಗೆ ಕಾರಣವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್