AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡು ವರ್ಷಗಳ ಬಳಿಕ ಕೆಆರ್​ಎಸ್ ಜಲಾಶಯ ಭರ್ತಿ: ನಾಳೆ ಸಿದ್ದರಾಮಯ್ಯರಿಂದ ಬಾಗಿನ ಅರ್ಪಣೆ

ಎರಡು ವರ್ಷಗಳ ನಂತರ ಭರ್ತಿಯಾದ ಮಂಡ್ಯ ಜಿಲ್ಲೆಯ ಕೆಆರ್​ಎಸ್​ ಜಲಾಶಯಕ್ಕೆ ನಾಳೆ ಬೆಳಗ್ಗೆ 11 ಗಂಟೆಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್​ರಿಂದ ಬಾಗಿನ ಅರ್ಪಣೆ ಮಾಡಲಿದ್ದಾರೆ. ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ ಬಳಿಕ ಬಾಗಿನ ಅರ್ಪಿಸಲಿದ್ದಾರೆ. ಇದಕ್ಕಾಗಿ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.

ಎರಡು ವರ್ಷಗಳ ಬಳಿಕ ಕೆಆರ್​ಎಸ್ ಜಲಾಶಯ ಭರ್ತಿ: ನಾಳೆ ಸಿದ್ದರಾಮಯ್ಯರಿಂದ ಬಾಗಿನ ಅರ್ಪಣೆ
ಎರಡು ವರ್ಷಗಳ ಬಳಿಕ ಕೆಆರ್​ಎಸ್ ಜಲಾಶಯ ಭರ್ತಿ: ನಾಳೆ ಸಿದ್ದರಾಮಯ್ಯರಿಂದ ಬಾಗಿನ ಅರ್ಪಣೆ
ಪ್ರಶಾಂತ್​ ಬಿ.
| Edited By: |

Updated on:Jul 28, 2024 | 10:21 PM

Share

ಮಂಡ್ಯ, ಜುಲೈ 28: ಕಾವೇರಿ ಜಲಾನಯನ (Kaveri River) ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಹೀಗಾಗಿ ಜೀವನದಿ ಕಾವೇರಿ ಅಪಾಯದ ಮಟ್ಟವನ್ನ ಮೀರಿ ಹರಿಯುತ್ತಿದ್ದಾಳೆ. ಅಷ್ಟೇ ಅಲ್ಲ ನದಿ ತಟದಲ್ಲಿ ಪ್ರವಾಹ ಭೀತಿಯನ್ನು ಕೂಡ ಸೃಷ್ಠಿ ಆಗಿದೆ. ಈ ಮಧ್ಯೆ ಸಂಪೂರ್ಣ ಭರ್ತಿಯಾಗಿರುವ ಕನ್ನಂಬಾಡಿ ಅಣೆಕಟ್ಟಿಗೆ ನಾಳೆ ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್​​ ಭಾಗಿನ ಅರ್ಪಿಸಲಿದ್ದಾರೆ‌.

ಜಿಲ್ಲೆಯ ಕೆಆರ್​ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಡ್ಯಾಂ ಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಜಲಾಶಯದಿಂದ ಕಾವೇರಿ‌ ನದಿಗೆ ಒಂದು ಲಕ್ಷ ಮೂವತ್ತು ಸಾವಿರ ಕ್ಯೂಸೆಕ್ ನೀರನ್ನ ಹರಿಬಿಡಲಾಗಿದೆ. ಹೀಗಾಗಿ ಜೀವನದಿ ಕಾವೇರಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.

ಇದನ್ನೂ ಓದಿ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಕಾರ ಮಳೆ; ಪ್ರವಾಸಿ ತಾಣ ಮುತ್ತತ್ತಿ ಸುತ್ತಮುತ್ತ ನಿಷೇಧಾಜ್ಞೆ ಜಾರಿ

ಅಷ್ಟೇ ಅಲ್ಲದೇ ನದಿ ಪಾತ್ರದಲ್ಲಿ ಪ್ರವಾಹ ಭೀತಿಯನ್ನು ಕೂಡ ಸೃಷ್ಟಿ ಆಗಿದೆ. ಇನ್ನು ಕಾವೇರಿ ನದಿ ನೀರು ನುಗ್ಗಿದ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣದ ಶ್ರೀರಾಮಕೃಷ್ಣ ವಿವೇಕಾನಂದ ಆಶ್ರಮ ಸಂಪೂರ್ಣ ಜಲಾವೃತವಾದರೇ, ನೂರಾರು ವರ್ಷಗಳ ಇತಿಹಾಸ ಇರುವ ವೆಲ್ಲಾಸ್ಲೆ ಸೇತುವೆಗೆ ಮುಳುಗಡೆ ಭೀತಿ ಎದುರಾಗಿದೆ. ಅಲ್ಲದೆ ರಸ್ತೆಗೂ ಕೂಡ ನದಿ‌ ನೀರು ನುಗ್ಗಿದೆ.

ನಾಳೆ ಸಿಎಂ ಸಿದ್ದರಾಮಯ್ಯರಿಂದ ಕೆಆರ್​ಎಸ್​ಗೆ ಬಾಗಿನ ಅರ್ಪಣೆ

ಎರಡು ವರ್ಷಗಳ ನಂತರ ಹಳೇ ಮೈಸೂರು ಭಾಗದ ಜೀವನದಿ ಕಾವೇರಿ ಸಂಪೂರ್ಣ ಭರ್ತಿಯಾಗಿದೆ. ಹೀಗಾಗಿ ನಾಳೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಕೆಆರ್​ಎಸ್ ಜಲಾಶಯದಲ್ಲಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಲಿದ್ದಾರೆ. ಇನ್ನು ಸಿಎಂ ಸಿದ್ದರಾಮಯ್ಯ ತಮ್ಮ ಅವಧಿಯಲ್ಲಿ ಮೂರನೇ ಬಾರಿಗೆ ಕೆಆರ್​ಎಸ್​ಗೆ ಬಾಗಿನ ಅರ್ಪಿಸುತ್ತಿದ್ದಾರೆ.

ಇದನ್ನೂ ಓದಿ: ಕೆಆರ್​ಎಸ್ ಡ್ಯಾಂನಿಂದ 90 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ ಭೀತಿ

ಮೊದಲ ಬಾರಿಗೆ ಸಿಎಂ ಆದಾಗ 2013 ಹಾಗೂ 2014 ರಲ್ಲಿ ಬಾಗಿನ ಅರ್ಪಿಸಿದ್ದರು. ಆನಂತರ ಬರಗಾಲ ಹಿನ್ನೆಲೆ ಜಲಾಶಯ ಭರ್ತಿಯಾಗಿರಲಿಲ್ಲ. ಎರಡನೇ ಅವಧಿಗೂ ಸಿಎಂ ಆದಗಲೂ ಅಂದರೆ ಕಳೆದ ವರ್ಷ ಕೂಡ ಕನ್ನಂಬಾಡಿ ಅಣೆಕಟ್ಟು ಭರ್ತಿಯಾಗಿರಲ್ಲ. ಇದೀಗ ಮತ್ತೆ ಸಿಎಂ ಆಗಿರುವಾಗಲೇ ಭರ್ತಿಯಾಗಿದೆ. ಹೀಗಾಗಿ ಜಿಲ್ಲಾಡಳಿತ ಎಲ್ಲ ಸಿದ್ದತೆ ಮಾಡಿಕೊಂಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:20 pm, Sun, 28 July 24

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್