AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ಗ್ಯಾಂಗ್​​ನಿಂದ ಪೊಲೀಸ್ ಪೇದೆ ಮೇಲೆ ನಡೆದಿತ್ತು ಹಲ್ಲೆ? ಕಾಂಗ್ರೆಸ್ ಶಾಸಕನ ಗನ್ ಮ್ಯಾನ್ ಮೇಲೆ ದರ್ಪ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪವಿತ್ರ ಗೌಡ ಜೈಲು ಪಾಲಾಗಿದ್ದಾರೆ. ನಟ ದರ್ಶನ್ ಮತ್ತು ಗ್ಯಾಂಗ್​ ಅನ್ನು ಮತ್ತೆ ಪೊಲೀಸ್​ ಕಸ್ಟಡಿಗೆ ನೀಡಲಾಗಿದೆ. ಇದರ ಮಧ್ಯೆ ದರ್ಶನ್​ ಗ್ಯಾಂಗ್​ನ ಒಂದೊಂದೆ ಕರಾಳ ಮುಖಗಳು ಕೂಡ ಹೊರಗೆ ಬರುತ್ತಿವೆ. ಇದೀಗ ಮಂಡ್ಯದಲ್ಲಿ ಪೊಲೀಸ್ ಪೇದೆ ಮೇಲೆ ದರ್ಪ ಮೆರೆದಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ದರ್ಶನ್ ಗ್ಯಾಂಗ್​​ನಿಂದ ಪೊಲೀಸ್ ಪೇದೆ ಮೇಲೆ ನಡೆದಿತ್ತು ಹಲ್ಲೆ? ಕಾಂಗ್ರೆಸ್ ಶಾಸಕನ ಗನ್ ಮ್ಯಾನ್ ಮೇಲೆ ದರ್ಪ
ದರ್ಶನ್ ಗ್ಯಾಂಗ್​​ನಿಂದ ಪೊಲೀಸ್ ಪೇದೆ ಮೇಲೆ ನಡೆದಿತ್ತು ಹಲ್ಲೆ? ಕಾಂಗ್ರೆಸ್ ಶಾಸಕನ ಗನ್ ಮ್ಯಾನ್ ಮೇಲೆ ದರ್ಪ
ಪ್ರಶಾಂತ್​ ಬಿ.
| Edited By: |

Updated on: Jun 20, 2024 | 7:07 PM

Share

ಮಂಡ್ಯ, ಜೂನ್​ 20: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ (Chitradurga Renukaswamy Murder Case) ಸಂಬಂಧಪಟ್ಟಂತೆ ನಟ ದರ್ಶನ್ (Darshan) ಮತ್ತು ಗ್ಯಾಂಗ್​ ಅನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ನಂತರ ಡಿ ಗ್ಯಾಂಗ್​ನ ಒಂದೊಂದೆ ಕರಾಳ ಮುಖಗಳು ಕೂಡ ಹೊರಗೆ ಬರುತ್ತಿದೆ. ಅದರಂತೆ ಚುನಾವಣಾ ಪ್ರಚಾರದ ವೇಳೆ ಡಿ ಗ್ಯಾಂಗ್ ಸದಸ್ಯರು ಪೊಲೀಸ್ ಪೇದೆ ಮೇಲೆ ದರ್ಪ ಮೆರೆದಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಅಂದಹಾಗೆ ಇತ್ತಿಚಿಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ನಟ ದರ್ಶನ್ ಪ್ರಚಾರ ಮಾಡಿದ್ದರು. ಅದರಂತೆ ಏಪ್ರಿಲ್ 22 ರಂದು ಮದ್ದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೂಡ ಪ್ರಚಾರ ಮಾಡುತ್ತಿದ್ದ ವೇಳೆ ಕೆಲ ಕಾಂಗ್ರೆಸ್ ಕಾರ್ಯಕರ್ತರನ್ನ ದರ್ಶನ್ ಹತ್ತಿರ ಕಳುಹಿಸಿದ್ದಾನೆ ಎಂದು ಶಾಸಕ ಉದಯ್ ಗನ್ ಮ್ಯಾನ್ ಆಗಿದ್ದ ನಾಗೇಶ್ ಹಾಗೂ ನಟ ದರ್ಶನ್​ನ ಶಿಷ್ಯರಾದ ಲಕ್ಷಣ ಹಾಗೂ ಮಣಿ ಎಂಬಾತನ ನಡುವೆ ಮಾತಿನ ಚಕಮಕಿ ನಡೆದಿತ್ತು.

ಇದನ್ನೂ ಓದಿ: ದರ್ಶನ್​ ಹೀರೋ ಅಲ್ಲ.. ಖಳನಾಯಕ! ಮಂಡ್ಯ ರೈತರ ಆಕ್ರೋಶ ನೋಡಿ

ಆದಾದ ಬಳಿಕ ರಾತ್ರಿ 11.30ರ ಸುಮಾರಿಗೆ ಮದ್ದೂರು ತಾಲೂಕಿನ ಕದಲೂರು ಗ್ರಾಮದ ಶಾಸಕ ಉದಯ್ ಮನೆ ಬಳಿ ಮಣಿ ಹಾಗೂ ಲಕ್ಷಣ್ ಎಂಬುವವರು, ಗನ್ ಮ್ಯಾನ್ ನಾಗೇಶ್​ ಎಂಬಾತನನ್ನ ಮನೆಯಿಂದ ಕರೆದುಕೊಂಡು ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾರೆ. ಇದರಿಂದಾಗಿ ಗನ್ ಮ್ಯಾನ್ ನಾಗೇಶ್ ಮದ್ದೂರಿನ ಗುರುಶಾಂತಪ್ಪ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿ, ಎಂಎಲ್​ಸಿ ಕೂಡ ಮಾಡಿಸಿದ್ದ.

ಇನ್ನು ಆ ನಂತರ ಕೆಸ್ತೂರು ಠಾಣೆಗೆ ದೂರು ನೀಡಲು ಸಹ ಗನ್ ಮ್ಯಾನ್ ನಾಗೇಶ್ ಮುಂದಾಗಿದ್ದರು. ಆದರೆ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಶಾಸಕ ಉದಯ್ ರಾಜಿ ಮಾಡಿ, ಪ್ರಕರಣ ದಾಖಲಾಗದಂತೆ ನೋಡಿಕೊಂಡಿದ್ದರು. ಹೀಗಾಗಿ ಗನ್ ಮ್ಯಾನ್ ನಾಗೇಶ್ ದೂರು ಸಹ ನೀಡಿರಲಿಲ್ಲ. ಆನಂತರ ಡಿಎಆರ್ ಪೇದೆ ನಾಗೇಶ್ ನನ್ನ ಗನ್ ಮ್ಯಾನ್​ನಿಂದ ತೆಗೆದಿದ್ದರು. ಹೀಗಾಗಿ ಮೂಲ ಸ್ಥಾನ ಡಿಎಆರ್​ಗೆ ನಾಗೇಶ್ ಬಂದಿದ್ದ. ಆದರೆ ಇದೀಗ ಡಿ ಗ್ಯಾಂಗ್​ನ ಕೌರ್ಯ ಬೆಳಕಿಗೆ ಬಂದಿದೆ.

ಇದನ್ನೂ ಓದಿ: Breaking: ದರ್ಶನ್ ಮತ್ತೆ ಪೊಲೀಸ್ ಕಸ್ಟಡಿಗೆ, ಪವಿತ್ರಾ ಗೌಡ ಜೈಲು ಪಾಲು

ಪ್ರಕರಣ ಸಂಬಂಧ ಡಿಎ ಆರ್ ಪೇದೆ ಈ ಬಗ್ಗೆ ಪ್ರತಿಕ್ರಿಯೆ ನೀಡಲು ಹಿಂದೇಟು ಹಾಕುತ್ತಿದ್ದಾರೆ. ಅತ್ತ ಶಾಸಕ ಉದಯ್ ಈ ಬಗ್ಗೆ ನನಗೆ ಮಾಹಿತಿ ಇಲ್ಲ ಎಂಬ ಸಬೂಬು ನೀಡುತ್ತಿದ್ದಾರೆ. ಒಟ್ಟಾರೆ ಡಿ ಗ್ಯಾಂಗ್​​ನ ದರ್ಪ ಅನೇಕ ಕಡೆಗಳಲ್ಲಿ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Prashantha B
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!