AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯದಲ್ಲಿ ಕೆಂಡ ಹಾಯುವ ವೇಳೆ ಆಯತಪ್ಪಿ ಕೊಂಡಕ್ಕೆ ಬಿದ್ದ ಅರ್ಚಕ..

ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಅಮೃತೇಶ್ವರಹಳ್ಳಿಯಲ್ಲಿ ಗ್ರಾಮದಲ್ಲಿ ಗ್ರಾಮದೇವತೆಯ ಹಬ್ಬ ಆಚರಣೆ ಮಾಡಲಾಗುತ್ತಿತ್ತು. ಗ್ರಾಮದೇವತೆಯ ಜಾತ್ರಾಮಹೋತ್ಸವದ ಅಂಗವಾಗಿ ವಾಡಿಕೆಯಂತೆ ಅಗ್ನಿ ಕೊಂಡ ಹಾಯುವಾಗ ಅರ್ಚಕರು ಆಯತಪ್ಪಿ ಕೊಂಡಕ್ಕೆ ಬಿದ್ದಿದ್ದಾರೆ.

ಮಂಡ್ಯದಲ್ಲಿ ಕೆಂಡ ಹಾಯುವ ವೇಳೆ ಆಯತಪ್ಪಿ ಕೊಂಡಕ್ಕೆ ಬಿದ್ದ ಅರ್ಚಕ..
ಆಯತಪ್ಪಿ ಕೊಂಡಕ್ಕೆ ಬಿದ್ದ ಅರ್ಚಕ
Follow us
ಆಯೇಷಾ ಬಾನು
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Mar 24, 2021 | 4:53 PM

ಮಂಡ್ಯ: ಗ್ರಾಮ ದೇವತೆ ಹಬ್ಬದ ಅಂಗವಾಗಿ ಕೆಂಡ ಹಾಯಲು ಹೋಗಿದ್ದ ಅರ್ಚಕ ಆಯತಪ್ಪಿ ಕೊಂಡಕ್ಕೆ ಬಿದ್ದ ಭಯಾನಕ ಘಟನೆಯೊಂದು ಸಕ್ಕರೆ ನಾಡು ಮಂಡ್ಯದಲ್ಲಿ ನಡೆದಿದೆ. ಅಗ್ನಿ ಕೊಂಡಕ್ಕೆ ಬಿದ್ದ ಅರ್ಚಕನಿಗೆ ಸುಟ್ಟ ಗಾಯಗಳಾಗಿದ್ದು ಆವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಅಮೃತೇಶ್ವರಹಳ್ಳಿಯಲ್ಲಿ ಗ್ರಾಮದಲ್ಲಿ ಗ್ರಾಮದೇವತೆಯ ಹಬ್ಬ ಆಚರಣೆ ಮಾಡಲಾಗುತ್ತಿತ್ತು. ಗ್ರಾಮದೇವತೆಯ ಜಾತ್ರಾಮಹೋತ್ಸವದ ಅಂಗವಾಗಿ ವಾಡಿಕೆಯಂತೆ ಅಗ್ನಿ ಕೊಂಡ ಹಾಯುವಾ ಪದ್ಧತಿ ಇದೆ. ಹೀಗಾಗಿ ಅರ್ಚಕ ಕೊಂಡ ಹಾಯಲು ಹೋಗಿದ್ದಾರೆ. ಆದ್ರೆ ಆಯತಪ್ಪಿ ಕೊಂಡಕ್ಕೆ ಬಿದ್ದಿದ್ದಾರೆ. ತಕ್ಷಣವೇ ಭಕ್ತರು ಕೊಂಡಕ್ಕೆ ಬಿದ್ದ ಅರ್ಚಕರನ್ನು ಮೇಲಕ್ಕೆ ಎತ್ತಿದ್ದಾರೆ. ಗಾಯಾಳು ಅರ್ಚಕನನ್ನು ಎತ್ತಿಕೊಂಡು ಮಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಸ್ಥಳದಲ್ಲಿ ಕೆಲ ಕಾಲ ಆತಂಕದ ಛಾಯೆ ಮೂಡಿದ್ದು ಭಕ್ತರು ದೇವರಲ್ಲಿ ತಪ್ಪಾಗಿದ್ದರೆ ಕ್ಷಮಿಸು ಎಂದು ಪ್ರಾರ್ಥಿಸಿದ್ದಾರೆ.

ಕಳೆದ ಹಲವು ವರ್ಷಗಳಿಂದ ಗ್ರಾಮದೇವತೆಯ ಹಬ್ಬ ಆಚರಿಸಿಕೊಂಡು ಬಂದಿದ್ದು ಈ ಹಿಂದೆ ಕೂಡ ಜಿಲ್ಲೆಯಲ್ಲಿ ಇಂತಹ ಹಲವಾರು ಪ್ರಕರಣಗಳು ಸಂಭವಿಸಿವೆ. ಈ ಬಾರಿ ಸಹ ಇಂತಹ ಅಚಾತುರ್ಯ ಮರುಕಳಿಸಿದೆ. ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ರಾಮನಗರದಲ್ಲಿ ಕೆಂಡ ಹಾಯುವ ವೇಳೆ ಕೊಂಡಕ್ಕೆ ಬಿದ್ದ ಅರ್ಚಕ: ಗ್ರಾಮಸ್ಥರಿಂದ ರಕ್ಷಣೆ

5 ವಿಕೆಟ್ ಕಬಳಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಸ್ಫೋಟಕ ಬ್ಯಾಟರ್
5 ವಿಕೆಟ್ ಕಬಳಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಸ್ಫೋಟಕ ಬ್ಯಾಟರ್
ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ, ಮೂವರು ಸಾವು, ಹಲವರಿಗೆ ಗಾಯ
ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ, ಮೂವರು ಸಾವು, ಹಲವರಿಗೆ ಗಾಯ
ಮುಂದಿನ 3 ತಿಂಗಳಲ್ಲಿ ಡಿಕೆ ಶಿವಕುಮಾರ್​ ಸಿಎಂ ಆಗ್ತಾರೆ: ಇಕ್ಬಾಲ್ ಹುಸೇನ್
ಮುಂದಿನ 3 ತಿಂಗಳಲ್ಲಿ ಡಿಕೆ ಶಿವಕುಮಾರ್​ ಸಿಎಂ ಆಗ್ತಾರೆ: ಇಕ್ಬಾಲ್ ಹುಸೇನ್
ಏರು ಧ್ವನಿಯಲ್ಲಿ ಮಾತನಾಡಿದ್ರೆಂದು ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್
ಏರು ಧ್ವನಿಯಲ್ಲಿ ಮಾತನಾಡಿದ್ರೆಂದು ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್
Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ