Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗಮಂಗಲ ಗಲಭೆ: ಪರಮೇಶ್ವರ್ ಹೇಳಿಕೆಯಿಂದ ಕೆರಳಿದ ಕುಮಾರಸ್ವಾಮಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ

ನಾಗಮಂಗಲ ಕಿಚ್ಚು ಕರ್ನಾಟಕ ರಾಜಕೀಯದಲ್ಲಿ ಬೆಂಕಿ ಹಚ್ಚಿದೆ. ನಾಗಮಂಗಲ ಗಲಭೆ ಸಣ್ಣ ಪ್ರಮಾಣದಲ್ಲಿ ಆರಂಭವಾಗಿ ಅಂತ್ಯವಾಗಿದೆ. ಸಮಸ್ಯೆಯಾಗಿಲ್ಲ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿರುವುದು ಬಿಜೆಪಿ, ಜೆಡಿಎಸ್ ನಾಯಕರನ್ನು ಕೆರಳಿಸಿದೆ. ರಾಜಕಾರಣ ಮಾಡಬಾರದು ಎಂಬ ಹೇಳಿಕೆ ಕುಮಾರಸ್ವಾಮಿಯವರನ್ನು ಕೆರಳಿಸಿದೆ. ಅವರು ನೀಡಿದ ತಿರುಗೇಟು ಏನೆಂಬುದು ಇಲ್ಲಿದೆ.

ನಾಗಮಂಗಲ ಗಲಭೆ: ಪರಮೇಶ್ವರ್ ಹೇಳಿಕೆಯಿಂದ ಕೆರಳಿದ ಕುಮಾರಸ್ವಾಮಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ
ಹೆಚ್​ಡಿ ಕುಮಾರಸ್ವಾಮಿ
Follow us
Ganapathi Sharma
|

Updated on:Sep 12, 2024 | 2:27 PM

ನವದೆಹಲಿ, ಸೆಪ್ಟೆಂಬರ್ 12: ಮಂಡ್ಯ ನಾಗಮಂಗಲದಲ್ಲಿ ನಡೆದ ಕೋಮು ಗಲಭೆ ವಿಚಾರವಾಗಿ ರಾಜಕಾರಣ ಮಾಡಬಾರದು ಎಂದು ಗೃಹ ಸಚಿವ ಜಿ ಪರಮೇಶ್ವರ ಹೇಳಿರುವುದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಅವರನ್ನು ಕೆರಳಿಸಿದೆ. ಈ ವಿಚಾರವಾಗಿ ದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಹೆಚ್​ಡಿಕೆ ರಾಜಕಾರಣ ಮಾಡಬಾರದು ಎಂದು ಹೇಳುತ್ತಿದ್ದಾರೆ. ನಾನು ಯಾವತ್ತೂ ಸಮಾಜದ ಹೆಸರಲ್ಲಿ ರಾಜಕಾರಣ ಮಾಡಿಲ್ಲ. ಇವರೇ (ಕಾಂಗ್ರೆಸ್​​) ಸರ್ವ ಜನಾಂಗದ ಶಾಂತಿಯ ತೋಟದ ಹೆಸರಲ್ಲಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಾಗಮಂಗಲದಲ್ಲಿ ಗಲಭೆ ವಿಚಾರವಾಗಿ, ಶಾಂತಿ ಕಾಡಾಡುವಂತೆ ನಿನ್ನೆ ರಾತ್ರಿಯೇ ಮನವಿ ಮಾಡಿದ್ದೇನೆ. ಕಾಂಗ್ರೆಸ್ ಸರ್ಕಾರ ಒಂದು ವರ್ಗವನ್ನು ಓಲೈಸುವ ಕೆಲಸ ಮಾಡುತ್ತಿದೆ. ಗೃಹ ಸಚಿವ ಪರಮೇಶ್ವರ್​ ಸಣ್ಣ ಘಟನೆ ಎಂದು ಲಘುವಾಗಿ ಮಾತನಾಡಿದ್ದಾರೆ. ಒಂದೂವರೆ ಕೋಟಿ ರೂಪಾಯಿ ನಷ್ಟ ಆಗಿದೆ ಎಂದು ಬಟ್ಟೆ ಅಂಗಡಿ ಮಾಲೀಕ ಹೇಳಿದ್ದಾರೆ. ಇದು ಸಣ್ಣ ಘಟನೆಯೇ ಎಂದು ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ನಾನು ಬೆಂಕಿ ಹಚ್ಚಿಲ್ಲ, ಆರಿಸಿದ್ದೇನೆ: ಹೆಚ್​ಡಿಕೆ

ಬೆಂಕಿ ಹಚ್ಚುವ ಕೆಲಸವನ್ನು ನಾನು ಯಾವತ್ತೂ ಮಾಡಿಲ್ಲ. ಬೆಂಕಿ ಆರಿಸುವ ಕೆಲಸ ಮಾಡಿದ್ದೇನೆ. ನಾಗಮಂಗಲ ಪಟ್ಟಣದಲ್ಲಿ ಪೊಲೀಸ್ ವ್ಯವಸ್ಥೆಯ ವೈಫಲ್ಯ ಎದ್ದು ಕಾಣುತ್ತಿದೆ. ಮೊದಲೇ ಕ್ರಮ ಕೈಗೊಂಡಿದ್ದರೆ ಈ ರೀತಿಯ ಘಟನೆ ಆಗುತ್ತಿತ್ತಾ? ಸರ್ವ ಜನಾಂಗದ ಶಾಂತಿಯ ತೋಟದ ಹೆಸರಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ಮೆರವಣಿಗೆ ವೇಳೆ ಪೆಟ್ರೋಲ್ ಬಾಂಬ್​ ಎಸೆಯುವ ಕೆಲಸ ಆಗಿದೆ. ಪೊಲೀಸರ ಮೇಲೂ ಕಲ್ಲು ತೂರಾಟ ಮಾಡಿದವರು ಯಾರು? ನಾನು ಯಾವುದೇ 1 ಸಮುದಾಯ ಓಲೈಸುವ ಕೆಲಸ ಮಾಡುತ್ತಿಲ್ಲ. ತಲ್ವಾರ್​ ಹಿಡಿದು ಓಡಾಡ್ತಿದ್ದಾರೆ, ಪೆಟ್ರೋಲ್ ಬಾಂಬ್ ಎಸೆದಿದ್ದಾರೆ. ಇದರಲ್ಲೇ ಗೊತ್ತಾಗುತ್ತದೆ ನೀವು ಹೇಗೆ ಆಡಳಿತ ನಡೆಸುತ್ತಿದ್ದೀರಿ ಎಂಬುದಾಗಿ. ನಿಮ್ಮ ಆಡಳಿತ ವೈಫಲ್ಯ ಇಟ್ಟುಕೊಂಡು ನನಗೆ ಬುದ್ಧಿ ಹೇಳಬೇಡಿ ಎಂದು ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದಿದ್ದೇನು? ಇಲ್ಲಿದೆ ಸಮಗ್ರ ಮಾಹಿತಿ

ನಾಳೆ ನಾಗಮಂಗಲಕ್ಕೆ ಕುಮಾರಸ್ವಾಮಿ

ನಾನು ಸಿಎಂ ಆಗಿದ್ದಾಗ ಕೋಮು ಸಂಘರ್ಷಕ್ಕೆ ಎಡೆಮಾಡಿಕೊಟ್ಟಿಲ್ಲ. ಈ ಹಿಂದೆ ನಾನು ಹೇಗೆ ಆಡಳಿತ ನಡೆಸಿದ್ದೇನೆಂಬುದು ಕಡತದಲ್ಲೇ ಇದೆ. ಪ್ರಮುಖ ಆರೋಪಿ ಈಗಾಗಲೇ ಪರಾರಿಯಾಗಿರುತ್ತಾನೆ. ಜೀವನಕ್ಕೆ ಆಧಾರವಾಗಿದ್ದವರನ್ನು ಬಂಧಿಸಿ ಜೈಲಿನಲ್ಲಿ ಇಟ್ಟಿದ್ದಾರೆ. ನಾಳೆ ನಾಗಮಂಗಲಕ್ಕೆ ಭೇಟಿ ನೀಡಿ ಮಾಹಿತಿ ಪಡೆಯುತ್ತೇನೆ. ಸ್ಥಳಕ್ಕೆ ಭೇಟಿ ನೀಡಿ ಜನರಿಂದಲೇ ಮಾಹಿತಿ ಪಡೆಯುತ್ತೇನೆ ಎಂದು ಕುಮಾರಸ್ವಾಮಿ ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:27 pm, Thu, 12 September 24

ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು