AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ ನಾಗಮಂಗಲ ಗಲಭೆ ಪ್ರಕರಣ: ಮತ್ತೊಬ್ಬ ಅಧಿಕಾರಿಯ ತಲೆದಂಡ

ಗಣೇಶನ ಮೆರವಣಿಗೆ ವೇಳೆ ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣ ಧಗಧಗಿಸಿತ್ತು. ಈ ಪ್ರಕರಣ ರಾಷ್ಟ್ರ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಇತ್ತೀಚೆಗೆ ಇನ್ಸ್‌ಪೆಕ್ಟರ್‌ ಅಶೋಕ್‌ ಕುಮಾರ್​ ಅಮಾನುತುಗೊಳಿಸಲಾಗಿತ್ತು. ಇದೀಗ ಕರ್ತವ್ಯ ನಿರ್ಲಕ್ಷ್ಯ ಆರೋಪ ಹಿನ್ನೆಲೆ ನಾಗಮಂಗಲ ಡಿವೈಎಸ್‌ಪಿ ಸುಮೀತ್ ಸಸ್ಪೆಂಡ್​ ಮಾಡಿ ಆದೇಶ ಹೊರಡಿಸಲಾಗಿದೆ.

ಮಂಡ್ಯ ನಾಗಮಂಗಲ ಗಲಭೆ ಪ್ರಕರಣ: ಮತ್ತೊಬ್ಬ ಅಧಿಕಾರಿಯ ತಲೆದಂಡ
ಮಂಡ್ಯ ನಾಗಮಂಗಲ ಗಲಭೆ ಪ್ರಕರಣ: ಮತ್ತೊಬ್ಬ ಅಧಿಕಾರಿಯ ತಲೆದಂಡ
ಪ್ರಶಾಂತ್​ ಬಿ.
| Edited By: |

Updated on:Sep 19, 2024 | 6:40 PM

Share

ಮಂಡ್ಯ, ಸೆಪ್ಟೆಂಬರ್​ 19: ಜಿಲ್ಲೆಯ ನಾಗಮಂಗಲ ಗಲಭೆ ಕೇಸ್ (Nagamangala Violence) ಸಂಬಂಧ ಮತ್ತೊಬ್ಬ ಅಧಿಕಾರಿಯ ತಲೆದಂಡವಾಗಿದೆ. ಕರ್ತವ್ಯ ನಿರ್ಲಕ್ಷ್ಯ ಆರೋಪ ಹಿನ್ನೆಲೆ ನಾಗಮಂಗಲ ಡಿವೈಎಸ್‌ಪಿ ಡಾ.ಸುಮೀತ್ ಅಮಾನತುಗೊಳಿಸಿ ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಆದೇಶ ಹೊರಡಿಸಿದ್ದಾರೆ. ಡಾ.ಸುಮೀತ್ ಜಾಗಕ್ಕೆ ಪ್ರಭಾರ ಡಿವೈಎಸ್‌ಪಿ ಆಗಿ ಶಿವಮೂರ್ತಿ ಎಂಬುವವರನ್ನು ನೇಮಕ ಮಾಡಲಾಗಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ನಾಗಮಂಗಲ ನಗರ ಪೊಲೀಸ್‌ ಠಾಣೆ ಇನ್ಸ್‌ಪೆಕ್ಟರ್​ ಆಗಿದ್ದ ಅಶೋಕ್‌ ಕುಮಾರ್‌ ಅವರನ್ನು ಅಮಾನತು ಮಾಡಲಾಗಿತ್ತು. ಗಲಭೆಗೆ ಇನ್ಸ್‌ಪೆಕ್ಟರ್ ಅಶೋಕ್ ಕುಮಾರ್ ಜಿಪುಣತನವೇ ಕಾರಣ ಎಂಬ ಅನುಮಾನ‌ ಮೂಡಿತ್ತು. ರಿಜರ್ವ್ ಸಿಬ್ಬಂದಿಗೆ ಊಟ ಕೊಡಿಸಲು ಹಿಂದೇಟು ಹಾಕಿದ ಇನ್ಸ್‌ಪೆಕ್ಟರ್, ಭದ್ರತೆಗೆ ಬಂದಿದ್ದ ಡಿಎಆರ್​ ಸಿಬ್ಬಂದಿನ ಬೆಳ್ಳೂರಿಗೆ ಶಿಫ್ಟ್ ಮಾಡಿದ್ದರು. ರಿಸರ್ವ್ ‌ವಾಹನ ಹೊರಟ ಅರ್ಧ ಗಂಟೆಗೆ ಗಲಭೆ ನಡೆದಿತ್ತು. ಈ ವೇಳೆ ನಿರ್ಲಕ್ಷ್ಯ ತೋರಿದ ಅಶೋಕ್ ಕುಮಾರ್​ನ ಸಸ್ಪೆಂಡ್ ಮಾಡಲಾಗಿತ್ತು.

ಇದನ್ನೂ ಓದಿ: ನಾಗಮಂಗಲ‌ ಕೋಮುಗಲಭೆ ಪ್ರಕರಣ: ಆರ್ ಅಶೋಕ್, ಶೋಭಾ ಕರಂದ್ಲಾಜೆ ವಿರುದ್ಧ FIR

ನಾಗಮಂಗಲ ಗಲಭೆಯ ಕೇಂದ್ರ ಬಿಂದು ಬದ್ರಿಕೊಪ್ಪಲು ಗ್ರಾಮ. ವಾರದ ಹಿಂದೆ ಗ್ರಾಮಕ್ಕೆ ಗ್ರಾಮವೇ ಗಣೇಶ ಹಬ್ಬ ಖುಷಿಯಲ್ಲಿ ತೇಲಾಡಿತ್ತು. ಆದರೆ ಇದೀಗ ಇದೇ ಗ್ರಾಮದಲ್ಲಿ ನೀರವಮೌನ ಆವರಿಸಿದೆ. ಬಂಧನದ ಭೀತಿಯಿಂದ ಯುವಕರು ಊರು ತೊರೆದಿದ್ದು, ಮನೆ ಮಂದಿ ಕಣ್ಣೀರು ಹಾಕುತ್ತಿದ್ದಾರೆ. ಇನ್ನು ಬದ್ರಿಕೊಪ್ಪಲು ಗ್ರಾಮದ 13 ಮಂದಿ ಅರೆಸ್ಟ್ ಆಗಿದ್ದು, ಇವತ್ತು ಗ್ರಾಮಸ್ಥರು ಒಟ್ಟಾಗಿ ಕಾರಾಗೃಹದಲ್ಲಿ ತಮ್ಮವರನ್ನ ಭೇಟಿ ಮಾಡಿದ್ದಾರೆ.

ಇದನ್ನೂ ಓದಿ: ನಾಗಮಂಗಲ ಕೋಮುಗಲಭೆ: ಬರೊಬ್ಬರಿ 2.66 ಕೋಟಿ ಮೌಲ್ಯದ ಆಸ್ತಿ ನಾಶ

ನಾಗಮಂಗಲ ಗಲಭೆ ಪೂರ್ವ ನಿಯೋಜಿತ ಕೃತ್ಯ ಎಂಬುದಕ್ಕೆ ಸಾಕ್ಷಿ ಸಿಗುತ್ತಿದ್ದಾವೆ. ಗಲಭೆಗೆ ಪೆಟ್ರೋಲ್ ಬಾಂಬ್, ತಲ್ವಾರ್, ಮಾರಕಾಸ್ತ್ರ ಕೇರಳದಿಂದ ಬಂದಿತ್ತಾ ಅನ್ನೋ ಶಂಕೆಯೂ ವ್ಯಕ್ತವಾಗಿದೆ. ಗಲಭೆಗೂ ಮುನ್ನ ಮೆಡಿಕಲ್ ಶಾಪ್​ನಲ್ಲಿ 200 ಮಾಸ್ಕ್ ಖರೀದಿಸಿದ್ದಾರೆ ಅಂತಾ ಹಿಂದೂ ಸಂಘಟನೆಗಳು ಆರೋಪಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:15 pm, Thu, 19 September 24

Follow Us
Prashantha B
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು