AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ: ಪ್ರೇಯಸಿ ಮನೆ ಮುಂದೆಯೇ ಸ್ಫೋಟಿಸಿಕೊಂಡು ಪ್ರಿಯಕರ ಆತ್ಮಹತ್ಯೆ

ಪ್ರೀತಿಸುತ್ತಿದ್ದ ಅಪ್ರಾಪ್ತೆ ಮನೆ ಮುಂದೆಯೇ ಜಿಲೆಟಿನ್ ಸ್ಫೋಟಿಸಿಕೊಂಡು ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಸ್ಫೋಟದ ‌ತೀವ್ರತೆಗೆ ಯುವಕನ ಹೊಟ್ಟೆಯ ಭಾಗ ಛಿದ್ರ ಛಿದ್ರವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಪ್ರಿಯತಮೆಗಾಗಿ ಜೈಲಿಗೆ ಹೋಗಿ ಬಂದಿದ್ದ. ಆದ್ರೆ, ಪ್ರೇಯಸಿ ಸಂಪರ್ಕಕ್ಕೆ ಸಿಗದಿದ್ದರಿಂದ ಮನನೊಂದು ಜೀವ ಕಳೆದುಕೊಂಡಿದ್ದಾನೆ. ಏನಿದು ಪ್ರಕರಣ| ಯುವಕ, ಪ್ರೇಯಸಿ ಮನೆ ಮುಂದೆ ಆತ್ಮಹತ್ಯೆ ಮಾಡಿಕೊಂಡಿದ್ಯಾಕೆ? ಮಂಡ್ಯ ಎಸ್​ಪಿ ಹೇಳಿದ್ದೇನು? ಎನ್ನುವ ವಿವರ ಇಲ್ಲಿದೆ,

ಮಂಡ್ಯ: ಪ್ರೇಯಸಿ ಮನೆ ಮುಂದೆಯೇ ಸ್ಫೋಟಿಸಿಕೊಂಡು ಪ್ರಿಯಕರ ಆತ್ಮಹತ್ಯೆ
ರಾಮಚಂದ್ರು
ಪ್ರಶಾಂತ್​ ಬಿ.
| Edited By: |

Updated on: Dec 29, 2024 | 1:09 PM

Share

ಮಂಡ್ಯ, (ಡಿಸೆಂಬರ್ 29): ಪ್ರೀತಿಸುತ್ತಿದ್ದ ಅಪ್ರಾಪ್ತೆ ಮನೆ ಮುಂದೆಯೇ ಜಿಲೆಟಿನ್ ಸ್ಫೋಟಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲದ ಗ್ರಾಮವೊಂದರಲ್ಲಿ‌ ನಿನ್ನೆ(ಶನಿವಾರ) ನಡೆದಿದೆ. ರಾಮಚಂದ್ರು (21) ಎಂಬಾತನೇ ಆತ್ಮಹತ್ಯೆಗೆ ಶರಣಾದ ಯುವಕ. ಕಲ್ಲು ಗಣಿಗಾರಿಕೆಗೆ ಬಳಸುವ ಜಿಲೆಟಿನ್ ಸ್ಫೋಟಿಸಿಕೊಂಡು ರಾಮಚಂದ್ರು ಆತ್ಮಹತ್ಯೆಗೆ ಶರಣಾಗಿದ್ದಾನೆ. ಜಿಲೆಟಿನ್ ಸ್ಫೋಟಕ್ಕೆ ಯುವಕನ ಹೊಟ್ಟೆಯ ಭಾಗ ಛಿದ್ರ ಛಿದ್ರವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಒಂದು ವರ್ಷದ ಹಿಂದೆ ಅಪ್ರಾಪ್ತೆ ಕರೆದೊಯ್ದ ಹಿನ್ನೆಲೆಯಲ್ಲಿ ರಾಮಚಂದ್ರು ವಿರುದ್ಧ ಫೋಕ್ಸೋ ಕೇಸ್ ದಾಖಲಾಗಿತ್ತು. ಫೋಕ್ಸೋ ಕೇಸ್‌ನಲ್ಲಿ 6 ತಿಂಗಳು ಜೈಲುವಾಸ ಅನುಭವಿಸಿದ್ದ. ಬಳಿಕ 2 ಕುಟುಂಬಗಳ ರಾಜಿ ಸಂಧಾನ ಬಳಿಕ ಕೇಸ್ ವಾಪಾಸ್ ಪಡೆಯಲಾಗಿತ್ತು. ನಂತರ ಅಪ್ರಾಪ್ತ ಪ್ರಿಯತಮೆ ರಾಮಚಂದ್ರನ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಹೀಗಾಗಿ ಮನನೊಂದ ರಾಮಚಂದ್ರ ನಿನ್ನೆ ಆಕೆಯ ಮುನೆಯ ಮುಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಲ್ಲುಗಣಿಗಾರಿಕೆಗೆ ಬಳಸುವ ಜಿಲೆಟಿನ್ ಸ್ಪೋಟಿಸಿಕೊಂಡು ಸೂಸೈಡ್‌ ಮಾಡಿಕೊಂಡಿದ್ದು, ಸ್ಪೋಟಕದ ಬಗ್ಗೆ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ಮದ್ವೆಯಾಗಿದ್ದ ಆಂಟಿ ಜತೆ ಲವ್ವಿಡವ್ವಿ: ಕರೆ ಸ್ವೀಕರಿಸಲಿಲ್ಲ ಎಂದು ಮನೆಗೆ ಹೋದ ಯುವಕ ಆಸ್ಪತ್ರೆ ಸೇರಿದ

ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು, ಸ್ಥಳಕ್ಕೆ ಬಾಂಬ್ ಪತ್ತೆ ಹಾಗೂ ‌ನಿಷ್ಕ್ರಿಯ ದಳ‌ ದೌಡಾಯಿಸಿ ಸ್ಫೋಟಕ್ಕೆ ಬಳಸಿರುವ ವಸ್ತು ಹಾಗೂ ತೀವ್ರತೆ ಬಗ್ಗೆಯೂ ಪರಿಶೀಲನೆ ನಡೆಸುತ್ತಿದ್ದಾರೆ.

ಪ್ರಕರಣದ ಬಗ್ಗೆ ಮಂಡ್ಯ ಎಸ್ ಪಿ ಹೇಳಿದ್ದೇನು?

ಇನ್ನು ಈ ಪ್ರಕರಣದ ಬಗ್ಗೆ ಮಂಡ್ಯ ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಯುವಕ ಜಿಲೆಟಿನ್ ಸ್ಟೋಟಿಸಿಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ . ಈ ಹಿಂದೆ ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿತ್ತು. ಅಪ್ರಾಪ್ತಯನ್ನೆ ಮನೆಯಿಂದ ಕರೆದುಕೊಂಡು ಹೋಗಿದ್ದ. ಈ ಸಂಬಂಧ ನಾಗಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೂರು ತಿಂಗಳು ಜೈಲಿನಲ್ಲಿ ಇದ್ದು ಬಂದಿದ್ದಾನೆ. ಆನಂತರ ಕುಟುಂಬಸ್ಥರು ರಾಜೀ ಮಾಡಿಕೊಂಡಿಕೊಂಡಿದ್ದರು . ಮೃತ ಯುವಕ ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದ. ನಿನ್ನೆ ರಾತ್ರಿ ಸಹ ಸ್ನೇಹಿತರ ಜೊತೆ ಮದ್ಯಸೇವನೆ ಕೂಡ ಮಾಡಿದ್ದ. ಸ್ಟೋಟಕ ಎಲ್ಲಿ ಸಿಕ್ಕಿದೆ ಎಂಬ ಬಗ್ಗೆ ತನಿಖೆ ಮಾಡಲಾಗುತ್ತಿದೆ. ಸ್ಪೋಟಕ ನೀಡಿದವರ ವಿರುದ್ಧ ಕೂಡ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್