AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯದ ಬೇಬಿ ಬೆಟ್ಟದಲ್ಲಿ ಇಂದಿನಿಂದ 4 ದಿನ ಟ್ರಯಲ್ ಬ್ಲಾಸ್ಟ್​​: ರೈತ ಸಂಘಟನೆಗಳು, ಬಿಜೆಪಿಯಿಂದ ಪ್ರತಿಭಟನೆ

ಹೈಕೋರ್ಟ್​ ಆದೇಶದಂತೆ ರಾಜ್ಯ ಸರ್ಕಾರ ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದಲ್ಲಿ ಇಂದಿನಿಂದ ನಾಲ್ಕು ದಿನ ಟ್ರಯಲ್ ಬ್ಲಾಸ್ಟ್​​ ನಡೆಸಲಿದೆ. ಟ್ರಯಲ್ ಬ್ಲಾಸ್ಟ್​ಗೆ ಆಗಮಿಸಿರುವ ತಜ್ಞರು ವಾಪಾಸ್ ತೆರಳುವಂತೆ ರೈತರು ಕೆಆರ್​ಎಸ್​ ಬೃಂದಾವನದ ಮುಖ್ಯ ದ್ವಾರದ ರಸ್ತೆಯಲ್ಲಿ ಗೋ ಬ್ಯಾಕ್ ಚಳುವಳಿ ನಡೆಸಲಿದ್ದಾರೆ.

ಮಂಡ್ಯದ ಬೇಬಿ ಬೆಟ್ಟದಲ್ಲಿ ಇಂದಿನಿಂದ 4 ದಿನ ಟ್ರಯಲ್ ಬ್ಲಾಸ್ಟ್​​: ರೈತ ಸಂಘಟನೆಗಳು, ಬಿಜೆಪಿಯಿಂದ ಪ್ರತಿಭಟನೆ
ಮಂಡ್ಯ ಬೇಬಿ ಬೆಟ್ಟ
ಪ್ರಶಾಂತ್​ ಬಿ.
| Edited By: ವಿವೇಕ ಬಿರಾದಾರ|

Updated on: Mar 05, 2024 | 9:47 AM

Share

ಮಂಡ್ಯ, ಮಾರ್ಚ್ 05: ವಿರೋಧದ ನಡುವೆಯೂ ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದಲ್ಲಿ (Babybetta) ಇಂದಿನಿಂದ ನಾಲ್ಕು ದಿನ ಟ್ರಯಲ್ ಬ್ಲಾಸ್ಟ್​​ಗೆ (Trail Blast) ಮುಹೂರ್ತ ಫಿಕ್ಸ್ ಆಗಿದೆ. ಈ ಸಂಬಂಧ ಹೊರ ರಾಜ್ಯದಿಂದ ತಜ್ಞರ ತಂಡ ಸೋಮವಾರ ರಾತ್ರಿಯೇ ಕೆಆರ್​ಎಸ್​​ನ (KRS) ರಾಯಲ್ ಆರ್ಕಿಡ್ ಹೋಟೆಲ್​ನಲ್ಲಿ ವಾಸ್ತವ್ಯ ಹೂಡಿಸಿದೆ. ತಜ್ಞರು ಇಂದು (ಮಾ.05) ಬೆಳಿಗ್ಗೆ ಕಾವೇರಿ ನೀರಾವರಿ ನಿಯಮ, ಭೂ ಮತ್ತು ಗಣಿ ವಿಜ್ಞಾನ ಇಲಾಖೆ ಅಧಿಕಾರಿಗಳೊಂದೆಗೆ ಸಭೆ ನಡೆಸಲಿದ್ದಾರೆ. ಬಳಿಕ ಬೇಬಿ ಬೆಟ್ಟಕ್ಕೆ ತಜ್ಞರು ಭೇಟಿ ನೀಡಲಿದ್ದಾರೆ. ಬುಧವಾರ ಅಥವಾ ಗುರುವಾರ ಆಯ್ದ ಸ್ಥಳಗಳಲ್ಲಿ ಟ್ರಯಲ್​ ಬ್ಲಾಸ್ಟ್​ ನಡೆಸಲಿದ್ದಾರೆ.

ಈ ಟ್ರಯಲ್ ಬ್ಲಾಸ್ಟ್​​ ಅನ್ನು ವಿರೋಧಿಸಿ, ಟ್ರಯಲ್ ಬ್ಲಾಸ್ಟ್​ಗೆ ಆಗಮಿಸಿರುವ ತಜ್ಞರು ವಾಪಾಸ್ ತೆರಳುವಂತೆ ರೈತರು ಕೆಆರ್​ಎಸ್​ ಬೃಂದಾವನದ ಮುಖ್ಯ ದ್ವಾರದ ರಸ್ತೆಯಲ್ಲಿ ಗೋ ಬ್ಯಾಕ್ ಚಳುವಳಿ ನಡೆಸಲಿದ್ದಾರೆ. ರೈತ ಸಂಘ ಹಾಗೂ ಬೇಬಿ ಬೆಟ್ಟ ಉಳಿಸಿ ಹೋರಾಟ ಸಮಿತಿ ನೇತೃತ್ವದಲ್ಲಿ ಬೆಳಿಗ್ಗೆ 10 ಗಂಟೆಗೆ ಪ್ರತಿಭಟನೆ ನಡೆಯಲಿದೆ. ಬಿಜೆಪಿ ಕೂಡ ಪ್ರತ್ಯೇಕವಾಗಿ ಧರಣಿ ನಡೆಸಲು ನಿರ್ಧರಿಸಿದೆ.

ಕೆಆರ್​ಎಸ್​ ಡ್ಯಾಂನಿಂದ ಐದಾರು ಕಿಮೀ ದೂರದಲ್ಲೇ ಇರುವ ಬೇಬಿ ಬೆಟ್ಟದಲ್ಲಿ ಹಲವು ವರ್ಷಗಳಿಂದ ಕಲ್ಲು ಗಣಿಗಾರಿಕೆ ನಡೆಯುತ್ತಿತ್ತು. ಗಣಿಗಾರಿಕೆಯಿಂದ ಕೆಆರ್​ಎಸ್​ಗೆ ಡ್ಯಾಂಗೆ ಹಾನಿಯಾಗುತ್ತದೆ ಎಂದು ಹಲವು ಹೋರಾಟಗಳು ನಡೆದವ. ರೈತ ಸಂಘಟನೆಗಳು, ಸಂಸದೆ ಸುಮಲತಾ ಅಂಬರೀಶ್​, ಸಾಮಾಜಿಕ ಕಾರ್ಯಕರ್ತರ ಹೋರಾಟದ ಪ್ರತಿಫಲವಾಗಿ ಹಿಂದಿನ ಬಿಜೆಪಿ ಸರ್ಕಾರ ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ನಿಷೇಧಿಸಿತ್ತು. ಬೇಬಿ ಬೆಟ್ಟ ಸೇರಿದಂತೆ ಕೆಆರ್​ಎಸ್​ ಡ್ಯಾಂನ 20 ಕಿಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಲಾಗಿತ್ತು.

ಇದನ್ನೂ ಓದಿ: ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್​ ನಡೆಸದಂತೆ ರಾಜಮಾತೆ ಪ್ರಮೋದಾದೇವಿ ಅವರಿಂದ ಜಿಲ್ಲಾಧಿಕಾರಿಗೆ ಪತ್ರ

ಇದಾದ ಬಳಿಕ ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ನಡೆಯಬೇಕೋ ಬೇಡವೋ, ಬೇಬಿ ಬೆಟ್ಟದ ಗಣಿಗಾರಿಕೆಯಿಂಧ ಕೆಆರ್​ಎಸ್​ ಅಣೆಕಟ್ಟೆಗೆ ಹಾನಿಯಾಗುತ್ತಾ ಎಂದು ತಿಳಿಯಲು ಮಾಡುವ ಉದ್ದೇಶದಿಂದ ಹೈಕೋರ್ಟ್​ ಟ್ರಯಲ್​ ಬ್ಲಾಸ್ಟ್​ ನಡೆಸಲು ಆದೇಶ ನೀಡಿದೆ. ಹೀಗಾಗಿ ರಾಜ್ಯ ಸರ್ಕಾರ ಇಂದಿನಿಂದ 4 ದಿನ ಟ್ರಯಲ್​​ ಬ್ಲಾಸ್ಟ್​ ನಡೆಸಲಿದೆ.

ಇನ್ನು ಈ ಟ್ರಯಲ್​ ಬ್ಲಾಸ್ಟ್​​ ಮಾಡುವಾಗ ಕಡಿಮೆ ಸ್ಫೋಟಕ ಬಳಸಿ ಬ್ಲಾಸ್ಟ್​​ ಮಾಡಿ ಕೆಆರ್​ಎಸ್​ಗೆ ತೊಂದರೆ ಆಗಲ್ಲ ಎಂದು ವರದಿ ನೀಡುತ್ತಾರೆ. ಬಳಿಕ ಬೆಟ್ಟದಲ್ಲಿ ಮತ್ತೆ ಗಣಿಗಾರಿಕೆ ಆರಂಭವಾಗಿ ಅಪಾರ ಪ್ರಮಾಣದ ಸ್ಫೋಟಕ ಬಳಸಿ ಬ್ಲಾಸ್ಟ್​ ಮಾಡುತ್ತಾರೆ. ಇದರಿಂದ ಕೆಆರ್​ಎಸ್​ಗೆ ಹಾನಿಯಾಗುತ್ತದೆ. ಹೀಗಾಗಿ ಟ್ರಯಲ್​ ಬ್ಲಾಸ್ಟ್​ ಮಾಡಬಾರದು ಎಂದು ರೈತ ಸಂಘ ಹಾಗೂ ಬಿಜೆಪಿ ಆಗ್ರಹಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ