AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mandya News: 40 ಕೋಟಿ ರೂ. ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಮಂಡ್ಯದ ಮೈಶುಗರ್ ಕಾರ್ಖಾನೆ

ರಾಜ್ಯದ ಏಕೈಕ ಸರ್ಕಾರಿ ಸಕ್ಕರೆ ಕಾರ್ಖಾನೆಯಾದ ಮಂಡ್ಯದ ಮೈಶುಗರ್ ಫ್ಯಾಕ್ಟರಿ ಇದುವರೆಗೂ ಕೋಟ್ಯಂತರ ರೂಪಾಯಿ ವಿದ್ಯುತ್ ಬಿಲ್​​ನ್ನು ಬಾಕಿ ಉಳಿಸಿಕೊಂಡಿದ್ದು, ಬರೊಬ್ಬರಿ 40 ಕೋಟಿ ರೂಪಾಯಿ ವಿದ್ಯುತ್​ ಬಿಲ್​ ಕಟ್ಟಿಲ್ಲ.

Mandya News: 40 ಕೋಟಿ ರೂ. ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಮಂಡ್ಯದ ಮೈಶುಗರ್ ಕಾರ್ಖಾನೆ
ಮಂಡ್ಯ ಮೈ ಶುಗರ್​ ಪ್ಯಾಕ್ಟರಿ
Follow us
ಸೂರಜ್ ಪ್ರಸಾದ್ ಎಸ್.ಎನ್
| Updated By: ಕಿರಣ್ ಹನುಮಂತ್​ ಮಾದಾರ್

Updated on: Jun 29, 2023 | 10:33 AM

ಮಂಡ್ಯ: ರಾಜ್ಯದ ಏಕೈಕ ಸರ್ಕಾರಿ ಸಕ್ಕರೆ ಕಾರ್ಖಾನೆಯಾದ ಮಂಡ್ಯ(Mandya)ದ ಮೈಶುಗರ್ ಫ್ಯಾಕ್ಟರಿ ಇದುವರೆಗೂ ಕೋಟ್ಯಂತರ ರೂಪಾಯಿ ವಿದ್ಯುತ್ ಬಿಲ್​​ನ್ನು ಬಾಕಿ ಉಳಿಸಿಕೊಂಡಿದೆ. ಹೌದು 2000ದ ಇಸವಿಯಿಂದಲೂ ಇಲ್ಲಿಯವೆರೆಗೆ ಕರೆಂಟ್​ ಬಿಲ್ ಕಟ್ಟಿಲ್ಲವಂತೆ. ಈ ಮೂಲಕ ಬರೊಬ್ಬರಿ 40 ಕೋಟಿ ರೂಪಾಯಿ ವಿದ್ಯುತ್​ ಬಿಲ್​ನ್ನು ಬಾಕಿ ಉಳಿಸಿಕೊಂಡಿದೆ. ಇನ್ನು ರೋಗಗ್ರಸ್ಥ ಕಾರ್ಖಾನೆ ಎಂದೆ ಬಿಂಬಿಸಿಕೊಂಡಿರುವ ಮೈಶುಗರ್ ಫ್ಯಾಕ್ಟರಿ, ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಕಾರ್ಖಾನೆ ಪುನಾರಂಭಕ್ಕೆ 50 ಕೋಟಿ ರೂ. ಹಣವನ್ನ ಬಿಡುಗಡೆ ಮಾಡಿತ್ತು.

ವಿದ್ಯುತ್ ಪೂರೈಸುವಂತೆ ಇಂಧನ ಸಚಿವರಿಗೆ MLC ಗೂಳಿಗೌಡ ಪತ್ರ

ಇನ್ನು ಪ್ರಸಕ್ತ ಸಾಲಿನಲ್ಲಿ 5 ಲಕ್ಷ ಟನ್ ಕಬ್ಬನ್ನು ನುರಿಯುವ ಗುರಿ ಹೊಂದಿರುವ ಈ ಕಾರ್ಖಾನೆಗೆ ವಿದ್ಯುತ್ ಸರಬರಾಜು ಆಗಬೇಕಿದೆ. ಈ ಹಿನ್ನಲೆ ವಿದ್ಯುತ್ ಪೂರೈಕೆ ಮಾಡುವಂತೆ ಇಂಧನ ಸಚಿವ ಕೆ.ಜೆ.ಜಾರ್ಜ್​ಗೆ ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮನವಿ ಪತ್ರ ಸಲ್ಲಿಸಿದ್ದಾರೆ. ಈ ವರ್ಷ ರೈತರ ಕಬ್ಬು ಅರೆಯಲು ರೈತರೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಮೈಶುಗರ್ ಹಲವು ವರ್ಷದಿಂದ ನಷ್ಟಕ್ಕೆ ಸಿಲುಕಿ 40.86 ಕೋಟಿ ಕರೆಂಟ್ ಬಿಲ್ ಬಾಕಿ ಉಳಿಸಿಕೊಂಡಿದೆ. ಪ್ರಸಕ್ತ ಹಂಗಾಮಿನಲ್ಲಿ ಕಬ್ಬನ್ನು ನುರಿಯಲು ಅವಶ್ಯವಿರುವ ವಿದ್ಯುತ್ ಸರಬರಾಜು ಮಾಡಿ, ಬಳಿಕ ಹಂತ ಹಂತವಾಗಿ ಬಾಕಿ ಮೊತ್ತ ಪಾವತಿಸಲಾಗುತ್ತೆ ಎಂದು ಚೆಸ್ಕಾಂ ನಿರ್ದೇಶಕರಿಗೆ ವಿದ್ಯುತ್ ಪೂರೈಸಲು ಆದೇಶಿಸುವಂತೆ ಇಂಧನ ಸಚಿವ ಕೆ.ಜೆ.ಜಾರ್ಜ್​ಗೆ ಮನವಿ ಸಲ್ಲಿಸಿದ್ದಾರೆ.

ಇದನ್ನೂ ಓದಿ:Shivananda Patil: ಅಪ್ಪನ ಸರ್ಕಾರಿ ಕಾರಿನಲ್ಲಿ ಸಕ್ಕರೆ ಖಾತೆ ಸಚಿವರ ಪುತ್ರಿ ಸಂಚಾರ

ಮೈಶುಗರ್ ಸಕ್ಕರೆ ಕಾರ್ಖಾನೆಗೆ ಚಾಲನೆ ನೀಡಿದ್ದ ಸಚಿವ ಶಿವಾನಂದ ಎಸ್ ಪಾಟೀಲ್

ಇನ್ನು ಇತ್ತೀಚೆಗಷ್ಟೇ ಬಾಯ್ಲರ್‌ಗೆ ಬೆಂಕಿ ಹಾಕುವ ಮೂಲಕ ಮೈಶುಗರ್ ಸಕ್ಕರೆ ಕಾರ್ಖಾನೆಗೆ ಸಚಿವ ಶಿವಾನಂದ ಎಸ್ ಪಾಟೀಲ್ ಚಾಲನೆ ನೀಡಿದ್ದರು. ಅವರಿಗೆ ಸಚಿವ ಚಲುವರಾಯಸ್ವಾಮಿ ಹಾಗೂ ಸ್ಥಳೀಯ ಶಾಸಕರು ಸಾಥ್ ನೀಡಿದ್ದರು. ಈ ವೇಳೆ ಕೃಷಿ ಇಲಾಖೆ ಸಚಿವ ಎನ್​.ಚಲುವರಾಯಸ್ವಾಮಿ ಮಾತನಾಡಿ ‘ಮಂಡ್ಯಕ್ಕೆ ಕಾಂಗ್ರೆಸ್ ಸರ್ಕಾರದ ಮೊದಲ ಅನುದಾನ ನೀಡಲಾಗಿದ್ದು,. ಮೈಶುಗರ್ ಕಾರ್ಖಾನೆ ಪುನಾರಂಭಿಸಲು 50 ಕೋಟಿ ಮಂಜೂರು ಮಾಡಲಾಗಿದೆ. ಜಿಲ್ಲೆಯ ರೈತರ ಪರವಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್​ಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದಿದ್ದರು.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು
ಮುನಿರತ್ನ ಮೇಲಿರೋದು ಆರೋಪಗಳಲ್ಲ, ಎಫ್​ಐಅರ್ ಆಗಿದೆ: ಖರ್ಗೆ
ಮುನಿರತ್ನ ಮೇಲಿರೋದು ಆರೋಪಗಳಲ್ಲ, ಎಫ್​ಐಅರ್ ಆಗಿದೆ: ಖರ್ಗೆ
ಪರೀಕ್ಷೆ ಬರೆಯುವ ಆಸೆಗೆ ಪೋಷಕ ಮತ್ತು ಪತಿ ಮನೆಯವರಿಂದ ಆಕ್ಷೇಪಣೆ ಇಲ್ಲ
ಪರೀಕ್ಷೆ ಬರೆಯುವ ಆಸೆಗೆ ಪೋಷಕ ಮತ್ತು ಪತಿ ಮನೆಯವರಿಂದ ಆಕ್ಷೇಪಣೆ ಇಲ್ಲ
ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ
ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ
ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಸಮೂಹದ ಮೇಲೆ ಈಡಿ ದಾಳಿ ನಡೆದಿದೆ
ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಸಮೂಹದ ಮೇಲೆ ಈಡಿ ದಾಳಿ ನಡೆದಿದೆ
ಪರಮೇಶ್ವರ್ ಸಂಸ್ಥೆಗಳ ಮೇಲೆ ಇಡಿ ದಾಳಿ: ಡಿಸಿಎಂ ಡಿಕೆಶಿ ಹೇಳಿದ್ದೇನು ನೋಡಿ
ಪರಮೇಶ್ವರ್ ಸಂಸ್ಥೆಗಳ ಮೇಲೆ ಇಡಿ ದಾಳಿ: ಡಿಸಿಎಂ ಡಿಕೆಶಿ ಹೇಳಿದ್ದೇನು ನೋಡಿ
ಪುನರಾಭಿವೃದ್ಧಿಗೊಂಡ 103 ರೈಲ್ವೆ ನಿಲ್ದಾಣಗಳ ಉದ್ಘಾಟಿಸಿದ ಪ್ರಧಾನಿ ಮೋದಿ
ಪುನರಾಭಿವೃದ್ಧಿಗೊಂಡ 103 ರೈಲ್ವೆ ನಿಲ್ದಾಣಗಳ ಉದ್ಘಾಟಿಸಿದ ಪ್ರಧಾನಿ ಮೋದಿ
Video: ಪಾಕಿಸ್ತಾನದ ಗೃಹ ಸಚಿವ ಹಸನ್ ಮನೆಗೆ ಬೆಂಕಿ
Video: ಪಾಕಿಸ್ತಾನದ ಗೃಹ ಸಚಿವ ಹಸನ್ ಮನೆಗೆ ಬೆಂಕಿ