AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mandya News: 40 ಕೋಟಿ ರೂ. ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಮಂಡ್ಯದ ಮೈಶುಗರ್ ಕಾರ್ಖಾನೆ

ರಾಜ್ಯದ ಏಕೈಕ ಸರ್ಕಾರಿ ಸಕ್ಕರೆ ಕಾರ್ಖಾನೆಯಾದ ಮಂಡ್ಯದ ಮೈಶುಗರ್ ಫ್ಯಾಕ್ಟರಿ ಇದುವರೆಗೂ ಕೋಟ್ಯಂತರ ರೂಪಾಯಿ ವಿದ್ಯುತ್ ಬಿಲ್​​ನ್ನು ಬಾಕಿ ಉಳಿಸಿಕೊಂಡಿದ್ದು, ಬರೊಬ್ಬರಿ 40 ಕೋಟಿ ರೂಪಾಯಿ ವಿದ್ಯುತ್​ ಬಿಲ್​ ಕಟ್ಟಿಲ್ಲ.

Mandya News: 40 ಕೋಟಿ ರೂ. ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಮಂಡ್ಯದ ಮೈಶುಗರ್ ಕಾರ್ಖಾನೆ
ಮಂಡ್ಯ ಮೈ ಶುಗರ್​ ಪ್ಯಾಕ್ಟರಿ
ಸೂರಜ್ ಪ್ರಸಾದ್ ಎಸ್.ಎನ್
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jun 29, 2023 | 10:33 AM

Share

ಮಂಡ್ಯ: ರಾಜ್ಯದ ಏಕೈಕ ಸರ್ಕಾರಿ ಸಕ್ಕರೆ ಕಾರ್ಖಾನೆಯಾದ ಮಂಡ್ಯ(Mandya)ದ ಮೈಶುಗರ್ ಫ್ಯಾಕ್ಟರಿ ಇದುವರೆಗೂ ಕೋಟ್ಯಂತರ ರೂಪಾಯಿ ವಿದ್ಯುತ್ ಬಿಲ್​​ನ್ನು ಬಾಕಿ ಉಳಿಸಿಕೊಂಡಿದೆ. ಹೌದು 2000ದ ಇಸವಿಯಿಂದಲೂ ಇಲ್ಲಿಯವೆರೆಗೆ ಕರೆಂಟ್​ ಬಿಲ್ ಕಟ್ಟಿಲ್ಲವಂತೆ. ಈ ಮೂಲಕ ಬರೊಬ್ಬರಿ 40 ಕೋಟಿ ರೂಪಾಯಿ ವಿದ್ಯುತ್​ ಬಿಲ್​ನ್ನು ಬಾಕಿ ಉಳಿಸಿಕೊಂಡಿದೆ. ಇನ್ನು ರೋಗಗ್ರಸ್ಥ ಕಾರ್ಖಾನೆ ಎಂದೆ ಬಿಂಬಿಸಿಕೊಂಡಿರುವ ಮೈಶುಗರ್ ಫ್ಯಾಕ್ಟರಿ, ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಕಾರ್ಖಾನೆ ಪುನಾರಂಭಕ್ಕೆ 50 ಕೋಟಿ ರೂ. ಹಣವನ್ನ ಬಿಡುಗಡೆ ಮಾಡಿತ್ತು.

ವಿದ್ಯುತ್ ಪೂರೈಸುವಂತೆ ಇಂಧನ ಸಚಿವರಿಗೆ MLC ಗೂಳಿಗೌಡ ಪತ್ರ

ಇನ್ನು ಪ್ರಸಕ್ತ ಸಾಲಿನಲ್ಲಿ 5 ಲಕ್ಷ ಟನ್ ಕಬ್ಬನ್ನು ನುರಿಯುವ ಗುರಿ ಹೊಂದಿರುವ ಈ ಕಾರ್ಖಾನೆಗೆ ವಿದ್ಯುತ್ ಸರಬರಾಜು ಆಗಬೇಕಿದೆ. ಈ ಹಿನ್ನಲೆ ವಿದ್ಯುತ್ ಪೂರೈಕೆ ಮಾಡುವಂತೆ ಇಂಧನ ಸಚಿವ ಕೆ.ಜೆ.ಜಾರ್ಜ್​ಗೆ ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮನವಿ ಪತ್ರ ಸಲ್ಲಿಸಿದ್ದಾರೆ. ಈ ವರ್ಷ ರೈತರ ಕಬ್ಬು ಅರೆಯಲು ರೈತರೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಮೈಶುಗರ್ ಹಲವು ವರ್ಷದಿಂದ ನಷ್ಟಕ್ಕೆ ಸಿಲುಕಿ 40.86 ಕೋಟಿ ಕರೆಂಟ್ ಬಿಲ್ ಬಾಕಿ ಉಳಿಸಿಕೊಂಡಿದೆ. ಪ್ರಸಕ್ತ ಹಂಗಾಮಿನಲ್ಲಿ ಕಬ್ಬನ್ನು ನುರಿಯಲು ಅವಶ್ಯವಿರುವ ವಿದ್ಯುತ್ ಸರಬರಾಜು ಮಾಡಿ, ಬಳಿಕ ಹಂತ ಹಂತವಾಗಿ ಬಾಕಿ ಮೊತ್ತ ಪಾವತಿಸಲಾಗುತ್ತೆ ಎಂದು ಚೆಸ್ಕಾಂ ನಿರ್ದೇಶಕರಿಗೆ ವಿದ್ಯುತ್ ಪೂರೈಸಲು ಆದೇಶಿಸುವಂತೆ ಇಂಧನ ಸಚಿವ ಕೆ.ಜೆ.ಜಾರ್ಜ್​ಗೆ ಮನವಿ ಸಲ್ಲಿಸಿದ್ದಾರೆ.

ಇದನ್ನೂ ಓದಿ:Shivananda Patil: ಅಪ್ಪನ ಸರ್ಕಾರಿ ಕಾರಿನಲ್ಲಿ ಸಕ್ಕರೆ ಖಾತೆ ಸಚಿವರ ಪುತ್ರಿ ಸಂಚಾರ

ಮೈಶುಗರ್ ಸಕ್ಕರೆ ಕಾರ್ಖಾನೆಗೆ ಚಾಲನೆ ನೀಡಿದ್ದ ಸಚಿವ ಶಿವಾನಂದ ಎಸ್ ಪಾಟೀಲ್

ಇನ್ನು ಇತ್ತೀಚೆಗಷ್ಟೇ ಬಾಯ್ಲರ್‌ಗೆ ಬೆಂಕಿ ಹಾಕುವ ಮೂಲಕ ಮೈಶುಗರ್ ಸಕ್ಕರೆ ಕಾರ್ಖಾನೆಗೆ ಸಚಿವ ಶಿವಾನಂದ ಎಸ್ ಪಾಟೀಲ್ ಚಾಲನೆ ನೀಡಿದ್ದರು. ಅವರಿಗೆ ಸಚಿವ ಚಲುವರಾಯಸ್ವಾಮಿ ಹಾಗೂ ಸ್ಥಳೀಯ ಶಾಸಕರು ಸಾಥ್ ನೀಡಿದ್ದರು. ಈ ವೇಳೆ ಕೃಷಿ ಇಲಾಖೆ ಸಚಿವ ಎನ್​.ಚಲುವರಾಯಸ್ವಾಮಿ ಮಾತನಾಡಿ ‘ಮಂಡ್ಯಕ್ಕೆ ಕಾಂಗ್ರೆಸ್ ಸರ್ಕಾರದ ಮೊದಲ ಅನುದಾನ ನೀಡಲಾಗಿದ್ದು,. ಮೈಶುಗರ್ ಕಾರ್ಖಾನೆ ಪುನಾರಂಭಿಸಲು 50 ಕೋಟಿ ಮಂಜೂರು ಮಾಡಲಾಗಿದೆ. ಜಿಲ್ಲೆಯ ರೈತರ ಪರವಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್​ಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದಿದ್ದರು.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More