AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mandya News: 40 ಕೋಟಿ ರೂ. ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಮಂಡ್ಯದ ಮೈಶುಗರ್ ಕಾರ್ಖಾನೆ

ರಾಜ್ಯದ ಏಕೈಕ ಸರ್ಕಾರಿ ಸಕ್ಕರೆ ಕಾರ್ಖಾನೆಯಾದ ಮಂಡ್ಯದ ಮೈಶುಗರ್ ಫ್ಯಾಕ್ಟರಿ ಇದುವರೆಗೂ ಕೋಟ್ಯಂತರ ರೂಪಾಯಿ ವಿದ್ಯುತ್ ಬಿಲ್​​ನ್ನು ಬಾಕಿ ಉಳಿಸಿಕೊಂಡಿದ್ದು, ಬರೊಬ್ಬರಿ 40 ಕೋಟಿ ರೂಪಾಯಿ ವಿದ್ಯುತ್​ ಬಿಲ್​ ಕಟ್ಟಿಲ್ಲ.

Mandya News: 40 ಕೋಟಿ ರೂ. ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಮಂಡ್ಯದ ಮೈಶುಗರ್ ಕಾರ್ಖಾನೆ
ಮಂಡ್ಯ ಮೈ ಶುಗರ್​ ಪ್ಯಾಕ್ಟರಿ
ಸೂರಜ್ ಪ್ರಸಾದ್ ಎಸ್.ಎನ್
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jun 29, 2023 | 10:33 AM

Share

ಮಂಡ್ಯ: ರಾಜ್ಯದ ಏಕೈಕ ಸರ್ಕಾರಿ ಸಕ್ಕರೆ ಕಾರ್ಖಾನೆಯಾದ ಮಂಡ್ಯ(Mandya)ದ ಮೈಶುಗರ್ ಫ್ಯಾಕ್ಟರಿ ಇದುವರೆಗೂ ಕೋಟ್ಯಂತರ ರೂಪಾಯಿ ವಿದ್ಯುತ್ ಬಿಲ್​​ನ್ನು ಬಾಕಿ ಉಳಿಸಿಕೊಂಡಿದೆ. ಹೌದು 2000ದ ಇಸವಿಯಿಂದಲೂ ಇಲ್ಲಿಯವೆರೆಗೆ ಕರೆಂಟ್​ ಬಿಲ್ ಕಟ್ಟಿಲ್ಲವಂತೆ. ಈ ಮೂಲಕ ಬರೊಬ್ಬರಿ 40 ಕೋಟಿ ರೂಪಾಯಿ ವಿದ್ಯುತ್​ ಬಿಲ್​ನ್ನು ಬಾಕಿ ಉಳಿಸಿಕೊಂಡಿದೆ. ಇನ್ನು ರೋಗಗ್ರಸ್ಥ ಕಾರ್ಖಾನೆ ಎಂದೆ ಬಿಂಬಿಸಿಕೊಂಡಿರುವ ಮೈಶುಗರ್ ಫ್ಯಾಕ್ಟರಿ, ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಕಾರ್ಖಾನೆ ಪುನಾರಂಭಕ್ಕೆ 50 ಕೋಟಿ ರೂ. ಹಣವನ್ನ ಬಿಡುಗಡೆ ಮಾಡಿತ್ತು.

ವಿದ್ಯುತ್ ಪೂರೈಸುವಂತೆ ಇಂಧನ ಸಚಿವರಿಗೆ MLC ಗೂಳಿಗೌಡ ಪತ್ರ

ಇನ್ನು ಪ್ರಸಕ್ತ ಸಾಲಿನಲ್ಲಿ 5 ಲಕ್ಷ ಟನ್ ಕಬ್ಬನ್ನು ನುರಿಯುವ ಗುರಿ ಹೊಂದಿರುವ ಈ ಕಾರ್ಖಾನೆಗೆ ವಿದ್ಯುತ್ ಸರಬರಾಜು ಆಗಬೇಕಿದೆ. ಈ ಹಿನ್ನಲೆ ವಿದ್ಯುತ್ ಪೂರೈಕೆ ಮಾಡುವಂತೆ ಇಂಧನ ಸಚಿವ ಕೆ.ಜೆ.ಜಾರ್ಜ್​ಗೆ ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮನವಿ ಪತ್ರ ಸಲ್ಲಿಸಿದ್ದಾರೆ. ಈ ವರ್ಷ ರೈತರ ಕಬ್ಬು ಅರೆಯಲು ರೈತರೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಮೈಶುಗರ್ ಹಲವು ವರ್ಷದಿಂದ ನಷ್ಟಕ್ಕೆ ಸಿಲುಕಿ 40.86 ಕೋಟಿ ಕರೆಂಟ್ ಬಿಲ್ ಬಾಕಿ ಉಳಿಸಿಕೊಂಡಿದೆ. ಪ್ರಸಕ್ತ ಹಂಗಾಮಿನಲ್ಲಿ ಕಬ್ಬನ್ನು ನುರಿಯಲು ಅವಶ್ಯವಿರುವ ವಿದ್ಯುತ್ ಸರಬರಾಜು ಮಾಡಿ, ಬಳಿಕ ಹಂತ ಹಂತವಾಗಿ ಬಾಕಿ ಮೊತ್ತ ಪಾವತಿಸಲಾಗುತ್ತೆ ಎಂದು ಚೆಸ್ಕಾಂ ನಿರ್ದೇಶಕರಿಗೆ ವಿದ್ಯುತ್ ಪೂರೈಸಲು ಆದೇಶಿಸುವಂತೆ ಇಂಧನ ಸಚಿವ ಕೆ.ಜೆ.ಜಾರ್ಜ್​ಗೆ ಮನವಿ ಸಲ್ಲಿಸಿದ್ದಾರೆ.

ಇದನ್ನೂ ಓದಿ:Shivananda Patil: ಅಪ್ಪನ ಸರ್ಕಾರಿ ಕಾರಿನಲ್ಲಿ ಸಕ್ಕರೆ ಖಾತೆ ಸಚಿವರ ಪುತ್ರಿ ಸಂಚಾರ

ಮೈಶುಗರ್ ಸಕ್ಕರೆ ಕಾರ್ಖಾನೆಗೆ ಚಾಲನೆ ನೀಡಿದ್ದ ಸಚಿವ ಶಿವಾನಂದ ಎಸ್ ಪಾಟೀಲ್

ಇನ್ನು ಇತ್ತೀಚೆಗಷ್ಟೇ ಬಾಯ್ಲರ್‌ಗೆ ಬೆಂಕಿ ಹಾಕುವ ಮೂಲಕ ಮೈಶುಗರ್ ಸಕ್ಕರೆ ಕಾರ್ಖಾನೆಗೆ ಸಚಿವ ಶಿವಾನಂದ ಎಸ್ ಪಾಟೀಲ್ ಚಾಲನೆ ನೀಡಿದ್ದರು. ಅವರಿಗೆ ಸಚಿವ ಚಲುವರಾಯಸ್ವಾಮಿ ಹಾಗೂ ಸ್ಥಳೀಯ ಶಾಸಕರು ಸಾಥ್ ನೀಡಿದ್ದರು. ಈ ವೇಳೆ ಕೃಷಿ ಇಲಾಖೆ ಸಚಿವ ಎನ್​.ಚಲುವರಾಯಸ್ವಾಮಿ ಮಾತನಾಡಿ ‘ಮಂಡ್ಯಕ್ಕೆ ಕಾಂಗ್ರೆಸ್ ಸರ್ಕಾರದ ಮೊದಲ ಅನುದಾನ ನೀಡಲಾಗಿದ್ದು,. ಮೈಶುಗರ್ ಕಾರ್ಖಾನೆ ಪುನಾರಂಭಿಸಲು 50 ಕೋಟಿ ಮಂಜೂರು ಮಾಡಲಾಗಿದೆ. ಜಿಲ್ಲೆಯ ರೈತರ ಪರವಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್​ಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದಿದ್ದರು.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ