AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

40,000 ರೂ. ಲಂಚಕ್ಕೆ ಬೇಡಿಕೆ: ಮುಂಗಡವಾಗಿ 5 ಸಾವಿರ ರೂ. ಸ್ವೀಕರಿಸುವಾಗ ಗ್ರಾಮ ಪಂಚಾಯತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ತಾಲೂಕಿನ ಬೇಲೂರು ಗ್ರಾಮ ಪಂಚಾಯತಿ ಕಾರ್ಯದರ್ಶಿ ದಯಾನಂದ್ ಎಂಬಾತ ಲಂಚ ಸ್ವೀಕರಿಸುವಾಗ ಲೋಕಾಯುಕ್ತ (Lokayukta) ಬಲೆಗೆ ಬಿದ್ದ ಘಟನೆ ನಡೆದಿದೆ. ಮಂಜುನಾಥ್ ಎಂಬುವರ ಇ-ಸ್ವತ್ತು ಮಾಡಿಕೊಡಲು 40,000 ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದು, ಅದನ್ನ ತೆಗೆದುಕೊಳ್ಳುವ ವೇಳೆ ಸಿಕ್ಕಿಬಿದ್ದಿದ್ದಾನೆ.

40,000 ರೂ. ಲಂಚಕ್ಕೆ ಬೇಡಿಕೆ: ಮುಂಗಡವಾಗಿ 5 ಸಾವಿರ ರೂ. ಸ್ವೀಕರಿಸುವಾಗ ಗ್ರಾಮ ಪಂಚಾಯತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ
ಲೋಕಾಯುಕ್ತ ದಾಳಿ
ಕಿರಣ್ ಹನುಮಂತ್​ ಮಾದಾರ್
|

Updated on: May 25, 2023 | 12:18 PM

Share

ಮಂಡ್ಯ: ತಾಲೂಕಿನ ಬೇಲೂರು ಗ್ರಾಮ ಪಂಚಾಯತಿ ಕಾರ್ಯದರ್ಶಿ ದಯಾನಂದ್ ಎಂಬಾತ ಲಂಚ ಸ್ವೀಕರಿಸುವಾಗ ಲೋಕಾಯುಕ್ತ (Lokayukta) ಬಲೆಗೆ ಬಿದ್ದ ಘಟನೆ ನಡೆದಿದೆ. ಮಂಜುನಾಥ್ ಎಂಬುವರ ಇ-ಸ್ವತ್ತು ಮಾಡಿಕೊಡಲು 40,000 ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದ ಕಾರ್ಯದರ್ಶಿ. ಮುಂಗಡವಾಗಿ 5,000 ರೂ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಇನ್ನು ಲಂಚ ಕೇಳಿದ ಸಂಬಂಧ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದ ಮಂಜುನಾಥ್, ಈ ಹಿನ್ನೆಲೆ ಲೋಕಾಯುಕ್ತ ಡಿವೈಎಸ್​​ಪಿ ಸುನೀಲ್ ಕುಮಾರ್ ನೇತೃತ್ವದಲ್ಲಿ ದಾಳಿ ಮಾಡಲಾಗಿ, ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದಾನೆ.

ಮೃತ‌ ಹಸುವಿನ ಪೋಸ್ಟ್ ಮಾರ್ಟ್ಂ ರಿಪೋರ್ಟ್ ನೀಡಲು ಲಂಚಕ್ಕೆ ಬೇಡಿಕೆ: ಲೋಕಾಯುಕ್ತ ಬಲೆಗೆ ಬಿದ್ದಿದ್ದ ಪಶು ವೈದ್ಯಾಧಿಕಾರಿ

ಚಿತ್ರದುರ್ಗ: ಇತ್ತೀಚೆಗೆ ಲಂಚ ತೆಗೆದುಕೊಳ್ಳುವ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದ್ದು, ಅದರಂತೆ ಹಸುವಿನ ಮರಣೋತ್ತರ ಪರೀಕ್ಷೆ ವರದಿ ನೀಡಲು ಲಂಚ ಸ್ವೀಕರಿಸುತ್ತಿದ್ದ ವೇಳೆ ಪಶು ವೈದ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿರುವಂತಹ ಘಟನೆ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಚಿಕ್ಕಜಾಜೂರು ಗ್ರಾಮದಲ್ಲಿ ನಡೆದಿತ್ತು. ಎಸ್​ಪಿ ಮೃತ್ಯುಂಜಯ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಿದ್ದು, ಚಿಕ್ಕಜಾಜೂರು ಪಶು ಆಸ್ಪತ್ರೆ ವೈದ್ಯಾಧಿಕಾರಿ ಡಾ. ತಿಪ್ಪೇಸ್ವಾಮಿ ಬಲೆಗೆ ಬಿದ್ದಿದ್ದ. ಮೃತ‌ ಹಸುವಿನ ಪೋಸ್ಟ್ ಮಾರ್ಟ್ಂ ರಿಪೋರ್ಟ್ ನೀಡಲು ಕಾಗಳಗೆರೆ ಗ್ರಾಮದ ರೈತ ಎಸ್.ಸ್ವಾಮಿಯಿಂದ 7,000 ರೂ. ಲಂಚ ಸ್ವೀಕರಿಸುತ್ತಿದ್ದರು ಎನ್ನಲಾಗಿತ್ತು.

ಇದನ್ನೂ ಓದಿ:ಲೋಕಾಯುಕ್ತ ಬಲೆಗೆ ಬಿದ್ದ ಚಿಕ್ಕೋಡಿ ಭೂದಾಖಲೆಗಳ ಸಹಾಯಕ ನಿರ್ದೇಶಕ

13 ಸಾವಿರ ಲಂಚ ಪಡೆಯುತ್ತಿದ್ದ ದಸ್ತು ಬರಹಗಾರ ಲೋಕಾಯುಕ್ತ ಬಲೆಗೆ

ದಾವಣಗೆರೆ: ಲಂಚ ಪಡೆಯುತ್ತಿದ್ದ ದಸ್ತು ಬರಹಗಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದ. ದಾವಣಗೆರೆ ಜಿಲ್ಲೆ ಹರಿಹರ ಪಟ್ಟಣದ ಸಬ್​ ರಿಜಿಸ್ಟ್ರಾರ್​ ಕಚೇರಿಯಲ್ಲಿ ದಸ್ತು ಬರಹಗಾರ ಪರಮೇಶ್ವರ್ ಎಂಬುವವರು 13 ಸಾವಿರ ಹಣ ಲಂಚ ಪಡೆಯುತ್ತಿದ್ದ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಪರಮೇಶ್ವರ್​​ನನ್ನು ಬಂಧಿಸಿದ್ದರು.

ಮನೆ ಖರೀದಿಯ ಸೇಲ್ ಡೀಡ್ ನೋಂದಣಿ ಪತ್ರ ನೀಡಲು ಹರಿಹರದ ಮಂಜುನಾಥ್ ಎನ್ನುವರ ಬಳಿ ಪರಮೇಶ್ವರ್ 20 ಸಾವಿರ ನೀಡುವಂತೆ ಬೇಡಿಕೆ ಇಟ್ಟಿದ್ದ. ಹೀಗಾಗಿ ಮಂಜುನಾಥ್ ಈ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ನಿನ್ನೆ ರಾತ್ರಿ ಸಬ್ ರಿಜಿಸ್ಟರ್ ಕಚೇರಿ ಬಳಿ ಮಂಜುನಾರ್​ನಿಂದ 13 ಸಾವಿರ ಲಂಚ ಪಡೆಯುವಾಗ ಪರಮೇಶ್ವರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದ. ಈ ವೇಳೆವ ಅರೋಪಿಯಿಂದ 40 ಸಾವಿರ ನಗದು ಸೇರಿದಂತೆ ವಿವಿಧ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ. ಲೋಕಾಯುಕ್ತ ಎಸ್​ಪಿ, ಎಂಎಸ್ ಕೌಲಾಪುರೆ, ಇನ್ಸ್ಪೆಕ್ಟರ್ ರಾಷ್ಟ್ರಪತಿ ಎಚ್ ಎಸ್, ಅಂಜನೇಯ ನೇತೃತ್ವದಲ್ಲಿ ದಾಳಿ ನಡೆದಿತ್ತು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!