AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಡ್ಗಿ ಸಲುವಾಗಿ ಯುವಕನ ಮೇಲೆ ಕ್ರೌರ್ಯ: ಫೇಸ್​ಬುಕ್ ಲೈವ್​​ನಲ್ಲೇ ಮನಸ್ಸೋ ಇಚ್ಛೆ ಹಲ್ಲೆ

ಮಂಡ್ಯದಲ್ಲಿ ಅಪ್ರಾಪ್ತ ಬಾಲಕರ ಕ್ರೌರ್ಯದ ಘಟನೆಗಳು ಹೆಚ್ಚುತ್ತಿವೆ. ಇತ್ತೀಚೆಗೆ, ಒಬ್ಬ ಯುವಕನನ್ನು ಏಳೆಂಟು ಅಪ್ರಾಪ್ತರು ಹಲ್ಲೆ ಮಾಡಿ, ಫೇಸ್‌ಬುಕ್‌ನಲ್ಲಿ ಲೈವ್ ಮಾಡಿದ್ದಾರೆ. ಈ ಘಟನೆ ಜಿಲ್ಲೆಯಲ್ಲಿ ಆತಂಕ ಹೆಚ್ಚಿಸಿದೆ. ಪ್ರಕರಣ ಸಂಬಂಧ ಮಂಡ್ಯದ ಪೂರ್ವ ಠಾಣೆ ಪೊಲೀಸರು ಕೆಲವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಹುಡ್ಗಿ ಸಲುವಾಗಿ ಯುವಕನ ಮೇಲೆ ಕ್ರೌರ್ಯ: ಫೇಸ್​ಬುಕ್ ಲೈವ್​​ನಲ್ಲೇ ಮನಸ್ಸೋ ಇಚ್ಛೆ ಹಲ್ಲೆ
ಹುಡ್ಗಿ ಸಲುವಾಗಿ ಯುವಕನ ಮೇಲೆ ಕ್ರೌರ್ಯ: ಫೇಸ್​ಬುಕ್ ಲೈವ್​​ನಲ್ಲೇ ಮನಸ್ಸೋ ಇಚ್ಛೆ ಹಲ್ಲೆ
ಪ್ರಶಾಂತ್​ ಬಿ.
| Edited By: |

Updated on: Feb 24, 2025 | 10:34 PM

Share

ಮಂಡ್ಯ, ಫೆಬ್ರವರಿ 24: ಸಕ್ಕರಿನಗರಿ ‌ಮಂಡ್ಯದಲ್ಲಿ ಇತ್ತೀಚಿಗೆ ಪುಡಿ ರೌಡಿಗಳ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅಪ್ರಾಪ್ತ ಬಾಲಕರ ಕ್ರೌರ್ಯ ಮಂಡ್ಯ ಜನರನ್ನ ಬೆಚ್ಚಿ ಬೀಳಿಸುವಂತೆ ಮಾಡಿದೆ. ಯುವತಿಯೊಬ್ಬಳ (girl) ವಿಚಾರವಾಗಿ ಮೀಸೆ ಚಿಗುರದ ಬಾಲಕರು ಅಟ್ಟಹಾಸ ಮೆರೆದಿದ್ದಾರೆ. ಈ ಕುರಿತ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ.

ಮಂಡ್ಯದಲ್ಲಿ ಪುಡಿರೌಡಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮೀಸೆ ಚಿಗುರದ ಅಪ್ರಾಪ್ತ ಬಾಲಕರ ಕ್ರೌರ್ಯ ಜಿಲ್ಲೆಯ ಜನರನ್ನ ಆತಂಕಕ್ಕೆ ಒಳಗಾಗುವಂತೆ ಮಾಡಿದೆ. ಅಂದಹಾಗೆ ಯುವತಿಯೊಬ್ಬಳ ವಿಚಾರವಾಗಿ ಮಂಡ್ಯದಲ್ಲಿ ಇತ್ತೀಚಿಗೆ ಎರಡು ಗುಂಪುಗಳ ನಡುವೆ ವಾರ್ ನಡೆದಿದೆ.

ಇದನ್ನೂ ಓದಿ: ವಿಷ ಸೇವಿಸಿ ಬಳಿಕ ನಾಲೆಗೆ ಹಾರಿ ಒಂದೇ ಕುಟುಂಬದ ಮೂವರು ಸಾವು: ಕಾರಣವೇನು?

ಇದೇ ವಿಚಾರವಾಗಿ ಮಂಡ್ಯದಲ್ಲಿ ಐಟಿಐ ಮಾಡುತ್ತಿದ್ದ ಮೈಸೂರು ಜಿಲ್ಲೆಯ ಟೀ ನರಸಿಪುರ ಮೂಲದ 19 ವರ್ಷದ ಯುವಕನೊಬ್ಬನನ್ನ ಸುಮಾರು ಏಳೆಂಟು ಅಪ್ರಾಪ್ತ ಬಾಲಕರು ಮಂಡ್ಯದ ಹೊರವಲಯದ ಸ್ಮಶಾನಕ್ಕೆ ಕರೆದುಕೊಂಡು ಹೋಗಿ ಲಾಂಗ್​ನಿಂದ ಮನಸ್ಸೋ ಇಚ್ಛೆ ಹಲ್ಲೆ ಮಾಡಿದ್ದಾರೆ. ಕಾಲಿನಿಂದ ಒದ್ದು, ಅವಾಚ್ಯ ಶಬ್ಧಗಳಿಂದ ಬೈದು ಬೆದರಿಕೆ ಹಾಕುವ ಜೊತೆಗೆ ಫೇಸ್ ಬುಕ್​ ಲೈವ್ ಮಾಡಿದ್ದಾರೆ. ಸಂತ್ರಸ್ತ ಯುವಕ ‌ಪರಿಪರಿಯಾಗಿ ಬೇಡಿಕೊಂಡರು ಬಿಡದ ಅಪ್ರಾಪ್ತರು ಕ್ರೌರ್ಯ ಮೆರೆದಿದ್ದಾರೆ.

ಅಂದಹಾಗೆ ಫೇಸ್ ಬುಕ್​ನಲ್ಲಿ ಲೈವ್ ಆದ ಕ್ರೌರ್ಯದ ವಿಡಿಯೋ ಆನಂತರ ಜಿಲ್ಲೆಯಾದ್ಯಂತ ವೈರಲ್ ಆಗಿದೆ. ಮೀಸೆ ಚಿಗುರದ ಅಪ್ರಾಪ್ತರ ಅಟ್ಟಹಾಸ ಬೆಚ್ಚಿ ಜನತೆಯನ್ನ ಬೀಳುವಂತೆ ಮಾಡಿದೆ. ಇನ್ನು ಘಟನೆ ಸಂಬಂಧ ಸಂತ್ರಸ್ತ ಯುವಕ ದೂರು‌ ನೀಡಲು ಹಿಂದೇಟು ಹಾಕಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಪ್ರೀತ್ಸೆ…ಪ್ರೀತ್ಸೆ ಎಂದು ವಿವಾಹಿತ ಮಹಿಳೆ ಬಲಿ ಪಡೆದ ಕಾಮಿ

ಪ್ರಕರಣ ಸಂಬಂಧ ಮಂಡ್ಯದ ಪೂರ್ವ ಠಾಣೆ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದಾರೆ. ಅಲ್ಲದೆ ಉಳಿದವರಿಗಾಗಿ ಶೋಧಕಾರ್ಯ ಮುಂದುವರೆಸಿದ್ದಾರೆ. ಒಟ್ಟಾರೆ ಜೀವನ, ಕಷ್ಟ ಸುಖ ಅಂದರೆ ಏನು ಎಂದು ತಿಳಿಯದ ಅಪ್ರಾಪ್ತರು ಕ್ರೌರ್ಯದ ಹಾದಿ ಇಳಿದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Prashantha B
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು