ಮಂಡ್ಯ: ಕಾಡಾನೆ ತುಳಿತಕ್ಕೆ ಮತ್ತೋರ್ವ ಕಾರ್ಮಿಕ ಮಹಿಳೆ ಬಲಿ

ಕಾಡು ಪ್ರಾಣಿ ಹಾಗೂ ಮಾನವ ಸಂಘರ್ಷ ಮುಂದುವರೆದಿದೆ. ಮಂಡ್ಯದಲ್ಲಿ ಕಾಡಾನೆ ದಾಳಿಗೆ (Elephant attack) ಮತ್ತೊಂದು ಬಲಿಯಾಗಿದೆ. ಕಾರ್ಮಿಕ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

ಮಂಡ್ಯ: ಕಾಡಾನೆ ತುಳಿತಕ್ಕೆ ಮತ್ತೋರ್ವ ಕಾರ್ಮಿಕ ಮಹಿಳೆ ಬಲಿ
ಆನೆ ತುಳಿತಕ್ಕೆ ಮಹಿಳೆ ಸಾವು
Edited By:

Updated on: Nov 19, 2023 | 10:00 AM

ಮಂಡ್ಯ, (ನವೆಂಬರ್ 19): ಕಾಡು ಪ್ರಾಣಿ ಹಾಗೂ ಮಾನವ ಸಂಘರ್ಷ ಮುಂದುವರೆದಿದೆ. ಮಂಡ್ಯದಲ್ಲಿ ಕಾಡಾನೆ ದಾಳಿಗೆ (Elephant attack) ಮತ್ತೊಂದು ಬಲಿಯಾಗಿದೆ. ಕಾರ್ಮಿಕ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಮಂಡ್ಯ (Mandya) ತಾಲ್ಲೂಕಿನ ಲಾಳನಕೆರೆ-ಪೀಹಳ್ಳಿ ಗ್ರಾಮದ ಬಳಿ ಈ ಘಟನೆ ನಡೆದಿದೆ. ಲಾಳನಕೆರೆ ಗ್ರಾಮದ ಸಾಕಮ್ಮ(40) ಮೃತ ಮಹಿಳೆ. ಬೆಳಗ್ಗೆ ಜಮೀನು ಬಳಿ ಹೋಗಿದ್ದಾಗ ಆನೆ ತುಳಿದು ಸಾಯಿಸಿದೆ. ಈ ವಿಷಯ ತಿಳಿದು ಸ್ಥಳಕ್ಕೆಅರಣ್ಯ ಇಲಾಖೆ ಅಧಿಕಾರಿಗಳು ದೌಡಾಯಿಸಿದ್ದಾರೆ. ಇನ್ನು ಈ ಘಟನೆಯಿಂದ ಗ್ರಾಮಸ್ಥರು ಆತಂಕಗೊಂಡಿದ್ದಾರೆ.

ಸಫಾರಿ ವಾಹನದ ಮೇಲೆ ದಾಳಿಗೆ ಯತ್ನಿಸಿದ ಆನೆ

ಮೈಸೂರು: ಇನ್ನೊಂದೆಡೆ ನಾಗರಹೊಳೆ ಅಭಯಾರಣ್ಯದಲ್ಲಿ ಆನೆಯೊಂದು ಸಫಾರಿ ವಾಹನದ ಮೇಲೆ ದಾಳಿಗೆ ಯತ್ನಿಸಿರುವ ಘಟನೆ ನಡೆದಿದೆ. ಹುಣಸೂರು ತಾಲ್ಲೂಕು ವ್ಯಾಪ್ತಿಯಲ್ಲಿ ಸಫಾರಿ ಹೋಗುತ್ತಿದ್ದ ವಾಹನ ಕಂಡು ಆನೆಯೊಂದು ದಾಳಿಗೆ ಮುಂದಾಗಿದೆ. ಸಫಾರಿ ವಾಹನ ಹತ್ತಿರ ಬರುತ್ತಿದ್ದಂತೆಯೇ ಆನೆ ಅಟ್ಟಿಸಿಕೊಂಡು ಬಂದಿದೆ. ತಕ್ಷಣ ಚಾಲಕ ಸಫಾರಿ ವಾಹನವನ್ನು ತಕ್ಷಣ ಹಿಮ್ಮುಖವಾಗಿ ಚಲಾಯಿಸಿಕೊಂಡು ಹೋಗಿದ್ದಾರೆ. ಆದರೂ ಸಹ ಆನೆ ಸ್ವಲ್ಪ ದೂರ ಅಟ್ಟಿಸಿಕೊಂಡು ಬಂದು ಬಳಿ ವಾಪಸ್ಸಾಗಿದೆ. ಆನೆ ದಾಳಿಗೆ ಮುಂದಾಗಿರುವ ದೃಶ್ಯ ಪ್ರವಾಸಿಗರ ಕ್ಯಾಮೆರಾದಲ್ಲಿ ಸೆರೆಯಾಗಿದೆ.

Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
Follow Us