AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mandya News: ಟಾರ್ಗೆಟ್ ಮಾಡಿದ್ದು ತಮ್ಮನನ್ನ, ಹಂತಕರ ಕೈಯಲ್ಲಿ ತಗ್ಲಾಕೊಂಡು ದುರಂತ ಅಂತ್ಯ ಕಂಡಿದ್ದು ಅಣ್ಣ

ಟಾರ್ಗೆಟ್ ಮಾಡಿದ್ದು ತಮ್ಮನನ್ನ. ಆದ್ರೆ, ಹಂತಕರ ಕೈಯಲ್ಲಿ ತಗಲಾಕಿ ಕೊಂಡಿದ್ದು ಅಣ್ಣ. ಸಕ್ಕರೆ ನಾಡು ಮಂಡ್ಯದಲ್ಲೊಂದು ಭಯಾನಕ ಕೊಲೆ ನಡೆದಿದೆ.

Mandya News: ಟಾರ್ಗೆಟ್ ಮಾಡಿದ್ದು ತಮ್ಮನನ್ನ, ಹಂತಕರ ಕೈಯಲ್ಲಿ ತಗ್ಲಾಕೊಂಡು ದುರಂತ ಅಂತ್ಯ ಕಂಡಿದ್ದು ಅಣ್ಣ
ಕೊಲೆಯಾದ ವೆಂಕಟೇಶ್
Follow us
ರಮೇಶ್ ಬಿ. ಜವಳಗೇರಾ
|

Updated on:Jun 05, 2023 | 2:18 PM

ಮಂಡ್ಯ: ಹಂತಕರು ಟಾರ್ಗೆಟ್ ಮಾಡಿದ್ದು ತಮ್ಮನನ್ನು. ಆದ್ರೆ, ಅಣ್ಣ ತಗಲಾಕಿಕೊಂಡು ದುರಂತ ಅಂತ್ಯಕಂಡಿದ್ದಾನೆ. ತಮ್ಮನ ಮೇಲಿನ ಸೇಡಿಗೆ ಅಣ್ಣನನ್ನ ಅಪಹರಿಸಿಕೊಂಡು ಹೋಗಿ  ಕೊಲೆ ಮಾಡಲಾಗಿದೆ. ಹೌದು..ದುಷ್ಕರ್ಮಿಗಳು ತಮ್ಮನ ಮೇಲಿನ ಸೇಡಿಗೆ ಅಣ್ಣನನ್ನ ಕಿಡ್ಯ್ನಾಪ್ ಮಾಡಿ ಬರ್ಬರವಾಗಿ ಹತ್ಯೆಗೈದು ಸುಟ್ಟು ಹಾಕಿರುವ ಘಟನೆ ಮಂಡ್ಯದ(Mandya) ಸಾಥನೂರು ಗ್ರಾಮದಲ್ಲಿ ನಡೆದಿದೆ. ಪೊಲೀಸರ ನೆಪದಲ್ಲಿ ಬಂದ ದುಷ್ಕರ್ಮಿಗಳು, ವೆಂಕಟೇಶ್ ನನ್ನ ಕಿಡ್ನ್ಯಾಪ್ ಮಾಡಿಕೊಂಡು ಹೋಗಿ ಈರೇಗೌಡನ ಕೊಪ್ಪಲು ಅರಣ್ಯಪ್ರದೇಶದಲ್ಲಿ ಕೊಲೆ ಮಾಡಿ ಸುಟ್ಟು ಹಾಕಿದ್ದು, 13 ದಿನಗಳ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಮದ್ವೆಗೆ 5 ದಿನ ಮೊದಲೇ ಯುವಕನ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮಹಿಳೆಯೊಂದಿಗಿನ ಲವ್ವಿಡವ್ವಿಯೇ ಕಾರಣ

ಭೀಮೇಶ್ ಹಾಗೂ ವಿನಯ್ ಎನ್ನುವರು ಹಣಕಾಸಿನ ವಿಚಾರಕ್ಕೆ ಕೊಲೆಯಾದ ವೆಂಕಟೇಶ್ ಸಹೋದರ ರಮೇಶ್ ಜೊತೆ ಗಲಾಟೆ ಮಾಡಿದ್ದರು. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಇದೆ ಮೇ 23 ರಂದು ಪೊಲೀಸರೆಂದು ಹೇಳಿಕೊಂಡು ರಮೇಶ್ ನನ್ನು ಹುಡುಕಿಕೊಂಡು ಅವರ ಮನೆ ಬಂದಿದ್ದರು. ಆದ್ರೆ, ಮನೆಯಲ್ಲಿ ತಮ್ಮ ರಮೇಶ್ ಇಲ್ಲದ ಕಾರಣ ಆತನ ಅಣ್ಣ ವೆಂಕಟೇಶ್​ನನ್ನು ಕಿಡ್ನ್ಯಾಪ್ ಮಾಡಿಕೊಂಡು ಹೋಗಿದ್ದರು. ಬಳಿಕ ವೆಂಕಟೇಶ್​ನನ್ನು ಹತ್ಯೆ ನಂತರ ಈರೇಗೌಡನ ಕೊಪ್ಪಲು ಅರಣ್ಯಪ್ರದೇಶದಲ್ಲಿ ಸುಟ್ಟು ಹಾಕಿದ್ದಾರೆ. ಪ್ರಕರಣ ನಡೆದು 13 ದಿನಗಳ ಬಳಿಕ ಪ್ರಕರಣ ಬೆಳಕಿಗೆ ಬಂದಿದ್ದು, ಇದೀಗ ಮಂಡ್ಯ ಗ್ರಾಮಾಂತರ ಪೊಲೀಸರು ನಾಲ್ವರು ಕೊಲೆ ಪಾತಕಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಸೇಡು ತೀರಿಸಿಕೊಳ್ಳಲು ವೆಂಕಟೇಶ್‌ನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಘಟನೆ ಬಗ್ಗೆ ಪೊಲೀಸರ ಮಾಹಿತಿ

ಈ ಹಿಂದೆ ಹಣಕಾಸು ಸಮಸ್ಯೆ ಬಗೆಹರಿಸಲು ರಮೇಶ್ ಭೀಮೇಶ್‌ ನನ್ನು ಬೆಂಗಳೂರಿಗೆ ಕೆರೆಸಿಕೊಂಡಿದ್ದ, ತನ್ನನ್ನು ಸ್ಥಳಕ್ಕೆ ಆಗಮಿಸಿದಾಗ ರಮೇಶ್ ತನ್ನ ಸಹಚರರೊಂದಿಗೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಿ ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಭೀಮೇಶ್ ದೂರು ದಾಖಲಿಸಿದ್ದನು. ಈ ಘಟನೆಯಲ್ಲಿ ಬೆಂಗಳೂರು ಪೊಲೀಸರಿಂದ ಬಂಧನವಾಗಿದ್ದ ರಮೇಶ್‌ನನ್ನು ಬಂಧಿಸಿದ್ದರು. ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ.

ರಮೇಶ್ ಬಿಡುಗಡೆಯ ಬಗ್ಗೆ ಮಾಹಿತಿ ತಿಳಿದ ಭೀಮೇಶ್ ಮತ್ತು ಅವನ ಸಹಚರರು ರಮೇಶ್‌ನನ್ನು ಹತ್ಯೆ ಮಾಡಲು ಹೊಂಚು ಹಾಕಿದ್ದರು. ಅದರಂತೆ ಪೊಲೀಸರು ಎಂದು ಹೇಳಿಕೊಂಡು ರಮೇಶ್​ ಮನೆ ಬಂದಿದ್ದರು. ಆದ್ರೆ, ಮನೆಯಲ್ಲಿ ರಮೇಶ್ ಇಲ್ಲದ ಕಾರಣ ಅಣ್ಣ ವೆಂಕಟೇಶ್ ನನ್ನು ಕರೆದುಕೊಂಡು ಹೋಗಿ ಕೊಲೆ ಮಾಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Published On - 2:17 pm, Mon, 5 June 23

ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?