AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಂಡವಪುರದಲ್ಲಿ ಭ್ರೂಣ ಹತ್ಯೆ ಕೇಸ್​ಗೆ ಆಘಾತಕಾರಿ ಟ್ವಿಸ್ಟ್​: ಮಂಡ್ಯ ಆಲೆಮನೆ ಆರೋಪಿ ಹಳೆ ಚಾಳಿ ಬಿಟ್ಟಿಲ್ಲ!

Pandavapura Fetus Killing: ಪಾಂಡವಪುರ ಸರ್ಕಾರಿ ಹೆಲ್ತ್​​ ಕ್ವಾರ್ಟರ್ಸ್​ನಲ್ಲಿ ನಡೆಯುತ್ತಿದ್ದ ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಮೇ 5ರಂದು ಬೆಳಕಿಗೆ ಬಂದಿತ್ತು. ಪ್ರಕರಣ ಸಂಬಂಧ, ಹಳೆಯ ಆರೋಪಿ ನವೀನ್ ಕುಮಾರನನ್ನು ಪೊಲೀಸರು ತಕ್ಷಣ ಬಂಧಿಸಿದ್ದರು.

ಪಾಂಡವಪುರದಲ್ಲಿ ಭ್ರೂಣ ಹತ್ಯೆ ಕೇಸ್​ಗೆ ಆಘಾತಕಾರಿ ಟ್ವಿಸ್ಟ್​: ಮಂಡ್ಯ ಆಲೆಮನೆ ಆರೋಪಿ ಹಳೆ ಚಾಳಿ ಬಿಟ್ಟಿಲ್ಲ!
ಪಾಂಡವಪುರದಲ್ಲಿ ಭ್ರೂಣ ಹತ್ಯೆ ಕೇಸ್​ಗೆ ಆಘಾತಕಾರಿ ಟ್ವಿಸ್ಟ್​: ಮಂಡ್ಯ ಆಲೆಮನೆ ಆರೋಪಿ ಹಳೆ ಚಾಳಿ ಬಿಟ್ಟಿಲ್ಲ!
Follow us
ಪ್ರಶಾಂತ್​ ಬಿ.
| Updated By: ಸಾಧು ಶ್ರೀನಾಥ್​

Updated on:May 11, 2024 | 10:56 AM

ಮಂಡ್ಯ: ಪಾಂಡವಪುರದಲ್ಲಿ ಭ್ರೂಣ ಹತ್ಯೆ ಕೇಸ್​ಗೆ (Fetus Killing) ಬಿಗ್ ಟ್ವಿಸ್ಟ್​ ಸಿಕ್ಕಿದೆ. ಆಘಾತಕಾರಿ ಮಾಹಿತಿಯೆಂದರೆ ಈ ಪ್ರಕರಣದಲ್ಲೂ ಮಂಡ್ಯದ ಆಲೆಮನೆ ಕೇಸ್​​​​ ಆರೋಪಿಯೇ ಕಿಂಗ್​ಪಿನ್ ಆಗಿದ್ದಾನೆ. ಇದು ಕರಾಳ ದಂಧೆಯ ಜಾಡು ಹಿಡಿದು ಹೊರಟ ಪೊಲೀಸರಿಗೇ ಬಿಗ್ ಶಾಕ್ ನೀಡಿದೆ. ಮಂಡ್ಯ ತಾಲೂಕಿನ ಹಾಡ್ಯ ಗ್ರಾಮದ ಆಲೆಮನೆಯಲ್ಲಿ ಭ್ರೂಣ ಹತ್ಯೆ ಕೇಸ್ (Sex determination) ನಲ್ಲಿ ಕಿಂಗ್​ಪಿನ್ ಎಂದು ಗುರುತಿಸಲಾಗಿದ್ದ ನವೀನ್ ಕುಮಾರ್ ಆಗ ಜೈಲು ಪಾಲಾಗಿದ್ದ. ಮತ್ತು ಪ್ರಕರಣದಲ್ಲಿ ಈಗಾಗಲೇ ಜೈಲು ಸೇರಿ ಬೇಲ್​ ಮೇಲೆ ಹೊರಬಂದಿದ್ದ. ಜೈಲು ಸೇರಿದ್ದರೂ ಬುದ್ಧಿ ಕಲಿಯದೆ ನವೀನ್ ಹಳೆ ಚಾಳಿ ಮುಂದುವರಿಸಿದ್ದ. ಅಂದಹಾಗೆ ನವೀನ್ ಕುಮಾರ್​​, ಪಾಂಡವಪುರ (Pandavapura, Mandya) ತಾಲೂಕಿನ ಸುಂಕಾತಣ್ಣೂರು ನಿವಾಸಿ.

ಪಾಂಡವಪುರ ಸರ್ಕಾರಿ ಹೆಲ್ತ್​​ ಕ್ವಾರ್ಟರ್ಸ್​ನಲ್ಲಿ ನಡೆಯುತ್ತಿದ್ದ ಹೆಣ್ಣು ಭ್ರೂಣ ಹತ್ಯೆ (Fetus gender detection) ಪ್ರಕರಣ ಮೇ 5ರಂದು ಬೆಳಕಿಗೆ ಬಂದಿತ್ತು. ಪ್ರಕರಣ ಸಂಬಂಧ ಆರೋಪಿ ನವೀನ್ ಕುಮಾರನನ್ನು ಪೊಲೀಸರು ತಕ್ಷಣ ಬಂಧಿಸಿದ್ದರು.

Also Read: ಮಂಡ್ಯ ಭ್ರೂಣಲಿಂಗ ಪತ್ತೆ, ಹತ್ಯೆ ಪ್ರಕರಣ: ಮಾಹಿತಿ ಇದ್ದರೂ ನಿರ್ಲಕ್ಷ್ಯ ಮಾಡಿದರೇ ಅಧಿಕಾರಿಗಳು?

ಬೇಲ್ ಮೇಲೆ ಹೊರಬಂದು ಅಮಾಯಕನಂತೆ ಓಡಾಡಿಕೊಂಡಿದ್ದ ನವೀನ ಹೆಣ್ಣು ಭ್ರೂಣಗಳನ್ನು ಹತ್ಯೆ ಮಾಡುವ ಹಳೆಯ ಚಾಳಿಯನ್ನು ಮುಂದುವರೆಸಿದ್ದ. ಆತನ ಖತರ್ನಾಕ್ ಗ್ಯಾಂಗ್ ಒಂಟಿ ಮನೆಯೊಂದರಲ್ಲಿ ಗರ್ಭಿಣಿಯರ ಸ್ಕ್ಯಾನಿಂಗ್ ನಡೆಸುತ್ತಿತ್ತು. ಪ್ರಕರಣದಲ್ಲಿ ವೈದ್ಯರು, ಅಧಿಕಾರಿಗಳು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಮಂಡ್ಯ ಖಾಕಿ ಪಡೆ ಪ್ರಕರಣ ಬೇಧಿಸಲು ಮುಂದಾಗಿದೆ. ಕೇಸ್ ನಲ್ಲಿ ಮತ್ತಷ್ಟು ಮಂದಿ ಬಂಧಿಸುವ‌ ಸಾಧ್ಯತೆಯಿದೆ.

ಕಳೆದ ವರ್ಷ ಡಿಸೆಂಬರ್​ ತಿಂಗಳಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಮಂಡ್ಯ ಜಿಲ್ಲೆಯಲ್ಲಿ ಅತಿದೊಡ್ಡ ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ಜಾಲವನ್ನು ಭೇದಿಸಿದ್ದರು. ಇದು ಜನಮನದಿಂದ ಮಾಸುವ ಮುನ್ನವೇ ಇದೀಗ ಮತ್ತೊಂದು ಭ್ರೂಣಲಿಂಗ ಪತ್ತೆಹಚ್ಚುವಿಕೆ ಮತ್ತು ಅದರ ಹತ್ಯೆ ಜಾಲ ಮಂಡ್ಯದಲ್ಲೇ ಪತ್ತೆಯಾಗಿದೆ.

Also Read: ಭ್ರೂಣ ಹತ್ಯೆ ಕಿಂಗ್ ಪಿನ್ ಆರೋಪಿ ವೈದ್ಯ ಕೊಡಗಿನಲ್ಲಿ ಸಾವು: ಸೂಸೈಡ್ ಮಾಡಿಕೊಂಡ್ರಾ ಡಾಕ್ಟರ್?

ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ಕಳೆದ ವರ್ಷ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿತ್ತು. ಮಂಡ್ಯದಲ್ಲಿ ಆಲೆಮನೆಯಲ್ಲಿ ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ಕರಾಳ ದಂಧೆ ಬಯಲಾಗಿತ್ತು. ಆಲೆಮನೆ ಮಾತ್ರವಲ್ಲದೆ ಸ್ಕ್ಯಾನಿಂಗ್ ಸೆಂಟರ್‌ಗಳಲ್ಲೂ ಭ್ರೂಣಲಿಂಗ ಪತ್ತೆ ಹಚ್ಚುವ ಕೃತ್ಯ ನಡೆಯುತ್ತಿತ್ತಾ ಎಂಬ ಅನುಮಾನ ಅಧಿಕಾರಿಗಳಿಗೆ ವ್ಯಕ್ತವಾಗಿದೆ. ತಪಾಸಣೆ ವೇಳೆ ಅಂಥ ಅನುಮಾನಾಸ್ಪದ ಚಟುವಟಿಕೆಗಳು ಕಂಡುಬಂದಿದ್ದವು.

ರಾಜ್ಯದ ಇನ್ನಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 10:35 am, Sat, 11 May 24

ಸೂರ್ಯ ಮಿಥುನ ರಾಶಿಯಲ್ಲಿ, ಇಂದು ಯಾರಿಗೆಲ್ಲಾ ಶುಭ ದಿನ ತಿಳಿಯಿರಿ
ಸೂರ್ಯ ಮಿಥುನ ರಾಶಿಯಲ್ಲಿ, ಇಂದು ಯಾರಿಗೆಲ್ಲಾ ಶುಭ ದಿನ ತಿಳಿಯಿರಿ
ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ