ಪಾಂಡವಪುರದಲ್ಲಿ ಭ್ರೂಣ ಹತ್ಯೆ ಕೇಸ್​ಗೆ ಆಘಾತಕಾರಿ ಟ್ವಿಸ್ಟ್​: ಮಂಡ್ಯ ಆಲೆಮನೆ ಆರೋಪಿ ಹಳೆ ಚಾಳಿ ಬಿಟ್ಟಿಲ್ಲ!

Pandavapura Fetus Killing: ಪಾಂಡವಪುರ ಸರ್ಕಾರಿ ಹೆಲ್ತ್​​ ಕ್ವಾರ್ಟರ್ಸ್​ನಲ್ಲಿ ನಡೆಯುತ್ತಿದ್ದ ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಮೇ 5ರಂದು ಬೆಳಕಿಗೆ ಬಂದಿತ್ತು. ಪ್ರಕರಣ ಸಂಬಂಧ, ಹಳೆಯ ಆರೋಪಿ ನವೀನ್ ಕುಮಾರನನ್ನು ಪೊಲೀಸರು ತಕ್ಷಣ ಬಂಧಿಸಿದ್ದರು.

ಪಾಂಡವಪುರದಲ್ಲಿ ಭ್ರೂಣ ಹತ್ಯೆ ಕೇಸ್​ಗೆ ಆಘಾತಕಾರಿ ಟ್ವಿಸ್ಟ್​: ಮಂಡ್ಯ ಆಲೆಮನೆ ಆರೋಪಿ ಹಳೆ ಚಾಳಿ ಬಿಟ್ಟಿಲ್ಲ!
ಪಾಂಡವಪುರದಲ್ಲಿ ಭ್ರೂಣ ಹತ್ಯೆ ಕೇಸ್​ಗೆ ಆಘಾತಕಾರಿ ಟ್ವಿಸ್ಟ್​: ಮಂಡ್ಯ ಆಲೆಮನೆ ಆರೋಪಿ ಹಳೆ ಚಾಳಿ ಬಿಟ್ಟಿಲ್ಲ!
Edited By: ಸಾಧು ಶ್ರೀನಾಥ್​

Updated on: May 11, 2024 | 10:56 AM

ಮಂಡ್ಯ: ಪಾಂಡವಪುರದಲ್ಲಿ ಭ್ರೂಣ ಹತ್ಯೆ ಕೇಸ್​ಗೆ (Fetus Killing) ಬಿಗ್ ಟ್ವಿಸ್ಟ್​ ಸಿಕ್ಕಿದೆ. ಆಘಾತಕಾರಿ ಮಾಹಿತಿಯೆಂದರೆ ಈ ಪ್ರಕರಣದಲ್ಲೂ ಮಂಡ್ಯದ ಆಲೆಮನೆ ಕೇಸ್​​​​ ಆರೋಪಿಯೇ ಕಿಂಗ್​ಪಿನ್ ಆಗಿದ್ದಾನೆ. ಇದು ಕರಾಳ ದಂಧೆಯ ಜಾಡು ಹಿಡಿದು ಹೊರಟ ಪೊಲೀಸರಿಗೇ ಬಿಗ್ ಶಾಕ್ ನೀಡಿದೆ. ಮಂಡ್ಯ ತಾಲೂಕಿನ ಹಾಡ್ಯ ಗ್ರಾಮದ ಆಲೆಮನೆಯಲ್ಲಿ ಭ್ರೂಣ ಹತ್ಯೆ ಕೇಸ್ (Sex determination) ನಲ್ಲಿ ಕಿಂಗ್​ಪಿನ್ ಎಂದು ಗುರುತಿಸಲಾಗಿದ್ದ ನವೀನ್ ಕುಮಾರ್ ಆಗ ಜೈಲು ಪಾಲಾಗಿದ್ದ. ಮತ್ತು ಪ್ರಕರಣದಲ್ಲಿ ಈಗಾಗಲೇ ಜೈಲು ಸೇರಿ ಬೇಲ್​ ಮೇಲೆ ಹೊರಬಂದಿದ್ದ. ಜೈಲು ಸೇರಿದ್ದರೂ ಬುದ್ಧಿ ಕಲಿಯದೆ ನವೀನ್ ಹಳೆ ಚಾಳಿ ಮುಂದುವರಿಸಿದ್ದ. ಅಂದಹಾಗೆ ನವೀನ್ ಕುಮಾರ್​​, ಪಾಂಡವಪುರ (Pandavapura, Mandya) ತಾಲೂಕಿನ ಸುಂಕಾತಣ್ಣೂರು ನಿವಾಸಿ.

ಪಾಂಡವಪುರ ಸರ್ಕಾರಿ ಹೆಲ್ತ್​​ ಕ್ವಾರ್ಟರ್ಸ್​ನಲ್ಲಿ ನಡೆಯುತ್ತಿದ್ದ ಹೆಣ್ಣು ಭ್ರೂಣ ಹತ್ಯೆ (Fetus gender detection) ಪ್ರಕರಣ ಮೇ 5ರಂದು ಬೆಳಕಿಗೆ ಬಂದಿತ್ತು. ಪ್ರಕರಣ ಸಂಬಂಧ ಆರೋಪಿ ನವೀನ್ ಕುಮಾರನನ್ನು ಪೊಲೀಸರು ತಕ್ಷಣ ಬಂಧಿಸಿದ್ದರು.

Also Read: ಮಂಡ್ಯ ಭ್ರೂಣಲಿಂಗ ಪತ್ತೆ, ಹತ್ಯೆ ಪ್ರಕರಣ: ಮಾಹಿತಿ ಇದ್ದರೂ ನಿರ್ಲಕ್ಷ್ಯ ಮಾಡಿದರೇ ಅಧಿಕಾರಿಗಳು?

ಬೇಲ್ ಮೇಲೆ ಹೊರಬಂದು ಅಮಾಯಕನಂತೆ ಓಡಾಡಿಕೊಂಡಿದ್ದ ನವೀನ ಹೆಣ್ಣು ಭ್ರೂಣಗಳನ್ನು ಹತ್ಯೆ ಮಾಡುವ ಹಳೆಯ ಚಾಳಿಯನ್ನು ಮುಂದುವರೆಸಿದ್ದ. ಆತನ ಖತರ್ನಾಕ್ ಗ್ಯಾಂಗ್ ಒಂಟಿ ಮನೆಯೊಂದರಲ್ಲಿ ಗರ್ಭಿಣಿಯರ ಸ್ಕ್ಯಾನಿಂಗ್ ನಡೆಸುತ್ತಿತ್ತು. ಪ್ರಕರಣದಲ್ಲಿ ವೈದ್ಯರು, ಅಧಿಕಾರಿಗಳು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಮಂಡ್ಯ ಖಾಕಿ ಪಡೆ ಪ್ರಕರಣ ಬೇಧಿಸಲು ಮುಂದಾಗಿದೆ. ಕೇಸ್ ನಲ್ಲಿ ಮತ್ತಷ್ಟು ಮಂದಿ ಬಂಧಿಸುವ‌ ಸಾಧ್ಯತೆಯಿದೆ.

ಕಳೆದ ವರ್ಷ ಡಿಸೆಂಬರ್​ ತಿಂಗಳಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಮಂಡ್ಯ ಜಿಲ್ಲೆಯಲ್ಲಿ ಅತಿದೊಡ್ಡ ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ಜಾಲವನ್ನು ಭೇದಿಸಿದ್ದರು. ಇದು ಜನಮನದಿಂದ ಮಾಸುವ ಮುನ್ನವೇ ಇದೀಗ ಮತ್ತೊಂದು ಭ್ರೂಣಲಿಂಗ ಪತ್ತೆಹಚ್ಚುವಿಕೆ ಮತ್ತು ಅದರ ಹತ್ಯೆ ಜಾಲ ಮಂಡ್ಯದಲ್ಲೇ ಪತ್ತೆಯಾಗಿದೆ.

Also Read: ಭ್ರೂಣ ಹತ್ಯೆ ಕಿಂಗ್ ಪಿನ್ ಆರೋಪಿ ವೈದ್ಯ ಕೊಡಗಿನಲ್ಲಿ ಸಾವು: ಸೂಸೈಡ್ ಮಾಡಿಕೊಂಡ್ರಾ ಡಾಕ್ಟರ್?

ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ಕಳೆದ ವರ್ಷ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿತ್ತು. ಮಂಡ್ಯದಲ್ಲಿ ಆಲೆಮನೆಯಲ್ಲಿ ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ಕರಾಳ ದಂಧೆ ಬಯಲಾಗಿತ್ತು. ಆಲೆಮನೆ ಮಾತ್ರವಲ್ಲದೆ ಸ್ಕ್ಯಾನಿಂಗ್ ಸೆಂಟರ್‌ಗಳಲ್ಲೂ ಭ್ರೂಣಲಿಂಗ ಪತ್ತೆ ಹಚ್ಚುವ ಕೃತ್ಯ ನಡೆಯುತ್ತಿತ್ತಾ ಎಂಬ ಅನುಮಾನ ಅಧಿಕಾರಿಗಳಿಗೆ ವ್ಯಕ್ತವಾಗಿದೆ. ತಪಾಸಣೆ ವೇಳೆ ಅಂಥ ಅನುಮಾನಾಸ್ಪದ ಚಟುವಟಿಕೆಗಳು ಕಂಡುಬಂದಿದ್ದವು.

ರಾಜ್ಯದ ಇನ್ನಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 10:35 am, Sat, 11 May 24

ಪ್ರಶಾಂತ್​ ಬಿ.

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
Follow Us