AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲ ಕೆಟ್ಟೋಯ್ತು! ಪೋಷಕರಿಗೆ ಕಂಪ್ಲೆಂಟ್ ಮಾಡಿದ್ದಕ್ಕೆ ಉಪನ್ಯಾಸಕರಿಗೆ ಮಚ್ಚು ತೋರಿಸಿದ ವಿದ್ಯಾರ್ಥಿ

Mandya News: ತರಗತಿ ಸರಿಯಾಗಿ ಬರುತ್ತಿಲ್ಲವೆಂದು ಪೋಷಕರಿಗೆ ದೂರು ನೀಡಿದ್ದಕ್ಕೆ ವಿದ್ಯಾರ್ಥಿಯೋರ್ವ ಉಪನ್ಯಾಸಕರಿಗೆ ಮಚ್ಚು ತೋರಿಸಿ ಎಚ್ಚರಿಕೆ ನೀಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.

ಕಾಲ ಕೆಟ್ಟೋಯ್ತು! ಪೋಷಕರಿಗೆ ಕಂಪ್ಲೆಂಟ್ ಮಾಡಿದ್ದಕ್ಕೆ ಉಪನ್ಯಾಸಕರಿಗೆ ಮಚ್ಚು ತೋರಿಸಿದ ವಿದ್ಯಾರ್ಥಿ
ಉಪನ್ಯಾಸಕರಿಗೆ ಲಾಂಗ್ ತೋರಿಸಿದ ವಿದ್ಯಾರ್ಥಿ
ಪ್ರಶಾಂತ್​ ಬಿ.
| Edited By: |

Updated on: Aug 25, 2023 | 8:52 AM

Share

ಮಂಡ್ಯ, (ಆಗಸ್ಟ್ 25): ಇತ್ತೀಚಿನ ದಿನಗಳಲ್ಲಿ ಶಿಕ್ಷಕರಾದವರು(Teachers) ವಿದ್ಯಾರ್ಥಿಗಳಿಗೆ (Students) ಹೊಡೆಯುವಂತಿಲ್ಲ. ಬುದ್ಧಿ ಮಾತಿಗೆ ನಾಲ್ಕು ಮಾತು ಬೈಯುವಂತಿಲ್ಲ. ಕಾಲ ಬದಲಾದಂತೆ ಶಿಕ್ಷಣದ ವ್ಯವಸ್ಥೆಯಲ್ಲೂ ಬದಲಾಗಿದೆ. ವಿದ್ಯಾರ್ಥಿ ಬಗ್ಗೆ ಆತನ ಪೋಷಕರಿಗೆ ದೂರು ನೀಡಿದ್ರೆ ಶಿಕ್ಷಕರಿಗೆ ಅವಾಜ್​ ಹಾಕುವ ಕಾಲ ಇದು. ಹೀಗಾಗಿ ವಿದ್ಯಾರ್ಥಿಗಳು ತಪ್ಪು ಮಾಡಿದರೂ ಹೊಡೆದು ಬುದ್ಧಿ ಹೇಳುವುದಕ್ಕೂ ಶಿಕ್ಷಕರು ಹೆದರು ಸ್ಥಿತಿ ಬಂದಿದೆ. ಅದೇ ರೀತಿ ಉಪನ್ಯಾಸಕರೊಬ್ಬರು ಪೋಷಕರಿಗೆ ಕಂಪ್ಲೆಂಟ್​ ಹೇಳಿದಕ್ಕೆ ವಿದ್ಯಾರ್ಥಿಯೋರ್ವ ಮಚ್ಚು ತೋರಿಸಿ ಎಚ್ಚರಿಸಿರುವ ಘಟನೆ ಮಂಡ್ಯದಲ್ಲಿ(Mandya) ಬೆಳಕಿಗೆ ಬಂದಿದೆ. ತರಗತಿಗೆ ಬರುತ್ತಿಲ್ಲವೆಂದು ಪೋಷಕರಿಗೆ ತನ್ನ ಬಗ್ಗೆ ಹೆತ್ತವರಿಗೆ ದೂರು ನೀಡಿದ್ದಕ್ಕೆ ಆಕ್ರೋಶಗೊಂಡ ವಿದ್ಯಾರ್ಥಿ, ಉಪನ್ಯಾಸಕರಿಗೆ ಲಾಂಗ್ ತೋರಿಸಿ ವಿದ್ಯಾರ್ಥಿ ದರ್ಪ ಮೆರೆದಿದ್ದಾನೆ, ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬಿ.ಜಿ.ನಗರದ ಡಿಪ್ಲೊಮೋ ಕಾಲೇಜಿನಲ್ಲಿ ಈ ಘಟನೆ ನಡೆದಿದೆ.

ತರಗತಿಗೆ ಬರುತ್ತಿಲ್ಲವೆಂದು ಪೋಷಕರಿಗೆ ತನ್ನ ಬಗ್ಗೆ ಹೆತ್ತವರಿಗೆ ದೂರು ನೀಡಿದ್ದಕ್ಕೆ ಆಕ್ರೋಶಗೊಂಡ ವಿದ್ಯಾರ್ಥಿ, ಉಪನ್ಯಾಸಕರಿಗೆ ಲಾಂಗ್ ತೋರಿಸಿ ವಿದ್ಯಾರ್ಥಿ ದರ್ಪ ಮೆರೆದಿದ್ದಾನೆ, ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬಿ.ಜಿ.ನಗರದ ಡಿಪ್ಲೊಮೋ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಉದಯ್ ಗೌಡ (18) ಎನ್ನುವ ವಿದ್ಯಾರ್ಥಿ  ನಾಗಮಂಗಲ ತಾಲೂಕಿನ ಬಿ.ಜಿ.ನಗರದ ಡಿಪ್ಲೊಮೋ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ಈತ ತರಗತಿಗೆ ಬರುತ್ತಿರಲ್ಲವಂತೆ. ಹೀಗಾಗಿ ಉಪನ್ಯಾಸಕ ಚಂದನ್, ಉದಯ್​ ಕ್ಲಾಸ್​ಗೆ ಸರಿಯಾಗಿ ಬರುತ್ತಿಲ್ಲವೆಂದು ಆತನ ಪೋಷಕರಿಗೆ ಹೇಳಿದ್ದಾರೆ.

ಇದನ್ನೂ ಓದಿ: ಮಂಡ್ಯ: ಸ್ನೇಹಿತರ ದಿನವೇ ಕುಚಿಕು ಗೆಳಯನ ಹತ್ಯೆಗೈದು ಪರಾರಿಯಾಗಿದ್ದ ಆರೋಪಿಗಳ ಬಂಧನ

ಬಳಿಕ ಪೋಷಕರು ಮನೆಯಲ್ಲಿ ಉದಯ್​​ಗೆ ಈ ಬಗ್ಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಇದರಿಂದ ರೊಚ್ಚಿಗೆದ್ದ ಉದಯ್​ ಮಚ್ಚು ಹಿಡಿದು ಕಾಲೇಜಿಗೆ ಬಂದು ಉಪನ್ಯಾಸಕ ಚಂದನ್​ ಅವರಿಗೆ  ಬೆದರಿಕೆ ಹಾಕಿದ್ದಾನೆ. ನನ್ನ ಬಗ್ಗೆ ನೀವು ನಮ್​ ಮನೆಯವರಿಗೆ ಹೇಗೆ ಹೇಳಿದ್ರಿ ಎಂದು ಪ್ರಶ್ನಿಸಿದ್ದು, ಇದೀಗ ಆ ವಿಡಿಯೋ ವೈರಲ್ ಆಗಿದೆ.

ಕುಣಿಗಲ್ ತಾಲೂಕಿನ ಅವರೇಗೆರೆ ಗ್ರಾಮದ ಉದಯ್ ಗೌಡ , ಕಾಲೇಜಿಗೆ ಲಾಂಗ್ ತಂದು ಉಪನ್ಯಾಸಕ ಚಂದನ್ ಅವರಿಗೆ ಬೆದರಿಕೆ ಹಾಕಿದ್ದಾನೆ. ಈ ದೃಶ್ಯ ವಿದ್ಯಾರ್ಥಿಗಳ ಮೊಬೈಲ್ ನಲ್ಲಿ ಸೆರೆಯಾಗಿದ್ದು, ಈ ಬಗ್ಗೆ ಉಪನ್ಯಾಸಕ ಬೆಳ್ಳೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬಳಿಕ ತನ್ನ ತಪ್ಪಿನ ಅರಿವಾಗಿ ವಿದ್ಯಾರ್ಥಿ ಉದಯ್​ ಗೌಡ, ಪೋಷಕರೊಂದಿಗೆ ಬಂದು ಉಪನ್ಯಾಸಕ ಉದಯ್​ ಗೌಡ ಬಳಿ ಕ್ಷಮೆಯಾಚಿಸಿದ್ದಾನೆ.

ನಿಮ್ಮ ಜಿಲ್ಲೆಗಳ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!