ಕಾಲ ಕೆಟ್ಟೋಯ್ತು! ಪೋಷಕರಿಗೆ ಕಂಪ್ಲೆಂಟ್ ಮಾಡಿದ್ದಕ್ಕೆ ಉಪನ್ಯಾಸಕರಿಗೆ ಮಚ್ಚು ತೋರಿಸಿದ ವಿದ್ಯಾರ್ಥಿ

Mandya News: ತರಗತಿ ಸರಿಯಾಗಿ ಬರುತ್ತಿಲ್ಲವೆಂದು ಪೋಷಕರಿಗೆ ದೂರು ನೀಡಿದ್ದಕ್ಕೆ ವಿದ್ಯಾರ್ಥಿಯೋರ್ವ ಉಪನ್ಯಾಸಕರಿಗೆ ಮಚ್ಚು ತೋರಿಸಿ ಎಚ್ಚರಿಕೆ ನೀಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.

ಕಾಲ ಕೆಟ್ಟೋಯ್ತು! ಪೋಷಕರಿಗೆ ಕಂಪ್ಲೆಂಟ್ ಮಾಡಿದ್ದಕ್ಕೆ ಉಪನ್ಯಾಸಕರಿಗೆ ಮಚ್ಚು ತೋರಿಸಿದ ವಿದ್ಯಾರ್ಥಿ
ಉಪನ್ಯಾಸಕರಿಗೆ ಲಾಂಗ್ ತೋರಿಸಿದ ವಿದ್ಯಾರ್ಥಿ
Edited By:

Updated on: Aug 25, 2023 | 8:52 AM

ಮಂಡ್ಯ, (ಆಗಸ್ಟ್ 25): ಇತ್ತೀಚಿನ ದಿನಗಳಲ್ಲಿ ಶಿಕ್ಷಕರಾದವರು(Teachers) ವಿದ್ಯಾರ್ಥಿಗಳಿಗೆ (Students) ಹೊಡೆಯುವಂತಿಲ್ಲ. ಬುದ್ಧಿ ಮಾತಿಗೆ ನಾಲ್ಕು ಮಾತು ಬೈಯುವಂತಿಲ್ಲ. ಕಾಲ ಬದಲಾದಂತೆ ಶಿಕ್ಷಣದ ವ್ಯವಸ್ಥೆಯಲ್ಲೂ ಬದಲಾಗಿದೆ. ವಿದ್ಯಾರ್ಥಿ ಬಗ್ಗೆ ಆತನ ಪೋಷಕರಿಗೆ ದೂರು ನೀಡಿದ್ರೆ ಶಿಕ್ಷಕರಿಗೆ ಅವಾಜ್​ ಹಾಕುವ ಕಾಲ ಇದು. ಹೀಗಾಗಿ ವಿದ್ಯಾರ್ಥಿಗಳು ತಪ್ಪು ಮಾಡಿದರೂ ಹೊಡೆದು ಬುದ್ಧಿ ಹೇಳುವುದಕ್ಕೂ ಶಿಕ್ಷಕರು ಹೆದರು ಸ್ಥಿತಿ ಬಂದಿದೆ. ಅದೇ ರೀತಿ ಉಪನ್ಯಾಸಕರೊಬ್ಬರು ಪೋಷಕರಿಗೆ ಕಂಪ್ಲೆಂಟ್​ ಹೇಳಿದಕ್ಕೆ ವಿದ್ಯಾರ್ಥಿಯೋರ್ವ ಮಚ್ಚು ತೋರಿಸಿ ಎಚ್ಚರಿಸಿರುವ ಘಟನೆ ಮಂಡ್ಯದಲ್ಲಿ(Mandya) ಬೆಳಕಿಗೆ ಬಂದಿದೆ. ತರಗತಿಗೆ ಬರುತ್ತಿಲ್ಲವೆಂದು ಪೋಷಕರಿಗೆ ತನ್ನ ಬಗ್ಗೆ ಹೆತ್ತವರಿಗೆ ದೂರು ನೀಡಿದ್ದಕ್ಕೆ ಆಕ್ರೋಶಗೊಂಡ ವಿದ್ಯಾರ್ಥಿ, ಉಪನ್ಯಾಸಕರಿಗೆ ಲಾಂಗ್ ತೋರಿಸಿ ವಿದ್ಯಾರ್ಥಿ ದರ್ಪ ಮೆರೆದಿದ್ದಾನೆ, ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬಿ.ಜಿ.ನಗರದ ಡಿಪ್ಲೊಮೋ ಕಾಲೇಜಿನಲ್ಲಿ ಈ ಘಟನೆ ನಡೆದಿದೆ.

ತರಗತಿಗೆ ಬರುತ್ತಿಲ್ಲವೆಂದು ಪೋಷಕರಿಗೆ ತನ್ನ ಬಗ್ಗೆ ಹೆತ್ತವರಿಗೆ ದೂರು ನೀಡಿದ್ದಕ್ಕೆ ಆಕ್ರೋಶಗೊಂಡ ವಿದ್ಯಾರ್ಥಿ, ಉಪನ್ಯಾಸಕರಿಗೆ ಲಾಂಗ್ ತೋರಿಸಿ ವಿದ್ಯಾರ್ಥಿ ದರ್ಪ ಮೆರೆದಿದ್ದಾನೆ, ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬಿ.ಜಿ.ನಗರದ ಡಿಪ್ಲೊಮೋ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಉದಯ್ ಗೌಡ (18) ಎನ್ನುವ ವಿದ್ಯಾರ್ಥಿ  ನಾಗಮಂಗಲ ತಾಲೂಕಿನ ಬಿ.ಜಿ.ನಗರದ ಡಿಪ್ಲೊಮೋ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ಈತ ತರಗತಿಗೆ ಬರುತ್ತಿರಲ್ಲವಂತೆ. ಹೀಗಾಗಿ ಉಪನ್ಯಾಸಕ ಚಂದನ್, ಉದಯ್​ ಕ್ಲಾಸ್​ಗೆ ಸರಿಯಾಗಿ ಬರುತ್ತಿಲ್ಲವೆಂದು ಆತನ ಪೋಷಕರಿಗೆ ಹೇಳಿದ್ದಾರೆ.

ಇದನ್ನೂ ಓದಿ: ಮಂಡ್ಯ: ಸ್ನೇಹಿತರ ದಿನವೇ ಕುಚಿಕು ಗೆಳಯನ ಹತ್ಯೆಗೈದು ಪರಾರಿಯಾಗಿದ್ದ ಆರೋಪಿಗಳ ಬಂಧನ

ಬಳಿಕ ಪೋಷಕರು ಮನೆಯಲ್ಲಿ ಉದಯ್​​ಗೆ ಈ ಬಗ್ಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಇದರಿಂದ ರೊಚ್ಚಿಗೆದ್ದ ಉದಯ್​ ಮಚ್ಚು ಹಿಡಿದು ಕಾಲೇಜಿಗೆ ಬಂದು ಉಪನ್ಯಾಸಕ ಚಂದನ್​ ಅವರಿಗೆ  ಬೆದರಿಕೆ ಹಾಕಿದ್ದಾನೆ. ನನ್ನ ಬಗ್ಗೆ ನೀವು ನಮ್​ ಮನೆಯವರಿಗೆ ಹೇಗೆ ಹೇಳಿದ್ರಿ ಎಂದು ಪ್ರಶ್ನಿಸಿದ್ದು, ಇದೀಗ ಆ ವಿಡಿಯೋ ವೈರಲ್ ಆಗಿದೆ.

ಕುಣಿಗಲ್ ತಾಲೂಕಿನ ಅವರೇಗೆರೆ ಗ್ರಾಮದ ಉದಯ್ ಗೌಡ , ಕಾಲೇಜಿಗೆ ಲಾಂಗ್ ತಂದು ಉಪನ್ಯಾಸಕ ಚಂದನ್ ಅವರಿಗೆ ಬೆದರಿಕೆ ಹಾಕಿದ್ದಾನೆ. ಈ ದೃಶ್ಯ ವಿದ್ಯಾರ್ಥಿಗಳ ಮೊಬೈಲ್ ನಲ್ಲಿ ಸೆರೆಯಾಗಿದ್ದು, ಈ ಬಗ್ಗೆ ಉಪನ್ಯಾಸಕ ಬೆಳ್ಳೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬಳಿಕ ತನ್ನ ತಪ್ಪಿನ ಅರಿವಾಗಿ ವಿದ್ಯಾರ್ಥಿ ಉದಯ್​ ಗೌಡ, ಪೋಷಕರೊಂದಿಗೆ ಬಂದು ಉಪನ್ಯಾಸಕ ಉದಯ್​ ಗೌಡ ಬಳಿ ಕ್ಷಮೆಯಾಚಿಸಿದ್ದಾನೆ.

ನಿಮ್ಮ ಜಿಲ್ಲೆಗಳ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
Follow Us