Mandya News: ಬೈಕ್​ನಿಂದ ಬಿದ್ದು ಶಿಕ್ಷಕ ಸಾವು; ಹತ್ತಿರವಿದ್ದರೂ ಸಹಾಯಕ್ಕೆ ಬಾರದೇ ಮಾನವೀಯತೆ ಮರೆತ ಜನ

ಬೈಕ್​ನಿಂದ ಅಯಾತಪ್ಪಿ ಬಿದ್ದು ಶಿಕ್ಷಕ ಸಾವನ್ನಪ್ಪಿರುವ ಘಟನೆ ತಾಲೂಕಿನ ಕೆರೆಗೋಡು ಗ್ರಾಮದ ಬಳಿ ನಡೆದಿದೆ. ರವಿ(45) ಮೃತ ಶಿಕ್ಷಕ.

Mandya News: ಬೈಕ್​ನಿಂದ ಬಿದ್ದು ಶಿಕ್ಷಕ ಸಾವು; ಹತ್ತಿರವಿದ್ದರೂ ಸಹಾಯಕ್ಕೆ ಬಾರದೇ ಮಾನವೀಯತೆ ಮರೆತ ಜನ
ಮೃತ ಶಿಕ್ಷಕ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 08, 2023 | 9:03 AM

ಮಂಡ್ಯ: ಬೈಕ್​ನಿಂದ ಅಯಾತಪ್ಪಿ ಬಿದ್ದು ಶಿಕ್ಷಕ(Teacher) ಸಾವನ್ನಪ್ಪಿರುವ ಘಟನೆ ತಾಲೂಕಿನ ಕೆರೆಗೋಡು ಗ್ರಾಮದ ಬಳಿ ನಡೆದಿದೆ. ರವಿ(45) ಮೃತ ಶಿಕ್ಷಕ. ಮಂಡ್ಯ(Mandya) ತಾಲೂಕಿನ ಹಲ್ಲೇಗೆರೆ ಗ್ರಾಮದ ಪರಿಣಿತ ‌ವಿದ್ಯಾಸಂಸ್ಥೆಯ ಶಿಕ್ಷಕನಾಗಿದ್ದ ಅವರು ನಿನ್ನೆ(ಜು.7) ಬೆಳಗ್ಗೆ ಶಾಲೆಗೆ ತೆರಳುವ ವೇಳೆ ಕೆರೆಗೋಡು ಗ್ರಾಮದ ಬಳಿ ಅಪಘಾತ ಸಂಭವಿಸಿತ್ತು. ಇನ್ನು ಅಪಘಾತದ ನಂತರ ಕೆಲ ಕಾಲ ಶಿಕ್ಷಕ ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದ. ಯಾರಾದರೂ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಎಂದು ಬೇಡಿಕೊಳ್ಳುತ್ತಿದ್ದ. ಅದನ್ನ ನೋಡಿದರೂ ಯಾರೊಬ್ಬರು ಕೂಡ ಆತನನ್ನ ಆಸ್ಪತ್ರೆಗೆ ಸಾಗಿಸಲು ಮುಂದೆ ಬರದೇ ಅಮಾನವೀಯತೆ ತೋರಿದ್ದಾರೆ.

ಆಸ್ಪತ್ರೆಗೆ ರವಾನೆ ಮಾಡಲು ಹಿಂದೇಟು

ಇನ್ನು ಅಪಘಾತದಲ್ಲಿ ಶಿಕ್ಷಕ ಗಂಭೀರವಾಗಿ ಗಾಯಗೊಂಡು ನರಳಾಡುತ್ತಿದ್ದ. ದಯವಿಟ್ಟು ಯಾರಾದರೂ ಆಸ್ಪತ್ರೆಗೆ ಸೇರಿಸಿ ಎಂದು ಅಂಗಲಾಚಿದರೂ ಸ್ಥಳದಲ್ಲಿ ನೆರೆದಿದ್ದ ಜನರು ಮಾತ್ರ ಕರಗಲಿಲ್ಲ. ಆಸ್ಪತ್ರೆಗೆ ಸಾಗಿಸಲು ಹಿಂದೇಟು ಹಾಕಿದ್ದಾರೆ. ತೀವ್ರವಾಗಿ ಗಾಯಗೊಂಡ ಕಾರಣ, ರಕ್ತಸ್ರಾವವಾಗಿ ಸಾವನ್ನಪ್ಪಿದ್ದಾರೆ. ಇನ್ನು ಈ ಘಟನೆ ಕೆರೆಗೋಡು ಪೊಲೀಸ್ ಠಾಣೆ ಸಮೀಪವೇ ನಡೆದಿದ್ದರೂ, ಸ್ಥಳಕ್ಕೆ ಪೊಲೀಸರು ಬರುವುದು ಕೂಡ ತಡವಾಗಿತ್ತು. ಆಸ್ಪತ್ರೆಗೆ ಸಾಗಿಸಿದ್ರೆ, ಜೀವ ಉಳಿಯುವ ಸಾಧ್ಯತೆಯಿದ್ದು, ಜನರ ಅಮಾನವೀಯತೆಯಿಂದ ಓರ್ವ ಶಿಕ್ಷಕ ಮೃತನಾಗಿದ್ದಾನೆ.

ಇದನ್ನೂ ಓದಿ:ಕಣ್ಣೆದುರೇ ಅಪಘಾತವಾದರೂ ಹೊಯ್ಸಳ ನಿಲ್ಲಿಸಿದೆ ಹೋದ ಪೊಲೀಸ್ರು, ಒದ್ದಾಡಿ ಪ್ರಾಣ ಬಿಟ್ಟ ಆಟೋ ಚಾಲಕ

ಮುಂದುವರಿದ ಕಾಡಾನೆಗಳ ದಾಂಧಲೆ; ಮನೆಯ ಕಾಂಪೌಂಡ್ ಪುಡಿ ಪುಡಿ

ಹಾಸನ: ಜಿಲ್ಲೆಯಲ್ಲಿ ಕಾಡಾನೆಗಳ ದಾಂಧಲೆ ಮುಂದುವರಿದಿದ್ದು, ಕಾಡಾನೆ ದಾಳಿಗೆ ಮನೆಯ ಕಾಂಪೌಂಡ್ ಪುಡಿ ಪುಡಿಯಾಗಿದೆ. ಜೊತೆಗೆ ಬೇಲೂರು ತಾಲ್ಲೂಕಿನ ಲಕ್ಕುಂದ ಗ್ರಾಮದಲ್ಲಿ ಕಾಡಾನೆಗಳ ಓಡಾಟದಿಂದ ಐದಾರು ವರ್ಷಗಳಿಂದ ಬೆಳೆದಿರುವ ಅಪಾರ ಪ್ರಮಾಣದ ಕಾಫಿ, ಬಾಳೆ ಬೆಳೆ ನಾಶವಾದ ಘಟನೆ ನಡೆದಿದೆ. ಮರಿಗಳೊಂದಿಗೆ ಗ್ರಾಮದ ಲಕ್ಷ್ಮಮ್ಮ ಎಂಬುವವರ ಕಾಫಿ ತೋಟದಲ್ಲಿ ಕಾಡಾನೆಗಳ ಹಿಂಡು ಬಿಡುಬಿಟ್ಟಿದೆ. ಕಾಡಾನೆಗಳ ಹಿಂಡು ಕಂಡು ಭಯಭೀತರಾಗಿರುವ ಗ್ರಾಮಸ್ಥರು, ಕಾಡಾನೆಗಳ ಹಿಂಡಿನ ದಾಳಿಯಿಂದ ಆಗಿರುವ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡುವಂತೆ ಜನರು ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಆಗಮಿಸಿ ಕಾಡಾನೆಗಳನ್ನು ಕಾಡಿಗಟ್ಟುವಂತೆ ಗ್ರಾಮಸ್ಥರು ಮನವಿ ಮಾಡಿದ್ದಾರೆ.

ಇನ್ನಷ್ಟು ಅಪಘಾತ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ