AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆದಿಚುಂಚನಗಿರಿ ಗಂಗಾಧರೇಶ್ವರಸ್ವಾಮಿ ರಥೋತ್ಸವ: ಸಾವಿರಾರು ಜನರು ಭಾಗಿ

ಈ ಬಾರಿ ನಿರ್ಬಂಧಗಳನ್ನು ಸಡಿಲಿಸಿದ್ದರಿಂದ ಅದ್ಧೂರಿಯಾಗಿ ನಡೆಯಿತು. ರಥೋತ್ಸವದ ಪ್ರಯುಕ್ತ ಆದಿಚುಂಚನಗಿರಿ ಕ್ಷೇತ್ರವು ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿದೆ.

ಆದಿಚುಂಚನಗಿರಿ ಗಂಗಾಧರೇಶ್ವರಸ್ವಾಮಿ ರಥೋತ್ಸವ: ಸಾವಿರಾರು ಜನರು ಭಾಗಿ
ಆದಿಚುಂಚನಗಿರಿ ರಥೋತ್ಸವವನ್ನು ಜನರು ಕಣ್ತುಂಬಿಕೊಂಡರು
TV9 Web
| Edited By: |

Updated on:Mar 18, 2022 | 9:28 AM

Share

ಮಂಡ್ಯ: ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಕ್ಷೇತ್ರದಲ್ಲಿ ಶುಕ್ರವಾರ ಗಂಗಾಧರೇಶ್ವರಸ್ವಾಮಿ ಮಹಾರಥೋತ್ಸವ ಸಡಗರ, ಸಂಭ್ರಮದಿಂದ ನಡೆಯಿತು. ಮುಂಜಾನೆ 4.58ರ ಬ್ರಾಹ್ಮಿ ಮುಹೂರ್ತದಲ್ಲಿ ನಡೆದ ಮಹಾರಥೋತ್ಸವವನ್ನು ಸಾವಿರಾರು ಭಕ್ತರು ಕಣ್ತುಂಬಿಕೊಂಡರು. ಕಾಲಭೈರವೇಶ್ವರ, ಗಂಗಾಧರೇಶ್ವರನಿಗೆ ಭಕ್ತರು ಜಯಕಾರ ಮೊಳಗಿಸಿದರು. ನಿರ್ಮಲಾನಂದನಾಥ ಸ್ವಾಮೀಜಿಯನ್ನು ಭಕ್ತರು ಅಡ್ಡಪಲ್ಲಕ್ಕಿಯಲ್ಲಿ ಹೊತ್ತರು. ಕೊರೊನಾದಿಂದಾಗಿ ಕಳೆದ ಎರಡು ವರ್ಷಗಳಲ್ಲಿಯೂ ರಥೋತ್ಸವವನ್ನು ಸರಳವಾಗಿ ಆಚರಿಸಲಾಯಿತು. ಈ ಬಾರಿ ನಿರ್ಬಂಧಗಳನ್ನು ಸಡಿಲಿಸಿದ್ದರಿಂದ ಅದ್ಧೂರಿಯಾಗಿ ನಡೆಯಿತು. ರಥೋತ್ಸವದ ಪ್ರಯುಕ್ತ ಆದಿಚುಂಚನಗಿರಿ ಕ್ಷೇತ್ರವು ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿದೆ. ಸಂಜೆ 6 ಗಂಟೆಯ ನಂತರ ತಾಲ್ಲೂಕಿನ ನೂರಾರು ಗ್ರಾಮ ದೇವತೆಗಳ ಮೆರವಣಿಗೆ ಮೂಲಕ ಗಿರಿಪ್ರದಕ್ಷಿಣೆ ಮತ್ತು ಸಂಜೆ 7ಕ್ಕೆ ಸೋಮೇಶ್ವರ ಸ್ವಾಮಿ ಉತ್ಸವ ಜರುಗಲಿದೆ.

ನಾಳೆ (ಮಾರ್ಚ್ 19) ಬೆಳಿಗ್ಗೆ 9ಕ್ಕೆ ಧರ್ಮ ಧ್ವಜಾರೋಹಣ, 9.30ಕ್ಕೆ ಬಿಂದು ಸರೋವರದಲ್ಲಿ ಅವಭೃತ ಸ್ನಾನ, 10.30ಕ್ಕೆ ಸಭಾ ಕಾರ್ಯಕ್ರಮ ನಡೆಯುವುದರೊಂದಿಗೆ ರಥೋತ್ಸವದ ಕಾರ್ಯಕ್ರಮಗಳು ಮುಕ್ತಾಯವಾಗಲಿವೆ.

ಆದಿಚುಂಚನಗಿರಿಯಲ್ಲಿ ಮಾರ್ಚ್‌ 11ರಂದು ಬೆಳಿಗ್ಗೆ 8.30ಕ್ಕೆ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಧರ್ಮಧ್ವಜ ಸ್ಥಾಪನೆ ಮೂಲಕ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಿದ್ದರು. ನಾಂದಿ ಪೂಜೆ ಮತ್ತು ಯುವ ಸಮ್ಮೇಳನಗಳೂ ನಡೆದಿದ್ದವು. 12ರಂದು ಬೆಳಿಗ್ಗೆ 10.30ಕ್ಕೆ ಚುಂಚಾದ್ರಿ ಮಹಿಳಾ ಸಮಾವೇಶ ಮತ್ತು ರಾತ್ರಿ 7ಕ್ಕೆ ಚಂದ್ರಮೌಳೇಶ್ವರ ಸ್ವಾಮಿ ಉತ್ಸವ, 13ರಂದು ಬೆಳಿಗ್ಗೆ 10.30ಕ್ಕೆ ಸಂಗೀತೋತ್ಸವ, ರಾತ್ರಿ 7ಕ್ಕೆ ಮಲ್ಲೇಶ್ವರ ಸ್ವಾಮಿ ಉತ್ಸವ, 14ರಂದು ಬೆಳಿಗ್ಗೆ 10.30ಕ್ಕೆ ಒಕ್ಕಲಿಗರ ಸಂಘಗಳ ಪದಾಧಿಕಾರಿಗಳ ಸಮ್ಮಿಲನ ಕಾರ್ಯಕ್ರಮ, ರಾತ್ರಿ 7.30ಕ್ಕೆ ಸಿದ್ದೇಶ್ವರಸ್ವಾಮಿ ಉತ್ಸವ ಜರುಗಿತ್ತು.

15ರಂದು ಬೆಳಿಗ್ಗೆ 7.30ಕ್ಕೆ ಕಾಲಭೈರವೇಶ್ವರ ಸ್ವಾಮಿಗೆ ಸುವರ್ಣ ಕವಚಾಲಂಕಾರ ಪೂಜೆ ಮತ್ತು ಗಂಗಾಧರೇಶ್ವರ ಸ್ವಾಮಿಗೆ ರಜತ ನಾಗಾಭರಣ ಅಲಂಕಾರ ಪೂಜೆಗಳು ನಡೆದಿತ್ತು. ಉತ್ಸವದ ಅಂಗವಾಗಿ ನಡೆದ ಆದಿಚುಂಚನಗಿರಿ ಕೃಷಿ ಮತ್ತು ಕೈಗಾರಿಕಾ ವಸ್ತುಪ್ರದರ್ಶನದಲ್ಲಿ 200ಕ್ಕೂ ಹೆಚ್ಚು ಮಳಿಗೆಗಳನ್ನು ತೆರೆಯಲಾಗುತ್ತದೆ. ರಾತ್ರಿ 7ಕ್ಕೆ ಕಾಲಭೈರವೇಶ್ವರ ಸ್ವಾಮಿ ಹೂವಿನ ಪಲ್ಲಕ್ಕಿ ಉತ್ಸವ ಮತ್ತು ನಿರ್ಮಲಾನಂದನಾಥ ಸ್ವಾಮೀಜಿ ಅವರ ಮುತ್ತಿನ ಪಲ್ಲಕ್ಕಿ ಉತ್ಸವಗಳು ನಡೆದವು.

16ರಂದು ಬೆಳಿಗ್ಗೆ 9.30ಕ್ಕೆ ಸರಳ ಸಾಮೂಹಿಕ ವಿವಾಹ ನಡೆಯಿತು. ಅಂದು ಸುವರ್ಣ ಮಹೋತ್ಸವನ್ನು ಆಚರಿಸಿಕೊಂಡ ದಂಪತಿಗಳನ್ನು ಸನ್ಮಾನಿಸಲಾಯಿತು. ರಾತ್ರಿ 7ಕ್ಕೆ ಸ್ವಾಮೀಜಿ ಅವರ ಜ್ವಾಲಪೀಠಾರೋಹಣ ಮತ್ತು ಸಿದ್ಧ ಸಿಂಹಾಸನ ಪೂಜೆ, 9ಕ್ಕೆ ಚಂದ್ರ ಮಂಡಲೋತ್ಸವ ನಡೆದಿತ್ತು. 17ರಂದು ರಾತ್ರಿ 7.30ಕ್ಕೆ ಸರ್ವಧರ್ಮ ಸಮ್ಮೇಳನ, 8ಕ್ಕೆ ಕಾಲಭೈರವೇಶ್ವರ ಸ್ವಾಮಿ ತಿರುಗಣಿ ಉತ್ಸವ, 9ಕ್ಕೆ ಪುಷ್ಕರಣಿ ತೆಪ್ಪೋತ್ಸವ ಮತ್ತು 9.30ಕ್ಕೆ ನಾಟಕ ಪ್ರದರ್ಶನ ನಡೆಯಿತು.

ಇದನ್ನೂ ಓದಿ: 2 ವರ್ಷದ ಬಳಿಕ ಅದ್ಧೂರಿಯಾಗಿ ನಡೆದ ನಂಜನಗೂಡು ದೊಡ್ಡ ಜಾತ್ರೆ; ಪಂಚ ಮಹಾರಥೋತ್ಸವದಲ್ಲಿ ರಾರಾಜಿಸಿದ ಪುನೀತ್ ಭಾವಚಿತ್ರ

ಇದನ್ನೂ ಓದಿ: ಕಲ್ಪತರು ನಾಡಿನಲ್ಲಿ ಸಿದ್ಧಗಂಗಾ ಮಠದ ಜಾತ್ರೆ ಸಂಭ್ರಮ; ತರಹೇವಾರಿಯ 34 ಸಾವಿರ ತಂಬಿಟ್ಟು ತಯಾರಿ, ರಥೋತ್ಸವಕ್ಕೆ ಸಿದ್ಧತೆ

Published On - 9:26 am, Fri, 18 March 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?