AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

18 ವರ್ಷಗಳ ಅಜ್ಞಾತವಾಸದ ಬಳಿಕ ತಾಯಿ ಚಾಮುಂಡಿಗೆ ಮುಕ್ತಿ; ಜಾತಿ ಸಂಘರ್ಷದಿಂದ ನಿಂತಿದ್ದ ಪೂಜೆ ಪುನಸ್ಕಾರಗಳು ಆರಂಭ

ಕಳೆದ 18 ವರ್ಷದ ಹಿಂದೆ ಗ್ರಾಮದಲ್ಲಾದ ಇಬ್ಬರು ವ್ಯಕ್ತಿಗಳ ವೈಯಕ್ತಿಕ ದ್ವೇಷ ಜಾತಿ ವಿವಾದವಾಗಿ ಬದಲಾಯ್ತು. ದಲಿತರು ಹಾಗೂ ಸವರ್ಣೀಯರ ನಡುವಿನ ಗುದ್ದಾಟದಿಂದ ಈ ದೇವಾಲಯಕ್ಕೆ ಬೀಗ ಹಾಕಲಾಗಿತ್ತು.

18 ವರ್ಷಗಳ ಅಜ್ಞಾತವಾಸದ ಬಳಿಕ ತಾಯಿ ಚಾಮುಂಡಿಗೆ ಮುಕ್ತಿ; ಜಾತಿ ಸಂಘರ್ಷದಿಂದ ನಿಂತಿದ್ದ ಪೂಜೆ ಪುನಸ್ಕಾರಗಳು ಆರಂಭ
ಚಾಮುಂಡೇಶ್ವರಿ ದೇವಾಲಯ
TV9 Web
| Edited By: |

Updated on: Jul 06, 2022 | 3:30 PM

Share

ಮಂಡ್ಯ: 18 ವರ್ಷಗಳ ಅಜ್ಞಾತವಾಸದ ಬಳಿಕ ತಾಯಿ ಚಾಮುಂಡಿಗೆ ಮುಕ್ತಿ ಸಿಕ್ಕಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಜಕ್ಕನಹಳ್ಳಿಯಲ್ಲಿರುವ ಚಾಮುಂಡೇಶ್ವರಿ ದೇವಾಲಯಕ್ಕೆ(Chamundeshwari Temple) 2004ರಲ್ಲಿ ಗ್ರಾಮಸ್ದರು ಬಾಗಿಲು ಹಾಕಿದ್ದರು. ಅಲ್ಲಿದ್ದ ತಾಯಿಗೆ ಪೂಜೆ ಪುನಸ್ಕಾರಗಳು ನಿಂತಿದ್ದವು. ದಲಿತರು ಸವರ್ಣಿಯರ ಸಂಘರ್ಷಕ್ಕೆ ಸಿಲುಕಿ ದೇವಾಲಯಕ್ಕೆ ಬೀಗ ಹಾಕಲಾಗಿತ್ತು. ಸದ್ಯ ಇಂದು ಗ್ರಾಮಸ್ಥರ ಜೊತೆ ಶಾಂತಿ ಸಭೆ ನಡೆಸಿದ ಶಾಸಕ ರವೀಂದ್ರ ಶ್ರೀಕಂಠಯ್ಯ ಎರೆಡೂ ಸಮುದಾಯದವರ ಜೊತೆ ಮಾತನಾಡಿ ಮನವೊಲಿಸಿದ್ದಾರೆ. ಜಿಲ್ಲಾಡಳಿತ ದೇವಾಲಯದ ಬೀಗ ತೆರೆದಿದೆ. ಸಿಹಿ ಹಂಚಿ ಶಾಂತಿ ಸಭೆ ಬಳಿಕ ದೇವಾಲಯ ಓಪನ್ ಮಾಡಲಾಗಿದೆ.

chamundeshwari temple 1

ಶಿವನ ದೇವಾಲಯ

350 ರಿಂದ 400 ವರ್ಷ ಇತಿಹಾಸವಿರುವ ಚಾಮುಂಡೇಶ್ವರಿ ದೇವಾಲಯ ಇದಾಗಿದ್ದು ಹೊಯ್ಸಳರ ವಾಸ್ತುಶಿಲ್ಪವನ್ನ ಹೊಂದಿದೆ. ಮುಜರಾಯಿ ಇಲಾಖೆಗೆ ಸೇರಿರುವ ದೇವಾಲಯವನ್ನ ಜಕ್ಕನಹಳ್ಳಿ ಗ್ರಾಮಸ್ಥರು ಪೂಜೆ ಸಲ್ಲಿಸುತ್ತ ಬಂದಿದ್ರು. ಕಳೆದ 18 ವರ್ಷದ ಹಿಂದೆ ಗ್ರಾಮದಲ್ಲಾದ ಇಬ್ಬರು ವ್ಯಕ್ತಿಗಳ ವೈಯಕ್ತಿಕ ದ್ವೇಷ ಜಾತಿ ವಿವಾದವಾಗಿ ಬದಲಾಯ್ತು. ದಲಿತರು ಹಾಗೂ ಸವರ್ಣೀಯರ ನಡುವಿನ ಗುದ್ದಾಟದಿಂದ ಈ ದೇವಾಲಯಕ್ಕೆ ಬೀಗ ಹಾಕಲಾಗಿತ್ತು. ಯಾವುದೇ ಹಬ್ಬ ಹರಿದಿನವನ್ನ ಆಚರಣೆ ಮಾಡುತ್ತಿರಲಿಲ್ಲ. ಈ ಹಿನ್ನಲೆ ಸಮಸ್ಯೆಯನ್ನ ಬಗೆಹರಿಸಲು ಸ್ಥಳೀಯ ಶಾಸಕ ರವೀಂದ್ರ ಶ್ರೀಕಂಠಯ್ಯ ಹಾಗೂ ತಹಶೀಲ್ದಾರ್ ನೇತೃತ್ವದಲ್ಲಿ ಇಂದು ಶಾಂ‌ತಿ ಸಭೆ ನಡೆಸುವ ಮೂಲಕ ದೇವಾಲಯದ ಬೀಗ ತೆರಯಲಾಯ್ತು. 18 ವರ್ಷದ ಅಜ್ಞಾತವಾಸಕ್ಕೆ ಕೊನೆಗೂ ತೆರೆ ಬಿದ್ದಿದೆ. ತಾಯಿ ಚಾಮುಂಡಿ ಹಾಗೂ ಶಿವಲಿಂಗದ ದರ್ಶನ ಪಡೆದ ಗ್ರಾಮಸ್ಥರು ಪುನೀತರಾಗಿದ್ದಾರೆ. ಈಗ ಎಲ್ಲಾ ಸಮುದಾಯದ ಜನರಿಗೆ ದೇವಾಲಯದಲ್ಲಿ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ. ಇದನ್ನೂ ಓದಿ: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಅಂತ್ಯಸಂಸ್ಕಾರ; ನೇರ ದೃಶ್ಯಾವಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ