AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಲ್ಕು ವರ್ಷದ ಕಾತುರಕ್ಕೆ ಕೊನೆಗೂ ಬಿತ್ತು ಬ್ರೇಕ್, ಮೈಶುಗರ್ ಕಾರ್ಯಾರಂಭ

ಮೈಶುಗರ್ ಕಾರ್ಖಾನೆ 4 ವರ್ಷದ ಬಳಿಕ ಕಬ್ಬು ನುರಿಸುವ ಕಾರ್ಯ ಆರಂಭಿಸಿದೆ. ಕಾರ್ಖಾನೆಯಲ್ಲಿ ಕಬ್ಬು ನುರಿಸುವ ಕಾರ್ಯಕ್ಕೆ ಸಚಿವರಾದ ಕೆ.ಗೋಪಾಲಯ್ಯ, ಕೆ.ಸಿ.ನಾರಾಯಣ ಗೌಡರು ಚಾಲನೆ ನೀಡಿದರು.

ನಾಲ್ಕು ವರ್ಷದ ಕಾತುರಕ್ಕೆ ಕೊನೆಗೂ ಬಿತ್ತು ಬ್ರೇಕ್, ಮೈಶುಗರ್ ಕಾರ್ಯಾರಂಭ
ನಾಲ್ಕು ವರ್ಷದ ಕಾತುರಕ್ಕೆ ಕೊನೆಗೂ ಬಿತ್ತು ಬ್ರೇಕ್, ಮೈಶುಗರ್ ಕಾರ್ಯಾರಂಭ
TV9 Web
| Edited By: ಆಯೇಷಾ ಬಾನು|

Updated on: Sep 01, 2022 | 10:23 PM

Share

ಮಂಡ್ಯ: ನಾಲ್ಕು ವರ್ಷದ ಕಾತುರಕ್ಕೆ ಕೊನೆಗೂ ಬ್ರೇಕ್ ಬಿದ್ದಿದ್ದು ಮೈಶುಗರ್ ಕಾರ್ಯಾರಂಭವಾಗಿದೆ. ಮೈಶುಗರ್ ಕಾರ್ಖಾನೆ 4 ವರ್ಷದ ಬಳಿಕ ಕಬ್ಬು ನುರಿಸುವ ಕಾರ್ಯ ಆರಂಭಿಸಿದೆ. ಕಾರ್ಖಾನೆಯಲ್ಲಿ ಕಬ್ಬು ನುರಿಸುವ ಕಾರ್ಯಕ್ಕೆ ಸಚಿವರಾದ ಕೆ.ಗೋಪಾಲಯ್ಯ, ಕೆ.ಸಿ.ನಾರಾಯಣ ಗೌಡರು ಚಾಲನೆ ನೀಡಿದರು. ಯಂತ್ರಕ್ಕೆ ಕಬ್ಬು ಹಾಕುವ ಮೂಲಕ ಚಾಲನೆ ನೀಡಿದ್ರು. ಸಚಿವರಿಗೆ ಸಂಸದೆ ಸುಮಲತಾ, ಶಾಸಕರಾದ ಸಿ.ಎಸ್.ಪುಟ್ಟರಾಜು, ಡಾ.ಕೆ.ಅನ್ನದಾನಿ, ಅಧಿಕಾರಿಗಳು, ರೈತರು ಸಾಥ್ ನೀಡಿದ್ರು.

ಕೊನೆಗೂ ನಾಲ್ಕು ವರ್ಷಗಳ ಕಾಯುವಿಕೆಗೆ ಬ್ರೇಕ್ ಬಿದ್ದಿದೆ. ಮೈ ಶುಗರ್ ಕಾರ್ಖಾನೆ ಮತ್ತೆ ಪುನರಾಂಭವಾಗಿದ್ದು ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಉಸ್ತುವಾರಿ ಸಚಿವರು ಅಧಿಕೃತವಾಗಿ ಕಬ್ಬು ನುರಿಯುವುದಕ್ಕೆ ಚಾಲನೆ ನೀಡಿದ್ದಾರೆ. ಇನ್ನೇನು ಕಬ್ಬು ಅರಗಯಲು ಮೈಶುಗರ್ ಶಕ್ತವಾಗಿದೆ ಅನ್ನೋದ್ರೊಳೊಗೆ ಇದ್ದಕ್ಕಿದ್ದಂತೆ ಯಂತ್ರ ಸ್ಥಗಿತಗೊಂಡು ಸಚಿವ ಗೋಪಾಲಯ್ಯ ಹಾಗೂ ಶಾಸಕರು ತಬ್ಬಿಬ್ಬಾದ ಘಟನೆ ಮಂಡ್ಯದಲ್ಲಿ ನಡೆದಿದೆ. ಸರ್ಕಾರ ಕೊಟ್ಟ ಮಾತಿನಂತೆ ಇಂದು ಅಧಿಕೃತವಾಗಿ 4 ಲಕ್ಷ ಟನ್ ಕಬ್ಬನ್ನ ಕಾರ್ಖಾನೆ ನುರಿಯಲು ಸಜ್ಜಾಗಿದೆ. ಪೂಜೆ ನಡೆಸಿದ ಬಳಿಕ ಯಂತ್ರಕ್ಕೆ ಚಾಲನೆ ನೀಡಲಾಯ್ತು ಆದ್ರೆ ಅರ್ಧ ಗಂಟೆಗಳ ಕಾಲ ಯಂತ್ರ ಸ್ಥಗಿತಗೊಂಡು ಆತಂಕ ಮೂಡಿಸಿತ್ತು ತಕ್ಷಣವೇ ಎಚ್ಚೆತ್ತ ತಾಂತ್ರಿಕ ಸಿಬ್ಬಂದಿ ಲೋಪದೋಷವನ್ನ ಸರಿ ಪಡಿಸಿ ಆತಂಕವನ್ನ ದೂರ ಮಾಡಿದ್ರು.

ಸದ್ಯ ಮೈಶುಗರ್ ಕಾರ್ಖಾನೆ ಅಧಿಕೃತವಾಗಿ ಆರಂಭವಾಗಿದೆ. ಕೊಟ್ಟ ಮಾತಿನಂತೆ ಸರ್ಕಾರ ನಡೆದು ಕೊಂಡಿದೆ. ಈಗ ಶುರುವಾದ ಕಬ್ಬು ನುರಿಯುವ ಕಾರ್ಯ ಹಾಗೇ ಮುಂದುವರೆಯ ಬೇಕಿದೆ. ರೈತರ ಬಾಳಲ್ಲಿ ಮೈಶುಗರ್ ಕಾರ್ಖಾನೆ ಮಂದಹಾಸ ಮೂಡಿಸುತ್ತೆ ಅಂತ ಎಲ್ರು ಭರವಸೆಯನ್ನಿಟ್ಟಿದ್ದಾರೆ. ಆದ್ರೆ ಅಲ್ಪ ಕಾಲಕ್ಕೆ ನಡೆಸಿ ಆಮೇಲೆ ಮತ್ತೆ ಮೈಶುಗರ್ ಗೆ ಬೀಗ ಹಾಕಲಾಗುತ್ತೆ ಇದೆಲ್ಲವು ಚುನಾವಣಾ ಗಿಮಿಕ್ ಅಂತ ಕೆಲವರು ಮಾತಾಡಿ ಕೊಳ್ಳುತ್ತಿದ್ದಾರೆ.

ಅದೇನೆ ಆಗ್ಲಿ ನಾಲ್ಕು ವರ್ಷಗಳ ಕಾಯುವಿಕೆಗೆ ಬ್ರೇಕ್ ಬಿದ್ದಿದೆ. ಸದ್ಯ ಕಾರ್ಖಾನೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಇದು ಹೀಗೆ ಯಾವುದೇ ವಿಘ್ನಗಳಿಲ್ಲದೆ ಮುಂದುವರೆದು ಕೊಂಡು ಹೋಗಲಿ ಎಂದು ದೇವರ ಬಳಿ ರೈತರು ಕಾರ್ಮಿಕರು ಪ್ರಾರ್ಥನೆ ಮಾಡಿ ಕೊಳ್ಳುತ್ತಿದ್ದಾರೆ.

ವರದಿ: ಸೂರಜ್ ಪ್ರಸಾದ್, ಟಿವಿ9 ಮಂಡ್ಯ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್