AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಲ್ಕು ವರ್ಷದ ಕಾತುರಕ್ಕೆ ಕೊನೆಗೂ ಬಿತ್ತು ಬ್ರೇಕ್, ಮೈಶುಗರ್ ಕಾರ್ಯಾರಂಭ

ಮೈಶುಗರ್ ಕಾರ್ಖಾನೆ 4 ವರ್ಷದ ಬಳಿಕ ಕಬ್ಬು ನುರಿಸುವ ಕಾರ್ಯ ಆರಂಭಿಸಿದೆ. ಕಾರ್ಖಾನೆಯಲ್ಲಿ ಕಬ್ಬು ನುರಿಸುವ ಕಾರ್ಯಕ್ಕೆ ಸಚಿವರಾದ ಕೆ.ಗೋಪಾಲಯ್ಯ, ಕೆ.ಸಿ.ನಾರಾಯಣ ಗೌಡರು ಚಾಲನೆ ನೀಡಿದರು.

ನಾಲ್ಕು ವರ್ಷದ ಕಾತುರಕ್ಕೆ ಕೊನೆಗೂ ಬಿತ್ತು ಬ್ರೇಕ್, ಮೈಶುಗರ್ ಕಾರ್ಯಾರಂಭ
ನಾಲ್ಕು ವರ್ಷದ ಕಾತುರಕ್ಕೆ ಕೊನೆಗೂ ಬಿತ್ತು ಬ್ರೇಕ್, ಮೈಶುಗರ್ ಕಾರ್ಯಾರಂಭ
TV9 Web
| Edited By: |

Updated on: Sep 01, 2022 | 10:23 PM

Share

ಮಂಡ್ಯ: ನಾಲ್ಕು ವರ್ಷದ ಕಾತುರಕ್ಕೆ ಕೊನೆಗೂ ಬ್ರೇಕ್ ಬಿದ್ದಿದ್ದು ಮೈಶುಗರ್ ಕಾರ್ಯಾರಂಭವಾಗಿದೆ. ಮೈಶುಗರ್ ಕಾರ್ಖಾನೆ 4 ವರ್ಷದ ಬಳಿಕ ಕಬ್ಬು ನುರಿಸುವ ಕಾರ್ಯ ಆರಂಭಿಸಿದೆ. ಕಾರ್ಖಾನೆಯಲ್ಲಿ ಕಬ್ಬು ನುರಿಸುವ ಕಾರ್ಯಕ್ಕೆ ಸಚಿವರಾದ ಕೆ.ಗೋಪಾಲಯ್ಯ, ಕೆ.ಸಿ.ನಾರಾಯಣ ಗೌಡರು ಚಾಲನೆ ನೀಡಿದರು. ಯಂತ್ರಕ್ಕೆ ಕಬ್ಬು ಹಾಕುವ ಮೂಲಕ ಚಾಲನೆ ನೀಡಿದ್ರು. ಸಚಿವರಿಗೆ ಸಂಸದೆ ಸುಮಲತಾ, ಶಾಸಕರಾದ ಸಿ.ಎಸ್.ಪುಟ್ಟರಾಜು, ಡಾ.ಕೆ.ಅನ್ನದಾನಿ, ಅಧಿಕಾರಿಗಳು, ರೈತರು ಸಾಥ್ ನೀಡಿದ್ರು.

ಕೊನೆಗೂ ನಾಲ್ಕು ವರ್ಷಗಳ ಕಾಯುವಿಕೆಗೆ ಬ್ರೇಕ್ ಬಿದ್ದಿದೆ. ಮೈ ಶುಗರ್ ಕಾರ್ಖಾನೆ ಮತ್ತೆ ಪುನರಾಂಭವಾಗಿದ್ದು ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಉಸ್ತುವಾರಿ ಸಚಿವರು ಅಧಿಕೃತವಾಗಿ ಕಬ್ಬು ನುರಿಯುವುದಕ್ಕೆ ಚಾಲನೆ ನೀಡಿದ್ದಾರೆ. ಇನ್ನೇನು ಕಬ್ಬು ಅರಗಯಲು ಮೈಶುಗರ್ ಶಕ್ತವಾಗಿದೆ ಅನ್ನೋದ್ರೊಳೊಗೆ ಇದ್ದಕ್ಕಿದ್ದಂತೆ ಯಂತ್ರ ಸ್ಥಗಿತಗೊಂಡು ಸಚಿವ ಗೋಪಾಲಯ್ಯ ಹಾಗೂ ಶಾಸಕರು ತಬ್ಬಿಬ್ಬಾದ ಘಟನೆ ಮಂಡ್ಯದಲ್ಲಿ ನಡೆದಿದೆ. ಸರ್ಕಾರ ಕೊಟ್ಟ ಮಾತಿನಂತೆ ಇಂದು ಅಧಿಕೃತವಾಗಿ 4 ಲಕ್ಷ ಟನ್ ಕಬ್ಬನ್ನ ಕಾರ್ಖಾನೆ ನುರಿಯಲು ಸಜ್ಜಾಗಿದೆ. ಪೂಜೆ ನಡೆಸಿದ ಬಳಿಕ ಯಂತ್ರಕ್ಕೆ ಚಾಲನೆ ನೀಡಲಾಯ್ತು ಆದ್ರೆ ಅರ್ಧ ಗಂಟೆಗಳ ಕಾಲ ಯಂತ್ರ ಸ್ಥಗಿತಗೊಂಡು ಆತಂಕ ಮೂಡಿಸಿತ್ತು ತಕ್ಷಣವೇ ಎಚ್ಚೆತ್ತ ತಾಂತ್ರಿಕ ಸಿಬ್ಬಂದಿ ಲೋಪದೋಷವನ್ನ ಸರಿ ಪಡಿಸಿ ಆತಂಕವನ್ನ ದೂರ ಮಾಡಿದ್ರು.

ಸದ್ಯ ಮೈಶುಗರ್ ಕಾರ್ಖಾನೆ ಅಧಿಕೃತವಾಗಿ ಆರಂಭವಾಗಿದೆ. ಕೊಟ್ಟ ಮಾತಿನಂತೆ ಸರ್ಕಾರ ನಡೆದು ಕೊಂಡಿದೆ. ಈಗ ಶುರುವಾದ ಕಬ್ಬು ನುರಿಯುವ ಕಾರ್ಯ ಹಾಗೇ ಮುಂದುವರೆಯ ಬೇಕಿದೆ. ರೈತರ ಬಾಳಲ್ಲಿ ಮೈಶುಗರ್ ಕಾರ್ಖಾನೆ ಮಂದಹಾಸ ಮೂಡಿಸುತ್ತೆ ಅಂತ ಎಲ್ರು ಭರವಸೆಯನ್ನಿಟ್ಟಿದ್ದಾರೆ. ಆದ್ರೆ ಅಲ್ಪ ಕಾಲಕ್ಕೆ ನಡೆಸಿ ಆಮೇಲೆ ಮತ್ತೆ ಮೈಶುಗರ್ ಗೆ ಬೀಗ ಹಾಕಲಾಗುತ್ತೆ ಇದೆಲ್ಲವು ಚುನಾವಣಾ ಗಿಮಿಕ್ ಅಂತ ಕೆಲವರು ಮಾತಾಡಿ ಕೊಳ್ಳುತ್ತಿದ್ದಾರೆ.

ಅದೇನೆ ಆಗ್ಲಿ ನಾಲ್ಕು ವರ್ಷಗಳ ಕಾಯುವಿಕೆಗೆ ಬ್ರೇಕ್ ಬಿದ್ದಿದೆ. ಸದ್ಯ ಕಾರ್ಖಾನೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಇದು ಹೀಗೆ ಯಾವುದೇ ವಿಘ್ನಗಳಿಲ್ಲದೆ ಮುಂದುವರೆದು ಕೊಂಡು ಹೋಗಲಿ ಎಂದು ದೇವರ ಬಳಿ ರೈತರು ಕಾರ್ಮಿಕರು ಪ್ರಾರ್ಥನೆ ಮಾಡಿ ಕೊಳ್ಳುತ್ತಿದ್ದಾರೆ.

ವರದಿ: ಸೂರಜ್ ಪ್ರಸಾದ್, ಟಿವಿ9 ಮಂಡ್ಯ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ