AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tv9 Impact: ಬಾಣಂತಿಗೆ ಆಶ್ರಯ ಕೊಟ್ಟ ಮಂಡ್ಯ ಜಿಲ್ಲಾಡಳಿತ, ಬದುಕಿಗೆ ಆಸರೆಯಾದ ವೀಕ್ಷಕರು

ಸುದ್ದಿ ಬಿತ್ತರವಾದ ಬಳಿಕ ಜಿಲ್ಲಾಡಳಿತ ಬಾಣಂತಿಗೆ ಆಶ್ರಯ ಕೊಟ್ಟಿದ್ದರೆ, ವೀಕ್ಷಕರೊಬ್ಬರು ಅವರ ಕುಟುಂಬಕ್ಕೆ ವಸತಿ ಕಲ್ಪಿಸಿ ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಾಯ ಮಾಡುವುದಾಗಿ ಮುಂದಾಗಿದ್ದಾರೆ.

Tv9 Impact: ಬಾಣಂತಿಗೆ ಆಶ್ರಯ ಕೊಟ್ಟ ಮಂಡ್ಯ ಜಿಲ್ಲಾಡಳಿತ, ಬದುಕಿಗೆ ಆಸರೆಯಾದ ವೀಕ್ಷಕರು
ಅನ್ನಪೂರ್ಣ
TV9 Web
| Edited By: |

Updated on: Nov 16, 2022 | 2:52 PM

Share

ಮಂಡ್ಯ: ತನ್ನ 20 ದಿನದ ಮಗುವಿನ ಜೊತೆಗೆ ಉಳಿದುಕೊಳ್ಳಲು ಆಶ್ರಯವಿಲ್ಲದೆ ಪರದಾಡುತ್ತಿದ್ದ ಬಾಣಂತಿಗೆ ಕೊನೆಗೂ ಆಶ್ರಯ ಸಿಕ್ಕಿದೆ. ಇರಲು ಸೂರಿಲ್ಲದೆ ಬೀದಿಯಲ್ಲಿಯೇ ಜೀವನ ಸಾಗಿಸುತ್ತಿದ್ದ ಮಹಿಳೆಯ ಮುಖದಲ್ಲಿ ಮಂದಹಾಸ ಮೂಡಿದ್ದು. ಆಕೆಯ ಸಂತಸಕ್ಕೆ ಈಗ ಪಾರವೇ ಇಲ್ಲದಂತಾಗಿದೆ. ಟಿವಿ9 ಸಂಸ್ಥೆಗೆ ಆಕೆ ಮನತುಂಬಿ ಹಾರೈಸಿದ್ದಾಳೆ. ಬಾಣಂತಿಯ ಪರದಾಟ ಆಕೆಯ ಶೋಚನೀಯ ಸ್ಥಿತಿಯ ಕುರಿತು ಟಿವಿ9 ಸಮಗ್ರ ವರದಿಯನ್ನ ಬಿತ್ತರಿಸಿತ್ತು. ಬಾಣಂತಿ ಅನ್ನಪೂರ್ಣ ಅವರ ಶೋಚನೀಯ ಸ್ಥಿತಿಯನ್ನ ಜನರ ಮುಂದೆ ತೆರೆದಿಡಲಾಗಿತ್ತು. ಟಿವಿ9 ನಲ್ಲಿ ವರದಿ ಬಿತ್ತರವಾದ ಬಳಿಕ ಈಗ ಜಿಲ್ಲಾಡಳಿತ ಎಚ್ಚೆತ್ತು ಕೊಂಡಿದೆ. ಬಾಣಂತಿ ಅನ್ನಪೂರ್ಣ ಅವರ ಹಸುಗೂಸು ಹಾಗೂ ಇಬ್ಬರು ಮಕ್ಕಳಿಗೆ ಮಂಡ್ಯದ ‘ಸ್ವಾಧಾರ’ ಕೇಂದ್ರದಲ್ಲಿ ಆಶ್ರಯ ನೀಡುವ ಮೂಲಕ ಜಿಲ್ಲಾಡಳಿತ ಆಶ್ರಯ ನೀಡಿದೆ. ಅನ್ನಪೂರ್ಣ ಅವರಿಗೆ ಆಶ್ರಯ ನೀಡಿರುವ ಕುರಿತು ಮಹಿಳಾ ಮತ್ತು ಮಕ್ಕಳ ಇಲಾಖೆಯ ಉಪನಿರ್ದೇಶಕ ನಾಗರಾಜ್ ಖಚಿತಪಡಿಸಿದರು.

ಅನ್ನಪೂರ್ಣ ಅವರ ಪತಿ ಐಪಿಎಲ್  ಬೆಟಿಂಗ್ ಚಟಕ್ಕೆ ಬಿದಿದ್ದರು. ಅನ್ನಪೂರ್ಣ ಮೂರು ತಿಂಗಳ ಗರ್ಭಿಣಿಯಾಗಿದ್ದಾಗ ಪತಿ ಸುರೇಶ್ ಕೈ ಕೊಟ್ಟು ಹೋಗಿದ್ದಾನೆ. ಆಗಿನಿಂದಲು ಅನ್ನಪೂರ್ಣ ಮದ್ದೂರಿನ ಹೆಮ್ಮನಹಳ್ಳಿಯಲ್ಲಿ ಬಟ್ಟೆ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಕಳೆದ 20 ದಿನಗಳ ಹಿಂದೆಯಷ್ಟೇ ಅನ್ನಪೂರ್ಣ ಮುದ್ದಾದ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಅನ್ನಪೂರ್ಣ ಅವರ ತಂದೆಗೆ ವಯಸ್ಸಾಗಿದೆ. ತಿನ್ನಲು ಆಹಾರವಿಲ್ಲದೆ ಉಳಿದುಕೊಳ್ಳಲು ಸ್ಥಳವಿಲ್ಲದೆ ಪರಿತಪಿಸುತ್ತಿದ್ದರು. ಈ ವಿಚಾರ ತಿಳಿದ ಟಿವಿ9 ಈ ಸುದ್ದಿ ಪ್ರಸಾರ ಮಾಡಿತ್ತು. ಸುದ್ದಿ ನೋಡಿದ ವೀಕ್ಷಕರು ಅನ್ನಪೂರ್ಣ ಅವರಿಗೆ ಸಹಾಯ ಮಾಡಲು, ವಸತಿ ಹಾಗೂ ಉದ್ಯೋಗ ನೀಡಲು ಮುಂದೆ ಬಂದಿದ್ದಾರೆ.

ಈ ಕುರಿತು ‘ಟಿವಿ9’ ಜೊತೆ ಮಾತನಾಡಿದ ಸಾಮಾಜಿಕ ಹೋರಾಟಗಾರ ಮಹಾಲಿಂಗೇಗೌಡ, ಕ್ರಿಕೆಟ್​ ಹಾಗೂ ಇನ್ನಿತರ ಯಾವುದೇ ಆಟಗಳನ್ನು ಮನರಂಜನೆಗಷ್ಟೇ ಸೀಮಿತವಾಗಿಡಬೇಕು. ಬೆಟಿಂಗ್​ನಿಂದ ಕುಟುಂಬಗಳು ಬೀದಿಗೆ ಬರುತ್ತವೆ. ಬೆಟಿಂಗ್ ದಂಧೆಯಿಂದ ಆಗುವ ಅನಾಹುತಕ್ಕೆ ಅನ್ನಪೂರ್ಣ ಅವರ ಜೀವನವೇ ಅತ್ಯುತ್ತಮ ಉದಾಹರಣೆಯಾಗಿದೆ. ಅನ್ನಪೂರ್ಣ ಅವರು ಸ್ವಾವಲಂಬಿ ಜೀವನ ಸಾಗಿಸಲು ಸಹಾಯ ಮಾಡಲು ಹಲವು ಮುಂದೆ ಬಂದಿದ್ದಾರೆ’ ಎಂದರು.

ನಡುಬೀದಿಯಲ್ಲಿ ತಿನ್ನಲು ಆಹಾರ ಮತ್ತು ಮಲಗಲು ಮನೆಯಿಲ್ಲದೆ ಒದ್ದಾಡುತ್ತಿದ್ದ ಬಾಣಂತಿ ಅನ್ನಪೂರ್ಣ ಅವರಿಗೆ ಕೊನೆಗೂ ಜಿಲ್ಲಾಡಳಿತ ಆಶ್ರಯ ಕಲ್ಪಿಸಿಕೊಟ್ಟಿದೆ. ‘ಟಿವಿ9’ ವರದಿ ನೋಡಿದ ಕೆಲ ವೀಕ್ಷಕರು ಸಹಾಯ ಹಸ್ತ ಚಾಚುತ್ತಿದ್ದಾರೆ. ಟಿವಿ9 ವರದಿ ಮತ್ತೊಬ್ಬರ ಬಾಳಿಗೆ ಬೆಳಕಾಗಿದೆ.

ವರದಿ: ಸೂರಜ್ ಪ್ರಸಾದ್ ಟಿವಿ9 ಮಂಡ್ಯ

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ