AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣಿಗಾರಿಕೆಯಿಂದ ಕೆಆರ್​ಎಸ್​​ಗೆ ಅಪಾಯ ಆರೋಪ: ಮುಂದಿನ ವಾರ ಟ್ರಯಲ್ ಬ್ಲಾಸ್ಟ್​ಗೆ ಸರ್ಕಾರ ನಿರ್ಧಾರ

2019ರಿಂದಲೂ ಟ್ರಯಲ್ ಬ್ಲಾಸ್ಟ್​ಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ಹೋರಾಟಗಾರರು, ಪ್ರಗತಿಪರರು, ತಜ್ಞರಿಂದಲೂ ವಿರೋಧ ಮಾಡಲಾಗುತ್ತಿದ್ದು, ಪರ-ವಿರೋಧ ಪ್ರತಿಭಟನೆಯಿಂದ ಟ್ರಯಲ್ ಬ್ಲಾಸ್ಟ್ ರದ್ದಾಗಿತ್ತು.

ಗಣಿಗಾರಿಕೆಯಿಂದ ಕೆಆರ್​ಎಸ್​​ಗೆ ಅಪಾಯ ಆರೋಪ: ಮುಂದಿನ ವಾರ ಟ್ರಯಲ್ ಬ್ಲಾಸ್ಟ್​ಗೆ ಸರ್ಕಾರ ನಿರ್ಧಾರ
KRS ಡ್ಯಾಂ
TV9 Web
| Edited By: |

Updated on:Jul 22, 2022 | 1:06 PM

Share

ಮಂಡ್ಯ: ಗಣಿಗಾರಿಕೆಯಿಂದ ಕೆಆರ್​ಎಸ್​​ಗೆ (KRS) ಅಪಾಯ ಆರೋಪ ಹಿನ್ನೆಲೆ ಜುಲೈ 25ರಿಂದ 31ರವರೆಗೆ ಟ್ರಯಲ್ ಬ್ಲಾಸ್ಟ್​ ನಡೆಸಲು ನಿರ್ಧಾರ ಮಾಡಲಾಗಿದೆ. ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೇಬಿ ಬೆಟ್ಟದ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ಗಣಿಗಾರಿಕೆ ನಿಷೇಧ ಮಾಡಲಾಗಿದೆ. ಡ್ಯಾಂಗೆ ಅಪಾಯ ಇದೆಯೇ ಎಂಬ ಖಚಿತತೆಗಾಗಿ ಟ್ರಯಲ್ ಬ್ಲಾಸ್ಟ್ ನಡೆಸುತ್ತಿದ್ದು, ವಿರೋಧದ ನಡುವೆಯೂ ಟ್ರಯಲ್ ಬ್ಲಾಸ್ಟ್​ಗೆ ಸರ್ಕಾರ ಸಿದ್ಧತೆ ನಡೆಸಿದೆ. ವೈಜ್ಞಾನಿಕ ಮತ್ತು ಸಂಶೋಧನಾ ಕೇಂದ್ರದ ತಜ್ಞರಿಂದ ಪ್ರಯೋಗಕ್ಕೆ ಮುಂದಾಗಿದ್ದು, ಜುಲೈ 24ರಂದು ಕೆಆರ್​ಎಸ್ ಜಲಾಶಯಕ್ಕೆ ಜಾರ್ಖಂಡ್​ನ ಧನಬಾದ್​​​ನಿಂದ ಕೆಆರ್​ಎಸ್​ಗೆ ತಂಡ ಆಗಮಿಸಲಿದೆ. 2019ರಿಂದಲೂ ಟ್ರಯಲ್ ಬ್ಲಾಸ್ಟ್​ಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ಹೋರಾಟಗಾರರು, ಪ್ರಗತಿಪರರು, ತಜ್ಞರಿಂದಲೂ ವಿರೋಧ ಮಾಡಲಾಗುತ್ತಿದ್ದು, ಪರ-ವಿರೋಧ ಪ್ರತಿಭಟನೆಯಿಂದ ಟ್ರಯಲ್ ಬ್ಲಾಸ್ಟ್ ರದ್ದಾಗಿತ್ತು. ಇದೀಗ ಟ್ರಯಲ್ ಬ್ಲಾಸ್ಟ್​ಗೆ ಸರ್ಕಾರ ಅನುಮತಿ ನೀಡಿದೆ.

ಇದನ್ನೂ ಓದಿ: KRS ಸುತ್ತಮುತ್ತ ಗಣಿಗಾರಿಕೆಗೆ ಬ್ರೇಕ್ ಹಾಕಲು ಬಿಎಸ್​ವೈ ಗ್ರೀನ್ ಸಿಗ್ನಲ್

ಟ್ರಯಲ್ ಬ್ಲಾಸ್ಟ್​ಗೆ ತೀವ್ರ ವಿರೋಧ

ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟಿಂಗ್ ಮುಹೂರ್ತ ಫಿಕ್ಸ್ ಹಿನ್ನಲೆ ಗಣಿಗಾರಿಕೆಯನ್ನ ವಿರೋಧಿಸಿ ಭಾರೀ ವಿರೋಧ ವ್ಯಕ್ತವಾಗುತ್ತಿದ್ದು, ಮುಖ್ಯಮಂತ್ರಿಗಳಿಗೆ ಟ್ವಿಟ್ ಮೂಲಕ ಗಣಿಗಾರಿಕೆ ನಡೆಸದಂತೆ ಸ್ವತಃ ಬಿಜೆಪಿ ಮುಖಂಡನಿಂದಲೇ ಟ್ವೀಟ್ ಮಾಡಲಾಗಿದೆ. ಕನ್ನಾಂಬಾಡಿ ಸುತ್ತಾ ಮುತ್ತಾ 25 ಕಿಲೋ ಮೀಟರ್ ಗಣಿಗಾರಿಕೆ ನಡೆಸದಂತೆ ಮನವಿ ಮಾಡಿದ್ದು, ಜೀವನಾಡಿ ಕೆ.ಆರ್.ಎಸ್ ಡ್ಯಾಂ ಸುತ್ತಾ ಬ್ಲಾಸ್ಟಿಂಗ್ ನಡೆಸದಂತೆ ಟ್ವಿಟ್ ಮಾಡಲಾಗಿದೆ. ಗಣಿಗಾರಿಕೆಗೆ ಅವಕಾಶ ಮಾಡಿ ಕೊಟ್ರೆ ಉಗ್ರ ಹೋರಾಟದ ಎಚ್ಚರಿಕೆ ನೀಡಲಾಗಿದೆ. ಬೇಬಿ ಬೆಟ್ಟದಲ್ಲಿ ಈಗಾಗ್ಲೆ ಜುಲೈ 25 ರಿಂದ ಟ್ರಯಲ್ ಬ್ಲಾಸ್ಟಿಂಗ್ ನಡೆಸಲು ಸಿದ್ದತೆ ನಡೆದಿದ್ದು, ಜಾರ್ಖಂಡ್​ನಿಂದ ವಿಶೇಷ ಭೂ ವಿಜ್ಞಾನಿಗಳ ತಂಡ ಬರಲಿದೆ. ಈ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯರು ಆಕ್ರೋಶಗೊಂಡಿದ್ದಾರೆ.

ಅಕ್ರಮ ಗಣಿಗಾರಿಕೆಯಿಂದ ಕೆಆರ್​ಎಸ್ ಡ್ಯಾಂ ಅಸ್ತಿತ್ವಕ್ಕೆ ಅಡ್ಡಿ: ಸಂಸದೆ ಸುಮಲತಾ

ಮಂಡ್ಯದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯಿಂದ ಕೆಆರ್​ಎಸ್ ಡ್ಯಾಂ ಅಸ್ತಿತ್ವಕ್ಕೆ ಅಡ್ಡಿಯಾಗಿದೆ ಎಂದು ಮಂಡ್ಯದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಸಭೆಯೊಂದರಲ್ಲಿ ಈ ಹಿಂದೆ ಸಂಸದೆ ಸುಮಲತಾ ಅಂಬರೀಶ್ ಪ್ರಸ್ತಾಪ ಮಾಡಿದ್ದರು. ಈ ಕುರಿತು ಸಂಸತ್​ನಲ್ಲಿ ಹಲವು ಬಾರಿ ಚರ್ಚಿಸಿದ್ದೇನೆ. ಈ ವಿಷಯವನ್ನು ಸಚಿವರ ಗಮನಕ್ಕೂ ತಂದಿದ್ದೇನೆ. ಅಕ್ರಮ ಚಟುವಟಿಕೆ ನಿಲ್ಲಿಸಿ ಡ್ಯಾಂ ರಕ್ಷಿಸಬೇಕು. ಅಕ್ರಮ ಚಟುವಟಿಕೆ ನಿಲ್ಲಿಸುವುದು ಜಿಲ್ಲಾಡಳಿತದ ಹೊಣೆಯಾಗಿದ್ದು, ನಾನೂ ಸಹ ಕೈಜೋಡಿಸುತ್ತೇನೆ. ಅಕ್ರಮ ಗಣಿಗಾರಿಕೆಯ ಹಿಂದೆ ಯಾರೇ ಪ್ರಭಾವಿ ಇದ್ದರೂ ತಡೆಗಟ್ಟಲು ನಾನು ಸಿದ್ಧ ಎಂದು ಅವರು ಸ್ಪಷ್ಟಪಡಿಸಿದ್ದರು.

Published On - 12:48 pm, Fri, 22 July 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?