AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ambareesh Birth Anniversary: ರೆಬಲ್ ಸ್ಟಾರ್ ಅಂಬರೀಷ್ ಬರ್ತಡೆ ಆಚರಣೆಗೆ ತೊಡಕಾದ ನೀತಿ ಸಂಹಿತೆ ಶಿಷ್ಟಾಚಾರ

Sumalatha Ambareesh: ಅಂಬರೀಷ್ ಪತ್ನಿ, ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಅವರು ನಾಳೆ ಮಂಡ್ಯ ಜಿಲ್ಲೆ ಪ್ರವಾಸ ಕೈಗೊಳ್ಳಲಿದ್ದಾರೆ. ಮಧ್ಯಾಹ್ನ 12.30ಕ್ಕೆ ರಾಮನಗರ, ಚನ್ನಪಟ್ಟಣ ಬಳಿಕ ಮದ್ದೂರಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 2.30ಕ್ಕೆ ಅಂಬಿ ಹುಟ್ಟೂರಾದ ದೊಡ್ಡರಸಿನಕೆರೆ ಗ್ರಾಮಕ್ಕೆ ಭೇಟಿ ಕೊಡಲಿದ್ದಾರೆ.

Ambareesh Birth Anniversary: ರೆಬಲ್ ಸ್ಟಾರ್ ಅಂಬರೀಷ್ ಬರ್ತಡೆ ಆಚರಣೆಗೆ ತೊಡಕಾದ ನೀತಿ ಸಂಹಿತೆ ಶಿಷ್ಟಾಚಾರ
ರೆಬಲ್ ಸ್ಟಾರ್ ಅಂಬರೀಷ್ ಬರ್ತಡೆ ಆಚರಣೆಗೆ ತೊಡಕಾದ ನೀತಿ ಸಂಹಿತೆ ಶಿಷ್ಟಾಚಾರ
TV9 Web
| Edited By: |

Updated on:May 28, 2022 | 9:14 PM

Share

ಮಂಡ್ಯ: ದಿವಂಗತ ರೆಬಲ್ ಸ್ಟಾರ್ ಅಂಬರೀಷ್ ಬರ್ತಡೆ ಆಚರಣೆಗೆ (Ambareesh Birth Anniversary) ನೀತಿ ಸಂಹಿತೆ ಪಾಲನೆ ಶಿಷ್ಟಾಚಾರದಿಂದ ತೊಡಕುಂಟಾಗಿದೆ. ಹಾಗಾಗಿ, ಶ್ರವಣದೋಷ ಇರುವ ಮಕ್ಕಳಿಗೆ ಶ್ರವಣ ಸಾಧನ ವಿತರಣಾ ಕಾರ್ಯಕ್ರಮ ರದ್ದು ಪಡಿಸಲಾಗಿದೆ. ಈ ಸಂಬಂಧ, ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆ ಜಿಲ್ಲಾಡಳಿತವು ಅಖಿಲ ಕರ್ನಾಟಕ ಅಂಬರೀಷ್ ಅಭಿಮಾನಿ ಸಂಘಕ್ಕೆ ನೋಟಿಸ್ ನೀಡಿದೆ. ನಾಳೆ ಅಂಬರೀಷ್ ಅವರ 70ನೇ ಹುಟ್ಟುಹಬ್ಬ ದಿನವಾಗಿದೆ.

ಮಂಡ್ಯದ ಪ್ರೇರಣಾ ಶಾಲೆಯಲ್ಲಿ ಶಿಬಿರಕ್ಕೆ ತಯಾರಿ ನಡೆಸಲಾಗಿತ್ತು. ನೀತಿ ಸಂಹಿತೆ ಹಿನ್ನೆಲೆ ಶಿಬಿರದಲ್ಲಿ ಆಯೋಜನೆ ಮಾಡಿದ್ದ ಕಾರ್ಯಕ್ರಮವನ್ನು ಇದೀಗ ರದ್ದುಗೊಳಿಸಲಾಗಿದೆ. ಉಳಿದಂತೆ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕಷ್ಟೆ ಅವಕಾಶ. ಅಂಬರೀಷ್ (Rebal Star Ambareesh) ಹುಟ್ಟುಹಬ್ಬದ ಪ್ರಯುಕ್ತ ಕೆ.ಎಂ. ದೊಡ್ಡಿ, ದೊಡ್ಡರಸಿನಕೆರೆ ಸೇರಿದಂತೆ ಹಲವೆಡೆ ಸಂಭ್ರಮಾಚರಣೆ ನಡೆಯುವುದಿತ್ತು. ಆದರೀಗ ಶಿಬಿರ ನಡೆಸದಂತೆ ಜಿಲ್ಲಾಡಳಿತ ಸೂಚನೆ ಕೊಟ್ಟಿದೆ.

ಇದನ್ನೂ ಓದಿ:

Abetment of suicide case: 11 ವರ್ಷದ ಹಿಂದೆ ಖುಲಾಸೆಯಾಗಿದ್ದ ವ್ಯಕ್ತಿಗೆ, 7 ವರ್ಷ ಜೈಲು ಶಿಕ್ಷೆ ವಿಧಿಸಿದ ಹೈಕೋರ್ಟ್!

ಅಂಬರೀಷ್ ಪತ್ನಿ, ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಅವರು (Sumalatha Ambareesh) ನಾಳೆ ಮಂಡ್ಯ ಜಿಲ್ಲೆ ಪ್ರವಾಸ ಕೈಗೊಳ್ಳಲಿದ್ದಾರೆ. ಮಧ್ಯಾಹ್ನ 12.30ಕ್ಕೆ ರಾಮನಗರ, ಚನ್ನಪಟ್ಟಣ ಬಳಿಕ ಮದ್ದೂರಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 2.30ಕ್ಕೆ ಅಂಬಿ ಹುಟ್ಟೂರಾದ ದೊಡ್ಡರಸಿನಕೆರೆ ಗ್ರಾಮಕ್ಕೆ ಭೇಟಿ ಕೊಡಲಿದ್ದಾರೆ. 3.15 ಕ್ಕೆ ಮದ್ದೂರು ತಾಲೂಕು ಕೆ.ಎಂ. ದೊಡ್ಡಿಯ ಅಂಬರೀಷ್ ಅಭಿಮಾನಿಗಳ ಒಕ್ಕೂಟದ ಪ್ರಧಾನ ಕಚೇರಿ ಉದ್ಘಾಟನಾ ಕಾರ್ಯಕ್ರಮವಿದೆ. ಸಂಜೆ 4 ಗಂಟೆಗೆ ಅಖಿಲ ಕರ್ನಾಟಕ ಅಂಬರೀಷ್ ಅಭಿಮಾನಿಗಳ ಸಂಘ ಆಯೋಜನೆ ಮಾಡಿರುವ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಇದನ್ನೂ ಓದಿ:

ಸುದ್ದಿ ಪ್ರಸಾರ ಬೆನ್ನಲ್ಲೇ ಎಚ್ಚೆತ್ತ ಕಾಲೇಜು ಆಡಳಿತ ಮಂಡಳಿ, ವಿದ್ಯಾರ್ಥಿನಿಗೆ 50 ಸಾವಿರ ಅಡ್ಮಿಶನ್ ಹಣ ವಾಪಸ್!

Published On - 9:10 pm, Sat, 28 May 22

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ