AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯದಲ್ಲೊಬ್ಬ ಕಾಮುಕ ಶಿಕ್ಷಕ; ವಿದ್ಯಾರ್ಥಿನಿಯರ ಅಂಗಾಗ ಮುಟ್ಟಿ ಲೈಂಗಿಕ ದೌರ್ಜನ್ಯ

ಮಳವಳ್ಳಿ ಘಟನೆ ಮಾಸುವ ಮುನ್ನವೇ ಮಂಡ್ಯದಲ್ಲಿ ಮತ್ತೊಂದು ಘಟನೆ ನಡೆದಿದೆ. ವಿದ್ಯಾರ್ಥಿನಿಯರ ಜೊತೆಗೆ ಶಿಕ್ಷಕ ಅಸಭ್ಯ ವರ್ತನೆ ತೋರಿದ್ದು, ಈ ಕುರಿತು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

ಮಂಡ್ಯದಲ್ಲೊಬ್ಬ ಕಾಮುಕ ಶಿಕ್ಷಕ; ವಿದ್ಯಾರ್ಥಿನಿಯರ ಅಂಗಾಗ ಮುಟ್ಟಿ ಲೈಂಗಿಕ ದೌರ್ಜನ್ಯ
ಮಂಡ್ಯ
TV9 Web
| Edited By: |

Updated on:Dec 10, 2022 | 1:26 PM

Share

ಮಂಡ್ಯ: ತಾಲೂಕಿನ ಬೇಬಿ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳ ಜೊತೆ ಅಸಭ್ಯ ವರ್ತನೆ ತೋರಿದ ಶಿಕ್ಷಕನ ವಿರುದ್ಧ ಶಿಕ್ಷಣ ಇಲಾಖೆಗೆ ಪತ್ರ ಬರೆದ ವಿದ್ಯಾರ್ಥಿನಿಯರು. ಕಾಮುಕ ಶಿಕ್ಷಕನ ವರ್ತನೆಗೆ ಬೇಸತ್ತ ವಿದ್ಯಾರ್ಥಿನಿಯರು ಪತ್ರ ಬರೆದು ತಮ್ಮ ಸಮಸ್ಯೆಯನ್ನ ಹೇಳಿಕೊಂಡಿದ್ದಾರೆ. ಇಂದು ದಿಢೀರ್ SDMC ಸಭೆ ಆಯೋಜನೆ ಮಾಡಲಾಗಿ, ಸಭೆಯಲ್ಲಿ ಕಾಮುಕ ಶಿಕ್ಷಕನ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸುವ ಮೂಲಕ ಹಲ್ಲೆಗೆ ಯತ್ನಿಸಿದ್ದಾರೆ. ಸ್ಥಳಕ್ಕೆ ಬಿಇಓ ಸೌಭಾಗ್ಯ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಆರೋಪಿ ಶಿಕ್ಷಕನ ಅಮಾನತ್ತಿಗೆ ಪೋಷಕರ ಪಟ್ಟು ಹಿಡಿದಿದ್ದಾರೆ.

ಬೆಂಗಳೂರಿನ ಕೆ.ಆರ್​.ಪುರಂನಲ್ಲಿ ಶೂಟೌಟ್​​ ಪ್ರಕರಣ; ಮೂವರು ಆರೋಪಿಗಳು ಪೊಲೀಸರ ವಶಕ್ಕೆ

ಬೆಂಗಳೂರು: ಕೆ.ಆರ್​.ಪುರದಲ್ಲಿ ಡಿ.8ರಂದು ರೌಡಿಶೀಟರ್ ಶಿವಶಂಕರ್ ಮೇಲೆ ದಾಳಿ ನಡೆಸಿದಾಳಿ ನಡೆಸಿ ಆರೋಪಿಗಳು ಪರಾರಿಯಾಗಿದ್ದರು. ಈ ಕುರಿತು ಕೆ.ಆರ್​.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅರೋಪಿಗಳ ಬಂಧನಕ್ಕೆ ವಿಶೇಷ ತಂಡ ರಚಿಸಿದ ಇಲಾಖೆ, ವಿಶೇಷ ತನಿಖಾ ತಂಡದಿಂದ ಮೂವರು ಆರೋಪಿಗಳನ್ನ ಬಂಧಿಸಿದ್ದಾರೆ.

ಹೊಸಕೋಟೆ ಮೂಲಕ ಆಂಧ್ರಪ್ರದೇಶಕ್ಕೆ ಪರಾರಿಯಾಗಿದ್ದ ಆರೋಪಿಗಳು, ಹೈವೇ ರಸ್ತೆಯಲ್ಲಿ ಸಿಸಿಟಿವಿ ಪರಿಶೀಲನೆ ನಡೆಸಿದಾಗ ಗೊತ್ತಾಗಿದೆ. ಕೂಡಲೇ ಪೊಲೀಸರು ಮಾಹಿತಿ ಅನ್ವಯ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನ ಖೆಡ್ಡಕ್ಕೆ ಬಿಳಿಸಿದ್ದಾರೆ. ಹಳೆ ದ್ವೇಷದ ಹಿನ್ನಲೆ ಶಿವಶಂಕರ್ ರೆಡ್ಡಿ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ ಎಂದಿದ್ದಾರೆ. ಆಂಧ್ರಪ್ರದೇಶದ ಮದನಪಲ್ಲಿ ಪೊಲೀಸ್ ಠಾಣೆಯಲ್ಲಿ ರೌಡಿಶೀಟರ್ ಆಗಿರುವ ಶಿವಶಂಕರ್ ರೆಡ್ಡಿ ಮೇಲೆ ಮೂರು ಕೊಲೆ ಪ್ರಕರಣ ದಾಖಲಾಗಿತ್ತು. ಜೈಲಿನಿಂದ ಹೊರಬಂದ ನಂತ ಶಿವಶಂಕರ್ ರೆಡ್ಡಿ ಆಂಧ್ರಪ್ರದೇಶದಿಂದ ಬಂದು ಬೆಂಗಳೂರಿನಲ್ಲಿ ನೆಲೆಸಿದ್ದ. ತನನ್ನು ವಿರೋಧಿ ಗ್ಯಾಂಗ್ ಕೊಲೆ ಮಾಡುವ ಭಯದಿಂದ ಮದನಪಲ್ಲಿಗೆ ಹೆಚ್ಚು ತೆರಳದೆ ಬೆಂಗಳೂರಿನ ಕೆ ಆರ್ ಪುರಂ ದಲ್ಲಿ ನೆಲೆಸಿದ್ದ.

ಬೆಂಗಳೂರಿನ ಕೆ ಆರ್ ಪುರಂನಲ್ಲಿದ್ದ ಶಿವಶಂಕರ್ ರೆಡ್ಡಿಯನ್ನ ಕೊಲೆ ಮಾಡುವ ಉದ್ದೇಶದಿಂದ ಬೆಂಗಳೂರಿಗೆ ಬಂದಿದ್ದ ಗ್ಯಾಂಗ್ ಶಿವಶಂಕರ್​ ಸೇರಿದಂತೆ ಆತನ ಕಾರು ಚಾಲಕನ ಮೇಲೆ ಗುಂಡು ಹಾರಿಸಿದ್ದರು. ಸಧ್ಯ ಅದೃಷ್ಟವಶಾತ್​ ಇಬ್ಬರು ಪಾಣಪ್ರಾಯದಿಂದ ಪಾರಾಗಿದ್ದಾರೆ. ಸದ್ಯ ಆರೋಪಿಗಳನ್ನು ಬಂಧಿಸಿ ಹೆಚ್ಚಿನ‌ ತನಿಖೆ ನಡೆಸುತ್ತಿದ್ದಾರೆ ಕೆ ಆರ್ ಪುರ ಪೊಲೀಸರು.

ಇದನ್ನೂ ಓದಿ:ನೀವು ಸೈಬರ್​​ ಕ್ರೈಮ್​​ ಸಂತ್ರಸ್ತರಾಗಿದ್ದರೆ ಏನು ಮಾಡಬೇಕು? ದೂರು ನೀಡುವುದು ಹೇಗೆ?

ಕಾರವಾರ: ಶಾರ್ಟ್​ ಸರ್ಕ್ಯೂಟ್​​ನಿಂದ ಕೊಟ್ಟಿಗೆಗೆ ಬೆಂಕಿ; ಎರಡು ಹಸುಗಳು ಸಜೀವ ದಹನ

ಉತ್ತರ ಕನ್ನಡ: ಜಿಲ್ಲೆಯ ಶಿರಸಿ ತಾಲೂಕಿನ ಹೊಸಕೊಪ್ಪದಲ್ಲಿ ಶಾರ್ಟ್​ ಸರ್ಕ್ಯೂಟ್​ನಿಂದ ಕೊಟ್ಟಿಗೆಗೆ ಬೆಂಕಿ ತಗುಲಿ, ಫಕೀರವ್ವ ನಿಂಗಪ್ಪ ಜಾಡರ್​ ಎಂಬುವರಿಗೆ ಸೇರಿದ 2 ಜಾನುವಾರುಗಳು ಸಜೀವ ದಹನವಾಗಿದೆ. ಸ್ಥಳಕ್ಕೆ ಗ್ರಾಮ ಲೆಕ್ಕಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಶಿರಸಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:25 pm, Sat, 10 December 22

ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ