AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣಿಗಾರಿಕೆ ಬಳಿಕ KRS ಅಣೆಕಟ್ಟೆಗೆ ಎದುರಾಯ್ತು ಮತ್ತೊಂದು ಕಂಟಕ; ಪ್ರಭಾವಿಗಳಿಂದ ಹಿನ್ನೀರು ಪ್ರದೇಶ ಒತ್ತುವರಿ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ‌ತಾಲೂಕಿನ ಕೆಆರ್​ಎಸ್​​ ಜಲಾಶಯದ ಹಿನ್ನೀರು ಪ್ರದೇಶವನ್ನು ಪ್ರಭಾವಿಗಳು ಒತ್ತುವರಿ ಮಾಡಿಕೊಳ್ಳುತ್ತಿದ್ದಾರೆ. ಸರ್ಕಾರಿ ದಾಖಲೆಗಳಲ್ಲಿ 3 ಎಕರೆ ಇದ್ರೂ ಹೆಚ್ಚುವರಿ ಭೂಮಿ ಒತ್ತುವರಿ ಆಗಿದೆ. ಒತ್ತುವರಿ ಜಾಗದಲ್ಲಿ ಟ್ರಂಚ್ ಹೊಡೆಸಿ ಫೆನ್ಸ್ ನಿರ್ಮಾಣಕ್ಕೆ ಸಿದ್ಧತೆ ನಡೆದಿರೋದು ಕಂಡು ಬಂದಿದೆ.

ಗಣಿಗಾರಿಕೆ ಬಳಿಕ KRS ಅಣೆಕಟ್ಟೆಗೆ ಎದುರಾಯ್ತು ಮತ್ತೊಂದು ಕಂಟಕ; ಪ್ರಭಾವಿಗಳಿಂದ ಹಿನ್ನೀರು ಪ್ರದೇಶ ಒತ್ತುವರಿ
ಪ್ರಭಾವಿಗಳಿಂದ ಹಿನ್ನೀರು ಪ್ರದೇಶ ಒತ್ತುವರಿ
ಪ್ರಶಾಂತ್​ ಬಿ.
| Edited By: |

Updated on: Jun 26, 2024 | 7:59 AM

Share

ಮಂಡ್ಯ, ಜೂನ್.26: ಗಣಿಗಾರಿಕೆ ಬಳಿಕ KRS ಅಣೆಕಟ್ಟೆಗೆ ಮತ್ತೊಂದು ಕಂಟಕ ಎದುರಾಗಿದೆ. ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ ‌ತಾಲೂಕಿನ ಕೆಆರ್​ಎಸ್​​ ಜಲಾಶಯದ ಹಿನ್ನೀರು ಪ್ರದೇಶವನ್ನು ಪ್ರಭಾವಿಗಳು ಒತ್ತುವರಿ ಮಾಡಿಕೊಳ್ಳುತ್ತಿದ್ದಾರೆ. ಭೂಗಳ್ಳರು ಅಣೆಕಟ್ಟೆ ಜಾಗವನ್ನೇ ನುಂಗಿ ನೀರು ಕುಡಿಯುತ್ತಿದ್ದಾರೆ. ಡ್ಯಾಂ ಜಾಗ ಒತ್ತುವರಿ (Encroachment) ಮಾಡ್ತಿದ್ರು ಅಧಿಕಾರಿಗಳು ಮಾತ್ರ ಜಾಣ ಮೌನರಾಗಿದ್ದಾರೆ.

ಸರ್ಕಾರಿ ದಾಖಲೆಗಳಲ್ಲಿ 3 ಎಕರೆ ಇದ್ರೂ ಹೆಚ್ಚುವರಿ ಭೂಮಿ ಒತ್ತುವರಿ ಆಗಿದೆ. ಒತ್ತುವರಿ ಜಾಗದಲ್ಲಿ ಟ್ರಂಚ್ ಹೊಡೆಸಿ ಫೆನ್ಸ್ ನಿರ್ಮಾಣಕ್ಕೆ ಸಿದ್ಧತೆ ನಡೆದಿದೆ. ಕೇರಳ ಮೂಲದ ನಕೇಶ್ ಜಾನ್ ಮ್ಯಾಥ್ಯು ಎಂಬುವವರು ಒತ್ತುವರಿ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಸರ್ವೆ ನಂ 279ರಲ್ಲಿ ಜಮೀನು ಹೊಂದಿರುವ ನಕೇಶ್ ಜಾನ್ ಮ್ಯಾಥ್ಯು ಅವರು ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಚಿಕ್ಕಾರಳ್ಳಿ‌ ಗ್ರಾಮದ ಸರ್ವೆ ನಂಬರ್​ನಲ್ಲಿ ಜಮೀನು ಹೊಂದಿದ್ದಾರೆ.

ಡ್ಯಾಂನ ನೀರು ಸಂಗ್ರಹದ ಕಣ್ಣಳತೆ ದೂರದಲ್ಲಿ ಒತ್ತುವರಿ ಆಗ್ತಿದ್ರು ಹೇಳೋರಿಲ್ಲ, ಕೇಳೋರಿಲ್ಲದಂತಾಗಿದೆ. ಸ್ಥಳೀಯ ಜನಪ್ರತಿನಿಧಿಗಳು, ರಾಜಕೀಯ ಮುಖಂಡರ ಸಹಾಯದಿಂದ ಅತಿಕ್ರಮಣ ಆರೋಪ ಕೇಳಿ ಬಂದಿದೆ. ಒತ್ತುವರಿ ತೆರವು ಮಾಡದಿದ್ರೆ ಡ್ಯಾಂಗೆ ಅಪಾಯ ಕಟ್ಟಿಟ್ಟ ಬುತ್ತಿ. ಅಕ್ರಮ ಒತ್ತುವರಿಯಿಂದಾಗಿ ಡ್ಯಾಂ ನೀರು ಸಂಗ್ರಹಕ್ಕೆ ಧಕ್ಕೆ ಸಾಧ್ಯತೆ. ಸಂಗ್ರಹ ಸಾಮರ್ಥ್ಯ ಕುಗ್ಗಿದ್ರೆ ಭವಿಷ್ಯದಲ್ಲಿ ನೀರಿಗೆ ಹಾಹಾಕಾರ ಎದುರಾಗಲಿದೆ. ಜಮೀನು ಮಾಲೀಕ ಟ್ರಂಚ್ ಹೊಡೆಸಿ ದೊಡ್ಡ ದೊಡ್ಡ ಕಲ್ಲುಗಳನ್ನ ಟ್ರಂಚ್​ಗೆ ಹಾಕಿಸಿದ್ದಾನೆ. ಕೂಡಲೇ ಒತ್ತುವರಿ ತೆರವು ಮಾಡಲು ಸ್ಥಳೀಯರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಬಿಬಿಎಂಪಿ ವ್ಯಾಪ್ತಿಯಲ್ಲಿವೆ ತೆರಿಗೆ ಕಟ್ಟದ 7 ಲಕ್ಷ ಆಸ್ತಿಗಳು; ಇ-ಖಾತಾ ಮೂಲಕ ಬಾಕಿ ತೆರಿಗೆ ವಸೂಲಿಗೆ ಪ್ಲಾನ್

ಕೃಷ್ಣ ರಾಜ ಸಾಗರ ಅಣೆಕಟ್ಟನ್ನು 1924 ರಲ್ಲಿ ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಿಗೆ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಲಾಯಿತು. ಇದು ಮೈಸೂರು ಮತ್ತು ಮಂಡ್ಯದಲ್ಲಿ ನೀರಾವರಿಗೆ ಪ್ರಮುಖ ನೀರಿನ ಮೂಲವಾಗಿದೆ. ಕೆಲ ತಿಂಗಳ ಹಿಂದೆ ಕೆಆರ್​​​​ಎಸ್ ಅಣೆಕಟ್ಟೆಯ ಸುತ್ತಮುತ್ತ ಗಣಿಗಾರಿಕೆಗೆ ನಿರ್ಬಂಧ ಹೇರಿ ಕರ್ನಾಟಕ ಹೈಕೋರ್ಟ್ ಆದೇಶಿಸಿತ್ತು. ಕೆಆರ್​ಎಸ್​ನ 20 ಕಿಲೋಮೀಟರ್ ವ್ಯಾಪ್ತಿಯಲ್ಲಿ ಗಣಿಗಾರಿಕೆಗೆ ನಿರ್ಬಂಧ ಹೇರಿ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ, ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ಪೀಠ ಆದೇಶ ನೀಡಿತ್ತು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್