AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣಿಗಾರಿಕೆ ಬಳಿಕ KRS ಅಣೆಕಟ್ಟೆಗೆ ಎದುರಾಯ್ತು ಮತ್ತೊಂದು ಕಂಟಕ; ಪ್ರಭಾವಿಗಳಿಂದ ಹಿನ್ನೀರು ಪ್ರದೇಶ ಒತ್ತುವರಿ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ‌ತಾಲೂಕಿನ ಕೆಆರ್​ಎಸ್​​ ಜಲಾಶಯದ ಹಿನ್ನೀರು ಪ್ರದೇಶವನ್ನು ಪ್ರಭಾವಿಗಳು ಒತ್ತುವರಿ ಮಾಡಿಕೊಳ್ಳುತ್ತಿದ್ದಾರೆ. ಸರ್ಕಾರಿ ದಾಖಲೆಗಳಲ್ಲಿ 3 ಎಕರೆ ಇದ್ರೂ ಹೆಚ್ಚುವರಿ ಭೂಮಿ ಒತ್ತುವರಿ ಆಗಿದೆ. ಒತ್ತುವರಿ ಜಾಗದಲ್ಲಿ ಟ್ರಂಚ್ ಹೊಡೆಸಿ ಫೆನ್ಸ್ ನಿರ್ಮಾಣಕ್ಕೆ ಸಿದ್ಧತೆ ನಡೆದಿರೋದು ಕಂಡು ಬಂದಿದೆ.

ಗಣಿಗಾರಿಕೆ ಬಳಿಕ KRS ಅಣೆಕಟ್ಟೆಗೆ ಎದುರಾಯ್ತು ಮತ್ತೊಂದು ಕಂಟಕ; ಪ್ರಭಾವಿಗಳಿಂದ ಹಿನ್ನೀರು ಪ್ರದೇಶ ಒತ್ತುವರಿ
ಪ್ರಭಾವಿಗಳಿಂದ ಹಿನ್ನೀರು ಪ್ರದೇಶ ಒತ್ತುವರಿ
ಪ್ರಶಾಂತ್​ ಬಿ.
| Edited By: |

Updated on: Jun 26, 2024 | 7:59 AM

Share

ಮಂಡ್ಯ, ಜೂನ್.26: ಗಣಿಗಾರಿಕೆ ಬಳಿಕ KRS ಅಣೆಕಟ್ಟೆಗೆ ಮತ್ತೊಂದು ಕಂಟಕ ಎದುರಾಗಿದೆ. ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ ‌ತಾಲೂಕಿನ ಕೆಆರ್​ಎಸ್​​ ಜಲಾಶಯದ ಹಿನ್ನೀರು ಪ್ರದೇಶವನ್ನು ಪ್ರಭಾವಿಗಳು ಒತ್ತುವರಿ ಮಾಡಿಕೊಳ್ಳುತ್ತಿದ್ದಾರೆ. ಭೂಗಳ್ಳರು ಅಣೆಕಟ್ಟೆ ಜಾಗವನ್ನೇ ನುಂಗಿ ನೀರು ಕುಡಿಯುತ್ತಿದ್ದಾರೆ. ಡ್ಯಾಂ ಜಾಗ ಒತ್ತುವರಿ (Encroachment) ಮಾಡ್ತಿದ್ರು ಅಧಿಕಾರಿಗಳು ಮಾತ್ರ ಜಾಣ ಮೌನರಾಗಿದ್ದಾರೆ.

ಸರ್ಕಾರಿ ದಾಖಲೆಗಳಲ್ಲಿ 3 ಎಕರೆ ಇದ್ರೂ ಹೆಚ್ಚುವರಿ ಭೂಮಿ ಒತ್ತುವರಿ ಆಗಿದೆ. ಒತ್ತುವರಿ ಜಾಗದಲ್ಲಿ ಟ್ರಂಚ್ ಹೊಡೆಸಿ ಫೆನ್ಸ್ ನಿರ್ಮಾಣಕ್ಕೆ ಸಿದ್ಧತೆ ನಡೆದಿದೆ. ಕೇರಳ ಮೂಲದ ನಕೇಶ್ ಜಾನ್ ಮ್ಯಾಥ್ಯು ಎಂಬುವವರು ಒತ್ತುವರಿ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಸರ್ವೆ ನಂ 279ರಲ್ಲಿ ಜಮೀನು ಹೊಂದಿರುವ ನಕೇಶ್ ಜಾನ್ ಮ್ಯಾಥ್ಯು ಅವರು ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಚಿಕ್ಕಾರಳ್ಳಿ‌ ಗ್ರಾಮದ ಸರ್ವೆ ನಂಬರ್​ನಲ್ಲಿ ಜಮೀನು ಹೊಂದಿದ್ದಾರೆ.

ಡ್ಯಾಂನ ನೀರು ಸಂಗ್ರಹದ ಕಣ್ಣಳತೆ ದೂರದಲ್ಲಿ ಒತ್ತುವರಿ ಆಗ್ತಿದ್ರು ಹೇಳೋರಿಲ್ಲ, ಕೇಳೋರಿಲ್ಲದಂತಾಗಿದೆ. ಸ್ಥಳೀಯ ಜನಪ್ರತಿನಿಧಿಗಳು, ರಾಜಕೀಯ ಮುಖಂಡರ ಸಹಾಯದಿಂದ ಅತಿಕ್ರಮಣ ಆರೋಪ ಕೇಳಿ ಬಂದಿದೆ. ಒತ್ತುವರಿ ತೆರವು ಮಾಡದಿದ್ರೆ ಡ್ಯಾಂಗೆ ಅಪಾಯ ಕಟ್ಟಿಟ್ಟ ಬುತ್ತಿ. ಅಕ್ರಮ ಒತ್ತುವರಿಯಿಂದಾಗಿ ಡ್ಯಾಂ ನೀರು ಸಂಗ್ರಹಕ್ಕೆ ಧಕ್ಕೆ ಸಾಧ್ಯತೆ. ಸಂಗ್ರಹ ಸಾಮರ್ಥ್ಯ ಕುಗ್ಗಿದ್ರೆ ಭವಿಷ್ಯದಲ್ಲಿ ನೀರಿಗೆ ಹಾಹಾಕಾರ ಎದುರಾಗಲಿದೆ. ಜಮೀನು ಮಾಲೀಕ ಟ್ರಂಚ್ ಹೊಡೆಸಿ ದೊಡ್ಡ ದೊಡ್ಡ ಕಲ್ಲುಗಳನ್ನ ಟ್ರಂಚ್​ಗೆ ಹಾಕಿಸಿದ್ದಾನೆ. ಕೂಡಲೇ ಒತ್ತುವರಿ ತೆರವು ಮಾಡಲು ಸ್ಥಳೀಯರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಬಿಬಿಎಂಪಿ ವ್ಯಾಪ್ತಿಯಲ್ಲಿವೆ ತೆರಿಗೆ ಕಟ್ಟದ 7 ಲಕ್ಷ ಆಸ್ತಿಗಳು; ಇ-ಖಾತಾ ಮೂಲಕ ಬಾಕಿ ತೆರಿಗೆ ವಸೂಲಿಗೆ ಪ್ಲಾನ್

ಕೃಷ್ಣ ರಾಜ ಸಾಗರ ಅಣೆಕಟ್ಟನ್ನು 1924 ರಲ್ಲಿ ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಿಗೆ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಲಾಯಿತು. ಇದು ಮೈಸೂರು ಮತ್ತು ಮಂಡ್ಯದಲ್ಲಿ ನೀರಾವರಿಗೆ ಪ್ರಮುಖ ನೀರಿನ ಮೂಲವಾಗಿದೆ. ಕೆಲ ತಿಂಗಳ ಹಿಂದೆ ಕೆಆರ್​​​​ಎಸ್ ಅಣೆಕಟ್ಟೆಯ ಸುತ್ತಮುತ್ತ ಗಣಿಗಾರಿಕೆಗೆ ನಿರ್ಬಂಧ ಹೇರಿ ಕರ್ನಾಟಕ ಹೈಕೋರ್ಟ್ ಆದೇಶಿಸಿತ್ತು. ಕೆಆರ್​ಎಸ್​ನ 20 ಕಿಲೋಮೀಟರ್ ವ್ಯಾಪ್ತಿಯಲ್ಲಿ ಗಣಿಗಾರಿಕೆಗೆ ನಿರ್ಬಂಧ ಹೇರಿ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ, ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ಪೀಠ ಆದೇಶ ನೀಡಿತ್ತು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ