AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಂದು ಧರ್ಮ ದಂಗಲ್​ಗೆ ಸಾಕ್ಷಿಯಾಗಲಿದ್ಯಾ ಮಂಡ್ಯ ಜಿಲ್ಲೆ? ಹನುಮ ಮಾಲಾಧಾರಿಗಳಿಂದ ಜಾಮಿಯಾ ಮಸೀದಿ ಪ್ರವೇಶಕ್ಕೆ ಸಿದ್ಧತೆ

ಜೂನ್ 4 ರಂದು ಸಹಸ್ರಾರು ಸಂಖ್ಯೆಯಲ್ಲಿ ಶ್ರೀರಂಗಪಟ್ಟಣ ಚಲೋ ಚಾಲನೆಗೆ ಸಿದ್ಧತೆ ನಡೆಯುತ್ತಿದ್ದು,  ಮಂಡ್ಯ ಜಿಲ್ಲೆ ಈಗ ಮತ್ತೊಂದು ಧರ್ಮ ದಂಗಲ್​ಗೆ ಸಾಕ್ಷಿಯಾಗಲಿದ್ಯಾ ಎನ್ನುವ ಮಾತು ಕೇಳಿಬರುತ್ತಿವೆ.

ಮತ್ತೊಂದು ಧರ್ಮ ದಂಗಲ್​ಗೆ ಸಾಕ್ಷಿಯಾಗಲಿದ್ಯಾ ಮಂಡ್ಯ ಜಿಲ್ಲೆ? ಹನುಮ ಮಾಲಾಧಾರಿಗಳಿಂದ ಜಾಮಿಯಾ ಮಸೀದಿ ಪ್ರವೇಶಕ್ಕೆ ಸಿದ್ಧತೆ
ಹನುಮ ಮಾಲಾಧಾರಿಗಳಿಂದ ಜಾಮಿಯಾ ಮಸೀದಿ ಪ್ರವೇಶಕ್ಕೆ ಸಿದ್ಧತೆ
TV9 Web
| Edited By: |

Updated on: May 31, 2022 | 9:22 AM

Share

ಮಂಡ್ಯ: ಈ ಬಾರಿಯ ಹನುಮ ಜಯಂತಿಗೆ ಜಿಲ್ಲೆಯ ಶ್ರೀರಂಗಟ್ಟಣದಲ್ಲಿರುವ ಜಾಮಿಯ ಮಸೀದಿಯಲ್ಲಿ ಪೂಜೆ ಸಲ್ಲಿಸಲು ಅವಕಾಶ ನೀಡುವಂತೆ ಹಿಂದು ಪರ ಸಂಘಟನೆಗಳು ಮನವಿ ಮಾಡಿಕೊಂಡಿದ್ದರು. ಹಾಗಾಗಿ ಜಾಮಿಯ ಮಸೀದಿಯಲ್ಲಿ ವಾಸಿಸುತ್ತಿದ್ದವರನ್ನು ಖಾಲಿ ಮಾಡಿಸುವಂತೆ ಭಜರಂಗದಳದ ಸದಸ್ಯರು ಸೂಚಿಸಿದ್ದರು. ಆದರೆ ಜಿಲ್ಲಾಡಳಿತದಿಂದ ಯಾವುದೇ ಸ್ಪಂದನೆ ಸಿಗದ ಹಿನ್ನಲೆ, ಜೂನ್ 4 ರಂದು ಸಹಸ್ರಾರು ಸಂಖ್ಯೆಯಲ್ಲಿ ಶ್ರೀರಂಗಪಟ್ಟಣ ಚಲೋ ಚಾಲನೆಗೆ ಸಿದ್ಧತೆ ನಡೆಯುತ್ತಿದ್ದು,  ಮಂಡ್ಯ ಜಿಲ್ಲೆ ಈಗ ಮತ್ತೊಂದು ಧರ್ಮ ದಂಗಲ್​ಗೆ ಸಾಕ್ಷಿಯಾಗಲಿದ್ಯಾ ಎನ್ನುವ ಮಾತು ಕೇಳಿಬರುತ್ತಿವೆ. ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದಿಂದ ಶ್ರೀರಂಗಪಟ್ಟಣ ಚಲೋಗೆ ಚಾಲನೆ ನೀಡಿದ್ದು, ಜೂನ್ 4 ರಂದು ಹನುಮ ಮಾಲಾದಾರಿಗಳಿಂದ  ಜಾಮಿಯ ಮಸೀದಿ ಪ್ರವೇಶಕ್ಕೆ ಸಿದ್ಧತೆ ಮಾಡಲಾಗುತ್ತಿದೆ. ಮೇ 20 ರಂದು ಜಿಲ್ಲಾಡಳಿತ, ಪ್ರಾಚೀನ ಹಾಗೂ ಪುರಾತತ್ವ ಇಲಾಖೆಗೆ ಹಿಂದು ಪರ ಸಂಘಟನೆಗಳು ವಾರಣಾಸಿಯ ಜ್ಞಾನವಾಪಿ ಮಸೀದಿಯಂತೆ ವಿಡಿಯೋ ಚಿತ್ರೀಕರಿಸಲು ಮನವಿ ಮಾಡಲಾಗಿತ್ತು.

ಶೃಂಗಾರ್ ಗೌರಿ-ಜ್ಞಾನವಾಪಿ ಮಸೀದಿ ಮೊಕದ್ದಮೆಗೆ ತಡೆ ನೀಡಲು ಸುಪ್ರೀಂ ನಿರಾಕರಣೆ

ಜ್ಞಾನವಾಪಿ ಮಸೀದಿಯ ಪಶ್ಚಿಮ ಗೋಡೆಯ ಹಿಂಭಾಗದಲ್ಲಿರುವ ಶೃಂಗಾರ್ ಗೌರಿ, ಗಣೇಶ, ಹನುಮಾನ್ ಮತ್ತು ನಂದಿ ದೇವರ ದೈನಂದಿನ ಪೂಜೆ ಮತ್ತು ಆಚರಣೆಗಳಿಗೆ ಅನುಮತಿ ಕೋರಿ ಸಲ್ಲಿಸಿದ ಅರ್ಜಿಯೊಂದಿಗೆ ಪ್ರಸ್ತುತ ಕಾನೂನು ಹೋರಾಟ ಪ್ರಾರಂಭವಾಗಿತ್ತು. ಅನಾದಿ ಕಾಲದಿಂದಲೂ ಶೃಂಗಾರ್ ಗೌರಿ ದೇವಿಯು ಸ್ಥಳದಲ್ಲಿ ನೆಲೆಸಿದ್ದಾಳೆ ಎಂದು ಅರ್ಜಿದಾರರು ವಾದಿಸಿದ್ದು, ಅದನ್ನು ಖಚಿತಪಡಿಸಿಕೊಳ್ಳಲು ನ್ಯಾಯಾಲಯವನ್ನು ಒತ್ತಾಯಿಸಿದರು.

ಇದನ್ನೂ ಓದಿ: ತುಳುನಾಡಿನಲ್ಲಿ ಪತ್ತನಾಜೆ : ನೇಮ, ಜಾತ್ರೆಗೆ ಬ್ರೇಕ್, ಕೃಷಿ ಕಾರ್ಯಕ್ಕೆ ಚಾಲನೆ

ಏಪ್ರಿಲ್ 26 ರಂದು ವಾರಣಾಸಿಯ ಸಿವಿಲ್ ನ್ಯಾಯಾಧೀಶ (ಹಿರಿಯ ವಿಭಾಗ) ರವಿಕುಮಾರ್ ದಿವಾಕರ್ ಅವರು ಅರ್ಜಿದಾರರ ವಾದದ ಮೇರೆಗೆ ವಿಡಿಯೊಗ್ರಫಿ ಸಮೀಕ್ಷೆಗೆ ಆದೇಶಿಸಿದರು. ನ್ಯಾಯಾಲಯದ ಕಮಿಷನರ್ ಅಜಯ್ ಕುಮಾರ್ ಮಿಶ್ರಾ ನೇತೃತ್ವದ ತಂಡವು ಮೇ 6 ರಂದು ಮಸೀದಿಯ ಹೊರಗಿನ ಕೆಲವು ಪ್ರದೇಶಗಳಲ್ಲಿ ಭಾಗಶಃ ಸಮೀಕ್ಷೆ ನಡೆಸಿದರೆ, ನ್ಯಾಯಾಲಯದ ಆದೇಶದ ವ್ಯಾಖ್ಯಾನದ ವಿವಾದದ ಕಾರಣ ಮರುದಿನ ಮಸೀದಿ ಸಂಕೀರ್ಣಕ್ಕೆ ಪ್ರವೇಶಿಸದಂತೆ ತಡೆಯಲಾಯಿತು. ಅಂತಿಮವಾಗಿ, ನ್ಯಾಯಾಲಯವು ಮಸೀದಿ ಆವರಣದ ವಿಡಿಯೊಗ್ರಫಿ ಸಮೀಕ್ಷೆಗೆ ಅನುಮತಿ ನೀಡಿತು, ಅದು ಮೇ 16 ರಂದು ಪೂರ್ಣಗೊಂಡಿತು. ವರದಿಯ ಮಾಹಿತಿಯನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿದ ಆರೋಪದಲ್ಲಿ ಅಡ್ವೊಕೇಟ್ ಕಮಿಷನರ್ ಅಜಯ್ ಮಿಶ್ರಾ ಅವರನ್ನು ವಜಾಗೊಳಿಸಲಾಯಿತು.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow Us
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ