AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಮುಂದುವರಿಯಲಿದೆ ಮಳೆ ಅನಾಹುತ, ದೇಶದಲ್ಲಿ ಸುನಾಮಿ ಬರುವ ಸಾಧ್ಯತೆಯೂ ಇದೆ -ಬೂಕನಕೆರೆಯಲ್ಲಿ ಕೋಡಿ ಮಠದ ಸ್ವಾಮೀಜಿ ಭವಿಷ್ಯ

ಭೂಮಿಯಿಂದ ಹೊಸ ವಿಷ ಜಂತುಗಳು ಉದ್ಭವಿಸಲಿವೆ. ಈ ಹಿಂದೆಯೂ ಕಾಡಿನಿಂದ ನಾಡಿಗೆ ಪ್ರಾಣಿಗಳು ಬರುವ ಬಗ್ಗೆಯೂ ಹೇಳಿದ್ದೆ ಎಂದು ತಮ್ಮ ತಾಜಾ ಭವಿಷ್ಯವನ್ನು ಸಮರ್ಥಿಸಿಕೊಳ್ಳುವ ಧಾಟಿಯಲ್ಲಿ ಕರಾಳ ಭವಿಷ್ಯದ  ಮುನ್ಸೂಚನೆ ನೀಡಿದ್ದಾರೆ ಕೋಡಿ ಮಠದ ಶ್ರೀಗಳು.

ರಾಜ್ಯದಲ್ಲಿ ಮುಂದುವರಿಯಲಿದೆ ಮಳೆ ಅನಾಹುತ, ದೇಶದಲ್ಲಿ ಸುನಾಮಿ ಬರುವ ಸಾಧ್ಯತೆಯೂ ಇದೆ -ಬೂಕನಕೆರೆಯಲ್ಲಿ ಕೋಡಿ ಮಠದ ಸ್ವಾಮೀಜಿ ಭವಿಷ್ಯ
ದೇಶದಲ್ಲಿ ಸುನಾಮಿ ಬರುವ ಸಾಧ್ಯತೆಯೂ ಇದೆ -ಬೂಕನಕೆರೆಯಲ್ಲಿ ಕೋಡಿ ಮಠದ ಶ್ರೀ ಭವಿಷ್ಯ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Sep 09, 2022 | 2:57 PM

ಮಂಡ್ಯ : ಹಾಸನ ಜಿಲ್ಲೆ ಅರಸೀಕೆರೆಯ ಕೋಡಿ ಮಠದ ಶ್ರೀ ಶಿವಾನಂದ ಶ್ರೀಗಳು (Shivananda Shivayogi Rajendra Swami) ಮತ್ತೊಮ್ಮೆ ರಾಜ್ಯದ ಆಗುಹೋಗುಗಗಳ ಬಗ್ಗೆ ಗಂಭೀರ ಭವಿಷ್ಯ ನುಡಿದಿದ್ದಾರೆ. ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಬೂಕನಕೆರೆಗೆ (Bukanakere) ಭೇಟಿ ನೀಡಿರುವ ಕೋಡಿ ಮಠದ ಶ್ರೀಗಳು (Kodi Mutt Shree) ರಾಜ್ಯಾದ್ಯಂತ ಮಳೆ ಅನಾಹುತ ಮುಂದುವರಿಯಲಿದೆ. ದೇಶದಲ್ಲಿ ಸುನಾಮಿ (Tsunami) ಬರುವ ಸಾಧ್ಯತೆಯೂ ಇದೆ ಎಂದು ಅಪಾಯದ ಎಚ್ಚರಿಕೆಯ ಗಂಟೆ ಬಾರಿಸಿದ್ದಾರೆ (Natural Calamities).

ಭೂಮಿಯಿಂದ ಹೊಸ ವಿಷ ಜಂತುಗಳು ಉದ್ಭವಿಸಲಿವೆ. ಜನರು ಓಡಾಡುವಾಗ ಬಡಿಗೆ ಹಿಡಿದು ಹೋಗುವ ಕಾಲ ಬರಲಿದೆ. ಈ ಹಿಂದೆಯೂ ನಾನು ಕೊರೊನಾ ಬಗ್ಗೆ ಭವಿಷ್ಯ ಹೇಳಿದ್ದೆ. ಕಾಡಿನಿಂದ ನಾಡಿಗೆ ಪ್ರಾಣಿಗಳು ಬರುವ ಬಗ್ಗೆಯೂ ಹೇಳಿದ್ದೆ ಎಂದು ತಮ್ಮ ತಾಜಾ ಭವಿಷ್ಯವನ್ನು ಸಮರ್ಥಿಸಿಕೊಳ್ಳುವ ಧಾಟಿಯಲ್ಲಿ ಕರಾಳ ಭವಿಷ್ಯದ ಬಗ್ಗೆ ಮುನ್ಸೂಚನೆ ನೀಡಿದ್ದಾರೆ ಕೋಡಿ ಮಠದ ಶ್ರೀಗಳು.

ಮಠದ ಶರಣರ ವಿರುದ್ಧ ಆರೋಪ -ಕೋಡಿ ಮಠದ ಶ್ರೀ ಶಿವಾನಂದ ಶ್ರೀಗಳು ಮಾರ್ಮಿಕ ಮಾತು

ಈ ಹಿಂದಿನ ನನ್ನ ಎಲ್ಲಾ ಮಾತುಗಳು ನಿಜವಾಗಿವೆ. ಇದಕ್ಕಿಂತಲೂ ಹೆಚ್ಚಿನ ಕಷ್ಟ ಕಾಲ ಎದುರಾಗಲಿದೆ. ಇದಕ್ಕೆಲ್ಲಾ ಪರಿಹಾರ ದೇವರನ್ನು ಪೂಜಿಸುವುದು. ಇತ್ತೀಚಿಗೆ ಭಗವಂತನ ಪೂಜೆ ಆಡಂಬರವಾಗಿದೆ. ಯೋಗ್ಯ ಸಾಧುಗಳಿದ್ದಾರೆ, ಗದ್ದುಗೆಗಳಿವೆ, ಎಲ್ಲರೂ ಸೇರಿ ಪ್ರಾರ್ಥಿಸಿದರೆ ಜಗತ್ತು ಉಳಿಯುತ್ತದೆ. ಮಠದ ವಿರುದ್ಧ ಹಾಗೂ ಶರಣರ ವಿರುದ್ಧ ಆರೋಪ ವಿಚಾರವಾಗಿ ಕೋಡಿ ಶ್ರೀ ಮಾರ್ಮಿಕವಾಗಿ ಉತ್ತರಿಸಿದರು.

ನೀಚಂಗೆ ದೊರೆತನವು, ಹೇಡಿಂಗೆ ಹಿರಿತನವು, ಮೂಢಂಗೆ ಗುರುತನವೂ ಸಿಕ್ಕಿರುವುದರಿಂದ ಈ ಪರಿಸ್ಥಿತಿ ಉದ್ಭವಿಸಿದೆ. ಇಂತಹ ಆರೋಪಗಳು ಮುಂದೆ ಮತ್ತಷ್ಟು ಹೆಚ್ಚಾಗಲಿವೆ ಎಂದು ಬೂಕನಕೆರೆಯಲ್ಲಿ ಭವಿಷ್ಯ ನುಡಿದ ಕೋಡಿ ಶ್ರೀಗಳು ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಾತನಾಡಲು ನಿರಾಕರಿಸಿದರು.

Published On - 2:35 pm, Fri, 9 September 22

ಷಷ್ಠಿಪೂರ್ತಿ ಯಾಕೆ ಆಚರಿಸಬೇಕು ಹಾಗೂ ಇದರ ಮಹತ್ವವೇನು?
ಷಷ್ಠಿಪೂರ್ತಿ ಯಾಕೆ ಆಚರಿಸಬೇಕು ಹಾಗೂ ಇದರ ಮಹತ್ವವೇನು?
ಈ ರಾಶಿಯವರಿಗೆ ಏಳು ಗ್ರಹಗಳ ಅನುಗ್ರಹ, ವ್ಯಾಪಾರದಲ್ಲಿ ಅಧಿಕ ಲಾಭ
ಈ ರಾಶಿಯವರಿಗೆ ಏಳು ಗ್ರಹಗಳ ಅನುಗ್ರಹ, ವ್ಯಾಪಾರದಲ್ಲಿ ಅಧಿಕ ಲಾಭ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು