AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಮುಂದುವರಿಯಲಿದೆ ಮಳೆ ಅನಾಹುತ, ದೇಶದಲ್ಲಿ ಸುನಾಮಿ ಬರುವ ಸಾಧ್ಯತೆಯೂ ಇದೆ -ಬೂಕನಕೆರೆಯಲ್ಲಿ ಕೋಡಿ ಮಠದ ಸ್ವಾಮೀಜಿ ಭವಿಷ್ಯ

ಭೂಮಿಯಿಂದ ಹೊಸ ವಿಷ ಜಂತುಗಳು ಉದ್ಭವಿಸಲಿವೆ. ಈ ಹಿಂದೆಯೂ ಕಾಡಿನಿಂದ ನಾಡಿಗೆ ಪ್ರಾಣಿಗಳು ಬರುವ ಬಗ್ಗೆಯೂ ಹೇಳಿದ್ದೆ ಎಂದು ತಮ್ಮ ತಾಜಾ ಭವಿಷ್ಯವನ್ನು ಸಮರ್ಥಿಸಿಕೊಳ್ಳುವ ಧಾಟಿಯಲ್ಲಿ ಕರಾಳ ಭವಿಷ್ಯದ  ಮುನ್ಸೂಚನೆ ನೀಡಿದ್ದಾರೆ ಕೋಡಿ ಮಠದ ಶ್ರೀಗಳು.

ರಾಜ್ಯದಲ್ಲಿ ಮುಂದುವರಿಯಲಿದೆ ಮಳೆ ಅನಾಹುತ, ದೇಶದಲ್ಲಿ ಸುನಾಮಿ ಬರುವ ಸಾಧ್ಯತೆಯೂ ಇದೆ -ಬೂಕನಕೆರೆಯಲ್ಲಿ ಕೋಡಿ ಮಠದ ಸ್ವಾಮೀಜಿ ಭವಿಷ್ಯ
ದೇಶದಲ್ಲಿ ಸುನಾಮಿ ಬರುವ ಸಾಧ್ಯತೆಯೂ ಇದೆ -ಬೂಕನಕೆರೆಯಲ್ಲಿ ಕೋಡಿ ಮಠದ ಶ್ರೀ ಭವಿಷ್ಯ
TV9 Web
| Edited By: |

Updated on:Sep 09, 2022 | 2:57 PM

Share

ಮಂಡ್ಯ : ಹಾಸನ ಜಿಲ್ಲೆ ಅರಸೀಕೆರೆಯ ಕೋಡಿ ಮಠದ ಶ್ರೀ ಶಿವಾನಂದ ಶ್ರೀಗಳು (Shivananda Shivayogi Rajendra Swami) ಮತ್ತೊಮ್ಮೆ ರಾಜ್ಯದ ಆಗುಹೋಗುಗಗಳ ಬಗ್ಗೆ ಗಂಭೀರ ಭವಿಷ್ಯ ನುಡಿದಿದ್ದಾರೆ. ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಬೂಕನಕೆರೆಗೆ (Bukanakere) ಭೇಟಿ ನೀಡಿರುವ ಕೋಡಿ ಮಠದ ಶ್ರೀಗಳು (Kodi Mutt Shree) ರಾಜ್ಯಾದ್ಯಂತ ಮಳೆ ಅನಾಹುತ ಮುಂದುವರಿಯಲಿದೆ. ದೇಶದಲ್ಲಿ ಸುನಾಮಿ (Tsunami) ಬರುವ ಸಾಧ್ಯತೆಯೂ ಇದೆ ಎಂದು ಅಪಾಯದ ಎಚ್ಚರಿಕೆಯ ಗಂಟೆ ಬಾರಿಸಿದ್ದಾರೆ (Natural Calamities).

ಭೂಮಿಯಿಂದ ಹೊಸ ವಿಷ ಜಂತುಗಳು ಉದ್ಭವಿಸಲಿವೆ. ಜನರು ಓಡಾಡುವಾಗ ಬಡಿಗೆ ಹಿಡಿದು ಹೋಗುವ ಕಾಲ ಬರಲಿದೆ. ಈ ಹಿಂದೆಯೂ ನಾನು ಕೊರೊನಾ ಬಗ್ಗೆ ಭವಿಷ್ಯ ಹೇಳಿದ್ದೆ. ಕಾಡಿನಿಂದ ನಾಡಿಗೆ ಪ್ರಾಣಿಗಳು ಬರುವ ಬಗ್ಗೆಯೂ ಹೇಳಿದ್ದೆ ಎಂದು ತಮ್ಮ ತಾಜಾ ಭವಿಷ್ಯವನ್ನು ಸಮರ್ಥಿಸಿಕೊಳ್ಳುವ ಧಾಟಿಯಲ್ಲಿ ಕರಾಳ ಭವಿಷ್ಯದ ಬಗ್ಗೆ ಮುನ್ಸೂಚನೆ ನೀಡಿದ್ದಾರೆ ಕೋಡಿ ಮಠದ ಶ್ರೀಗಳು.

ಮಠದ ಶರಣರ ವಿರುದ್ಧ ಆರೋಪ -ಕೋಡಿ ಮಠದ ಶ್ರೀ ಶಿವಾನಂದ ಶ್ರೀಗಳು ಮಾರ್ಮಿಕ ಮಾತು

ಈ ಹಿಂದಿನ ನನ್ನ ಎಲ್ಲಾ ಮಾತುಗಳು ನಿಜವಾಗಿವೆ. ಇದಕ್ಕಿಂತಲೂ ಹೆಚ್ಚಿನ ಕಷ್ಟ ಕಾಲ ಎದುರಾಗಲಿದೆ. ಇದಕ್ಕೆಲ್ಲಾ ಪರಿಹಾರ ದೇವರನ್ನು ಪೂಜಿಸುವುದು. ಇತ್ತೀಚಿಗೆ ಭಗವಂತನ ಪೂಜೆ ಆಡಂಬರವಾಗಿದೆ. ಯೋಗ್ಯ ಸಾಧುಗಳಿದ್ದಾರೆ, ಗದ್ದುಗೆಗಳಿವೆ, ಎಲ್ಲರೂ ಸೇರಿ ಪ್ರಾರ್ಥಿಸಿದರೆ ಜಗತ್ತು ಉಳಿಯುತ್ತದೆ. ಮಠದ ವಿರುದ್ಧ ಹಾಗೂ ಶರಣರ ವಿರುದ್ಧ ಆರೋಪ ವಿಚಾರವಾಗಿ ಕೋಡಿ ಶ್ರೀ ಮಾರ್ಮಿಕವಾಗಿ ಉತ್ತರಿಸಿದರು.

ನೀಚಂಗೆ ದೊರೆತನವು, ಹೇಡಿಂಗೆ ಹಿರಿತನವು, ಮೂಢಂಗೆ ಗುರುತನವೂ ಸಿಕ್ಕಿರುವುದರಿಂದ ಈ ಪರಿಸ್ಥಿತಿ ಉದ್ಭವಿಸಿದೆ. ಇಂತಹ ಆರೋಪಗಳು ಮುಂದೆ ಮತ್ತಷ್ಟು ಹೆಚ್ಚಾಗಲಿವೆ ಎಂದು ಬೂಕನಕೆರೆಯಲ್ಲಿ ಭವಿಷ್ಯ ನುಡಿದ ಕೋಡಿ ಶ್ರೀಗಳು ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಾತನಾಡಲು ನಿರಾಕರಿಸಿದರು.

Published On - 2:35 pm, Fri, 9 September 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?