AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನುಷ್ಯರಂತೆ ಕೋತಿಯ ಅಂತಿಮಸಂಸ್ಕಾರ ನೆರವೇರಿಸಿದ ಗ್ರಾಮಸ್ಥರು, 11ನೇ ದಿನಕ್ಕೆ ತಿಥಿ ಇದೆ

ವಿದ್ಯುತ್ ಶಾಕ್ ನಿಂದ ಕೋತಿ ಮೃತಪಟ್ಟ ಹಿನ್ನೆಲೆ ಮೊತ್ತಹಳ್ಳಿ ಗ್ರಾಮಸ್ಥರಲ್ಲಿ ದುಃಖ ಮನೆ ಮಾಡಿತ್ತು. ಚಟ್ಟ ಕಟ್ಟಿ ಅದರ ಮೇಲೆ ಕೋತಿಯ ಶವವನ್ನಿಟ್ಟು, ತಮಟೆ ಬಾರಿಸುತ್ತಾ ಗ್ರಾಮದಲ್ಲಿ ಮೆರವಣಿಗೆ ಮಾಡಿದರು.

ಮನುಷ್ಯರಂತೆ ಕೋತಿಯ ಅಂತಿಮಸಂಸ್ಕಾರ ನೆರವೇರಿಸಿದ ಗ್ರಾಮಸ್ಥರು, 11ನೇ ದಿನಕ್ಕೆ ತಿಥಿ ಇದೆ
ಮನುಷ್ಯರಂತೆ ಕೋತಿಯ ಅಂತಿಮಸಂಸ್ಕಾರ
ಸಾಧು ಶ್ರೀನಾಥ್​
|

Updated on: Jun 24, 2023 | 1:36 PM

Share

ಮಂಡ್ಯ: ಮನುಷ್ಯರಿಗೆ ಮಾಡುವಂತೆ ಸತ್ತ ಕೋತಿಯ (Monkey) ಅಂತಿಮಸಂಸ್ಕಾರವನ್ನು ಗ್ರಾಮಸ್ಥರು ನಡೆಸಿದರು. ಮಂಡ್ಯ ಜಿಲ್ಲೆ ಮಂಡ್ಯ (Mandya) ತಾಲೂಕಿನ ಮೊತ್ತಹಳ್ಳಿ ಗ್ರಾಮದಲ್ಲಿ ವಿದ್ಯುತ್ ಸ್ಪರ್ಶದಿಂದ (Electrocution) ಕೋತಿ ಸಾವನ್ನಪ್ಪಿತ್ತು. ಆ ಕೋತಿಯ ಅಂತ್ಯಸಂಸ್ಕಾರವನ್ನು (Last Rites) ಗ್ರಾಮಸ್ಥರು ಸಂಪ್ರದಾಯಬದ್ಧವಾಗಿ ಮಾಡಿದರು. ಅಂದಹಾಗೆ ಆ ಕಪಿರಾಯ ಗ್ರಾಮಸ್ಥರ ಜೊತೆ ಮನೆ ಮಗುವಿನಂತೆ ಇಷ್ಟು ದಿನ ಆಟವಾಡಿಕೊಂಡಿತ್ತು. ಹಾಗಾಗಿ ಗ್ರಾಮಸ್ಥರೂ ಆ ಮಂಗನನ್ನ ಪ್ರೀತಿಯಿಂದ ನೋಡಿಕೊಂಡಿದ್ದರು.

ವಿದ್ಯುತ್ ಶಾಕ್ ನಿಂದ ಕೋತಿ ಮೃತಪಟ್ಟ ಹಿನ್ನೆಲೆ ಗ್ರಾಮಸ್ಥರಲ್ಲಿ ದುಃಖ ಮನೆ ಮಾಡಿತ್ತು. ಚಟ್ಟ ಕಟ್ಟಿ ಅದರ ಮೇಲೆ ಕೋತಿಯ ಶವವನ್ನಿಟ್ಟು, ನಾಲ್ಕು ಜನ ಅದನ್ನು ಹೊತ್ತುಕೊಂಡು, ತಮಟೆ ಬಾರಿಸುತ್ತಾ ಗ್ರಾಮದಲ್ಲಿ ಮೆರವಣಿಗೆ ಮಾಡಿದರು.

ಬಳಿಕ ಮನುಷ್ಯರಿಗೆ ಮಾಡುವ ಶವಸಂಸ್ಕಾರದ ರೀತಿ ಕೋತಿಗೂ ಅಂತ್ಯಸಂಸ್ಕಾರ ನೆರವೇರಿಸಿದರು ಗ್ರಾಮಸ್ಥರು. ಗ್ರಾಮದ ಮುಖಂಡ ಸಚ್ಚಿನ್ ನೇತೃತ್ವದಲ್ಲಿ ಕೋತಿಯ ಅಂತ್ಯಸಂಸ್ಕಾರ ನೆರವೇರಿತು. 11 ದಿನಕ್ಕೆ ತಿಥಿ ಕಾರ್ಯ ಮಾಡುವುದಕ್ಕೂ ಗ್ರಾಮಸ್ಥರು ಅದಾಗಲೇ ಸಿದ್ದತೆ ನಡೆಸಿದ್ದಾರೆ.

ಮಂಡ್ಯ ಜಿಲ್ಲಾ ವರದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ