AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನುಷ್ಯರಂತೆ ಕೋತಿಯ ಅಂತಿಮಸಂಸ್ಕಾರ ನೆರವೇರಿಸಿದ ಗ್ರಾಮಸ್ಥರು, 11ನೇ ದಿನಕ್ಕೆ ತಿಥಿ ಇದೆ

ವಿದ್ಯುತ್ ಶಾಕ್ ನಿಂದ ಕೋತಿ ಮೃತಪಟ್ಟ ಹಿನ್ನೆಲೆ ಮೊತ್ತಹಳ್ಳಿ ಗ್ರಾಮಸ್ಥರಲ್ಲಿ ದುಃಖ ಮನೆ ಮಾಡಿತ್ತು. ಚಟ್ಟ ಕಟ್ಟಿ ಅದರ ಮೇಲೆ ಕೋತಿಯ ಶವವನ್ನಿಟ್ಟು, ತಮಟೆ ಬಾರಿಸುತ್ತಾ ಗ್ರಾಮದಲ್ಲಿ ಮೆರವಣಿಗೆ ಮಾಡಿದರು.

ಮನುಷ್ಯರಂತೆ ಕೋತಿಯ ಅಂತಿಮಸಂಸ್ಕಾರ ನೆರವೇರಿಸಿದ ಗ್ರಾಮಸ್ಥರು, 11ನೇ ದಿನಕ್ಕೆ ತಿಥಿ ಇದೆ
ಮನುಷ್ಯರಂತೆ ಕೋತಿಯ ಅಂತಿಮಸಂಸ್ಕಾರ
Follow us
ಸಾಧು ಶ್ರೀನಾಥ್​
|

Updated on: Jun 24, 2023 | 1:36 PM

ಮಂಡ್ಯ: ಮನುಷ್ಯರಿಗೆ ಮಾಡುವಂತೆ ಸತ್ತ ಕೋತಿಯ (Monkey) ಅಂತಿಮಸಂಸ್ಕಾರವನ್ನು ಗ್ರಾಮಸ್ಥರು ನಡೆಸಿದರು. ಮಂಡ್ಯ ಜಿಲ್ಲೆ ಮಂಡ್ಯ (Mandya) ತಾಲೂಕಿನ ಮೊತ್ತಹಳ್ಳಿ ಗ್ರಾಮದಲ್ಲಿ ವಿದ್ಯುತ್ ಸ್ಪರ್ಶದಿಂದ (Electrocution) ಕೋತಿ ಸಾವನ್ನಪ್ಪಿತ್ತು. ಆ ಕೋತಿಯ ಅಂತ್ಯಸಂಸ್ಕಾರವನ್ನು (Last Rites) ಗ್ರಾಮಸ್ಥರು ಸಂಪ್ರದಾಯಬದ್ಧವಾಗಿ ಮಾಡಿದರು. ಅಂದಹಾಗೆ ಆ ಕಪಿರಾಯ ಗ್ರಾಮಸ್ಥರ ಜೊತೆ ಮನೆ ಮಗುವಿನಂತೆ ಇಷ್ಟು ದಿನ ಆಟವಾಡಿಕೊಂಡಿತ್ತು. ಹಾಗಾಗಿ ಗ್ರಾಮಸ್ಥರೂ ಆ ಮಂಗನನ್ನ ಪ್ರೀತಿಯಿಂದ ನೋಡಿಕೊಂಡಿದ್ದರು.

ವಿದ್ಯುತ್ ಶಾಕ್ ನಿಂದ ಕೋತಿ ಮೃತಪಟ್ಟ ಹಿನ್ನೆಲೆ ಗ್ರಾಮಸ್ಥರಲ್ಲಿ ದುಃಖ ಮನೆ ಮಾಡಿತ್ತು. ಚಟ್ಟ ಕಟ್ಟಿ ಅದರ ಮೇಲೆ ಕೋತಿಯ ಶವವನ್ನಿಟ್ಟು, ನಾಲ್ಕು ಜನ ಅದನ್ನು ಹೊತ್ತುಕೊಂಡು, ತಮಟೆ ಬಾರಿಸುತ್ತಾ ಗ್ರಾಮದಲ್ಲಿ ಮೆರವಣಿಗೆ ಮಾಡಿದರು.

ಬಳಿಕ ಮನುಷ್ಯರಿಗೆ ಮಾಡುವ ಶವಸಂಸ್ಕಾರದ ರೀತಿ ಕೋತಿಗೂ ಅಂತ್ಯಸಂಸ್ಕಾರ ನೆರವೇರಿಸಿದರು ಗ್ರಾಮಸ್ಥರು. ಗ್ರಾಮದ ಮುಖಂಡ ಸಚ್ಚಿನ್ ನೇತೃತ್ವದಲ್ಲಿ ಕೋತಿಯ ಅಂತ್ಯಸಂಸ್ಕಾರ ನೆರವೇರಿತು. 11 ದಿನಕ್ಕೆ ತಿಥಿ ಕಾರ್ಯ ಮಾಡುವುದಕ್ಕೂ ಗ್ರಾಮಸ್ಥರು ಅದಾಗಲೇ ಸಿದ್ದತೆ ನಡೆಸಿದ್ದಾರೆ.

ಮಂಡ್ಯ ಜಿಲ್ಲಾ ವರದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಿಮಗೆ ಇಂಗ್ಲಿಷ್ ಬರದಿದ್ದರೆ ಸುಮ್ಮನಿರಿ, ಪಾಕ್​ ರಕ್ಷಣಾ ಸಚಿವಗೆ ತರಾಟೆ
ನಿಮಗೆ ಇಂಗ್ಲಿಷ್ ಬರದಿದ್ದರೆ ಸುಮ್ಮನಿರಿ, ಪಾಕ್​ ರಕ್ಷಣಾ ಸಚಿವಗೆ ತರಾಟೆ
ಹಿಂದೂಗಳು ದುರ್ಬಲರು, ಆತ್ಮಹತ್ಯಾ ಬಾಂಬರ್​ಗಳನ್ನು ಕಳುಹಿಸುತ್ತೇನೆ
ಹಿಂದೂಗಳು ದುರ್ಬಲರು, ಆತ್ಮಹತ್ಯಾ ಬಾಂಬರ್​ಗಳನ್ನು ಕಳುಹಿಸುತ್ತೇನೆ
ರಾಕೇಶ್ ಪೂಜಾರಿ ತಂಗಿ ವಿಚಾರದಲ್ಲಿ ದೊಡ್ಡ ನಿರ್ಧಾರ ತೆಗೆದುಕೊಂಡ ಆನಂದ್
ರಾಕೇಶ್ ಪೂಜಾರಿ ತಂಗಿ ವಿಚಾರದಲ್ಲಿ ದೊಡ್ಡ ನಿರ್ಧಾರ ತೆಗೆದುಕೊಂಡ ಆನಂದ್
ಡಿಜಿಎಂಒಗಳ ಸಭೆಯಲ್ಲೂ ಪಾಕಿಸ್ತಾನಕ್ಕೆ ತಪರಾಕಿ, ತಂಟೆಗೆ ಬಂದರೆ ಜೋಕೆ!
ಡಿಜಿಎಂಒಗಳ ಸಭೆಯಲ್ಲೂ ಪಾಕಿಸ್ತಾನಕ್ಕೆ ತಪರಾಕಿ, ತಂಟೆಗೆ ಬಂದರೆ ಜೋಕೆ!
ಶಾಲೆಗೆ ಬರಲು ನಮಗೆ ಯಾವ ಭಯವೂ ಇಲ್ಲ ಎನ್ನುತ್ತಿರುವ ಮಕ್ಕಳು
ಶಾಲೆಗೆ ಬರಲು ನಮಗೆ ಯಾವ ಭಯವೂ ಇಲ್ಲ ಎನ್ನುತ್ತಿರುವ ಮಕ್ಕಳು
ನೆಲಮಂಗಲ: ಆಯಿಲ್ ಗೋಡೌನ್​ಗೆ ಬೆಂಕಿ, ಧಗಧಗಿಸಿದ ಗೋದಾಮು
ನೆಲಮಂಗಲ: ಆಯಿಲ್ ಗೋಡೌನ್​ಗೆ ಬೆಂಕಿ, ಧಗಧಗಿಸಿದ ಗೋದಾಮು
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ