AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನುಷ್ಯರಂತೆ ಕೋತಿಯ ಅಂತಿಮಸಂಸ್ಕಾರ ನೆರವೇರಿಸಿದ ಗ್ರಾಮಸ್ಥರು, 11ನೇ ದಿನಕ್ಕೆ ತಿಥಿ ಇದೆ

ವಿದ್ಯುತ್ ಶಾಕ್ ನಿಂದ ಕೋತಿ ಮೃತಪಟ್ಟ ಹಿನ್ನೆಲೆ ಮೊತ್ತಹಳ್ಳಿ ಗ್ರಾಮಸ್ಥರಲ್ಲಿ ದುಃಖ ಮನೆ ಮಾಡಿತ್ತು. ಚಟ್ಟ ಕಟ್ಟಿ ಅದರ ಮೇಲೆ ಕೋತಿಯ ಶವವನ್ನಿಟ್ಟು, ತಮಟೆ ಬಾರಿಸುತ್ತಾ ಗ್ರಾಮದಲ್ಲಿ ಮೆರವಣಿಗೆ ಮಾಡಿದರು.

ಮನುಷ್ಯರಂತೆ ಕೋತಿಯ ಅಂತಿಮಸಂಸ್ಕಾರ ನೆರವೇರಿಸಿದ ಗ್ರಾಮಸ್ಥರು, 11ನೇ ದಿನಕ್ಕೆ ತಿಥಿ ಇದೆ
ಮನುಷ್ಯರಂತೆ ಕೋತಿಯ ಅಂತಿಮಸಂಸ್ಕಾರ
ಸಾಧು ಶ್ರೀನಾಥ್​
|

Updated on: Jun 24, 2023 | 1:36 PM

Share

ಮಂಡ್ಯ: ಮನುಷ್ಯರಿಗೆ ಮಾಡುವಂತೆ ಸತ್ತ ಕೋತಿಯ (Monkey) ಅಂತಿಮಸಂಸ್ಕಾರವನ್ನು ಗ್ರಾಮಸ್ಥರು ನಡೆಸಿದರು. ಮಂಡ್ಯ ಜಿಲ್ಲೆ ಮಂಡ್ಯ (Mandya) ತಾಲೂಕಿನ ಮೊತ್ತಹಳ್ಳಿ ಗ್ರಾಮದಲ್ಲಿ ವಿದ್ಯುತ್ ಸ್ಪರ್ಶದಿಂದ (Electrocution) ಕೋತಿ ಸಾವನ್ನಪ್ಪಿತ್ತು. ಆ ಕೋತಿಯ ಅಂತ್ಯಸಂಸ್ಕಾರವನ್ನು (Last Rites) ಗ್ರಾಮಸ್ಥರು ಸಂಪ್ರದಾಯಬದ್ಧವಾಗಿ ಮಾಡಿದರು. ಅಂದಹಾಗೆ ಆ ಕಪಿರಾಯ ಗ್ರಾಮಸ್ಥರ ಜೊತೆ ಮನೆ ಮಗುವಿನಂತೆ ಇಷ್ಟು ದಿನ ಆಟವಾಡಿಕೊಂಡಿತ್ತು. ಹಾಗಾಗಿ ಗ್ರಾಮಸ್ಥರೂ ಆ ಮಂಗನನ್ನ ಪ್ರೀತಿಯಿಂದ ನೋಡಿಕೊಂಡಿದ್ದರು.

ವಿದ್ಯುತ್ ಶಾಕ್ ನಿಂದ ಕೋತಿ ಮೃತಪಟ್ಟ ಹಿನ್ನೆಲೆ ಗ್ರಾಮಸ್ಥರಲ್ಲಿ ದುಃಖ ಮನೆ ಮಾಡಿತ್ತು. ಚಟ್ಟ ಕಟ್ಟಿ ಅದರ ಮೇಲೆ ಕೋತಿಯ ಶವವನ್ನಿಟ್ಟು, ನಾಲ್ಕು ಜನ ಅದನ್ನು ಹೊತ್ತುಕೊಂಡು, ತಮಟೆ ಬಾರಿಸುತ್ತಾ ಗ್ರಾಮದಲ್ಲಿ ಮೆರವಣಿಗೆ ಮಾಡಿದರು.

ಬಳಿಕ ಮನುಷ್ಯರಿಗೆ ಮಾಡುವ ಶವಸಂಸ್ಕಾರದ ರೀತಿ ಕೋತಿಗೂ ಅಂತ್ಯಸಂಸ್ಕಾರ ನೆರವೇರಿಸಿದರು ಗ್ರಾಮಸ್ಥರು. ಗ್ರಾಮದ ಮುಖಂಡ ಸಚ್ಚಿನ್ ನೇತೃತ್ವದಲ್ಲಿ ಕೋತಿಯ ಅಂತ್ಯಸಂಸ್ಕಾರ ನೆರವೇರಿತು. 11 ದಿನಕ್ಕೆ ತಿಥಿ ಕಾರ್ಯ ಮಾಡುವುದಕ್ಕೂ ಗ್ರಾಮಸ್ಥರು ಅದಾಗಲೇ ಸಿದ್ದತೆ ನಡೆಸಿದ್ದಾರೆ.

ಮಂಡ್ಯ ಜಿಲ್ಲಾ ವರದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!