Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿ.ವೈ. ವಿಜಯೇಂದ್ರ ಮುಂದಿನ ಸಿಎಂ: ಸಚಿವ ಕೆ.ಸಿ.ನಾರಾಯಣಗೌಡ

ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಮುಂದಿನ ಸಿಎಂ ಹಾಗುವ ಲಕ್ಷಣ ಇದೆ. ತಂದೆಗೆ ತಕ್ಕ ಮಗ ವಿಜಯೇಂದ್ರ ಅವರು ಎಂದು ಮಂಡ್ಯದ ಖಾಸಗಿ ಹೋಟೇಲ್ ನಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಸಚಿವ ಕೆ.ಸಿ.ನಾರಾಯಣಗೌಡ ಭವಿಷ್ಯ ನುಡಿದಿದ್ದಾರೆ.

ಬಿ.ವೈ. ವಿಜಯೇಂದ್ರ ಮುಂದಿನ ಸಿಎಂ: ಸಚಿವ ಕೆ.ಸಿ.ನಾರಾಯಣಗೌಡ
ಕೆ ಸಿ ನಾರಾಯಣಗೌಡ
Follow us
TV9 Web
| Updated By: ವಿವೇಕ ಬಿರಾದಾರ

Updated on: Jun 07, 2022 | 2:13 PM

ಮಂಡ್ಯ: ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಮುಂದಿನ ಸಿಎಂ ಹಾಗುವ ಲಕ್ಷಣ ಇದೆ. ತಂದೆಗೆ ತಕ್ಕ ಮಗ ವಿಜಯೇಂದ್ರ ಅವರು ಎಂದು ಮಂಡ್ಯದ ಖಾಸಗಿ ಹೋಟೇಲ್ ನಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಸಚಿವ ಕೆ.ಸಿ.ನಾರಾಯಣಗೌಡ ಭವಿಷ್ಯ ನುಡಿದಿದ್ದಾರೆ. ದಕ್ಷಿಣ ಪದವಿದರರ ಕ್ಷೇತ್ರಕ್ಕೆ ಚುನಾವಣೆ ಹಿನ್ನಲೆ ತಮ್ಮ ಅಭ್ಯರ್ಥಿ ಮೈ.ವಿ ರವಿಶಂಕರ್ ಪರ ಬಿವೈ ವಿಜಯೇಂದ್ರ ಪ್ರಚಾರಕ್ಕೆ ಆಗಮಿಸಿದ ವೇಳೆ ಮಾತನಾಡಿದ  ಅವರು  ವಿಜಯೇಂದ್ರ ಅವರನ್ನು  ಬಹುಮತದಿಂದ ಗೆಲ್ಲಿಸಿದರೆ ಮಂಡ್ಯ ಜಿಲ್ಲೆಯಲ್ಲಿ ನಮಗೆ ಮತಷ್ಟು ಶಕ್ತಿ ಬರುತ್ತೆ. ನಾವು ಮಾಡಿದ ಕೆಲಸವನ್ನ ಎಲ್ಲರಿಗೂ ತಿಳಿಸಬೇಕು. ಮಂಡ್ಯಕ್ಕೆ ಎರಡೂ ಪಕ್ಷದಿಂದ ದೊಡ್ಡ ಕೊಡುಗೆ ಏನು ಇಲ್ಲ. ನಮ್ಮ ಯಡಿಯೂರಪ್ಪ ಅವರು ಕೊಡುಗೆ ಕೊಟ್ಟಿದ್ದಾರೆ.  2 ಸಾವಿರಕೋಟಿ ಜಲಧಾರೆ ಕೊಟ್ಟಿದ್ದಾರೆ. ನಮ್ಮ ಯಡಿಯೂರಪ್ಪ ಅವರು ದೊಡ್ಡ ಮಟ್ಟದಲ್ಲಿ ಕೆಲಸ ಮಾಡಿದ್ದಾರೆ ಎಂದು ಹೇಳಿದರು.

ಇದನ್ನು ಓದಿ: ಶುಲ್ಕ ಪಟ್ಟಿ ನೋಡಿ ಸಂಶೋಧನಾ ವಿದ್ಯಾರ್ಥಿಗಳು ತಬ್ಬಿಬ್ಬು

ಕರ್ನಾಟಕದಲ್ಲಿ ಬಿಜೆಪಿಯನ್ನ ಮತ್ತೊಮ್ಮೆ ಅಧಿಕಾರಕ್ಕೆ ತಂದರು ಅವರನ್ನ ನಂಬಿ ನಾವೇಲ್ಲ ಬಿಜೆಪಿಗೆ ಹೋಗಿದ್ದೇವೆ ಕೊರೊನಾ ಸಂದರ್ಭದಲ್ಲಿ ನಮಗೆ ಹಣದ ಕೊರತೆ ಕೊಟ್ಟಿಲ್ಲ. ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಅವರು ಯಡಿಯೂರಪ್ಪ ಅವರ ಬಲಗೈ ಬಂಟ ಆಗಿದ್ದಾರೆ.  ಯಡಿಯೂರಪ್ಪ ಅವರು ರಾಜಿನಾಮೇ ವೇಳೆ  ಆನಂದಿಂದ ಕಣ್ಣಿರಿಟ್ಟರು. ಮುಂದೆ 150 ಕ್ಕೂ ಹೆಚ್ಚು ಸೀಟ್ ಕೊಡುತ್ತಾರೆ ಅವರ ನೇತೃತ್ವದಲ್ಲಿ ನಾವು ಗೆದ್ದೆ ಗೆಲ್ಲುತ್ತೇವೆ. ಮಂಡ್ಯದಲ್ಲೂ 7 ಸೀಟುಗಳನ್ನ ಗೆಲ್ಲುತ್ತೇವೆ ಎಂದರು.

ಹಳೆ ಮೈಸೂರು ಭಾಗವನ್ನ ವಿಜಯೇಂದ್ರ ನೇತೃತ್ವ ವಹಿಸುತ್ತಾರೆ. ಕರ್ನಾಟಕದಲ್ಲಿ ಶಿವಮೊಗ್ಗ ಜಿಲ್ಲೆಯ ಉಸ್ತುವಾರಿ ಕೊಟ್ಟಿದ್ದಾರೆ. ಯಡಿಯೂರಪ್ಪ ಅವರ ಆಶಯದಂತೆ ವಿಜಯೇಂದ್ರ ಕೆಲಸ ಮಾಡ್ತಿದ್ದಾರೆ‌‌. ಮಂಡ್ಯದಲ್ಲಿ 5 ಸೀಟ್ ಗೆಲ್ಲಿಸಿಕೊಡ್ತೇವೆ. ಯಡಿಯೂರಪ್ಪ ಜನ್ಮ ಭೂಮಿ ಬೂಕನಕೆರೆ, ಮಂಡ್ಯದಲ್ಲಿ ವಿದ್ಯಾಭ್ಯಾಸ ಮಾಡಿದರು ಅವರು ಓದಿದ ಸ್ಕೂಲ್ ಕಾಲೇಜಿಗೆ ಅನುದಾನ ಕೊಟ್ಟಿದ್ದಾರೆ. 2ನೇ ಶಿಕಾರಿಪುರವಾಗಿ ಕೆ.ಆರ್.ಪೇಟೆ ಬದಲಾಗುತ್ತೆ ನಾನು ತ್ಯಾಗ ಮಾಡಿದ್ದೆ, ಅದಕ್ಕಾಗಿ ನಮ್ಮ ಕೆ.ಆರ್.ಪೇಟೆಗೆ ಸಾಕಷ್ಟು ಅನುದಾನ ನೀಡಿದ್ದಾರೆ ಎಂದು ತಿಳಿಸಿದರು.

ಇದನ್ನು ಓದಿ: ಹಿಜಾಬ್ ಧರಿಸಿ ಬಂದಿದ್ದ ಉಪ್ಪಿನಂಗಡಿ 24 ವಿದ್ಯಾರ್ಥಿನಿಯರಿಗೆ ಕಾಲೇಜಿಗೆ ಬಾರದಂತೆ ನಿರ್ಬಂಧ!

ಕಾರ್ಯಕ್ರಮಕ್ಕು ಮುಂಚೆ ಹಾಸ್ಯ ಪ್ರಸಂಗವೊಂದು ನಡೆಯಿತು. ಮಂಡ್ಯ ಜಿಲ್ಲೆಗೆ ಆಗಮಿಸಿದ ಬಿ.ವೈ ವಿಜಯೇಂದ್ರಗೆ ಬಿಜೆಪಿ ಮುಖಂಡರು ಸೇಬಿನ ಹಾರ ಹಾಕಿ ಸ್ವಾಗತ ಮಾಡಿದರು. ಈ ವೇಳೆ ಸೇಬು ನೋಡುತ್ತಿದ್ದಂತೆ ಮುಗಿ ಬಿದ್ದ ಕಾರ್ಯಕರ್ತರು, ಸೇಬನ್ನು ಕಿತ್ತು ತಿಂದಿದ್ದಾರೆ. ಇನ್ನು ವಿಜಯೇಂದ್ರಗೆ ಡೊಳ್ಳು ತಮಟೆ ವಾದ್ಯ ಹೂವಿನ ಹಾರ ಸೇಬಿನ ಹಾರ ಹಾಕಿ ಅದ್ದೂರಿ ಸ್ವಾಗತ ಕೋರಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ
ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು