AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಸರ್ವೆಗೆ ನಿರ್ದೇಶನ‌ ಕೋರಿ ಭಜರಂಗ ಸೇನೆಯಿಂದ ಹೈಕೋರ್ಟ್‌ಗೆ ಅರ್ಜಿ

ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಸರ್ವೆಗೆ ನಿರ್ದೇಶನ‌ ಕೋರಿ ಭಜರಂಗ ಸೇನೆ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದೆ.

ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಸರ್ವೆಗೆ ನಿರ್ದೇಶನ‌ ಕೋರಿ ಭಜರಂಗ ಸೇನೆಯಿಂದ ಹೈಕೋರ್ಟ್‌ಗೆ ಅರ್ಜಿ
ಶ್ರೀರಂಗಪಟ್ಟಣದ ಜಾಮೀಯಾ ಮಸೀದಿ
TV9 Web
| Edited By: |

Updated on:Nov 16, 2022 | 7:39 PM

Share

ಮಂಡ್ಯ: ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ (Srirangapatna Jama Masjid) ಸರ್ವೆಗೆ ನಿರ್ದೇಶನ‌ ಕೋರಿ ಭಜರಂಗ ಸೇನೆ ಸಂಘಟನೆ ಬೆಂಗಳೂರಿನ ಹೈಕೋರ್ಟ್‌ನಲ್ಲಿ (High Court) ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಯನ್ನು ಸಲ್ಲಿಸಿದೆ. ಅರ್ಜಿಯಲ್ಲಿ ವಿವಾದಿತ ಸ್ಥಳದಲ್ಲಿ ಮೂಡಲ ಬಾಗಿಲು ಆಂಜನೇಯ ದೇಗುಲವಿತ್ತು. ಗರುಡ ಕಂಭ, ಸ್ತೂಪ, ಹಿಂದೂ ದೇವರ ಚಿತ್ರಗಳಿವೆ. ಟಿಪ್ಪು ಅವಧಿಯಲ್ಲಿ ಆಂಜನೇಯ ದೇಗುಲ ಮಸೀದಿಯಾಗಿಸಲಾಗಿದೆ. ಹೀಗಾಗಿ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಸರ್ವೆ, ಉತ್ಖನನ ನಡೆಸಬೇಕು. ಮತ್ತು ಮದರಸಾ ತೆರವುಗೊಳಿಸಿ ದೇಗುಲವಾಗಿ ಸಂರಕ್ಷಿಸಲು ನಿರ್ದೇಶನ ನೀಡುವಂತೆ ಮನವಿ ಮಾಡಿದೆ.

ಆರ್ಕಿಯಲಾಜಿಕಲ್ ಸರ್ವೆ ಆಫ್ ಮೈಸೂರು-1912 ಪುಸ್ತಕದಲ್ಲಿ ಏನಿದೆ?

ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ವಿವಾದ ಹಿನ್ನೆಲೆ ಹಿಂದೂಪರ ಮುಖಂಡರು ಸ್ಫೋಟಕ ಸಾಕ್ಷ್ಯ ಬಹಿರಂಗಪಡಿಸಿದ್ದರು. ದೆಹಲಿಯ ಪುರಾತತ್ವ ಇಲಾಖೆಯ ಆರ್ಕಿಯಲಾಜಿಕಲ್ ಸರ್ವೆ ಆಫ್ ಮೈಸೂರು-1912 ಪುಸ್ತಕದಲ್ಲಿ ಜಾಮಿಯಾ ಮಸೀದಿಯ ಸ್ಫೋಟಕ ರಹಸ್ಯ ಬಯಲಾಗಿದೆ. ಮೂಡಲಬಾಗಿಲು ಆಂಜನೇಯ ದೇಗುಲದ ವಿಷಯ ಪ್ರಸ್ತಾಪ ಮಾಡಲಾಗಿದ್ದು, ಟಿಪ್ಪು ಪರಿವೀಕ್ಷಣಾ ಗೋಪುರ ನಿರ್ಮಿಸಿದ್ದ ಎಂದು ರಾಜ್ಯ ವಕ್ಫ್ ಬೋರ್ಡ್ ಸಮರ್ಥನೆ ಮಾಡಿಕೊಳ್ಳುತ್ತಿತ್ತು. ಆದರೆ ಆರ್ಕಿಯಲಾಜಿಕಲ್ ಸರ್ವೆ ಪುಸ್ತಕ ಬೇರೆ ಹೇಳಿದೆ. ಕಾವೇರಿ ನದಿಯಲ್ಲಿ ಗೌರಿಖಡ ಎಂಬ ಜಾಗದಲ್ಲಿ ಆಂಜನೇಯನ ಮೂರ್ತಿಯನ್ನು ಟಿಪ್ಪು ಎಸೆದಿದ್ದ. ದಳವಾಯಿ ದೊಡ್ಡಯ್ಯನವರು ಮೂರ್ತಿ ತಂದು ಮರು ಪ್ರತಿಷ್ಠಾಪಿಸಿದರು ಎಂದು  ಸರ್ವೆ ಪುಸ್ತಕ ಬಿಚ್ಚಿಟ್ಟಿದೆ.

ಜಾಮೀಯ ಮಸೀದಿ ಶೇ.100ರಷ್ಟು ಮಸೀದಿಯೇ, ಬ್ರಿಟಿಷರ ಉಲ್ಲೇಖವನ್ನು ಒಪ್ಪಲ್ಲ

 ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಶೇ.100ರಷ್ಟು ಮಸೀದಿಯೇ ಎಂದು ಟಿಪ್ಪು ವಕ್ಫ್ ಬೋರ್ಡ್ ಉಪಾಧ್ಯಕ್ಷ ಆಸಿಫ್ ಸೇಠ್ ಹೇಳಿಕೆ ನೀಡಿದ್ದರು. ಮಸೀದಿ ಇರುವ ಜಾಗ ವಕ್ಫ್ ಬೋರ್ಡ್​ಗೆ ಸೇರಿದ್ದಾಗಿದೆ. ಇದರ ನಿರ್ವಹಣೆಯನ್ನು ಎಎಸ್​ಐ ಮಾಡುತ್ತಿದೆ. ಟಿಪ್ಪು ವಕ್ಫ್ ಬೋರ್ಡ್ ಯಾವಾಗ ಸ್ಥಾಪನೆ ಆಯ್ತೋ ಅಂದಿನಿಂದ ಇದು ವಕ್ಫ್ ಬೋರ್ಡ್ ಆಸ್ತಿಯಾಗಿದೆ. ಟಿಪ್ಪು ಸ್ವಾತಂತ್ರ್ಯ ಹೋರಾಟಗಾರ ಎಂದು ಟಿಪ್ಪು ಜಾಗವನ್ನೆಲ್ಲ ಆರ್ಕ್ಯಾಲಜಿ ಡಿಪಾರ್ಟ್ಮೆಂಟ್ ಅವರು ನಿರ್ವಹಣೆಗೆ ಪಡೆದಿದೆ ಎಂದಿದ್ದರು.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು  ಇಲ್ಲಿ ಕ್ಲಿಕ್ ಮಾಡಿ

Published On - 7:10 pm, Wed, 16 November 22

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್