AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಬಿ ಬೆಟ್ಟ ಆಸ್ತಿ ಮೈಸೂರು ಅರಮನೆಗೆ ಸೇರಿದ್ದು, ನಮ್ಮ ಅನುಮತಿ ಪಡೆಯದೆ ಟ್ರಯಲ್ ಬ್ಲಾಸ್ಟ್ ನಡೆಸಬೇಡಿ -ರಾಜಮಾತೆ ಪ್ರಮೋದಾದೇವಿ

ಬೇಬಿ ಬೆಟ್ಟ ಆಸ್ತಿ ಮೈಸೂರು ಅರಮನೆಗೆ ಸೇರಿದ್ದು. ನಮ್ಮ ಅನುಮತಿ ಪಡೆಯದೆ ಟ್ರಯಲ್ ಬ್ಲಾಸ್ಟ್ ನಡೆಸಬೇಡಿ ಎಂದು ಅಣೆಕಟ್ಟು ಸುರಕ್ಷತಾ ಸಮಿತಿಗೆ ರಾಜಮಾತೆ ಪ್ರಮೋದಾದೇವಿ ಪತ್ರ ಬರೆದಿದ್ದಾರೆ. KRS ಡ್ಯಾಂ ಸಮೀಪವಿರುವ ನಮ್ಮ ಖಾಸಗಿ ಜಮೀನಿನಲ್ಲಿ ಟ್ರಯಲ್ ಬ್ಲಾಸ್ಟ್ ನಡೆಸುವ ಹಕ್ಕು ಯಾರಿಗೂ ಇಲ್ಲ ಎಂದು ಅಣೆಕಟ್ಟು ಸುರಕ್ಷತಾ ಸಮಿತಿಗೆ ಪತ್ರ ಬರೆದು ರಾಜಮಾತೆ ಎಚ್ಚರಿಕೆ ನೀಡಿದ್ದಾರೆ.

ಬೇಬಿ ಬೆಟ್ಟ ಆಸ್ತಿ ಮೈಸೂರು ಅರಮನೆಗೆ ಸೇರಿದ್ದು, ನಮ್ಮ ಅನುಮತಿ ಪಡೆಯದೆ ಟ್ರಯಲ್ ಬ್ಲಾಸ್ಟ್ ನಡೆಸಬೇಡಿ -ರಾಜಮಾತೆ ಪ್ರಮೋದಾದೇವಿ
ರಾಜಮಾತೆ ಪ್ರಮೋದಾದೇವಿ
ಪ್ರಶಾಂತ್​ ಬಿ.
| Edited By: |

Updated on:Jul 17, 2024 | 9:35 AM

Share

ಮಂಡ್ಯ, ಜುಲೈ.16: ಮಂಡ್ಯದ ಬೇಬಿ ಬೆಟ್ಟದಲ್ಲಿ (Mandya Bebi Betta) ಅಕ್ರಮ ಗಣಿಗಾರಿಕೆಯಿಂದ ಸಾವಿರಾರು ಕೋಟಿ ನಷ್ಟವಾಗಿರುವುದರ ಜೊತೆಗೆ ಕೆಆರ್​ಎಸ್ (KRS Dam) ಜಲಾಶಯಕ್ಕೆ ಅಪಾಯದ ಭೀತಿ ಇದೆ. ಇದರ ನಡುವೆ ಇದೀಗ ವಿರೋಧದ ನಡುವೆಯೂ ಮತ್ತೆ ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್​​ಗೆ ಸರ್ಕಾರ ಮುಂದಾಗಿದೆ. ಸದ್ಯ ಈಗ ಈ ವಿವಾದದಲ್ಲಿ ರಾಜಮಾತೆ ಪ್ರಮೋದಾದೇವಿ (Pramoda Devi Wadiyar) ಮಧ್ಯಪ್ರವೇಶ ಮಾಡಿದ್ದು ನಮ್ಮ ಅನುಮತಿ ಪಡೆಯದೆ ಟ್ರಯಲ್ ಬ್ಲಾಸ್ಟ್ ನಡೆಸದಂತೆ ಪತ್ರ ಬರೆದಿದ್ದಾರೆ.

ಬೇಬಿ ಬೆಟ್ಟ ಆಸ್ತಿ ಮೈಸೂರು ಅರಮನೆಗೆ ಸೇರಿದ್ದು. ನಮ್ಮ ಅನುಮತಿ ಪಡೆಯದೆ ಟ್ರಯಲ್ ಬ್ಲಾಸ್ಟ್ ನಡೆಸಬೇಡಿ ಎಂದು ಅಣೆಕಟ್ಟು ಸುರಕ್ಷತಾ ಸಮಿತಿಗೆ ರಾಜಮಾತೆ ಪ್ರಮೋದಾದೇವಿ ಪತ್ರ ಬರೆದಿದ್ದಾರೆ. ಬೇಬಿ ಬೆಟ್ಟದ ಅಮೃತಮಹಲ್ ಕಾವಲ್‌ನ ಸರ್ವೆ ನಂ.1ರ 1623 ಎಕರೆ ಅರಮನೆಗೆ ಸೇರಿದ ಆಸ್ತಿ. ಈ ಆಸ್ತಿಯನ್ನು ನನ್ನ ಹೆಸರಿಗೆ ಖಾತೆ ಮಾಡಿಕೊಡುವಂತೆ ಕಂದಾಯ ಇಲಾಖೆಗೆ ಹಲವು ಬಾರಿ ಪತ್ರ ಬರೆಯಲಾಗಿದೆ. ಆದರೆ ಇದುವರೆಗೂ ಯಾವುದೇ ಕ್ರಮ ಆಗಿಲ್ಲ. KRS ಡ್ಯಾಂ ಸಮೀಪವಿರುವ ನಮ್ಮ ಖಾಸಗಿ ಜಮೀನಿನಲ್ಲಿ ಟ್ರಯಲ್ ಬ್ಲಾಸ್ಟ್ ನಡೆಸುವ ಹಕ್ಕು ಯಾರಿಗೂ ಇಲ್ಲ ಎಂದು ಅಣೆಕಟ್ಟು ಸುರಕ್ಷತಾ ಸಮಿತಿಗೆ ಪತ್ರ ಬರೆದು ರಾಜಮಾತೆ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಹಾಸನ: ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಬಂದ್ ಆತಂಕ

ಕೃಷ್ಣರಾಜಸಾಗರ ಅಣೆಕಟ್ಟು ಬಳಿ ಯಾವುದೇ ಕಾರಣಕ್ಕೂ ಟ್ರಯಲ್ ಬ್ಲಾಸ್ಟ್‌ಗೆ ಅವಕಾಶ ನೀಡಬಾರದು. ಮೈಸೂರು ಸಂಸ್ಥಾನವಿದ್ದ ಸಮಯದಲ್ಲೇ ಭಾರತ ಸರ್ಕಾರ ಈ ಆಸ್ತಿಯನ್ನು ನನ್ನ ಪತಿ ಶ್ರೀ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ತಂದೆಗೆ ನೀಡಿದ್ದು, ನನ್ನ ಪತಿ 2013ರ ಡಿಸೆಂಬರ್ 10ರಂದು ನಿಧನರಾಗಿದ್ದು, ಆನಂತರ ಈ ಆಸ್ತಿಗೆ ನಾನು ವಾರಸುದಾರಳಾಗಿದ್ದೇನೆ. ಈ ಪ್ರದೇಶವನ್ನು ನನ್ನ ಹೆಸರಿಗೆ ಖಾತೆ ಮಾಡಿಕೊಡುವಂತೆ ಕಂದಾಯ ಇಲಾಖೆಯವರಿಗೆ ಅರ್ಜಿ ಸಲ್ಲಿಸಿದ್ದರೂ, ನಾನಾ ಕಾರಣಗಳನ್ನು ಹೇಳುತ್ತಲೇ ಇದುವರೆಗೂ ನನ್ನ ಹೆಸರಿಗೆ ಖಾತೆ ಮಾಡಿಕೊಟ್ಟಿಲ್ಲ. ಅದಕ್ಕಾಗಿ ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಿ ಬೇಬಿಬೆಟ್ಟ ಕಾವಲ್‌ನ ಸರ್ವೇ ನಂ.1ರ ಪ್ರದೇಶವನ್ನು ನನ್ನ ಹೆಸರಿಗೆ ಖಾತೆ ಮಾಡಿಕೊಡುವಂತೆ ಕೋರಿದ್ದೇನೆ ಎಂದು ತಿಳಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:57 am, Tue, 16 July 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್